ಮದ್ಯದ ಮತ್ತಿನಲ್ಲಿ ಪತ್ನಿಯ ಕತ್ತು ಸೀಳಿದ ಪಾಪಿ

Public TV
1 Min Read
liquor drinking alcohol 837x600 1

ಬೆಂಗಳೂರು: ಮದ್ಯದ ಮತ್ತಿನಲ್ಲಿ ಪಾಪಿ ಪತಿಯೊಬ್ಬ ಪತ್ನಿಯನ್ನ ಕೊಲೆಗೈದ ಘಟನೆ ನೆಲಮಂಗಲ ಸಮೀಪದ ಸಿದ್ದೇಶ್ವರ ಬಡಾವಣೆಯಲ್ಲಿ ನಡೆದಿದೆ.

ನೆಲಮಂಗಲ ಸಮೀಪದ ಸಿದ್ದೇಶ್ವರ ಬಡಾವಣೆಯ ದಿವ್ಯ (24) ಕೊಲೆಯಾದ ಪತ್ನಿ. ತೀರ್ಥಪ್ರಸಾದ್ ಕೊಲೆಗೈದ ಪತಿ. ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ತೀರ್ಥಪ್ರಸಾದ್ ಕೃತ್ಯ ಎಸದಿದ್ದಾನೆ ಎನ್ನಲಾಗಿದೆ.

Police Jeep 1

ಕಾರು ಚಾಲಕನಾಗಿದ್ದ ತೀರ್ಥಪ್ರಸಾದ್ ಬುಧವಾರ ಮದ್ಯ ಕುಡಿದು ಮನೆ ಬಂದಿದ್ದ. ಈ ವೇಳೆ ಪತ್ನಿಯ ಜೊತೆಗೆ ಜಗಳ ಆರಂಭಿಸಿ ಚಾಕುವಿನಿಂದ ಕತ್ತು ಸೀಳಿ ನಾಪತ್ತೆಯಾಗಿದ್ದಾನೆ. ಈ ಸಂಬಂಧ ಸ್ಥಳೀಯರು ಮಾಹಿತಿ ನೀಡುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಮಾದನಾಯಕನಹಳ್ಳಿ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

ಪ್ರತ್ಯೇಕ ಪ್ರಕರಣ:
ಮದ್ಯಮಾರಾಟಕ್ಕೆ ಅವಕಾಶ ನೀಡಿದ ಮೊದಲ ದಿನವೇ ಕುಡಿದ ನಶೆಯಲ್ಲಿ ಶುರುವಾದ ಗಲಾಟೆ ಕೊಲೆಯಲ್ಲಿ ಅಂತ್ಯವಾದ ಘಟನೆ ಬೆಂಗಳೂರು ಪೂರ್ವ ತಾಲೂಕು ಹಂಚರಹಳ್ಳಿ ಚರ್ಚ್ ಬಳಿ ನಡೆದಿದೆ.

Liquor Shops 3 copy

ಸೋಮವಾರ ರಾತ್ರಿ ಮತ್ತೆ ಮದ್ಯ ಕುಡಿದ ಅಮಲಿನಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ ರೌಡಿಶೀಟರ್ ಪ್ರಶಾಂತ್, ಮಧು, ಕಟ್ಟುಗೊಲ್ಲಹಳ್ಳಿಯ ರೌಡಿಶೀಟರ್ ರಾಜ್ ಕುಮಾರ್ ತಲೆಮರೆಸಿಕೊಂಡಿದ್ದಾರೆ. ಆರೋಪಿಗಳಿಗಾಗಿ ಆವಲಹಳ್ಳಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *