ಪುಡಿ ರೌಡಿಯನ್ನ ಕಿಡ್ನಾಪ್‍ಗೈದು ಬರ್ಬರ ಕೊಲೆ

Public TV
1 Min Read
BNG Rowdy

ಬೆಂಗಳೂರು: ಪುಡಿ ರೌಡಿಯೊಬ್ಬನನ್ನು ಕಿಡ್ನಾಪ್ ಮಾಡಿ ಬಳಿಕ ಬರ್ಬರವಾಗಿ ಕೊಲೆ ಮಾಡಿದ ಘಟನೆ ಬೆಂಗಳೂರು ಹೊರವಲಯದ ಬೇಗೂರು, ಹೊಂಗಸಂದ್ರ ರಸ್ತೆಯಲ್ಲಿ ನಡೆದಿದೆ.

ಬೇಗೂರಿನ ನಿವಾಸಿ ಸುನೀಲ್ ಹತ್ಯೆಯಾದ ಪುಡಿ ರೌಡಿ. ಸುನೀಲ್ ಬೊಮ್ಮನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅನೇಕ ಪ್ರಕರಣಗಳಲ್ಲಿ ಭಾಗಿಯಾಗಿದ್ದನು. ಅಷ್ಟೇ ಅಲ್ಲದೆ ಅನೇಕ ಬಾರಿ ಜೈಲಿಗೂ ಹೋಗಿ ಬಂದಿದ್ದನು.

Police Jeep

ಬೇಗೂರು, ಹೊಂಗಸಂದ್ರ ರಸ್ತೆಯಲ್ಲಿ ಭಾನುವಾರ ಸಂಜೆ ಬಂದ ಗುಂಪೊಂದು ಸುನೀಲ್‍ನನ್ನು ಎಳೆದುಕೊಂಡು ಹೋಗಿದೆ. ಬಳಿಕ ನಿರ್ಜನ ಪ್ರದೇಶದಲ್ಲಿ ಹಲ್ಲೆ ಮಾಡಿದೆ. ಅಷ್ಟಕ್ಕೆ ನಿಲ್ಲಿಸದೇ ಸುನೀಲ್ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿ, ಸ್ಥಳದಿಂದ ಪರಾರಿಯಾಗಿದೆ.

ಈ ಸಂಬಂಧ ಬೇಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಕುರಿತು ತನಿಖೆ ಆರಂಭಿಸಿರುವ ಪೊಲೀಸರು, ಸುನೀಲ್ ಸ್ನೇಹಿತರಿಂದಲೇ ಹತ್ಯೆಯಾಗಿದ್ದಾನೆ ಎಂದು ಶಂಕೆ ವ್ಯಕ್ತಪಡಿಸಿದ್ದಾರೆ. ಹೀಗಾಗಿ ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *