ಬೆಂಗಳೂರು: ನಗರದ ಹಲವಾರು ಪ್ರದೇಶಗಳಲ್ಲಿ ಇಂದಿನಿಂದ ಬುಧವಾರದವರೆಗೆ ವಿದ್ಯುತ್ ಕಡಿತ ಸಮಸ್ಯೆ ಎದುರಾಗಲಿದೆ ಎಂದು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ (ಬೆಸ್ಕಾಂ) ತಿಳಿಸಿದೆ.
ಕರ್ನಾಟಕ ಪವರ್ ಟ್ರಾನ್ಸ್ಮಿಷನ್ ಕಾರ್ಪೋರೇಶನ್ ಲಿಮಿಟೆಡ್ (ಕೆಪಿಟಿಸಿಎಲ್) ನಿರ್ವಹಣೆ ಮತ್ತು ಇತರ ಕೆಲಸಗಳಿಂದಾಗಿ ಅನೇಕ ಪ್ರದೇಶಗಳಲ್ಲಿ ವಿದ್ಯುತ್ ಕಡಿತಗೊಳಿಸಬೇಕಾಗುತ್ತದೆ.
ಬೆಂಗಳೂರು ದಕ್ಷಿಣ ವಲಯದಲ್ಲಿ ಬೆಳಗ್ಗೆ 10 ರಿಂದ ಸಂಜೆ 5.30 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. ಪದ್ಮನಾಭನಗರ ಜೆಪಿ ನಗರ 5 ನೇ ಹಂತ, ವೆಂಕಟಾದ್ರಿ ಲೇಔಟ್, ವಸಂತ ವಲ್ಲಬ ನಗರ, ಶಾರದ ನಗರ, ಮಾರುತಿ ಲೇಔಟ್, ಬಿಕಿಸಿಪುರ, ಮಾವಿನ ತೋಟ, ಬಿಕಿಸಿಪುರ, ಮಾವಿನ ತೋಟ, ಪ್ರತಿಮಾ ಇಂಡಸ್ಟ್ರಿಯಲ್ ಲೇಔಟ್, ಕಾಶಿನಗರ ಕೆರೆ, ಇಸ್ರೋ ಲೇಔಟ್, ಬ್ಯಾಂಕ್ ಆಫ್ ಬರೋಡಾ ಕಾಲೋನಿ, ಡಬ್ಲ್ಯೂ. ಗಾರ್ಡನ್ ಸೊಸೈಟಿ, ಚುಂಚಗಟ್ಟಾ ಗ್ರಾಮ, ಸುಪ್ರಜಾ ನಗರ, ಗಣಪತಿಪುರ, ಓಲ್ಡ್ ಬ್ಯಾಂಕ್ ಕಾಲೋನಿ, ಟೀಚರ್ಸ್ ಕಾಲೋನಿ, ಬೀರೇಶ್ವರ ನಗರ, ಕೋಣನಕುಂಟೆ ಕೈಗಾರಿಕಾ ಪ್ರದೇಶ, ಚುಂಚಗಟ್ಟಾ ಮುಖ್ಯರಸ್ತೆ, ಸಿಆರ್ ಲೇಔಟ್, ಎಲ್ಐಸಿ ಕಾಲೋನಿ, ಜೆಪಿ ನಗರ 1 ನೇ ಹಂತ, ಭವಾನಿ ನಗರ, ಬನಶಂಕರಿ 2ನೇ ಹಂತ, ಕದರ್ರನಹಳ್ಳಿ ನಗರ ಮುಖ್ಯರಸ್ತೆ, ಕೆಆರ್ ರಸ್ತೆ, ಬನಗಿರಿ ನಗರ, ಕಿಡ್ನಿ ಫೌಂಡೇಶನ್ ಮುಖ್ಯರಸ್ತೆ, ವೆಂಕಟಾದ್ರಿ ಲೇಔಟ್, ವಿವೇಕನಗರ, ಈಜಿಪುರ, ಜೋಗಿ ಕಾಲೋನಿ, ವಿನಾಯಕ ನಗರ, ಬಾಲಾಜಿ ಲೇಔಟ್, ಎಇಸಿಎಸ್ ಲೇಔಟ್, ಐಟಿಪಿಎಲ್ ಮುಖ್ಯರಸ್ತೆ, ದೇವರಬಿಸನಹಳ್ಳಿ, ಮತ್ತು ನಾರಾಯಣ ನಗರದಲ್ಲಿ ವಿದ್ಯುತ್ ಕಡಿತಗೊಳ್ಳಿದೆ.
ಬೆಂಗಳೂರು ಉತ್ತರ ವಲಯದ ನಾರಾಯಣರಾವ್ ಕಾಲೋನಿ, ದ್ವಾರಕಾ ನಗರ, ಕ್ರಾಂತಿ ಕವಿ ಸರ್ವಜ್ಞ ರಸ್ತೆ, ನಾಗಪ್ಪ ಬ್ಲಾಕ್, ವೈಯಾಲಿಕಾವಲ್, ನ್ಯೂ ಬಿಇಎಲ್ ರಸ್ತೆ, ಡಾಲರ್ಸ್ ಕಾಲೋನಿ, ಲೊಟ್ಟೆಗೊಲ್ಲಹಳ್ಳಿ, ಯಶವಂತಪುರ, ಅಂಬೇಡ್ಕರ್ ನಗರ, ನಂಜಪ್ಪ ಲೇಔಟ್ 1ನೇ ಮುಖ್ಯ, ಕೊಡಿಗೆಹಳ್ಳಿ, ವಿ. ಮೇದರಹಳ್ಳಿ, ಹೆಗಡೆ ನಗರ, ಹೆಸರಘಟ್ಟ ಮುಖ್ಯರಸ್ತೆ, ಭುವನೇಶ್ವರಿ ನಗರ, ಟಿ ದಾಸರಹಳ್ಳಿ, ಶೆಟ್ಟಿಹಳ್ಳಿ, ಮತ್ತು ಮಲ್ಲಸಂದ್ರ ಪ್ರದೇಶಗಳಲ್ಲಿ ಬೆಳಗ್ಗೆ 10 ರಿಂದ ಸಂಜೆ 5.30 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. ಇದನ್ನೂ ಓದಿ: ಹಿರಿಯೂರಿನಲ್ಲಿ ಭೀಕರ ಸರಣಿ ಅಪಘಾತ- ನಾಲ್ವರು ಸ್ಥಳದಲ್ಲೇ ಸಾವು
ಬೆಂಗಳೂರಿನ ಪಶ್ಚಿಮ ವಲಯಗಳಾದ ಮಳಗಲ್, ಪಂತರಪಾಳ್ಯ, ನಾಯಂಡಹಳ್ಳಿ, ಆಜಾದ್ ನಗರ ಚಾಮರಾಜಪೇಟೆ, ಉತ್ತರಹಳ್ಳಿ ರಸ್ತೆ, ಕೊಂಚಂದ್ರ ರಸ್ತೆ, ಕೋಡಿಪಾಳ್ಯ, ಅನ್ನಪೂರ್ಣೇಶ್ವರಿ ಲೇಔಟ್, ಬಿಎಚ್ಇಎಲ್ ಲೇಔಟ್, ಕೃಷ್ಣ ಗಾರ್ಡನ್, ಹರ್ಷಾ ಲೇಔಟ್, ವಿದ್ಯಾಪೀಠ ರಸ್ತೆ, ಟಿಜಿ ಪಾಳ್ಯ ಮುಖ್ಯರಸ್ತೆ, ವಿದ್ಯಾಮಾನನಗರ, ಸಿಂಡಿಕೇಟ್ ಬ್ಯಾಂಕ್ ಲೇಔಟ್, ಗಾಂಧಿ ಬ್ಯಾಂಕ್ ಲೇಔಟ್ ಸೇರಿದಂತೆ ಹಾನಿಗೊಳಗಾದ ಪ್ರದೇಶಗಳು ನಗರ, ಉಳ್ಳಾಲ ನಗರ, ಮಾರುತಿ ನಗರ, ಬಿಇಎಲ್ 1ನೇ ಹಂತ, ಬಿಇಎಲ್ 2ನೇ ಹಂತ, ಮಲ್ಲತ್ತಳ್ಳಿ ಮತ್ತು ಭವಾನಿನಗರದಲ್ಲಿಯೂ ಸಹ ಬೆಳಗ್ಗೆ 10ರಿಂದ ಸಂಜೆ 5.30ರವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ದನ್ನೂ ಓದಿ: ಕಳೆದ 70 ವರ್ಷದಿಂದ ಕಾಂಗ್ರೆಸ್ ಕಟ್ಟಿದ್ದನ್ನು ಬಿಜೆಪಿ 7 ವರ್ಷದಲ್ಲಿ ಮಾರುತ್ತಿದೆ: ಪ್ರಿಯಾಂಕಾ ಗಾಂಧಿ
ಬೆಂಗಳೂರಿನ ಪೂರ್ವ ವಲಯದ ಡಬಲ್ ರೋಡ್, ಲೀಲಾ ಪ್ಯಾಲೇಸ್ ಹತ್ತಿರ, ಮರ್ಫಿ ಟೌನ್, ನಾಗವಾರ ಪಾಳ್ಯ, ನಾಲಾ ರಸ್ತೆ, ಅಜ್ಮಲ್ಲಪ್ಪ ಲೇಔಟ್ ವರ್ತೂರು ರಸ್ತೆ, ಮಂಜುನಾಥ್ ನಗರ, ಎಚ್ಆರ್ಬಿಆರ್ 3ನೇ ಬ್ಲಾಕ್, ಸಿಎಂಆರ್ ರಸ್ತೆ, ರಾಮಯ್ಯ ಲೇಔಟ್, ಉದಯನಗರ ಮತ್ತು ಕಾಫಿ ಬೋರ್ಡ್ ಲೇಔಟ್ನಲ್ಲು ಕೂಡ ಬೆಳಗ್ಗೆ 10 ರಿಂದ ಸಂಜೆ 5.30 ರವರೆಗೆ ವಿದ್ಯುತ್ ಕಡಿತಗೊಳ್ಳಿದೆ.