Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಗಮನಿಸಿ, ಮತ್ತೆ ಬೆಂಗ್ಳೂರಿನ ಸುಮನಹಳ್ಳಿ ಫ್ಲೈ ಓವರ್ 1 ತಿಂಗಳು ಬಂದ್

Public TV
Last updated: December 10, 2019 2:09 pm
Public TV
Share
3 Min Read
sumanahalli flyover 2
SHARE

– ಡಿ.15 ರಿಂದ ಕಾಮಗಾರಿ ಆರಂಭ
– ದುರಸ್ತಿಗೊಳಿಸದಿದ್ದರೆ ಸೇತುವೆ ಕುಸಿತ
– ಖಾಸಗಿ ಸಂಸ್ಥೆಯಿಂದ ಬಿಬಿಎಂಪಿಗೆ ವರದಿ

ಬೆಂಗಳೂರು: ನಾಯಂಡಹಳ್ಳಿಯಿಂದ ತುಮಕೂರು ರಸ್ತೆಗೆ ಸಂಪರ್ಕ ಕಲ್ಪಿಸುವ ಹೊರ ವರ್ತುಲ ರಸ್ತೆಯಲ್ಲಿರುವ 546 ಮೀಟರ್ ಉದ್ದದ ಸುಮನಹಳ್ಳಿ ಫ್ಲೈ ಓವರ್ ಒಂದು ತಿಂಗಳು ಬಂದ್ ಆಗಲಿದೆ.

ಮೇಲ್ಸೇತುವೆಯ ರಸ್ತೆಯಲ್ಲಿ ಸುಮಾರು 6 ಅಡಿ ಅಗಲದಷ್ಟು ಗುಂಡಿ ಬಿದ್ದ ಹಿನ್ನೆಲೆಯಲ್ಲಿ ನ.1ರಿಂದ ನ.18ವರೆಗೆ ಒಂದು ಬದಿಯ ಸಂಚಾರವನ್ನು ನಿಷೇಧಿಸುವ ನಿರ್ಧಾರವನ್ನು ಕೈಗೊಳ್ಳಲಾಗಿತ್ತು. ಆದರೆ ಈಗ ಬಿಡಿಎ ನಿರ್ಮಿತ ನಿರ್ವಹಣೆಯಲ್ಲಿದ್ದ ಸೇತುವೆ ಕಳಪೆ ಕಾಮಗಾರಿಯಿಂದ ಕೂಡಿದೆ ಎಂದು ಖಾಸಗಿ ಸಂಸ್ಥೆಯೊಂದು ವರದಿ ನೀಡಿದೆ.

ಈ ವರದಿಯ ಹಿನ್ನೆಲೆಯಲ್ಲಿ ಕೆಲ ದಿನಗಳ ಹಿಂದೆ ಲಘು ವಾಹನಗಳಿಗೆ ಮುಕ್ತವಾಗಿದ್ದ ಸುಮನಹಳ್ಳಿ ಮೇಲ್ಸೇತುವೆಯನ್ನು ಒಂದು ತಿಂಗಳು ಬಂದ್ ಮಾಡಲು ಬಿಬಿಎಂಪಿ ಮುಂದಾಗಿದೆ. ಇದೇ ತಿಂಗಳ 15 ರಿಂದ ಭಾರೀ ವಾಹನಗಳ ಸಂಚಾರಕ್ಕೆ ಮೇಲ್ಸುತುವೆ ಎರಡು ಕಡೆಯಿಂದಲೂ ಅವಕಾಶ ನೀಡಲಾಗುವುದಿಲ್ಲ.

sumanahalli flyover

ಸೇತುವೆಯ ಬೀಮ್(ಅಡ್ಡ ಕಂಬ), ಸ್ಲ್ಯಾಬ್ ಗಳಲ್ಲಿ ಹನಿಕಾಂಬ್(ಕಾಂಕ್ರೀಟ್ ಪದರ ಟೊಳ್ಳಾಗುವುದನ್ನು ಸಿವಿಲ್ ಎಂಜಿನಿಯರಿಂಗ್ ಭಾಷೆಯಲ್ಲಿ ಹನಿಕಾಂಬ್ ಎಂದು ಕರೆಯಲಾಗುತ್ತದೆ) ಸೃಷ್ಟಿಯಾಗಿದೆ. ಹೀಗಾಗಿ ದುರಸ್ತಿ ಕಾರ್ಯ ಶೀಘ್ರ ಆರಂಭಿಸದಿದ್ದರೆ ಮೇಲ್ಸುತುವೆಯನ್ನು ತೆಗೆಯಬೇಕಾಗುತ್ತದೆ. ಹೀಗಾಗಿ ಭಾರೀ ವಾಹನಗಳು ಫ್ಲೈಓವರ್ ಮೇಲೆ ಸಾಗದಂತೆ ಸಂಚಾರಿ ಪೊಲೀಸರು ಚಾಲಕರನ್ನು ತಡೆದು ಸರ್ವಿಸ್ ರಸ್ತೆಯ ಮೂಲಕ ಸಾಗುವಂತೆ ನಿರ್ದೇಶನ ನೀಡುತ್ತಿದ್ದಾರೆ.

ಮೇಲ್ಸೇತುವೆಯಲ್ಲಿ ಗುಂಡಿ ಸೃಷ್ಟಿಯಾದ ಹಿನ್ನೆಲೆಯಲ್ಲಿ ಸೇತುವೆಯ ಗುಣಮಟ್ಟದ ಬಗ್ಗೆ ಪ್ರಶ್ನೆ ಎದ್ದಿತ್ತು. ಈ ಹಿನ್ನೆಲೆಯಲ್ಲಿ ಬಿಬಿಎಂಪಿ ಸೇತುವೆಯ ಸದೃಢತೆ ಪರೀಕ್ಷಿಸಲು ಸಿವಿಲ್- ಎಡ್ ಟೆಕ್ನೋಕ್ಲಿನಿಕ್ ಸಂಸ್ಥೆಯನ್ನು ನಿಯೋಜಿಸಿತ್ತು. ಈ ಸಂಸ್ಥೆಯ ಎಂಜಿನಿಯರ್ ಗಳು ಪರಿಶೀಲಿಸಿ ಸೇತುವೆಯಲ್ಲಿ ಕಳಪೆ ಕಾಮಗಾರಿ ನಡೆದಿದ್ದರಿಂದ ದೋಷ ಉಂಟಾಗಿದೆ ಎಂದು ವರದಿ ನೀಡಿದ್ದರು.

collage Benagaluru flyover 2 1

ಸೇತುವೆ ರ‍್ಯಾಂಪ್ ಹಾಗೂ ಪಿಲ್ಲರ್ ಮಧ್ಯೆ ಅಳವಡಿಸಿರುವ ಬೇರಿಂಗ್ ನಲ್ಲಿ ದೋಷವಿದೆ. ಅಲ್ಲದೇ ಕಳಪೆ ಕಾಮಗಾರಿಯಿಂದ ಹಲವು ಬೀಮ್ ಹಾಗೂ ಸ್ಲ್ಯಾಬ್ ಗಳಲ್ಲಿ ಹನಿಕಾಂಬ್ ಸೃಷ್ಟಿಯಾಗಿದೆ. ಈಗಲೇ ದುರಸ್ತಿ ಮಾಡದೇ ಇದ್ದರೆ ಮುಂದೆ ಸೇತುವೆಯೇ ಕುಸಿದು ಬೀಳಬಹುದು ಎಂದು ಎಚ್ಚರಿಕೆ ನೀಡಿದ ಹಿನ್ನೆಲೆಯಲ್ಲಿ ಬಿಬಿಎಂಪಿ ಸಂಚಾರವನ್ನು ಬಂದ್ ಮಾಡಲು ಮುಂದಾಗಿದೆ.

ಸೇತುವೆಯ ಬೇರಿಂಗ್‍ನಲ್ಲಿ ಕಂಡು ಬಂದಿರುವ ದೋಷ ಸರಿ ಮಾಡುವ ತಜ್ಞರು ರಾಜ್ಯದಲ್ಲಿ ಇಲ್ಲದೇ ಇರುವುದರಿಂದ ಬಿಬಿಎಂಪಿ ಮುಂಬೈ ಮತ್ತು ದೆಹಲಿಯ ವಿವಿಧ ತಜ್ಞರಿಗೆ ಆಹ್ವಾನ ನೀಡಿದೆ. ತಜ್ಞರು ಪರಿಶೀಲಿಸಿ ಅಂದಾಜು ವೆಚ್ಚವನ್ನು ನೀಡಿದ ಬಳಿಕ ಬಿಬಿಎಂಪಿ ಕಾಮಗಾರಿ ಆರಂಭಿಸಲಿದೆ.

ಸುಮನಹಳ್ಳಿ ಸಿಗ್ನಲ್‍ನಲ್ಲಿ ವಿಜಯನಗರ, ಮಾರುಕಟ್ಟೆ ಕಡೆಯಿಂದ ಸುಂಕದಕಟ್ಟೆ, ನಾಯಂಡಹಳ್ಳಿ ಕಡೆಯಿಂದ ತುಮಕೂರು ರಸ್ತೆಗೆ ವಾಹನಗಳು ಸಂಚರಿಸುತ್ತವೆ. ಭಾರೀ ಸಂಖ್ಯೆಯಲ್ಲಿ ವಾಹನಗಳು ಸಂಚರಿಸುತ್ತಿರುವ ಹಿನ್ನೆಲೆಯಲ್ಲಿ 2007ರಲ್ಲಿ ಬಿಡಿಎ ಫ್ಲೈಓವರ್ ಕಾಮಗಾರಿಯ ಗುತ್ತಿಗೆಯನ್ನು ಚೆನ್ನೈ ಮೂಲದ ಇಸಿಸಿಐ ಕಂಪನಿಗೆ ನೀಡಿತ್ತು. 2010ರಲ್ಲಿ ಉದ್ಘಾಟನೆಯಾದ ಬಳಿಕ 2016ರವರೆಗೆ ಬಿಡಿಎ ನಿರ್ವಹಣೆ ಮಾಡಿ ನಂತರ ಬಿಬಿಎಂಪಿಗೆ ನೀಡಿತ್ತು. ಆದರೆ ಬಿಬಿಎಂಪಿ ಅಧಿಕಾರಿಗಳು ನಿರ್ವಹಣೆ ಸರಿ ಮಾಡದ ಪರಿಣಾಮ ರಸ್ತೆ ಗುಂಡಿ ಬಿದ್ದಿತ್ತು.

collage Benagaluru flyover

ಈ ವಿಚಾರದ ಬಗ್ಗೆ ಈ ಹಿಂದೆ ಪ್ರತಿಕ್ರಿಯಿಸಿದ್ದ ಬಿಬಿಎಂಪಿ ಆಯುಕ್ತ ಅನಿಲ್ ಕುಮಾರ್ ಸ್ವತಃ ಅಧಿಕಾರಿಗಳ ತಪ್ಪನ್ನು ಒಪ್ಪಿಕೊಂಡಿದ್ದರು. ಮೇಲ್ಸೇತುವೆಯನ್ನು ಸರಿಯಾಗಿ ನಿರ್ವಹಣೆ ಮಾಡದೇ ಇರುವುರಿಂದ ಸಮಸ್ಯೆ ಸೃಷ್ಟಿಯಾಗಿದೆ. ಸೇತುವೆ ಮೇಲೆ ಮಳೆ ನೀರು ಹರಿದು ಹೋಗಲು ಸರಿಯಾದ ವ್ಯವಸ್ಥೆ ಇಲ್ಲದ ಇರುವುದರಿಂದ ಗುಂಡಿ ಬಿದ್ದಿದೆ. ಬಿಬಿಎಂಪಿ ಅಧಿಕಾರಿಗಳು ಕಳೆದ 4 ವರ್ಷಗಳಿಂದ ಸೇತುವೆ ನಿರ್ವಹಣೆ ಮಾಡಿರಲಿಲ್ಲ. ಈ ಬ್ರಿಡ್ಜ್ ನಿರ್ಮಾಣ ಮಾಡಿದ ಚೆನ್ನೈ ಮೂಲದ ಖಾಸಗಿ ಸಂಸ್ಥೆ ಇಸಿಸಿಐ 3 ರಾಜ್ಯಗಳಲ್ಲಿ ಕಪ್ಪು ಪಟ್ಟಿಯಲ್ಲಿದೆ. ಈ ಸೇತುವೆ ಹಾಳಾಗಳು ಅಧಿಕಾರಿಗಳ ಬೇಜಾವಾಬ್ದಾರಿ ಕಾರಣ ಎಂದು ನೇರವಾಗಿ ಹೇಳಿದ್ದರು.

ಕೋಲ್ಕತ್ತಾ ಸೇತುವೆ ದುರಂತ:
2018ರ ಸೆಪ್ಟೆಂಬರ್ ನಲ್ಲಿ ದಕ್ಷಿಣ ಕೋಲ್ಕತ್ತಾದ ಡೈಮಂಡ್ ಹರ್ಬರ್ ರಸ್ತೆಯಲ್ಲಿರುವ ಮಜರತ್ ಸೇತುವೆ ಕುಸಿದು ಬಿದ್ದ ಪರಿಣಾಮ ಮೂರು ಮಂದಿ ಸಾವನ್ನಪ್ಪಿ, 25 ಜನ ಗಂಭೀರವಾಗಿ ಗಾಯಗೊಂಡಿದ್ದರು. ಈ ಪ್ರಕರಣದ ಬಳಿಕ ದೇಶದ ಎಲ್ಲ ರಾಜ್ಯ ಸರ್ಕಾರಗಳು ಹಳೆಯ ಸೇತುವೆಯ ಸದೃಢತೆಯ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ಪರಿಶೀಲನೆ ನಡೆಸುತ್ತಿವೆ.

TAGGED:bbmpbengaluruSumanahallisumanahalli flyoverಕಳಪೆ ಕಾಮಗಾರಿನಾಯಂಡಳ್ಳಿಬಿಬಿಎಂಪಿಬೆಂಗಳೂರುಸುಮನಹಳ್ಳಿಸೇತುವೆಸೇತುವೆ ದುರಸ್ತಿ
Share This Article
Facebook Whatsapp Whatsapp Telegram

Cinema Updates

disha patani 3
ಹಾಲಿವುಡ್‌ನತ್ತ ಹೊರಟ ಬಾಲಿವುಡ್ ಬೋಲ್ಡ್ ಬ್ಯೂಟಿ ದಿಶಾ ಪಟಾನಿ!
1 hour ago
Shivaraj Tangadagi
ಕಮಲ್ ಹಾಸನ್ ಕ್ಷಮೆ ಕೇಳೋವರೆಗೂ ಬಿಡೋದಿಲ್ಲ: ಶಿವರಾಜ್ ತಂಗಡಗಿ
2 hours ago
sreeleela 4
ಬಾಲಿವುಡ್ ನಟನೊಂದಿಗೆ ಮದುವೆಗೆ ರೆಡಿಯಾದ್ರಾ ಶ್ರೀಲೀಲಾ?- ಅರಿಶಿಣ ಶಾಸ್ತ್ರದ ಫೋಟೋ ವೈರಲ್
2 hours ago
shivanna kamal haasan
ಕಮಲ್ ಹಾಸನ್ ಕನ್ನಡ ಕಾಂಟ್ರವರ್ಸಿ ಬಗ್ಗೆ ಕೇಳ್ತಿದ್ದಂತೆ ಕೈಮುಗಿದ ಶಿವಣ್ಣ!
3 hours ago

You Might Also Like

Mangaluru Landslide ASHWINI
Dakshina Kannada

Mangaluru Landslide | ಮಕ್ಕಳ ಅಗಲಿಕೆ ಮಧ್ಯೆ ಎರಡೂ ಕಾಲು ಕಳೆದುಕೊಂಡ ಅಶ್ವಿನಿ

Public TV
By Public TV
7 minutes ago
madhu bangarappa 1
Belgaum

ಸರ್ಕಾರಿ ನೌಕರರಿಗೆ ಪ್ರತಿಭಟನೆ ಮಾಡುವ ಅವಕಾಶ ಇಲ್ಲ: ಮಧು ಬಂಗಾರಪ್ಪ

Public TV
By Public TV
1 hour ago
CRIME
Crime

ಅತ್ತಿಗೆಯ ಶಿರಚ್ಛೇದನ, ರುಂಡ ಹಿಡಿದು ಊರೆಲ್ಲಾ ಸುತ್ತಾಡಿ ಪೊಲೀಸರಿಗೆ ಶರಣಾದ ದುಷ್ಕರ್ಮಿ

Public TV
By Public TV
1 hour ago
japan
Latest

ಜಪಾನ್‌ನ ಹೊಕ್ಕೈಡೋದಲ್ಲಿ 6.1 ತೀವ್ರತೆಯ ಭೂಕಂಪ

Public TV
By Public TV
2 hours ago
tumakuru outrage erupts against hemavati express link canal project work temporarily halted
Districts

ಭುಗಿಲೆದ್ದ ರೈತರ ಆಕ್ರೋಶ – ಹೇಮಾವತಿ ಲಿಂಕ್ ಕೆನಾಲ್ ಯೋಜನೆ ಕಾಮಗಾರಿ ತಾತ್ಕಾಲಿಕ ಸ್ಥಗಿತ

Public TV
By Public TV
2 hours ago
Shashi Tharoor 3
Latest

ಪಾಕ್ ಪರ ನೀಡಿದ್ದ ಹೇಳಿಕೆಗೆ ಶಶಿ ತರೂರ್ ಆಕ್ಷೇಪ ಬೆನ್ನಲ್ಲೇ ಕೊಲಂಬಿಯಾ ಯೂಟರ್ನ್ – ಭಾರತಕ್ಕೆ ರಾಜತಾಂತ್ರಿಕ ಯಶಸ್ಸು

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?