Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ರಾಜ್ಯ ಸರ್ಕಾರ ರಾಜೀನಾಮೆ ಕೊಟ್ಟರೆ ಮಾತ್ರ ಜನತೆಗೆ ಶಾಂತಿ, ನೆಮ್ಮದಿಯ ಭರವಸೆ: ಆರ್.ಅಶೋಕ್

Public TV
Last updated: March 3, 2024 3:40 pm
Public TV
Share
2 Min Read
R Ashok
SHARE

ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರ್ಕಾರಕ್ಕೆ (Congress Government) ಅಧಿಕಾರದಲ್ಲಿ ಮುಂದುವರೆಯುವ ನೈತಿಕತೆ ಇಲ್ಲ. ಮುಖ್ಯಮಂತ್ರಿ ಮಾತ್ರವಲ್ಲ ಇಡೀ ಸರ್ಕಾರ ರಾಜೀನಾಮೆ ಕೊಟ್ಟರೆ ಮಾತ್ರ ಜನತೆಗೆ ಶಾಂತಿ- ನೆಮ್ಮದಿಯ ಭರವಸೆ ಲಭಿಸಲಿದೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ (R Ashok) ಅವರು ಹೇಳಿದರು.

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಈ ಸರ್ಕಾರ ಎಚ್ಚೆತ್ತುಕೊಳ್ಳಲು ಇನ್ನೆಷ್ಟು ಬಾಂಬ್ ಬ್ಲಾಸ್ಟ್ (Bomb Blast) ಆಗಬೇಕು? ಈ ಸರ್ಕಾರ ಯಾಕೆ ಕಣ್ಮುಚ್ಚಿ ಕುಳಿತಿದೆ? ಯಾರನ್ನು ಓಲೈಸುತ್ತಿದೆ? ಎಫ್‍ಎಸ್‍ಎಲ್ (FSL) ವರದಿ ಬಿಡುಗಡೆ ಮಾಡದೇ ಇರಲು ಸರ್ಕಾರದ ಮೇಲೆ ಸೋನಿಯಾ ಗಾಂಧಿ- ರಾಹುಲ್ ಗಾಂಧಿಯವರ ಒತ್ತಡ ಇದೆಯೇ ಎಂದು ಪ್ರಶ್ನೆಗಳನ್ನು ಮುಂದಿಟ್ಟರು.

ಕಾಂಗ್ರೆಸ್ ಪಕ್ಷ ಅಲ್ಪಸಂಖ್ಯಾತರ ಮನಸ್ಸನ್ನು ಪೂರ್ತಿ ಕಲ್ಮಶ ಮಾಡುವ ಕಡೆಗೆ ಹೋಗುತ್ತಿದೆ ಎಂದು ಆರೋಪಿಸಿದರು. ಕೆಂಗಲ್ ಹನುಮಂತಯ್ಯನವರು ಕಟ್ಟಿಸಿದ ವಿಧಾನಸೌಧ ರಾಜ್ಯದ ಹೃದಯವಿದ್ದಂತೆ. ಅಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿರುವುದು ಅಕ್ಷಮ್ಯ ಎಂದು ತಿಳಿಸಿದರು. ಇದನ್ನೂ ಓದಿ: ಲಾಡ್ಲೆ ಮಶಾಕ್ ದರ್ಗಾದಲ್ಲಿನ ಶಿವಲಿಂಗಕ್ಕೆ ಪೂಜೆ – ರಥಯಾತ್ರೆಗೆ ಹೈಕೋರ್ಟ್ ಅಸ್ತು

 

ಅಲ್ಪಸಂಖ್ಯಾತರು ತಮಗೆ ಮತ ಹಾಕಿದರೆ ಸಾಕು, ಬಹುಸಂಖ್ಯಾತರನ್ನು ಬಗ್ಗು ಬಡಿಯುತ್ತೇವೆ ಎಂಬ ನೀತಿ ಕಾಂಗ್ರೆಸ್ ಪಕ್ಷದ್ದು. ನೀವೇನಾದರೂ ಮಾಡಿ; ಕೆಜೆ ಹಳ್ಳಿ, ಡಿಜೆ ಹಳ್ಳಿಯಲ್ಲಿ ಗಲಭೆ ಮಾಡಿ. ಮೈಸೂರಿನಲ್ಲಿ ಅವರ ಶಾಸಕರ ಹತ್ಯೆ ಪ್ರಯತ್ನ ಮಾಡಿದರೂ ಏನೂ ಮಾಡುವುದಿಲ್ಲ ಎಂಬ ಕರ್ನಾಟಕದ ಕಾಂಗ್ರೆಸ್ ಮನಸ್ಥಿತಿ ಗಂಡಾಂತರ ತರುವಂತಿದೆ ಎಂದು ಕಿಡಿಕಾರಿದರು.

ಕಾಂಗ್ರೆಸ್ ಆಡಳಿತದಲ್ಲಿ ಭಯೋತ್ಪಾದಕರೆಂಬ ಇಲಿಗಳು ಬಿಲದಿಂದ ಹೊರ ಬಂದು ಹುಲಿಗಳಾಗಿವೆ. ನಮ್ಮನ್ನೇನೂ ಮಾಡುವುದಿಲ್ಲ ಎಂಬ ಮನಸ್ಥಿತಿ ಭಯೋತ್ಪಾದಕರದ್ದಾಗಿದೆ. ಇದು ದೊಡ್ಡ ಆಘಾತ ತಂದಿದೆ ಎಂದು ವಿವರಿಸಿದರು.

ಸರ್ಕಾರ ಅವರ ಬಗ್ಗೆ ಸಹಾನುಭೂತಿ ತೋರುವುದು ಆಘಾತಕಾರಿ ವಿಚಾರ. ರಾಜ್ಯ ಸರ್ಕಾರ ಕೋಮುವಾದದ ಕಡೆ ವಾಲುತ್ತಿದೆ. ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಅಲ್ಪಸಂಖ್ಯಾತರ ಓಲೈಕೆಯ ಪ್ರವೃತ್ತಿ ಮುಂದುವರೆದಿದೆ. ಅಲ್ಪಸಂಖ್ಯಾತರ ಬಗ್ಗೆ ಬರುವ ವಿಷಯಗಳನ್ನು ಕಾಂಗ್ರೆಸ್ಸಿಗರು ನಿರಂತರವಾಗಿ ಮುಚ್ಚಿಡುತ್ತಿದ್ದಾರೆ ಎಂದು ಆಕ್ಷೇಪಿಸಿದರು. ಇದನ್ನೂ ಓದಿ: ಪಾಕ್‌ ಪರ ಘೋಷಣೆ – FSL ವರದಿ ಇನ್ನೂ ಬಂದಿಲ್ಲ, ಬಂದ ನಂತರ ಕ್ರಮ : ಪರಮೇಶ್ವರ್‌

 

ಬಾಂಬ್ ಸ್ಫೋಟದ ಆರೋಪಿಗಳನ್ನು ಅಮಾಯಕರು, ಮೈ ಬ್ರದರ್ಸ್ ಎಂದು ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ವಿಧಾನಸೌಧದಲ್ಲಿ ಕೆಲದಿನಗಳ ಹಿಂದೆ ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿದ್ದಾರೆ. ‘ಆ ರೀತಿ ಹೇಳಿಲ್ಲ. ಬಿಜೆಪಿಯವರು ಸುಳ್ಳು ಹೇಳುತ್ತಿದ್ದಾರೆ ಎಂದು ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದರು. ಫಾರೆನ್ಸಿಕ್ ವರದಿಯಲ್ಲಿ ಹಾಗೆ ಆಗಿಲ್ಲ ಎಂದು ಬರಲಿದೆ ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಮಾಧ್ಯಮಗಳು ಘೋಷಣೆ ಕೂಗಿದ್ದು ನಿಜ ಎಂದು ಪ್ರಕಟಿಸಿದರೂ ಕಾಂಗ್ರೆಸ್‍ನವರು ಅದನ್ನು ಮುಚ್ಚಿಡುವ ಕೆಲಸ ಮಾಡುತ್ತಿದ್ದಾರೆ ಎಂದು ದೂರಿದರು.

ರಾಮೇಶ್ವರಂ ಕೆಫೆಯಲ್ಲಿ ಸ್ಫೋಟ ಆಗಿದೆ. ಆ ಸಂದರ್ಭದಲ್ಲಿ ಡಿ.ಕೆ.ಶಿವಕುಮಾರ್, ದಿನೇಶ್ ಗುಂಡೂರಾವ್ ಹೋಗಿ, ‘ಇದು ಬಿಸಿನೆಸ್ ರೈವಲ್ರಿ; ತಿಂಡಿ ವಿಚಾರದದಲ್ಲಿ ಒಳಜಗಳ’ ಎಂದಿದ್ದರು. ಈಗ ಅದು ಭಯೋತ್ಪಾದಕರ ಕೃತ್ಯ ಎಂದು ಗೊತ್ತಾಗಿದೆ. ಆದರೂ ಅದನ್ನು ಮುಚ್ಚಿಡುತ್ತಿದ್ದಾರೆ ಎಂದು ಟೀಕಿಸಿದರು.

 

TAGGED:ashokbengalurubjpcongresspoliticsಅಶೋಕ್ಕಾಂಗ್ರೆಸ್ಬೆಂಗಳೂರುರಾಜಕೀಯ
Share This Article
Facebook Whatsapp Whatsapp Telegram

Cinema Updates

Ajith Kumar Car Rase Accident
ರೇಸ್ ವೇಳೆ ನಟ ಅಜಿತ್ ಕಾರ್ ಟಯರ್ ಸ್ಫೋಟ!
7 hours ago
TAAPSEE PANNU 2
ಮುಂಬೈನಲ್ಲಿ ಐಷಾರಾಮಿ ಅಪಾರ್ಟ್‌ಮೆಂಟ್ ಖರೀದಿಸಿದ ತಾಪ್ಸಿ ಪನ್ನು- ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
13 hours ago
prashanth neel
ಜ್ಯೂ.ಎನ್‌ಟಿಆರ್ ಹುಟ್ಟುಹಬ್ಬದಂದು ಪ್ರಶಾಂತ್ ನೀಲ್ ಜೊತೆಗಿನ ಚಿತ್ರದಿಂದ ಅಪ್‌ಡೇಟ್ ಸಿಗಲ್ಲ, ಯಾಕೆ?
14 hours ago
sreeleela 1
ಬಾಲಿವುಡ್ ಚಿತ್ರಕ್ಕಾಗಿ ಸಂಭಾವನೆ ಇಳಿಸಿಕೊಂಡ್ರಾ ‘ಕಿಸ್ಸಿಕ್’ ಬೆಡಗಿ?
15 hours ago

You Might Also Like

Justice Not Revenge Indian Army Shares New Operation Sindoor Video
Latest

ಪಾಕ್ ಉಗ್ರ ನೆಲೆ ಧ್ವಂಸದ ಮತ್ತೊಂದು ವಿಡಿಯೋ ವೈರಲ್ – ಪ್ರತೀಕಾರವಲ್ಲ ಇದು ನ್ಯಾಯ ಎಂದ ಸೇನೆ!

Public TV
By Public TV
6 hours ago
RCB
Cricket

RCB, ಗುಜರಾತ್‌, ಪಂಜಾಬ್‌ ಪ್ಲೇ-ಆಫ್‌ಗೆ ಎಂಟ್ರಿ – ಡೆಲ್ಲಿ ವಿರುದ್ಧ ನೋ ಲಾಸ್‌ನಲ್ಲಿ ಟೈಟಾನ್ಸ್‌ ಪಾಸ್‌

Public TV
By Public TV
7 hours ago
Lashkar terrorist
Bengaluru City

‌ಬೆಂಗಳೂರಿನ IISc ದಾಳಿಯ ಪ್ರಮುಖ ಸಂಚುಕೋರ, ಲಷ್ಕರ್ ಉಗ್ರ ಪಾಕ್‌ನಲ್ಲಿ ಹತ್ಯೆ

Public TV
By Public TV
7 hours ago
TravisHead
Cricket

ಹೈದರಾಬಾದ್‌ಗೆ ಸನ್‌ ಸ್ಟ್ರೋಕ್‌ – ಟ್ರಾವಿಸ್‌ ಹೆಡ್‌ಗೆ ಕೊರೊನಾ ಪಾಸಿಟಿವ್‌!

Public TV
By Public TV
7 hours ago
jairam ramesh Rahul gandhi
Latest

ʻಆಪರೇಷನ್‌ ಸಿಂಧೂರʼವನ್ನ ಬಿಜೆಪಿ ರಾಜಕೀಯಗೊಳಿಸುತ್ತಿದೆ – ಕಾಂಗ್ರೆಸ್‌ ಆರೋಪ

Public TV
By Public TV
8 hours ago
koppala couple parents boycotted for marrying a married woman
Crime

ವಿವಾಹಿತೆಯನ್ನು ಪ್ರೀತಿಸಿ ಮದುವೆಯಾಗಿದ್ದಕ್ಕೆ 8 ವರ್ಷಗಳಿಂದ ಕುಟುಂಬಕ್ಕೆ ಬಹಿಷ್ಕಾರ

Public TV
By Public TV
8 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?