ಮೆಟ್ರೋ ಪಿಲ್ಲರ್‌ ಕುಸಿದು ತಾಯಿ, ಮಗು ಸಾವು ಪ್ರಕರಣ – ಮೂವರು ಎಂಜಿನಿಯರ್‌ ಅಮಾನತು

Public TV
1 Min Read
Mother child die in Namma Metro under construction pillar collapse in Bengalurus Nagavara area 2

ಬೆಂಗಳೂರು: ಮೆಟ್ರೋ ಪಿಲ್ಲರ್‌ ಕುಸಿದು (Metro Pilllar Collapse) ತಾಯಿ, ಮಗು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಎಂಜಿನಿಯರ್‌ಗಳನ್ನು ಅಮಾನತುಗೊಳಿಸಿ ಬಿಎಂಆರ್‌ಸಿಎಲ್‌ (BMRCL) ಆದೇಶ ಹೊರಡಿಸಿದೆ.

ನಿರ್ಲಕ್ಷ್ಯ ವಹಿಸಿದ ಆರೋಪದ ಮೇಲೆ ಮೆಟ್ರೋ ಡೆಪ್ಯುಟಿ ಚೀಫ್ ಎಂಜಿನಿಯರ್‌, ಎಕ್ಸಿಕ್ಯೂಟಿವ್ ಎಂಜಿನಿಯರ್, ಸೆಕ್ಷನ್ ಎಂಜಿನಿಯರ್ ಅಮಾನತುಗೊಳಿಸಿ  ಆದೇಶಿಸಲಾಗಿದೆ ಎಂದು ಬಿಎಂಆರ್‌ಸಿಎಲ್‌ ಎಂಡಿ ಅಂಜುಂ ಫರ್ವೇಜ್‌ ತಿಳಿಸಿದ್ದಾರೆ. ಇದನ್ನೂ ಓದಿ: ದಾವಣಗೆರೆಗೆ ಬಂದ ಮೃತ ತೇಜಸ್ವಿನಿ, ಪುತ್ರನ ಶವ- ತಾಯಿ, ಮಗುವಿನ ಪ್ರತ್ಯೇಕ ಅಂತ್ಯಸಂಸ್ಕಾರ

METRO TEJASWINI

ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಮೆಟ್ರೋ ನಿಗಮ, ಎನ್‌ಸಿಸಿ ಕಂಪನಿಗೆ ನೋಟಿಸ್ ಮೇಲೆ ನೋಟಿಸ್ ನೀಡುತ್ತಿದೆ. ಮಂಗಳವಾರ ದುರಂತದ ಬಳಿಕ ಮೆಟ್ರೋ ಚೀಫ್ ಎಂಜಿನಿಯರ್‌ರಿಂದ ಎನ್‌ಸಿಸಿ ಕಂಪನಿಗೆ ನೋಟಿಸ್ ನೀಡಲಾಗಿದೆ. ಬುಧವಾರ ಮೆಟ್ರೋ ನಿರ್ದೇಶಕರಿಂದ ಎನ್‌ಸಿಸಿ ಆಡಳಿತ ವಿಭಾಗಕ್ಕೆ ಮತ್ತೊಂದು ನೋಟಿಸ್ ಬಂದಿದೆ. ಮೂರು ದಿನಗಳ ಒಳಗೆ ಸಂಪೂರ್ಣ ವರದಿ ನೀಡುವಂತೆ ಸೂಚಿಸಲಾಗಿದೆ.

ಎನ್‌ಸಿಸಿ ಕಂಪನಿಯ ಮೇಲೆ ಈಗಾಗಲೇ ಕ್ರಿಮಿನಲ್ ಕೇಸ್ ದಾಖಲಾಗಿದ್ದು, ಪೋಲಿಸರು ಕ್ರಮ ಕೈಗೊಳ್ಳುತ್ತಿದ್ದಾರೆ ಎಂದು ಅಂಜುಂ ಫರ್ವೇಜ್‌ ಹೇಳಿದ್ದಾರೆ. ಇದನ್ನೂ ಓದಿ: ಪತ್ನಿ, ಮಗನ ಸಾವಿಗೆ ಕಾರಣರಾದವ್ರ ವಿರುದ್ಧ ಕ್ರಮಕ್ಕೆ ಲೋಹಿತ್ ದೂರು- ಎಫ್‍ಐಆರ್

ಬೆಂಗಳೂರು ಮೆಟ್ರೋ ಕಾಮಗಾರಿ ದುರಂತ ಪ್ರಕರಣವು ಕೇಂದ್ರದ ಅಂಗಳ ತಲುಪಿದೆ. ಪ್ರಕರಣ ಸಂಬಂಧ ವರದಿ ನೀಡುವಂತೆ ಕೇಂದ್ರ ನಗರಾಭಿವೃದ್ಧಿ ಇಲಾಖೆ ಕೇಳಿದೆ. ಅಂಜುಂ ಫರ್ವೇಜ್‌ಗೆ ಕರೆ ಮಾಡಿ ವರದಿ ಕೇಳಿದೆ. ಎರಡು ದಿನಗಳಲ್ಲಿ ವರದಿ ನೀಡುವುದಾಗಿ ಮೆಟ್ರೋ ನಿಗಮ ತಿಳಿಸಿದೆ.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

Share This Article
Leave a Comment

Leave a Reply

Your email address will not be published. Required fields are marked *