ಬೆಂಗಳೂರು: ಭಾರೀ ಮಳೆಗೆ (Rain) ಶಾಂತಿನಗರ ಸಿಸಿಬಿ ಕಚೇರಿ (CCB Office) ಸಂಪೂರ್ಣ ಜಲಾವೃತಗೊಂಡಿದೆ.
ಮಹಾಮಳೆಗೆ ರಾಜಕಾಲುವೆ ನೀರು ಒಳಗೆ ನುಗ್ಗಿದ್ದರಿಂದ ಗ್ರೌಂಡ್ ಫ್ಲೋರ್ ನಲ್ಲಿ ಮೂರ್ನಾಲ್ಕು ಅಡಿಯಷ್ಟು ನೀರು ನಿಂತಿದೆ. ಇದನ್ನೂ ಓದಿ: Bengaluru Rain| ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಬಂದ್ – ಶಿವಾನಂದ ಸರ್ಕಲ್ ಅಂಡರ್ ಪಾಸ್ ಮುಳುಗಡೆ
ದಾಖಲೆಗಳು ಹಾಳಾಗಿರುವ ಬಗ್ಗೆ ಸಿಸಿಬಿ ಪೊಲೀಸರಿಗೆ ಈಗ ಚಿಂತೆ ಆರಂಭವಾಗಿದೆ. ಜೊತೆಗೆ ಕೊಳಚೆ ನೀರು ಕೆಟ್ಟ ವಾಸನೆಯಿಂದ ಸಂಕಷ್ಟ ಅನುಭವಿಸುವಂತಾಗಿದೆ. ಇದನ್ನೂ ಓದಿ: ಬೆಂಗಳೂರಲ್ಲಿ ವರುಣನ ಅಬ್ಬರ – 10 ವರ್ಷದಲ್ಲಿ ಮೇ ತಿಂಗಳಲ್ಲಿ ದಾಖಲೆಯ ಮಳೆ
ಬೊಮ್ಮನಹಳ್ಳಿ ಮತ್ತು ಸಿಲ್ಕ್ ಬೋರ್ಡ್ ರಸ್ತೆ (Bommanahalli – Silk Board) ಜಲಾವೃತಗೊಂಡಿದ್ದು ಮುಖ್ಯ ರಸ್ತೆಯಲ್ಲಿ ಮೂರು ಅಡಿಗೂ ಹೆಚ್ಚು ನೀರು ನಿಂತಿದೆ. ಬೊಮ್ಮನಹಳ್ಳಿಯಿಂದ ಸಿಲ್ಕ್ ಬೋರ್ಡ್ ಕಡೆ ಹೋಗುವ ರಸ್ತೆಯಲ್ಲಿ ವಾಹನ ಸವಾರರು ಪರದಾಟ ಅನುಭವಿಸುತ್ತಿದ್ದಾರೆ.