Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಆಪರೇಷನ್, ಸರ್ಜರಿಯಲ್ಲಿ ಬಿಎಸ್‍ವೈ ಸ್ಪೆಷಲಿಸ್ಟ್, ನಾನು ಡಾಕ್ಟರ್ ಅಲ್ಲ – ಸಿದ್ದರಾಮಯ್ಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಆಪರೇಷನ್, ಸರ್ಜರಿಯಲ್ಲಿ ಬಿಎಸ್‍ವೈ ಸ್ಪೆಷಲಿಸ್ಟ್, ನಾನು ಡಾಕ್ಟರ್ ಅಲ್ಲ – ಸಿದ್ದರಾಮಯ್ಯ

Bengaluru City

ಆಪರೇಷನ್, ಸರ್ಜರಿಯಲ್ಲಿ ಬಿಎಸ್‍ವೈ ಸ್ಪೆಷಲಿಸ್ಟ್, ನಾನು ಡಾಕ್ಟರ್ ಅಲ್ಲ – ಸಿದ್ದರಾಮಯ್ಯ

Public TV
Last updated: November 12, 2019 12:57 pm
Public TV
Share
2 Min Read
BSY Siddu
SHARE

– ಹೈಕಮಾಂಡ್ ಜೊತೆ ಚರ್ಚಿಸಿ ಸರ್ಕಾರ ರಚಿಸಿದ್ದು ದೇವೇಗೌಡರು
– ನಾನು ಹೈಕಮಾಂಡ್ ಆದೇಶ ಪಾಲಿಸಿದೆ

ಬೆಂಗಳೂರು: ಆಪರೇಷನ್, ಸರ್ಜರಿ ಇದರಲ್ಲಿ ಸಿಎಂ ಯಡಿಯೂರಪ್ಪ ಅವರೇ ಸ್ಪೆಷಲಿಸ್ಟ್. ನಾನು ಡಾಕ್ಟರೂ ಅಲ್ಲ, ನನಗೆ ಯಾವ ರೋಗಿಗಳು ಗೊತ್ತಿಲ್ಲ ಎಂದು ಟ್ವೀಟ್ ಮಾಡುವ ಮೂಲಕ ಮಾಜಿ ಸಿಎಂ ಸಿದ್ದರಾಮಯ್ಯ ಬಿಜೆಪಿ ನಾಯಕರ ಕಾಲೆಳೆದಿದ್ದಾರೆ.

ಇಂದು ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ನಾವಾಗಿಯೇ ಹಣ, ಅಧಿಕಾರದ ಆಮಿಷ ಒಡ್ಡಿ ಬೇರೆ ಪಕ್ಷದವರನ್ನು ನಮ್ಮ ಪಕ್ಷಕ್ಕೆ ಕರೆತಂದರೆ ಅದು ಆಪರೇಷನ್ ಆಗುತ್ತದೆ. ಆದರೆ ನಮ್ಮ ಪಕ್ಷದ ಸಿದ್ಧಾಂತವನ್ನು ಒಪ್ಪಿ ಅವರಾಗಿಯೇ ಬಂದರೆ ಅದು ಆಪರೇಷನ್ ಹೇಗಾಗುತ್ತದೆ. ಈ ಆಪರೇಷನ್, ಸರ್ಜರಿ ಇದರಲ್ಲಿ ಸಿಎಂ ಅವರೇ ಸ್ಪೆಷಲಿಸ್ಟ್. ನಾನು ಡಾಕ್ಟರೂ ಅಲ್ಲ, ನನಗೆ ಯಾವ ರೋಗಿಗಳು ಗೊತ್ತಿಲ್ಲ ಎಂದು ಟ್ವೀಟ್ ಮಾಡಿದ್ದಾರೆ.

ನಾವಾಗಿಯೇ ಹಣ, ಅಧಿಕಾರದ ಆಮಿಷ ಒಡ್ಡಿ ಬೇರೆ ಪಕ್ಷದವರನ್ನು ನಮ್ಮ‌ ಪಕ್ಷಕ್ಕೆ ಕರೆತಂದರೆ ಅದು ಆಪರೇಷನ್ ಆಗುತ್ತದೆ. ಆದರೆ ನಮ್ಮ‌ ಪಕ್ಷದ ಸಿದ್ಧಾಂತವನ್ನು ಒಪ್ಪಿ ಅವರಾಗಿಯೇ ಬಂದರೆ ಅದು ಆಪರೇಷನ್ ಹೇಗಾಗುತ್ತದೆ?

ಈ ಆಪರೇಷನ್, ಸರ್ಜರಿ ಇದರಲ್ಲಿ ಸಿಎಂ @BSYBJP ಅವರೇ ಸ್ಪೆಷಲಿಸ್ಟ್. ನಾನು ಡಾಕ್ಟರೂ ಅಲ್ಲ, ನನಗೆ ಯಾವ ರೋಗಿಗಳು ಗೊತ್ತಿಲ್ಲ. 3/5

— Siddaramaiah (@siddaramaiah) November 12, 2019

ಇದೇ ವೇಳೆ ಮಲ್ಲಿಕಾರ್ಜುನ ಖರ್ಗೆಗೆ ಸಿಎಂ ಸ್ಥಾನ ತಪ್ಪಿಸಲು ನನ್ನ ಮಗನನ್ನು ಸಿಎಂ ಮಾಡಿದರು ಎಂಬ ಹೆಚ್‍ಡಿಡಿ ಹೇಳಿಕೆಗೆ ತಿರುಗೇಟು ನೀಡಿರುವ ಸಿದ್ದರಾಮಯ್ಯ, ಕೋಮುವಾದಿ ಬಿಜೆಪಿಯನ್ನು ಅಧಿಕಾರದಿಂದ ದೂರವಿಡುವ ಏಕೈಕ ಉದ್ದೇಶದಿಂದ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳುವಂತೆ ಹೈಕಮಾಂಡ್ ಸೂಚಿಸಿತ್ತು. ಹೈಕಮಾಂಡ್ ಆದೇಶವನ್ನು ನಾನು ಪಾಲಿಸಿದೆ. ಇದರಲ್ಲಿ ನನ್ನ ಪಾತ್ರ ಇಷ್ಟೇ. ಹೈಕಮಾಂಡ್ ಜೊತೆ ಚರ್ಚಿಸಿದ್ದು, ಸರ್ಕಾರ ರಚಿಸಿದ್ದು ದೇವೇಗೌಡರು. ನಾನು ಯಾರ ಮುಖ್ಯಮಂತ್ರಿ ಪಟ್ಟವನ್ನು ತಪ್ಪಿಸಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಕೋಮುವಾದಿ ಬಿಜೆಪಿಯನ್ನು ಅಧಿಕಾರದಿಂದ ದೂರವಿಡುವ ಏಕೈಕ ಉದ್ದೇಶದಿಂದ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳುವಂತೆ ಹೈಕಮಾಂಡ್ ಸೂಚಿಸಿತ್ತು. ಹೈಕಮಾಂಡ್ ಆದೇಶವನ್ನು ನಾನು ಪಾಲಿಸಿದೆ. ಇದರಲ್ಲಿ ನನ್ನ ಪಾತ್ರ ಇಷ್ಟೆ. ಹೈಕಮಾಂಡ್ ಜೊತೆ ಚರ್ಚಿಸಿದ್ದು, ಸರ್ಕಾರ ರಚಿಸಿದ್ದು ದೇವೇಗೌಡರು. ನಾನು ಯಾರ ಮುಖ್ಯಮಂತ್ರಿ ಪಟ್ಟವನ್ನು ತಪ್ಪಿಸಿಲ್ಲ. 1/5

— Siddaramaiah (@siddaramaiah) November 12, 2019

ಕಾಂಗ್ರೆಸ್‍ನಿಂದ ಇನ್ನು ಕೆಲವರು ಬಿಜೆಪಿ ಸೇರಲಿದ್ದಾರೆ ಎಂಬ ಸಿಟಿ ರವಿ ಅವರ ಹೇಳಿಕೆಗೆ ಟಾಂಗ್ ನೀಡಿದ ಅವರು, ಉಪಚುನಾವಣೆ ನಂತರ ಕಾಂಗ್ರೆಸ್ ಮತ್ತು ಜೆಡಿಸ್ ಪಕ್ಷದಿಂದ ಇನ್ನಷ್ಟು ಜನ ನಮ್ಮ ಪಕ್ಷಕ್ಕೆ ಬರುತ್ತಾರೆಂದು ಸಿಟಿ ರವಿ ಅವರು ಹೇಳಿದ್ದಾರಂತೆ. ಮೊದಲು ಬಿಜೆಪಿ ಬಿಟ್ಟು ಹೋಗುತ್ತಿರುವವರನ್ನು ತಡೆಯಲಿ, ಆಮೇಲೆ ಬೇರೆ ಮಾತು. ನನ್ನ 40 ವರ್ಷಗಳ ರಾಜಕೀಯ ಜೀವನದಲ್ಲಿ ಇಂತಹ ಹೇಳಿಕೆಗಳನ್ನು ಕೇಳಿ ಕೇಳಿ ಸಾಕಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.

ಉಪಚುನಾವಣೆ ನಂತರ ಕಾಂಗ್ರೆಸ್ ಮತ್ತು ಜೆಡಿಸ್ ಪಕ್ಷದಿಂದ ಇನ್ನಷ್ಟು ಜನ ನಮ್ಮ ಪಕ್ಷಕ್ಕೆ ಬರುತ್ತಾರೆಂದು @CTRavi_BJP ಹೇಳಿದ್ದಾರಂತೆ. ಮೊದಲು ಬಿಜೆಪಿ ಬಿಟ್ಟು ಹೋಗುತ್ತಿರುವವರನ್ನು ತಡೆಯಲಿ, ಆಮೇಲೆ ಬೇರೆ ಮಾತು.

ನನ್ನ 40 ವರ್ಷಗಳ ರಾಜಕೀಯ ಜೀವನದಲ್ಲಿ ಇಂತಹ ಹೇಳಿಕೆಗಳನ್ನು ಕೇಳಿ ಕೇಳಿ ಸಾಕಾಗಿದೆ. 4/5#ವಿಜಯಪುರ #ಮಾಧ್ಯಮಹೇಳಿಕೆ

— Siddaramaiah (@siddaramaiah) November 12, 2019

ಬಿಜೆಪಿಯವರ ಬಳಿ ಹಣವಿದೆ, ಅಧಿಕಾರ ಹಿಡಿಯಲು ಆಪರೇಷನ್ ಕಮಲವನ್ನೂ ಮಾಡ್ತಾರೆ, ಅನೈತಿಕ ರಾಜಕಾರಣವನ್ನೂ ಮಾಡ್ತಾರೆ. ಮೌಲ್ಯಾಧಾರಿತ ರಾಜಕಾರಣ ಅಂದರೆ ಏನು ಅಂತಲೇ ಅವರಿಗೆ ಗೊತ್ತಿಲ್ಲ. ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಬಗ್ಗೆ ಸ್ವಲ್ಪವೂ ಗೌರವವಿಲ್ಲ. ಹಿಂಬಾಗಿಲ ರಾಜಕಾರಣಕ್ಕೆ ಬಿಜೆಪಿಯವರು ಹೆಸರುವಾಸಿ. ಉಳಿದ 7 ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆಗೆ ಸಂಬಂಧಿಸಿದಂತೆ ಅಭಿಪ್ರಾಯ ಸಂಗ್ರಹಿಸಲಾಗುತ್ತಿದೆ. ನಂತರ ಹೈಕಮಾಂಡ್ ಜೊತೆ ಚರ್ಚಿಸಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗುವುದು. ನಮ್ಮ ಗುರಿ ಕನಿಷ್ಠ 12 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವುದು. 15 ಸ್ಥಾನ ಗೆದ್ದರೂ ಆಶ್ಚರ್ಯವಿಲ್ಲ ಎಂದು ಸರಣಿ ಟ್ವೀಟ್ ಮಾಡಿದ್ದಾರೆ.

TAGGED:bengalurubjpcm yeddyurappaoperationPublic TVsiddaramaiahtweetಆಪರೇಷನ್ಟ್ವೀಟ್ಪಬ್ಲಿಕ್ ಟಿವಿಬಿಜೆಪಿಬೆಂಗಳೂರುಸಿಎಂ ಯಡಿಯೂರಪ್ಪಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Century Gowda
ತಿಥಿ ಸಿನಿಮಾ ಖ್ಯಾತಿಯ ಸೆಂಚುರಿ ಗೌಡ ನಿಧನ
Cinema Latest Mandya Sandalwood Top Stories
Spandana Somanna
BBK 12 | ಬಿಗ್‌ ಬಾಸ್‌ ಮನೆಯಿಂದ ಸ್ಪಂದನಾ ಔಟ್‌
Cinema Latest Main Post TV Shows
Love Mocktail 3 Darling Krishna
ಜಾಹೀರಾಯ್ತು ಲವ್ ಮಾಕ್ಟೇಲ್ 3 ಬಿಡುಗಡೆ ದಿನಾಂಕ!
Cinema Latest Sandalwood Top Stories
yash mother pushpa compound demolition
ನಾವು ಒತ್ತುವರಿ ಮಾಡಿಲ್ಲ, ಕಾನೂನು ಪ್ರಕಾರ ಜಾಗ ಪಡೆದಿದ್ದೇವೆ: ಯಶ್‌ ತಾಯಿ ರಿಯಾಕ್ಷನ್‌
Cinema Hassan Latest Sandalwood Top Stories

You Might Also Like

Umar Khalid Sharjeel Imam 1
Court

ಐವರಿಗೆ ನೀಡಿ ಉಮರ್‌ ಖಾಲಿದ್‌, ಶಾರ್ಜಿಲ್‌ಗೆ ಸುಪ್ರೀಂ ಜಾಮೀನು ನೀಡದ್ದು ಯಾಕೆ?

Public TV
By Public TV
31 minutes ago
Navneet Rana Asaduddin Owaisi
Latest

ನನಗೆ 6 ಮಕ್ಕಳು, ನಿಮ್ಮನ್ನು ತಡೆದವರ‍್ಯಾರು? – 4 ಮಕ್ಕಳನ್ನಾದ್ರೂ ಹೊಂದಬೇಕೆಂದಿದ್ದ ಬಿಜೆಪಿ ನಾಯಕಿ ವಿರುದ್ಧ ಓವೈಸಿ ವಾಗ್ದಾಳಿ

Public TV
By Public TV
34 minutes ago
Monkeys
Districts

ದೇವರಾಯನದುರ್ಗ ಅರಣ್ಯ ಪ್ರದೇಶದಲ್ಲಿ 11 ಕೋತಿಗಳ ನಿಗೂಢ ಸಾವು – ವಿಷ ಪ್ರಾಶನ ಶಂಕೆ

Public TV
By Public TV
46 minutes ago
umar khalid sharjeel imam
Court

ಉಮರ್ ಖಾಲಿದ್, ಶಾರ್ಜೀಲ್ ಇಮಾಮ್‌ ಜಾಮೀನು ಅರ್ಜಿ ವಜಾ

Public TV
By Public TV
1 hour ago
HC Balakrishna
Districts

ಮಾಗಡಿ ತಹಶೀಲ್ದಾರ್‌ಗೆ ಚಪ್ಪಲಿಯಲ್ಲಿ ಹೊಡೆಸುತ್ತೇನೆ ಎಂದಿದ್ದ ಶಾಸಕ ಬಾಲಕೃಷ್ಣ ಕ್ಷಮೆಯಾಚನೆ

Public TV
By Public TV
1 hour ago
Earthquake General Photo
Latest

ಅಸ್ಸಾಂನಲ್ಲಿ 5.1 ತೀವ್ರತೆಯ ಪ್ರಬಲ ಭೂಕಂಪ – ಮನೆಯಿಂದ ಹೊರಗೆ ಓಡಿದ ಜನ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?