ನನ್ನ ತಂಟೆಗೆ ಬಂದ್ರೆ ಪೊಲೀಸ್ ಠಾಣೆಗೆ ನುಗ್ಗಿ ಧ್ವಂಸ ಮಾಡುತ್ತೇನೆ ಎಂದವ ಅರೆಸ್ಟ್

Public TV
1 Min Read
dadiya mohan

ಬೆಂಗಳೂರು: ಕುಡಿದ ಮತ್ತಿನಲ್ಲಿ ಪೊಲೀಸರಿಗೆ ಅವಾಚ್ಯ ಪದಗಳಿಂದ ನಿಂದಿಸಿ, ಬೆದರಿಕೆ ಹಾಕಿ ಎಸ್ಕೇಪ್ ಆಗಿದ್ದ ರೌಡಿಶೀಟರ್ ಅನ್ನು ಸಿಕೆ ಅಚ್ಚುಕಟ್ಟು ಪೊಲೀಸರು ಬಂಧಿಸಿದ್ದಾರೆ.

ರೌಡಿಶೀಟರ್ ಮೋಹನ್ ಅಲಿಯಾಸ್ ದಡಿಯಾ ಮೋಹನ್ ಬಂಧಿತ ಆರೋಪಿ. ಕಳೆದ ಎರಡು ದಿನಗಳ ಹಿಂದೆ ರೌಡಿಶೀಟರ್ ದಡಿಯಾ ಮೋಹನ್ ಕುಡಿದ ಮತ್ತಿನಲ್ಲಿ ಕತ್ರಿಗುಪ್ಪೆ ರಸ್ತೆಯ ಎಂ.ಎಂ ಬಾರ್ ಬಳಿ ಗಲಾಟೆ ಮಾಡುತ್ತಿದ್ದ. ಇದನ್ನು ನೋಡಿದ ಸ್ಥಳೀಯರು ಪೊಲೀಸರಿಗೆ ಕರೆ ಮಾಡಿ ತಿಳಿಸಿದ್ದರು.

Police Jeep 1 1

ಸ್ಥಳಕ್ಕೆ ಬಂದ ಪೊಲೀಸರು ಮೋಹನ್ ಅನ್ನು ವಶಕ್ಕೆ ಪಡೆಯಲು ಯತ್ನಿಸಿದ ವೇಳೆ ರೌಡಿಶೀಟರ್ ಪೊಲೀಸರಿಗೆ ಅವಾಚ್ಯ ಪದಗಳಿಂದ ನಿಂದಿಸಿದಲ್ಲದೇ, ಜೀವಬೆದರಿಕೆ ಹಾಕಿ ಅಲ್ಲಿಂದ ಎಸ್ಕೇಪ್ ಆಗಿದ್ದ. ನನ್ನ ತಂಟೆಗೆ ಬಂದರೆ ಪೊಲೀಸ್ ಠಾಣೆಗೆ ನುಗ್ಗಿ ಧ್ವಂಸ ಮಾಡುವುದಾಗಿ ಬೆದರಿಕೆ ಹಾಕಿದ್ದ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದ ಸಿಕೆ ಅಚ್ಚುಕಟ್ಟು ಪೊಲೀಸರಿಂದ ಆರೋಪಿಯನ್ನು ಬಂಧಿಸಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *