ಬೆಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿನ ಗೋಡೆಗಳ ಮೇಲೆ ಚಿತ್ರ ಬಿಡಿಸೋದು ಅಪರಾಧ ಎಂದು ಪರಿಗಣಿಸಿರುವ ಬಿಬಿಎಂಪಿ (BBMP), ಅಂಥವರ ವಿರುದ್ಧ ಸ್ವಯಂಪ್ರೇರಿತವಾಗಿ ಕೇಸ್ ದಾಖಲಿಸುವುದಾಗಿ ಎಚ್ಚರಿಕೆ ನೀಡಿದೆ.
ಇದೀಗ ಸಂಸದ ತೇಜಸ್ವಿ ಸೂರ್ಯ (Tejasvi Sury) ಅವರು ಸಾರ್ವಜನಿಕ ಸ್ಥಳಗಳಲ್ಲಿ ಗೋಡೆಗಳ ಮೇಲೆ ಕಮಲ ಚಿತ್ರ ಪೇಯಿಂಟ್ (Painting) ಮಾಡಿದ್ದಾರೆ ಎನ್ನಲಾಗುತ್ತಿದ್ದು, ಸಂಸದರ ವಿರುದ್ಧ ಬಿಬಿಎಂಪಿ ಗರಂ ಆಗಿದೆ. ಇದನ್ನೂ ಓದಿ: ರಾಜ್ಯ ರಾಜಕೀಯ ಪ್ರವೇಶಿಸಲು ರೆಡಿಯಾಗಿದ್ದ ಸುಮಲತಾಗೆ ಬಿಗ್ ಶಾಕ್ – ಸಂಸದೆ ಸ್ಪರ್ಧೆಗೆ ರೈತ ಸಂಘದಿಂದ ವಿರೋಧ
ಹೌದು, ಸಂಸದ ತೇಜಸ್ವಿ ಸೂರ್ಯ ಗೋಡೆಗಳ ಮೇಲೆ ಕಮಲ (Lotus) ಚಿತ್ರಕ್ಕೆ ಪೇಂಟಿಂಗ್ ಮಾಡಿದ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡಿತ್ತು. ಇದನ್ನೂ ಓದಿ: ವಿಡಿಯೋ ಕಾಲ್ ಮಾಡಿ ಹೆಂಡತಿ ತೋರಿಸದಿದ್ದಕ್ಕೆ ಸ್ನೇಹಿತನಿಗೆ ಚಾಕು ಇರಿತ
ಜನವರಿ 31ರಂದು ವೀಡಿಯೋಗಳನ್ನ ತಮ್ಮ ಖಾತೆಯಲ್ಲಿ ಹಂಚಿಕೊಂಡಿರುವುದರ ಬಗ್ಗೆ ಚರ್ಚೆ ಶುರುವಾಗಿದೆ. ತೇಜಸ್ವಿ ಸೂರ್ಯ ಸಂಸದರಾಗಿ ಸಾರ್ವಜನಿಕ ಗೋಡೆಗಳಲ್ಲಿ ಪೇಂಟಿಂಗ್ ಮಾಡಿರೋದರ ಬಗ್ಗೆ ಸರಿ-ತಪ್ಪು ಚರ್ಚೆ ಶುರುವಾಗಿದೆ. ಇದಕ್ಕೆ ಸಂಬಂಧಪಟ್ಟಂತೆ ಬಿಬಿಎಂಪಿ ಕೇಸ್ ಹಾಕುತ್ತಾ ಎನ್ನುವ ಪ್ರಶ್ನೆ ಎದ್ದಿದೆ.
ಈ ಬಗ್ಗೆ ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿರುವ ವಿಶೇಷ ಆಯುಕ್ತ ಜಯರಾಮ್ ರಾಯಪುರ, ದಕ್ಷಿಣ ವಲಯದಲ್ಲಿ ಗೋಡೆ ಮೇಲೆ ಕಮಲ ಚಿತ್ರ ಪೇಂಟಿಂಗ್ ಮಾಡಿರುವುದು ಬಿಬಿಎಂಪಿ ಗಮನಕ್ಕೆ ಬಂದಿದೆ. ಈ ಬಗ್ಗೆ ನಾವು ಸುಮೋಟೋ ಕೇಸ್ ದಾಖಲು ಮಾಡ್ತೀವಿ. ಯಾರೇ ಆಗ್ಲಿ ಈ ರೀತಿಯ ಕೃತ್ಯ ಮಾಡಿದ್ರೆ ಅದು ಅಫೇನ್ಸ್ ಆಗುತ್ತೆ. ಕೇಸ್ ದಾಖಲು ಮಾಡ್ತೀವಿ ಎಂದು ಎಚ್ಚರಿಕೆ ನೀಡಿದ್ದಾರೆ.
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k