ಮೈಸೂರು: ಮಾರ್ಚ್ ತಿಂಗಳಲ್ಲಿ ದಶಪಥ ರಸ್ತೆ ಲೋಕಾರ್ಪಣೆಯಾಗಲಿದ್ದು, 250 ರೂ. ಟೋಲ್ (Toll) ನಿಗದಿ ಮಾಡುವ ಸಾಧ್ಯತೆ ಇದೆ ಎಂದು ಸಂಸದ ಪ್ರತಾಪ್ ಸಿಂಹ (Pratap Simh) ಹೇಳಿದ್ದಾರೆ.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈಸೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ (Bengaluru Mysuru Expressway) ಬಹುತೇಕ ಪೂರ್ಣ ಸ್ಥಿತಿಯಲ್ಲಿದೆ. ಮಾರ್ಚ್ 2 ಅಥವಾ 3ನೇ ವಾರದಲ್ಲಿ ಸಂಚಾರಕ್ಕೆ ಮುಕ್ತವಾಗಲಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: Air Show ಬಡತನ ಓಡಿಸುತ್ತಾ – ಪ್ರಧಾನಿ ಮೋದಿಗೆ ಹೆಚ್ಡಿಕೆ ಪ್ರಶ್ನೆ
ದಶಪಥ ರಸ್ತೆ ಲೋಕಾರ್ಪಣೆಗೊಳಿಸುವ ವೇಳೆ ಪ್ರಧಾನಿಗಳು ಕುಶಾಲನಗರ – ಮೈಸೂರು ನಡುವಿನ ಹೆದ್ದಾರಿಗೂ (Kushalnagar -Mysuru Highway) ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. 3,500 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಲಿರುವ 115 ಕಿಮೀ ಹೆದ್ದಾರಿ ಕಾಮಗಾರಿಯನ್ನ 24 ತಿಂಗಳಲ್ಲೇ ಪೂರ್ಣಗೊಳಿಸುತ್ತೇವೆ ಎಂದಿದ್ದಾರೆ. ಇದನ್ನೂ ಓದಿ: ದಶಪಥದಲ್ಲಿ ಬೈಕ್ಗಳ ಓಡಾಟಕ್ಕೆ ಅನುಮತಿ ಇಲ್ಲ- ಪ್ರತಾಪ್ ಸಿಂಹ
250 ರೂ. ಟೋಲ್ ನಿಗದಿ ಸಾಧ್ಯತೆ:
ಮೈಸೂರು-ಬೆಂಗಳೂರು ಹೆದ್ದಾರಿ ಟೋಲ್ ನಿಗದಿ ವಿಚಾರದಲ್ಲಿ ಸದ್ಯ ತಾತ್ಕಾಲಿಕ ಪಟ್ಟಿ ಬಿಡುಗಡೆಯಾಗಿದೆ. ನನ್ನ ಪ್ರಕಾರ ನನ್ನ ಪ್ರಕಾರ ಅಂತಿಮವಾಗಿ ಎರಡೂ ಕಡೆ ಸೇರಿ ಬೆಂಗಳೂರಿನಿಂದ ಮೈಸೂರಿಗೆ 250 ರೂ. ಟೋಲ್ ನಿಗದಿ ಆಗಬಹುದು. ಫ್ಲೈಓವರ್ಗಳು ಬಂದಾಗ ಸಾಮಾನ್ಯವಾಗಿ ಟೋಲ್ ದರ ಕೊಂಚ ಹೆಚ್ಚಾಗುತ್ತದೆ. ಈ ರಸ್ತೆಯಲ್ಲೂ ಫ್ಲೈಓವರ್ ಇರುವ ಕಾರಣ 250 ರೂ. ಟೋಲ್ ನಿಗದಿಯಾಗಬಹುದು ಎಂದು ಮಾಹಿತಿ ನೀಡಿದ್ದಾರೆ.
ದಶಪಥ ರಸ್ತೆಗೆ ಹೆಸರಿಡುವ ವಿಚಾರಕ್ಕೆ ಪ್ರತಿಕ್ರಿಯಿಸಿ, ರಾಷ್ಟ್ರೀಯ ಹೆದ್ದಾರಿಗೆ ವ್ಯಕ್ತಿಗಳ ಹೆಸರಿಡುವ ಪದ್ಧತಿ ಇಲ್ಲ. ವ್ಯಕ್ತಿಗಳ ಹೆಸರಿಡಿ ಅನ್ನೋರು ಈ ಬಗ್ಗೆ ತಿಳಿದುಕೊಂಡು ಮಾತನಾಡಲಿ ಎಂದ ಅವರು, ಎಲ್ಲಾ ಜಿಲ್ಲೆಗಳ ಜನರು ಭಕ್ತಿಯಿಂದ ಕಾವೇರಿ ತಾಯಿಯನ್ನ ನೋಡುತ್ತಾರೆ. ಕಾವೇರಿ ನದಿ ಬಗ್ಗೆ ಈ ಭಾಗದ ಜನರಲ್ಲಿ ಪೂಜ್ಯ ಭಾವನೆ ಇದೆ. ಮಗ ದೊಡ್ಡೋನಾ? ತಾಯಿ ದೊಡ್ಡೋರಾ? ಅನ್ನೋ ರೀತಿ ಚರ್ಚೆ ಬೇಡ. ತಾಯಿಯೆ ದೊಡ್ಡವಳು. ಹಾಗಾಗಿ ದಶಪಥ ರಸ್ತೆಗೆ ಕಾವೇರಿ ಹೆಸರು ಸೂಕ್ತ ಎಂದು ಸ್ಪಷ್ಟಪಡಿಸಿದ್ದಾರೆ.
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k