Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election 2024
Bengaluru City

Bengaluru South Lok Sabha 2024: ಪ್ರತಿಷ್ಠೆಯ ಕಣವನ್ನು ಮತ್ತೆ ಗೆಲ್ಲುತ್ತಾ ಬಿಜೆಪಿ?- ‘ಕೈ’ ವಶಕ್ಕೆ ತಂತ್ರವೇನು?

Public TV
Last updated: March 22, 2024 4:01 pm
Public TV
Share
3 Min Read
Bengaluru South
SHARE

– ತೇಜಸ್ವಿ ಸೂರ್ಯ V/S ಸೌಮ್ಯಾ ರೆಡ್ಡಿ
– ಬಿಜೆಪಿ ಭದ್ರಕೋಟೆಯಲ್ಲಿ ಜಯದ ಪತಾಕೆ ಹಾರಿಸೋದ್ಯಾರು?

ಬೆಂಗಳೂರು ದಕ್ಷಿಣ (Bengaluru South) ಕ್ಷೇತ್ರವೆಂದರೆ ಅದು ಬಿಜೆಪಿ ಭದ್ರಕೋಟೆ. 1991 ರಿಂದ ಸತತವಾಗಿ ಬಿಜೆಪಿ ಗೆದ್ದು ಅಧಿಪತ್ಯ ಸ್ಥಾಪಿಸಿದೆ. 2024 ರ ಲೋಕಸಭಾ ಚುನಾವಣೆಗೆ ಕ್ಷೇತ್ರವನ್ನು ಬಿಜೆಪಿ ಪ್ರತಿಷ್ಠೆಯಾಗಿ ಪರಿಗಣಿಸಿದೆ. ಹೇಗಾದರು ಮಾಡಿ ಕ್ಷೇತ್ರವನ್ನು ವಶಕ್ಕೆ ಪಡೆಯಬೇಕು ಎಂದು ಆಡಳಿತಾರೂಢ ಕಾಂಗ್ರೆಸ್ ತಂತ್ರ ರೂಪಿಸುತ್ತಿದೆ.

ಕಾಂಗ್ರೆಸ್‌ಗೆ (Congress) ಈ ಕ್ಷೇತ್ರದಲ್ಲಿ ಅಸ್ತಿತ್ವ ಇಲ್ಲ. ಚುನಾವಣಾ ಇತಿಹಾಸ ಗಮನಿಸಿದರೆ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆದ್ದಿರುವುದು ಎರಡೇ ಬಾರಿ. ಆದರೆ ಬಿಜೆಪಿ (BJP) ಭದ್ರ ಬುನಾದಿ ಹಾಕಿಕೊಂಡಿದೆ. ಸತತ ಆರು ಬಾರಿ ಅನಂತ್ ಕುಮಾರ್ ಅವರು ಈ ಕ್ಷೇತ್ರದಲ್ಲಿ ಜಯ ಸಾಧಿಸಿದ್ದಾರೆ. ಇನ್ನು ಕಳೆದ ಚುನಾವಣೆಯಲ್ಲಿ ತೇಜಸ್ವಿ ಸೂರ್ಯ (Tejasvi Surya) ತಮ್ಮ ರಾಜಕೀಯ ಜೀವನದ ಚೊಚ್ಚಲ ಗೆಲುವಿನೊಂದಿಗೆ ಪಾರ್ಲಿಮೆಂಟ್ ಮೆಟ್ಟಿಲೇರಿದ್ದಾರೆ. ಇದನ್ನೂ ಓದಿ: Bengaluru North Lok Sabha 2024: ಬಿಜೆಪಿ ಗೆಲುವಿನ ಓಟಕ್ಕೆ ಬ್ರೇಕ್‌ ಹಾಕುತ್ತಾ ಕಾಂಗ್ರೆಸ್‌?

Bengaluru South Inside

ಕ್ಷೇತ್ರ ಪರಿಚಯ
ಒಕ್ಕಲಿಗರ ಪ್ರಾಬಲ್ಯವಿರುವ ಬೆಂಗಳೂರು ದಕ್ಷಿಣ ಕ್ಷೇತ್ರವು ಸ್ವಾತಂತ್ರ್ಯ ನಂತರ ಮೈಸೂರು ರಾಜ್ಯಕ್ಕೆ ಸೇರಿತ್ತು. ಸ್ವಾತಂತ್ರ್ಯ ಹೋರಾಟಗಾರರಾಗಿದ್ದ ಟಿ.ಮಾದಯ್ಯಗೌಡ ಅವರು ಕಾಂಗ್ರೆಸ್ ಅಭ್ಯರ್ಥಿಯಾಗಿ ಕ್ಷೇತ್ರದಿಂದ ಮೊದಲ ಲೋಕಸಭಾ ಚುನಾವಣೆಯಲ್ಲಿ (Lok Sabha Election) ಗೆದ್ದರು. ಅದಾದ ಬಳಿಕ ಬೆಂಗಳೂರು ಉತ್ತರ ಮತ್ತು ದಕ್ಷಿಣ ಕ್ಷೇತ್ರವನ್ನು ಕ್ಷೇತ್ರವಾಗಿ ಮಾಡಲು ವಿಲೀನಗೊಳಿಸಲಾಯಿತು. ಹೆಚ್.ಸಿ.ದಾಸಪ್ಪ 1957 ರಿಂದ 1962 ರ ವರೆಗೆ ಈ ಕ್ಷೇತ್ರದಿಂದ ಚುನಾಯಿತರಾದರು. ನೆಹರೂ ಸರ್ಕಾರದಲ್ಲಿ ಕೇಂದ್ರ ಸಚಿವರಾಗಿಯೂ ಸೇವೆ ಸಲ್ಲಿಸಿದರು. ನಂತರ ಮಾಜಿ ಸಿಎಂ ಕೆಂಗಲ್ ಹನುಮಂತಯ್ಯ ಈ ಕ್ಷೇತ್ರದಲ್ಲಿ ಸತತ ಮೂರು ಬಾರಿ ಗೆದ್ದಿದ್ದರು.

ತುರ್ತು ಪರಿಸ್ಥಿತಿ ಮತ್ತು ದೇಶಾದ್ಯಂತ ಕ್ಷೇತ್ರಗಳ ಮರುವಿಂಗಡಣೆಯ ನಂತರ, ಈ ಲೋಕಸಭಾ ಸ್ಥಾನವು 1977 ರಲ್ಲಿ ಬೆಂಗಳೂರು ದಕ್ಷಿಣವಾಗಿ ಅಸ್ತಿತ್ವಕ್ಕೆ ಬಂದಿತು. ಅಂದಿನಿಂದ ಈ ಕ್ಷೇತ್ರದಲ್ಲಿ 12 ಚುನಾವಣೆಗಳು ನಡೆದಿವೆ. ಬಿಜೆಪಿ 8 ಬಾರಿ, ಜನತಾ ಪಕ್ಷ 3 ಬಾರಿ ಮತ್ತು ಕಾಂಗ್ರೆಸ್ ಕೇವಲ ಒಂದು ಬಾರಿ ಗೆದ್ದಿದೆ. ಬಿಜೆಪಿ ನಾಯಕ ಅನಂತ್ ಕುಮಾರ್ ಈ ಕ್ಷೇತ್ರದಿಂದ ಸತತ 6 ಬಾರಿ ಗೆದ್ದಿದ್ದಾರೆ. ಇದನ್ನೂ ಓದಿ: Bagalkot Lok Sabha 2024: ಚಾಲುಕ್ಯರ ನಾಡಲ್ಲಿ ಬಾವುಟ ಹಾರಿಸೋದ್ಯಾರು?

bengaluru south lok sabha

ವಿಧಾನಸಭಾ ಕ್ಷೇತ್ರಗಳೆಷ್ಟು?
ಈ ಕ್ಷೇತ್ರ ವ್ಯಾಪ್ತಿಯಲ್ಲಿ ಒಟ್ಟು 8 ವಿಧಾನಸಭಾ ಕ್ಷೇತ್ರಗಳು ಒಳಪಡುತ್ತವೆ. ಗೋವಿಂದರಾಜನಗರ, ವಿಜಯನಗರ, ಚಿಕ್ಕಪೇಟೆ, ಬಸವನಗುಡಿ, ಪದ್ಮನಾಭನಗರ, ಬಿಟಿಎಂ ಲೇಔಟ್, ಜಯನಗರ, ಬೊಮ್ಮನಹಳ್ಳಿ. ಒಟ್ಟು ಕ್ಷೇತ್ರಗಳ ಪೈಕಿ ಮೂರರಲ್ಲಿ ಮಾತ್ರ ಕಾಂಗ್ರೆಸ್ ಶಾಸಕರಿದ್ದಾರೆ. ಇನ್ನುಳಿದ ಐದು ಕ್ಷೇತ್ರಗಳಲ್ಲಿ ಬಿಜೆಪಿ ಶಾಸಕರು ಗೆದ್ದಿದ್ದಾರೆ.

ಮತದಾರರ ಸಂಖ್ಯೆ ಎಷ್ಟು?
ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಒಟ್ಟು 23,17,472 ಮತದಾರರು ಇದ್ದಾರೆ. ಅವರ ಪೈಕಿ ಪುರುಷರು 11,95,285 ಹಾಗೂ ಮಹಿಳಾ ಮತದಾರರು 11,21,788 ಇದ್ದಾರೆ. ತೃತೀಯಲಿಂಗಿ ಮತದಾರರು 399 ಇದ್ದಾರೆ. ಇದನ್ನೂ ಓದಿ: Dakshina Kannada Lok Sabha 2024: ಬಿಜೆಪಿ ಭದ್ರಕೋಟೆ ಭೇದಿಸುತ್ತಾ ಕಾಂಗ್ರೆಸ್?‌

Tejasvi Surya

ಕಳೆದ ಚುನಾವಣೆಯಲ್ಲಿ ಏನಾಗಿತ್ತು?
2019 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ತೇಜಸ್ವಿ ಸೂರ್ಯ ಗೆಲುವು ಸಾಧಿಸಿದರು. ಇವರ ವಿರುದ್ಧ ಸ್ಪರ್ಧಿಸಿದ್ದ ಕಾಂಗ್ರೆಸ್‌ನ ಬಿ.ಕೆ.ಹರಿಪ್ರಸಾದ್ ಸೋಲನುಭವಿಸಿದರು. 3,31,192 ಮತಗಳ ಅಂತರದಿಂದ ಬಿಜೆಪಿ ಗೆದ್ದಿತ್ತು.

ತೇಜಸ್ವಿ ಸೂರ್ಯಗೆ ಮತ್ತೆ ಟಿಕೆಟ್
ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಸತತ ಗೆಲುವಿನ ಓಟ ಮುಂದುವರಿಸಲು ಬಿಜೆಪಿ ಶತಪ್ರಯತ್ನ ಮಾಡುತ್ತಿದೆ. ಹೀಗಾಗಿ ಎರಡನೇ ಬಾರಿಗೆ ತೇಜಸ್ವಿ ಸೂರ್ಯಗೆ ಟಿಕೆಟ್ ಕೊಟ್ಟಿದೆ. 2019 ರಲ್ಲಿ ಗೆದ್ದು ಮೊದಲ ಬಾರಿಗೆ ಸಂಸದರಾಗಿದ್ದ ಸೂರ್ಯಗೆ ರಾಷ್ಟ್ರೀಯ ಯುವ ಮೋರ್ಚಾ ಅಧ್ಯಕ್ಷ ಜವಾಬ್ದಾರಿಯನ್ನು ವಹಿಸಲಾಗಿತ್ತು. ಯುವ ಸಮುದಾಯವನ್ನು ಮುಖ್ಯವಾಹಿನಿಗೆ ತಂದು ಬೆಳೆಸುವ ನಿಟ್ಟಿನಲ್ಲಿ ಬಿಜೆಪಿ ನಾನಾ ತಂತ್ರಗಳನ್ನು ರೂಪಿಸುತ್ತಿದೆ. ಕಳೆದ 32 ವರ್ಷಗಳಿಂದ ಕ್ಷೇತ್ರದಲ್ಲಿ ವಿಜಯ ಸಾಧಿಸಿರುವ ಬಿಜೆಪಿ ಮತ್ತೊಮ್ಮೆ ಗೆಲ್ಲುವ ನಿರೀಕ್ಷೆಯಲ್ಲಿದೆ. ಇದನ್ನೂ ಓದಿ: Chamarajanagara Lok Sabha 2024: ಕಾಂಗ್ರೆಸ್ ಕೋಟೆಗೆ ಎಂಟ್ರಿ ಕೊಟ್ಟಿರೋ ಬಿಜೆಪಿ ಮತ್ತೆ ಸಿಂಹಾಸನ ಏರುತ್ತಾ?

SOWMYA REDDY

ಕಾಂಗ್ರೆಸ್‌ನಿಂದ ಸೌಮ್ಯಾ ರೆಡ್ಡಿಗೆ ಮಣೆ
ಬೆಂಗಳೂರು ವ್ಯಾಪ್ತಿಯಲ್ಲಿ ಸಚಿವ ರಾಮಲಿಂಗಾರೆಡ್ಡಿ (Ramalinga Reddy) ಅವರು ತಮ್ಮದೇ ಆದ ಹಿಡಿತವನ್ನ ಹೊಂದಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ ಸೋಲು ಕಂಡ ಪುತ್ರಿಯನ್ನು ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕಣಕ್ಕಿಳಿಸುವ ನಿಟ್ಟಿನಲ್ಲಿ ತಯಾರಿ ನಡೆಸಿದ್ದರು. ಈ ಸಂಬಂಧ ಹೈಕಮಾಂಡ್ ನಾಯಕರ ಜೊತೆಯೂ ಚರ್ಚೆ ನಡೆಸಿದ್ದರು. ಅದಕ್ಕೆ ಈಗ ಫಲ ಸಿಕ್ಕಿದೆ. ನಿರೀಕ್ಷೆಯಂತೆ ಸೌಮ್ಯಾ ರೆಡ್ಡಿಗೆ (Sowmya Reddy) ಕಾಂಗ್ರೆಸ್ ಟಿಕೆಟ್ ನೀಡಿದೆ. ಪ್ರತಿಷ್ಠಿತ ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಬಿಜೆಪಿ-ಕಾಂಗ್ರೆಸ್ ಪಕ್ಷಗಳ ಮಧ್ಯೆ ನೇರ ಹಣಾಹಣೆ ಏರ್ಪಡಲಿದೆ.

ಜಾತಿವಾರು ಲೆಕ್ಕಾಚಾರ
ಒಕ್ಕಲಿಗ- 3,21,000
ಲಿಂಗಾಯತ- 34,000
ಬ್ರಾಹ್ಮಣ- 1,81,000
ಮುಸ್ಲಿಂ- 1,58,000

TAGGED:Bengaluru SourthbjpcongressLok Sabha Election 2024Sowmya ReddyTejasvi Surya
Share This Article
Facebook Whatsapp Whatsapp Telegram

Cinema Updates

salman khan
ಭಾರತ-ಪಾಕ್ ಕದನ ವಿರಾಮಕ್ಕೆ ಸಲ್ಮಾನ್ ಖಾನ್ ಖುಷಿ; ಟೀಕೆ ಬೆನ್ನಲ್ಲೇ ಪೋಸ್ಟ್ ಡಿಲೀಟ್
23 minutes ago
ranjith kumar
ದಾಂಪತ್ಯ ಜೀವನಕ್ಕೆ ಕಾಲಿಟ್ಟ ‘ಬಿಗ್ ಬಾಸ್’ ಖ್ಯಾತಿಯ ರಂಜಿತ್
2 hours ago
radhika pandit
Mother’s Day 2025: ಅಮ್ಮನ ಬಗ್ಗೆ ಹೃದಯಸ್ಪರ್ಶಿ ಪೋಸ್ಟ್ ಹಂಚಿಕೊಂಡ ರಾಧಿಕಾ ಪಂಡಿತ್
2 hours ago
aishwarya rajesh
‘ಯುದ್ಧ ಬೇಡ’ ಎಂದು ಮನವಿ ಮಾಡಿದ ಐಶ್ವರ್ಯಾ ರಾಜೇಶ್- ನೆಟ್ಟಿಗರಿಂದ ತರಾಟೆ
3 hours ago

You Might Also Like

Indian Army
Latest

ಪಾಕ್‌ ಕದನ ವಿರಾಮ ಉಲ್ಲಂಘಿಸಿದ್ರೆ ಪ್ರತಿದಾಳಿ ನಡೆಸಿ – ಕಮಾಂಡರ್‌ಗಳಿಗೆ ಭಾರತೀಯ ಸೇನೆ ಪೂರ್ಣ ಅಧಿಕಾರ

Public TV
By Public TV
2 minutes ago
BrahMos
Latest

Explainer | ಬ್ರಹ್ಮೋಸ್‌ ನಿರ್ಮಾಣಕ್ಕೆ ಕೈ ಹಾಕಿದ್ದು ಯಾಕೆ? ಪಾಕ್‌ ರೇಡಾರ್‌ ಕಣ್ಣಿಗೆ ಬಿದ್ದಿಲ್ಲ ಯಾಕೆ?

Public TV
By Public TV
5 minutes ago
mudavath murali naik
Latest

ಆಪರೇಷನ್‌ ಸಿಂಧೂರ- ಹುತಾತ್ಮ ವೀರ ಯೋಧನಿಗೆ ಭಾವುಕ ವಿದಾಯ; ಕಣ್ಣೀರಿಟ್ಟ ಕುಟುಂಬಸ್ಥರು

Public TV
By Public TV
1 hour ago
Kirna Hilla Mushaf Airbase Sargodha Pakistan
Latest

ಅಣ್ವಸ್ತ್ರಗಳಿರೋ ಬೆಟ್ಟದ ಮೇಲೆ ದಾಳಿ – ಬೆದರಿದ ಪಾಕ್‌, ಅಮೆರಿಕಕ್ಕೂ ಶಾಕ್‌!

Public TV
By Public TV
1 hour ago
Country First Ballari soldier cuts short leave and returns to duty
Bellary

ದೇಶ ಮೊದಲು – ರಜೆ ಮೊಟಕು, ಬಳ್ಳಾರಿ ಯೋಧ ಕರ್ತವ್ಯಕ್ಕೆ ಹಾಜರ್‌

Public TV
By Public TV
2 hours ago
15 Karnataka Students stucked in sirnagar
Latest

ಭಾರತ-ಪಾಕ್ ಸಂಘರ್ಷ: ಶ್ರೀನಗರದಲ್ಲಿ ಸಿಲುಕಿಕೊಂಡಿರುವ 15ಕ್ಕೂ ಹೆಚ್ಚು ಕನ್ನಡಿಗ ವಿದ್ಯಾರ್ಥಿಗಳ ಪರದಾಟ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election 2024
Welcome Back!

Sign in to your account

Username or Email Address
Password

Lost your password?