ಬೆಂಗಳೂರು: ನಟ ಸಾರ್ವಭೌಮ, ರಸಿಕರ ರಾಜ, ಕರ್ನಾಟಕ ರತ್ನ ಡಾ. ರಾಜ್ಕುಮಾರ್ಗೆ ಭಾರತ ರತ್ನ ನೀಡಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡುವಂತೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರಿಗೆ ಮನವಿ ಸಲ್ಲಿಸಲಾಯಿತು.
ಅಖಿಲ ಕರ್ನಾಟಕ ಶಿವರಾಜ್ ಕುಮಾರ್ ಅಭಿಮಾನಿಗಳ ಸಂಘ ಮತ್ತು ಅಖಿಲ ಕರ್ನಾಟಕ ರಾಜರತ್ನ ಪುನೀತ್ ರಾಜ್ಕುಮಾರ್ ಅಭಿಮಾನಿಗಳ ಸಂಘದವರು ಮುಖ್ಯಮಂತ್ರಿಯವರಿಗೆ ಮನವಿ ಮಾಡಿದರು. ಇದೇ ವೇಳೆ ಚಾಮರಾಜನಗರ ತಾಲೂಕಿಗೆ ಡಾ. ರಾಜ್ ಕುಮಾರ್ ತಾಲೂಕು ಎಂದು ನಾಮಕರಣ ಮಾಡಬೇಕೆಂದು ಒತ್ತಾಯಿಸಿದರು. ಅಲ್ಲದೆ ಬೆಂಗಳೂರಿನ ಮಾಗಡಿ ರಸ್ತೆಯ ಮೆಟ್ರೋ ನಿಲ್ದಾಣಕ್ಕೆ ಡಾ. ರಾಜ್ ಕುಮಾರ್ ನಿಲ್ದಾಣ ಎಂದು ನಾಮಕರಣ ಮಾಡಬೇಕೆಂದು ಮನವಿಯಲ್ಲಿ ತಿಳಿಸಲಾಗಿದೆ.
ಅಷ್ಟೇ ಅಲ್ಲದೆ ಚಲನಚಿತ್ರ ರಂಗದಲ್ಲಿ 34 ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿರುವ ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ ಅವರಿಗೆ ಪದ್ಮಶ್ರೀ ಪ್ರಶಸ್ತಿ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಬೇಕೆಂದು ಇದೇ ಸಂದರ್ಭದಲ್ಲಿ ಅಭಿಮಾನಿಗಳ ಸಂಘ ಸಿಎಂಗೆ ಮನವಿ ಸಲ್ಲಿಸಲಾಗಿದೆ.