ಬೆಂಗಳೂರು: ಪ್ರತಿನಿತ್ಯ ಒಂದಲ್ಲೊಂದು ಗುಂಡಿ ಅಪಘಾತದಿಂದ ಬೇಸತ್ತ ಸಾರ್ವಜನಿಕರು ವಿನೂತನ ರೀತಿಯಲ್ಲಿ ಪ್ರತಿಭಟನೆ ಮಾಡಿ ಬಿಬಿಎಂಪಿ ಮತ್ತು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಯಲಹಂಕ ವ್ಯಾಪ್ತಿಯ ಕೆ.ಆರ್ ಪುರಂ ಮತ್ತು ಬೆಟ್ಟಗಳ್ಳಿ ರಸ್ತೆಯ ಗುಂಡಿಯೊಂದರಲ್ಲಿ ಬಿಬಿಎಂಪಿ ಚೀಫ್ ಕಮಿಷನರ್ ಗೌರವ್ ಗುಪ್ತಾ ಹಾಗೂ ಚೀಫ್ ಎಂಜಿನಿಯರ್ ಹೆಸರಿನಲ್ಲಿ ಪಿಂಡ ಪ್ರದಾನ ಮಾಡಿದ್ದಾರೆ. ಈ ಮೂಲಕ ವಿಭಿನ್ನ ರೀತಿಯಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಹೋರಾಟಗಾರ ಹೆ.ಎಂ ವೆಂಕಟೇಶ್ ಹಾಗೂ ಕೆ.ಆರ್.ಎಸ್ ಪಕ್ಷದ ಕಾರ್ಯಕರ್ತರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಸ್ಥಳೀಯರು ಭಾಗಿಯಾಗಿದ್ದರು. ಇದನ್ನೂ ಓದಿ: 45 ವರ್ಷದ ವ್ಯಕ್ತಿಯ ಜೊತೆ 25ರ ಯುವತಿ ಮದುವೆ
ಬಳಿಕ ಮಾತನಾಡಿದ ಪ್ರತಿಭಟನಾಕಾರರು, ಅಭಿವೃದ್ಧಿ ಹೆಸರಲ್ಲಿ ಸಾವಿರಾರು ಕೋಟಿ ಖರ್ಚು ಮಾಡಿರುವುದಾಗಿ ಬಿಬಿಎಂಪಿ ಬಾಯಿ ಬಡಿದುಕೊಳ್ಳುತ್ತಿದೆ. ಆದರೆ ಯಲಹಂಕ ವ್ಯಾಪ್ತಿಯ ಒಂದೇ ಒಂದು ರಸ್ತೆಯೂ ಸರಿಯಿಲ್ಲ. ರಸ್ತೆ ಗುಂಡಿಗಳಿಂದ ಪ್ರತಿನಿತ್ಯ ಹತ್ತಾರು ಸವಾರರು ಬಿದ್ದು ಸಾವು ನೋವಿಗೀಡಾಗುತ್ತಿದ್ದಾರೆ. ಈ ಬಗ್ಗೆ ಹಲವು ಮಾರಿ ಮನವಿ ಮಾಡಿದ್ದರು ಪ್ರಯೋಜನವಾಗಿಲ್ಲ. ಹಾಗಾಗಿ ಇವತ್ತು ಅಧಿಕಾರಿಗಳಿಗೆ ಪಿಂಡ ಪ್ರದಾನ ಮಾಡುತ್ತಿದ್ದೇವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.