Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಳೆ ಅವಾಂತರದಿಂದ ಬೆಂಗಳೂರು ಬ್ರ್ಯಾಂಡ್ ಉಳಿಸಿಕೊಳ್ಳಲು ಸಿಎಂಗೆ ಪತ್ರ ಬರೆದ ಎಸ್ಎಂ ಕೃಷ್ಣ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮಳೆ ಅವಾಂತರದಿಂದ ಬೆಂಗಳೂರು ಬ್ರ್ಯಾಂಡ್ ಉಳಿಸಿಕೊಳ್ಳಲು ಸಿಎಂಗೆ ಪತ್ರ ಬರೆದ ಎಸ್ಎಂ ಕೃಷ್ಣ

Bengaluru City

ಮಳೆ ಅವಾಂತರದಿಂದ ಬೆಂಗಳೂರು ಬ್ರ್ಯಾಂಡ್ ಉಳಿಸಿಕೊಳ್ಳಲು ಸಿಎಂಗೆ ಪತ್ರ ಬರೆದ ಎಸ್ಎಂ ಕೃಷ್ಣ

Public TV
Last updated: May 19, 2022 1:28 pm
Public TV
Share
3 Min Read
sm krisnha
SHARE

ಬೆಂಗಳೂರು: ಬೆಂಗಳೂರಿನ ಹಲವೆಡೆ ಮಳೆ ಅವಾಂತರದಿಂದ ನಗರದ ಖ್ಯಾತಿಗೆ ಧಕ್ಕೆ ಬರುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮಾಜಿ ಮುಖ್ಯಮಂತ್ರಿಗಳು, ಬಿಜೆಪಿ ಹಿರಿಯ ನಾಯಕ ಎಸ್.ಎಂ. ಕೃಷ್ಣ ಅವರು ಬೆಂಗಳೂರಿಗೆ ಇರುವ ಬ್ರ್ಯಾಂಡ್ ಅನ್ನು ಉಳಿಸಿಕೊಳ್ಳುವ ಕುರಿತು ಪತ್ರ ಬರೆದು ಕೆಲವು ಸಲಹೆಗಳನ್ನು ನೀಡಿದ್ದಾರೆ.

ಕಳೆದ ಕೆಲವು ದಿನಗಳಿಂದ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ನಿರಂತರ ಮುಂಗಾರ ಪೂರ್ವ ಮಳೆಯಗುತ್ತಿದ್ದು ಇದರಿಂದ ಹಲವು ಅವಾಂತರಗಳ‌ು ಘಟಿಸಿ‌ ಜನಜೀವನಕ್ಕೆ ತೀವ್ರ ತೊಂದರೆಯನ್ನು ಉಂಟುಮಾಡಿದೆ. ಅದರಲ್ಲೂ ವಿಶ್ವದಲ್ಲಿನ ವೇಗದ ಬೆಳವಣಿಗೆಗಳ ನಗರಗಳ‌ ಸಾಲಿನಲ್ಲಿ ಮುಂಚೂಣಿಯಲ್ಲಿ ಇರುವ ಬೆಂಗಳೂರು ನಗರದಲ್ಲಿನ ಮಳೆ ಅನಾಹುತಗಳು ಆತಂಕ ಹುಟ್ಟಿಸಿದೆ. ಇದು ‘ಬ್ರಾಂಡ್ ಬೆಂಗಳೂರು’ ಹೆಸರಿಗೆ ಆತಂಕ ಸೃಷ್ಟಿಸಿದ್ದು, ಭವಿಷ್ಯತ್ತಿನಲ್ಲಿ ಇದರಿಂದ ಕೈಗಾರಿಕೆಗಳ ಸ್ತಾಪನೆ‌ ಮತ್ತು ರಾಜ್ಯಕ್ಕೆ ಬಂಡವಾಳ ಹೂಡುವ ಹೂಡಿಕೆದಾರರಿಗೆ ತಪ್ಪು ಸಂದೇಶ ರವಾನೆಯಾಗಲಿದೆ. ಅದರಿಂದ ಇಲ್ಲಿ ಪ್ರತಿಷ್ಟಾಪನೆಗೊಳ್ಳಬಹುದಾದ ಕೈಗಾರಿಕಾ ವಸಹಾತುಗಳು ಬೇರೆ ರಾಜ್ಯಗಳ ಪಾಲಗಿ ನಮ್ಮ ರಾಜ್ಯದ ಅಭಿವೃದ್ಧಿಗೆ ತೊಡಕಾಗಲಿದೆ ಎಂದು ಎಸ್.ಎಂ. ಕೃಷ್ಣ ಅವರು ಪತ್ರದಲ್ಲಿ ಕಳವಳವನ್ನು ವ್ಯಕ್ತಪಡಿಸಿದ್ದಾರೆ.ಇದನ್ನೂ ಓದಿ: ಮದುವೆ ಮೆರವಣಿಗೆಯಲ್ಲಿ ಮ್ಯೂಸಿಕ್ ಪ್ಲೇ ಮಾಡಿದ್ದಕ್ಕೆ ಕಲ್ಲು ತೂರಾಟ

Basavaraj Bommai sm krishna r ashok 1

 

ಪತ್ರದಲ್ಲಿ ಏನಿದೆ?
ನಾನು ಮುಖ್ಯಮಂತ್ರಿಯಾಗಿದ್ದಾಗ ಮಾಹಿತಿ ತಂತ್ರಜ್ಞಾನ ಕ್ಷೇತ್ರಕ್ಕೆ ಆದ್ಯತೆ ನೀಡಿ ವಿಪುಲ ಅವಕಾಶಗಳನ್ನು ನೀಡಿದ್ದರಿಂದ ಅಮೆರಿಕದ ಕ್ಯಾಲಿಫೋರ್ನಿಯಾ ನಗರದ ಸಿಲಿಕಾನ್ ವ್ಯಾಲಿಗೆ ಪರ್ಯಾಯವಾಗಿ ಬೆಂಗಳೂರು ನಗರ ಬೆಳೆದು ಯುವ ಜನಾಂಗಕ್ಕೆ ಲಕ್ಷಾಂತರ ಉದ್ಯೋಗ ಸೃಷ್ಟಿಗೆ ಕಾರಣವಾಯಿತು. ಇದರ ಪರಿಣಾಮವಾಗಿ ಬೆಂಗಳೂರು ಇಂದು ಬೃಹದಾಕಾರವಾಗಿ ಬೆಳೆದು ನಗರದ ವಿಸ್ತೀರ್ಣ ನಾಲ್ಕು ಪಟ್ಟು ಹೆಚ್ಚಾಗಿದೆ. ಬೆಂಗಳೂರು ನಗರ ಪಾಲಿಕೆ ಇಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಾಗಿ ಬದಲಾಗಿ ಬೆಂಗಳೂರು ಸುತ್ತಮುತ್ತಲಿನ ಹಲವು ಬಡಾವಣೆಗಳನ್ನು ತನ್ನ ಒಡಲಲ್ಲಿ ಸೇರಿಸಿಕೊಂಡಿದೆ. ಇದರಿಂದ ಬೆಂಗಳೂರಿನ ಆದಾಯ ನಿರೀಕ್ಷೆಗೂ ಮೀರಿ ಹೆಚ್ಚಾಗಿ ಅದು ಇಂದು ರಾಜ್ಯದ ಬಜೆಟ್ ಗಾತ್ರದಲ್ಲಿ ಅರ್ಧದಷ್ಟು ಭಾಗ ಬೆಂಗಳೂರು ನಗರದಿಂದ ಹರಿದು ಬರುವಂತಾಗಿದೆ.

ಭವಿಷ್ಯದ ಬೆಂಗಳೂರು ಹಾಗೂ ರಾಜ್ಯದ ಅಭಿವೃದ್ಧಿ ಗಮನದಲ್ಲಿ ಇಟ್ಟಕೊಂಡು ದೂರಗಾಮಿ ದೃಷ್ಟಿಯಿಂದ ಶಾಶ್ವತ ಕಾರ್ಯ ಕ್ರಮಗಳನ್ನು ರೂಪಿಸಿ “ಬ್ರಾಂಡ್ ಬೆಂಗಳೂರು” ಹೆಸರನ್ನು ಉಳಿಸಿಕೊಳ್ಳಲು ದಿಟ್ಟ ಕ್ರಮಗಳನ್ನು ಕೈಗೊಳ್ಳುವುದು ಅವಶ್ಯವಾಗಿದ್ದು, ಆ ನಿಟ್ಟಿನಲ್ಲಿ ಕೆಳಕಂಡ ಸಲಹೆಗಳನ್ನು ತಮ್ಮ ಅವಗಾಹನೆಗೆ ತರಬಯಸುತ್ತೇನೆ.

RAIN 3

1. ನಾನು ಮುಖ್ಯಮಂತ್ರಿಯಾಗಿದ್ದಾಗ ಬೆಂಗಳೂರಿನ ಅಭಿವೃದ್ಧಿಗೆ ರಚಿಸಿದ್ದ ಬೆಂಗಳೂರು ಅಜೆಂಡಾ ಟಾಸ್ಕ್ ಫೋರ್ಸ್ ಸಮಿತಿಯನ್ನು ಪುನರ್ ರಚಿಸಿ ವಿವಿಧ ವಿಭಾಗಗಳ ತಜ್ಞರನ್ನು ಸೇರಿಸಿ ಅವರ ಸಲಹೆಗಳನ್ನು ಪಡೆದು ದೂರಗಾಮಿ ನೆಲೆಯಲ್ಲಿ ಬೆಂಗಳೂರಿನ ಅಭಿವೃದ್ಧಿ ಗೆ ನೀಲಿನಕ್ಷೆ ತಯಾರಿಸುವುದು.

2. ಬೆಂಗಳೂರು ನಗರದ ವ್ಯಾಪ್ತಿಯಲ್ಲಿ ಒಳಚರಂಡಿ ವ್ಯವಸ್ಥೆ ಸುಧಾರಿಸಿ ಹೊಸದಾಗಿ ಬಿಬಿಎಂಪಿ ವ್ಯಾಪ್ತಿಗೆ ಸೇರ್ಪಡೆಗೊಂಡಿರುವ ಬಡಾವಣೆಗಳಲ್ಲಿ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ತಜ್ಞ ಅಧಿಕಾರಿಗಳ ತಂಡ ರಚಿಸುವುದು ಹಾಗೂ ರಾಜಕಾಲುವೆಗಳ ನಿರ್ವಾಹಣೆಗೆ ಆದ್ಯತೆ ಮೇಲೆ ಕ್ರಮ ವಹಿಸಿ ಮುಂಗಾರ ಮಳೆಯ ಆಗಮನಕ್ಕೂ ಮುನ್ನ ಸಮರೋಪದಿಯ ಕಾರ್ಯ ಕೈಗೊಳ್ಳುವುದು.

RAIN IN BENGALURU

3. ಬೆಂಗಳೂರಿಗೆ ಪರ್ಯಾಯವಾಗಿ ಮೈಸೂರು, ತುಮಕೂರು ಮತ್ತು ಹುಬ್ಬಳ್ಳಿಯಂತಹ ನಗರಗಳನ್ನು ಗುರುತಿಸಿ ನೂತನ ಕೈಗಾರಿಕಾ ವಸಹಾತುಗಳ‌ ಸ್ಥಾಪನೆಗೆ ಅವಕಾಶ ಕಲ್ಪಿಸಿ ಬೆಂಗಳೂರಿ ನಗರದ ಮೇಲಿನ ಒತ್ತಡ ಕಡಿಮೆ ಮಾಡುವುದು. ನನ್ನ ಅಧಿಕಾರಾವಧಿಯಲ್ಲಿ ನಿರ್ಮಾಣಗೊಂಡಿದ್ದ ಮೈಸೂರು ಬೆಂಗಳೂರು ಹೆದ್ದಾರಿ ಇಂದು ಹತ್ತು ಪಥಗಳ ರಾಷ್ಟ್ರೀಯ ಹೆದ್ದಾರಿಯಾಗಿ‌ ಮೇಲ್ದರ್ಜೆಗೆ ಏರಿದ್ದು ಇದು ಮೈಸೂರು ನಗರ ಬೆಂಗಳೂರಿಗೆ ಪರ್ಯಾಯವಾಗಿ ಬೆಳವಣಿಗೆ ಹೊಂದಲು ಬಹಳ ಅವಕಾಶ ಕಲ್ಪಿಸುತ್ತದೆ.

4. ಬೆಂಗಳೂರು ವ್ಯಾಪ್ತಿಯ ಶಾಸಕರು ಸಂಸದರು ಹಾಗೂ ಜನಪ್ರತಿನಿಧಿಗಳನ್ನು ವಿಶ್ವಾಸಕ್ಕೆ ಪಡೆದು ವಲಯವಾರು ಸಮಸ್ಯೆಗಳನ್ನು ಪತ್ತೆ ಹಚ್ಚಿ ಅವುಗಳ ಶಾಶ್ವತ ಪರಿಹಾರಕ್ಕೆ ಕಾಲ ಮೀತಿಯಲ್ಲಿ ಕಾರ್ಯಕ್ರಮ ರೂಪಿಸಿ ಅದಕ್ಕೆ ತಕ್ಕ ಅನುದಾನ ಒದಗಿಸುವುದು.

TAGGED:Basavaraj BommaibengaluruBengaluru RainsrainSM Krishnaಎಸ್‍ಎಂ ಕೃಷ್ಣಬಸವರಾಜ ಬೊಮ್ಮಾಯಿಬೆಂಗಳೂರುಬೆಂಗಳೂರು ಮಳೆ
Share This Article
Facebook Whatsapp Whatsapp Telegram

Cinema news

trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories

You Might Also Like

Congress BJP
Bagalkot

ದಾವಣಗೆರೆ, ಬಾಗಲಕೋಟೆ ಉಪಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ

Public TV
By Public TV
7 hours ago
ipl 2026 Vaibhav Sooryavanshi stuns Jasprit Bumrah with first ball six Mumbai Indiansace can only smile
Cricket

ಬುಮ್ರಾಗೆ 2 ಸಿಕ್ಸ್‌ – ಮತ್ತೆ 5 ಸಿಕ್ಸ್‌ ಸಿಡಿಸಿದ ಸೂರ್ಯವಂಶಿ

Public TV
By Public TV
7 hours ago
IPL match Rain
Cricket

IPL 2026 | ರಾಜಸ್ಥಾನ ರಾಯಲ್ಸ್‌ Vs ಮುಂಬೈ ಇಂಡಿಯನ್ಸ್‌ ಪಂದ್ಯಕ್ಕೆ ಮಳೆ ಅಡ್ಡಿ

Public TV
By Public TV
7 hours ago
JD Vance
Latest

ಇರಾನ್‌ ಮೇಲೆ ಪರಮಾಣು ದಾಳಿಯಾಗುತ್ತಾ?- ವ್ಯಾನ್ಸ್‌ ಹೇಳಿಕೆಯಿಂದ ಬಿಸಿ ಬಿಸಿ ಚರ್ಚೆ

Public TV
By Public TV
8 hours ago
Bandipura Vulture
Chamarajanagar

ಬಂಡೀಪುರದಲ್ಲಿ ಸಫಾರಿ ಹೋಗಿದ್ದ ಪ್ರವಾಸಿಗರಿಗೆ ರಣಹದ್ದುಗಳ ದರ್ಶನ – ಸಂತತಿ ಹೆಚ್ಚಳ

Public TV
By Public TV
8 hours ago
Mallikarjun kharge
Latest

RSS, BJP ಕಾರ್ಯಕರ್ತರನ್ನು ಕೊಲ್ಲಲು ಮುಸ್ಲಿಮರಿಗೆ ಮಲ್ಲಿಕಾರ್ಜುನ ಖರ್ಗೆ ಕರೆ ಆರೋಪ – ಬೆಂಗ್ಳೂರಲ್ಲಿ ದೂರು ದಾಖಲು

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?