ನೆಲಮಂಗಲ: ದಕ್ಷಿಣ ಏಷ್ಯಾ ಹಾಗೂ ದಕ್ಷಿಣ ಭಾರತದ ಅತೀ ದೊಡ್ಡ ಕಟ್ಟಡ ನಿರ್ಮಾಣ ಹಾಗೂ ಯಂತ್ರೋಪಕರಣಗಳ ವಸ್ತು ಪ್ರದರ್ಶನಕ್ಕೆ ಭಾರತ ತಂಡದ ಮಾಜಿ ನಾಯಕ ಎಂ.ಎಸ್ ಧೋನಿ ಇಂದು ಭೇಟಿ ನೀಡಿದ್ದಾರೆ.
ಬೆಂಗಳೂರು ಹೊರವಲಯ ನೆಲಮಂಗಲ ಸಮೀಪದ ಮಾದಾವಾರ ಬಳಿಯ ಬಿಐಇಸಿಯಲ್ಲಿ ಕ್ರಿಕೆಟಿಗ ಎಂ.ಎಸ್ ಧೋನಿ ಇಂದು ಉದ್ಯಮಶೀಲತೆ ಬಗ್ಗೆ ಮಾಹಿತಿ ತಿಳಿದುಕೊಂಡಿದ್ದಾರೆ. ಎಕ್ಸಾನ್ 10 ನೇ ಆವೃತ್ತಿಯ ವಸ್ತು ಪ್ರದರ್ಶನ ಇದ್ದಾಗಿದ್ದು, ಐದು ದಿನಗಳ ಕಾಲ ನಡೆದ ವಸ್ತು ಪ್ರದರ್ಶನಕ್ಕೆ ನಾಳೆ ತೆರೆಬೀಳಲಿದೆ.
ಈ ಹಿನ್ನೆಲೆಯಲ್ಲಿ ಇಂದು ಆಗಮಿಸಿದ್ದ ಮಹೇಂದ್ರ ಸಿಂಗ್ ಧೋನಿ ಹಲವಾರು ಮಾಹಿತಿ ಪಡೆದರು. ವಸ್ತು ಪ್ರದರ್ಶನದಲ್ಲಿ ಉದ್ಯಮಿಗಳ ಹಾಗೂ ಗ್ರಾಹಕರ ಜೊತೆ ಭಾಗಿಯಾಗಿದ್ದ ಧೋನಿ, ಗಲ್ಫ್ ಕಂಪನಿಯಲ್ಲಿ ಕೆಲಹೊತ್ತು ಕಾಲ ಕಳೆದಿದ್ದಾರೆ. ತನ್ನ ನೆಚ್ಚಿನ ಕ್ರಿಕೆಟಿಗ ಧೋನಿಯನ್ನು ನೋಡಲು ಅಭಿಮಾನಿಗಳ ಮುಗಿಬಿದ್ದ ಪ್ರಸಂಗ ನಡೆಯಿತು.