ಹುಡುಗಿಗಾಗಿ ಕಿತ್ತಾಡಿ ಸ್ನೇಹಿತನನ್ನೇ ಕೊಂದ ಯುವಕ

Public TV
1 Min Read
kamakshipalya

ಬೆಂಗಳೂರು: ಹುಡುಗಿ ವಿಚಾರಕ್ಕೆ ಇಬ್ಬರು ಸ್ನೇಹಿತರ ಮಧ್ಯೆ ಜಗಳವಾಗಿ, ಯುವಕನೋರ್ವ ಆತನ ಸ್ನೇಹಿತನನ್ನೇ ಅಮಾನುಷವಾಗಿ ಕೊಲೆ ಮಾಡಿದ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ.

ಬೆಂಗಳೂರಿನ ಕಾಮಾಕ್ಷಿಪಾಳ್ಯದ ಸಣ್ಣಕ್ಕಿ ಬಯಲಿನಲ್ಲಿ ಈ ಘಟನೆ ನಡೆದಿದೆ. ಪ್ರದೀಪ್(26) ಕೊಲೆಯಾದ ಯುವಕ. ಆತನ ಸ್ನೇಹಿತ ವಿಜಯ್ ಆಲಿಯಾಸ್ ವಿನೋದ್ ಕೊಲೆ ಮಾಡಿದ ಆರೋಪಿ ಎಂದು ಗುರುತಿಸಲಾಗಿದೆ.

Police Jeep

ಭಾನುವಾರ ರಾತ್ರಿ ಶ್ರೀನಗರದಿಂದ ವಿಜಯ್‍ನನ್ನು ನೋಡಲು ಪ್ರದೀಪ್ ಬಂದಿದ್ದನು. ಈ ವೇಳೆ ಇಬ್ಬರ ನಡುವೆ ಹುಡುಗಿ ವಿಚಾರಕ್ಕೆ ಜಗಳ ನಡೆದಿದೆ. ಮಾತಿಗೆ ಮಾತು ಬೆಳೆದು ಜಗಳ ತಾರಕ್ಕಕ್ಕೇರಿ ಕೋಪದಲ್ಲಿ ವಿಜಯ್ ಚಾಕುವಿನಿಂದ ಪ್ರದೀಪ್‍ಗೆ ಇರಿದು ಕೊಲೆ ಮಾಡಿದ್ದಾನೆ.

ಈ ವಿಚಾರ ತಿಳಿದ ಬಳಿಕ ಸ್ಥಳಕ್ಕೆ ಬಂದ ಪೊಲೀಸರು ಪರಿಶೀಲನೆ ನಡೆಸಿದ್ದು, ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *