ಬೆಂಗಳೂರು: ಪ್ರವಾಹ ಪೀಡಿತ ಸಂತ್ರಸ್ತರಿಗೆ ನೆರವಾಗುವಂತೆ ಕಾಂಗ್ರೆಸ್ ಕಾರ್ಯಕರ್ತರಿಗೆ ಟ್ವಿಟ್ಟರ್ ಮೂಲಕ ರಾಹುಲ್ ಗಾಂಧಿ ಅವರು ಕರೆಕೊಟ್ಟಿದ್ದಾರೆ.
ದೇಶಾದ್ಯಂತ ರಣ ಭೀಕರ ಮಳೆಯಾಗುತ್ತಿದ್ದು, ಕರ್ನಾಟಕ, ಮಹಾರಾಷ್ಟ್ರ, ಒಡಿಶಾ, ಅಸ್ಸಾಂ ಮತ್ತು ಬಿಹಾರ ರಾಜ್ಯಗಳಲ್ಲಿ ಪ್ರವಾಹ ಉಂಟಾಗಿ ಜನ ಜೀವನ ಅಸ್ತವ್ಯಸ್ತವಾಗಿದೆ. ಅದ್ದರಿಂದ ಸಂತ್ರಸ್ತರಿಗೆ ಅಗತ್ಯವಾದ ಸಹಾಯ ಮಾಡಿ ಎಂದು ರಾಹುಲ್ ಗಾಂಧಿ ಕಾಂಗ್ರೆಸ್ ಕಾರ್ಯಕರ್ತರಿಗೆ ಮನವಿ ಮಾಡಿದ್ದಾರೆ.
The flood situation in Kerala, Karnataka, Maharashtra, Gujarat, Odisha, Assam & Bihar is grim, with lakhs of citizens stranded or displaced. I request Congress Party workers in the affected states to do all they can to help those in need & pray that the flood waters soon subside.
— Rahul Gandhi (@RahulGandhi) August 8, 2019
ಈ ನಿಟ್ಟಿನಲ್ಲಿ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ ಅವರು ಕೇರಳ, ಕರ್ನಾಟಕ, ಮಹಾರಾಷ್ಟ್ರ, ಗುಜರಾತ್, ಒಡಿಶಾ, ಅಸ್ಸಾಂ ಮತ್ತು ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಭೀಕರವಾಗಿದ್ದು, ಲಕ್ಷಾಂತರ ನಾಗರಿಕರು ಸಿಕ್ಕಿಬಿದ್ದಿದ್ದಾರೆ ಅಥವಾ ಸ್ಥಳಾಂತರಗೊಂಡಿದ್ದಾರೆ. ನೆರೆ ಪೀಡಿತ ರಾಜ್ಯಗಳಲ್ಲಿನ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಅಗತ್ಯವಿರುವವರಿಗೆ ಸಹಾಯ ಮಾಡಲು ನಾನು ವಿನಂತಿಸುತ್ತೇನೆ ಮತ್ತು ಪ್ರವಾಹ ಶೀಘ್ರದಲ್ಲೇ ಕಡಿಮೆಯಾಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.