ಕಾರವಾರ: ಕುಟುಂಬದೊಂದಿಗೆ ಪ್ರವಾಸಕ್ಕೆ ಬಂದ ವೇಳೆ ಸಮುದ್ರಕ್ಕಿಳಿದಿದ್ದ ಯುವಕನೊಬ್ಬ ಕೊಚ್ಚಿ ಹೋದ ಘಟನೆ ಭಟ್ಕಳ ತಾಲೂಕಿನ ಮುರುಡೇಶ್ವರದಲ್ಲಿ ನಡೆದಿದೆ.
ಬೆಂಗಳೂರು ಮೂಲದ ಕಿರಣಕುಮಾರ್(18) ನೀರಿನಲ್ಲಿ ಕೊಚ್ಚಿ ಹೋದ ಯುವಕ. ಮತ್ತೊಬ್ಬ ಕಾರ್ತಿಕ್ ಮುನಿರಾಜು (20) ಯುವಕನನ್ನು ರಕ್ಷಣೆ ಮಾಡಲಾಗಿದೆ. ಬೆಂಗಳೂರಿನ ಯಲಹಂಕದ ಚಂದ್ರಶೇಖರ, ಸುರೇಶ, ಗೌರಮ್ಮ, ಚೈತ್ರಾ, ಗೌರಮ್ಮ, ಸಂದೇಶ್ ಮತ್ತು ಶ್ರೀನಿವಾಸ್ ಸೇರಿ ಒಟ್ಟು 9 ಜನ ಕುಟುಂಬ ಸದಸ್ಯರು ಪ್ರವಾಸಕ್ಕೆಂದು ಮುರುಡೇಶ್ವರಕ್ಕೆ ಬಂದಿದ್ದರು.
ಇವರಲ್ಲಿ ನಾಲ್ವರು ಸಮುದ್ರಕ್ಕೆ ಈಜಲು ತೆರಳಿದ್ದರು. ಈ ವೇಳೆ ಇಬ್ಬರು ಅಲೆಗಳ ಅಬ್ಬರಕ್ಕೆ ಕೊಚ್ಚಿ ಹೋಗಿದ್ದರು. ಇದನ್ನು ಗಮನಿಸಿದ ಸ್ಥಳೀಯರು ಹಾಗೂ ಲೈಫ್ ಗಾರ್ಡ್ ಸಿಬ್ಬಂದಿ ತಕ್ಷಣ ಸಮುದ್ರಕ್ಕೆ ಇಳಿದು ಓರ್ವನನ್ನು ರಕ್ಷಣೆ ಮಾಡಿದ್ದಾರೆ. ಆದರೆ ಇನ್ನೊಬ್ಬ ನಾಪತ್ತೆಯಾಗಿದ್ದಾನೆ. ಯುವಕನಿಗಾಗಿ ಶೋಧಕಾರ್ಯ ನಡೆಸಲಾಗುತ್ತಿದೆ.
ಈ ಬಗ್ಗೆ ಮುರುಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
https://www.youtube.com/watch?v=RX9Cyag8y7g