Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಈ ಸರ್ಕಾರ 10 ತಿಂಗಳು ಮುಂದುವರೆಯಲಿ ನೋಡೋಣ: ಎಚ್‌ಡಿಕೆ ಸವಾಲು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಈ ಸರ್ಕಾರ 10 ತಿಂಗಳು ಮುಂದುವರೆಯಲಿ ನೋಡೋಣ: ಎಚ್‌ಡಿಕೆ ಸವಾಲು

Bengaluru City

ಈ ಸರ್ಕಾರ 10 ತಿಂಗಳು ಮುಂದುವರೆಯಲಿ ನೋಡೋಣ: ಎಚ್‌ಡಿಕೆ ಸವಾಲು

Public TV
Last updated: August 3, 2024 4:08 pm
Public TV
Share
4 Min Read
BJP JDS Yediyurappa HD Kumaraswamy MUDA Scam 2
SHARE

– ಬಾಮೈದನ ಹೆಸರಿಗೆ ಆಸ್ತಿ ಮಾಡೋಕೆ ಅಂಬೇಡ್ಕರ್ ಸಂವಿಧಾನದಲ್ಲಿ ಬರೆಯಲಾಗಿದ್ಯಾ?
–  ಸಿಎಂ ವಿರುದ್ಧ ಮುಡಾ ದಾಖಲೆ ಕೊಟ್ಟಿದ್ದು ಡಿಕೆಶಿ

ಬೆಂಗಳೂರು: 10 ವರ್ಷ ನಾವೇ ಸರ್ಕಾರದಲ್ಲಿ ಇರುತ್ತೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (DK Shivakumar) ಹೇಳುತ್ತಾರೆ. ಆದರೆ ಈ ಸರ್ಕಾರ 10 ತಿಂಗಳು ಮುಂದುವರೆಯಲಿ ನೋಡೋಣ. ನಿಮ್ಮ ಪಾಪದ ಕೊಡ ತುಂಬಿದೆ. ನಮ್ಮ ಪಾದಯಾತ್ರೆ ಮೈಸೂರು ತಲಪುವವರೆಗೆ ಈ ಸರ್ಕಾರದ ವಿಕೆಟ್‌ಗಳು ಬೀಳಬೇಕು. ಅದು ನಾಯಕನಿಂದಲೇ ಶುರುವಾಗಬೇಕು ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ (HD Kumaraswamy) ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಕೆಂಗೇರಿ ಬಳಿ ಕೆಂಪಮ್ಮ ದೇವಸ್ಥಾನದಲ್ಲಿ ಬಿಜೆಪಿ- ಜೆಡಿಎಸ್‌ (BJP-JDS) ಪಾದಯಾತ್ರೆಗೆ ಚಾಲನೆ ನೀಡಿ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ನೀವು ಮುಡಾದ ಬಗ್ಗೆ ಮಾತನಾಡುತ್ತೀರಾ? ಅದರ ಬಗ್ಗೆ ಮಾತಾಡುವುದಕ್ಕೆ ನಿಮಗೆ ಯಾವ ನೈತಿಕತೆ ಇದೆ. 14 ಸೈಟ್ ಯಾಕೆ? ಎಷ್ಟು ಬೇಕಾದರೂ ಕಾನೂನು ಪ್ರಕಾರ ಪಡೆದುಕೊಳ್ಳಲಿ. ಇವರು ಕಾನೂನು ಮೀರಿ ಸೈಟ್ ಪಡೆದಿದ್ದಾರೆ ಎಂದು ದೂರಿದರು.

BJP JDS Yediyurappa HD Kumaraswamy MUDA Scam 1

ಸಿದ್ದರಾಮಯ್ಯನವರೇ (Siddaramaiah) ಅದು ಯಾರ ಆಸ್ತಿ. ಮುಡಾ (MUDA) ಸರ್ಕಾರದ ಆಸ್ತಿ. ಬಡಾವಣೆ ಆಗಿರುವ ಆಸ್ತಿಯನ್ನು ನಿಮ್ಮ ಬಾಮೈದನ ಹೆಸರಿಗೆ ಮಾಡಲು ಅವಕಾಶ ಇದೆಯಾ? ಇದನ್ನ ಅಂಬೇಡ್ಕರ್ ಸಂವಿಧಾನದಲ್ಲಿ ಬರೆಯಲಾಗಿದ್ಯಾ? ಸರ್ಕಾರದ ಜಮೀನನ್ನ ನಿಮ್ಮ ಬಾಮೈದನ ಹೆಸರಿಗೆ ಹೇಗೆ ದಾಖಲಾತಿ ಮಾಡಿಕೊಟ್ಟರು. ಸಿದ್ದರಾಮಯ್ಯ ನನಗೆ ಇದ್ಯಾವುದು ಗೊತ್ತಿಲ್ಲ ಎನ್ನುತ್ತಾರೆ. 64 ಕೋಟಿ ಕೊಡಿ ಎನ್ನುತ್ತಿರಾ. ಅಲ್ಲಿ ನಡೆದ ಘಟನೆ ನಿಮ್ಮ ಗಮನಕ್ಕೆ ಬಾರದೇ ಆಗಿದೆಯಾ? ನಿಮ್ಮ ಪ್ರಭಾವ ಬೀರದೇ ಇಲ್ಲ ಎನ್ನುವುದಕ್ಕೆ ಸಾಧ್ಯವಿದೆಯಾ ಎಂದು ಸಿಎಂ ಸಿದ್ದರಾಮಯ್ಯ ಅವರಿಗೆ ಸರಣಿ ಪ್ರಶ್ನೆಗಳನ್ನು ಕೇಳಿ ಹರಿಹಾಯ್ದರು.

ಒಂದು ಮಾಧ್ಯಮದಲ್ಲಿ  ಪ್ರಾಯೋಜಿತ  ಸಂದರ್ಶನ ನೋಡಿದೆ. ಪ್ರಾಯೋಜಿತ  ಸಂದರ್ಶನ ನೀಡಿದ್ದು ಇಡೀ ದೇಶದ ಇತಿಹಾಸದಲ್ಲಿಯೇ ಮೊದಲು. ನನ್ನದು ತೆರೆದ ಪುಸ್ತಕ ಎಂದು ಸಿದ್ದರಾಮಯ್ಯ ಹೇಳುತ್ತಾರೆ. ಕೆಂಪಣ್ಣ ಆಯೋಗದ ವರದಿ ತೆರಿಯಿರಿ. ಈಗ ದೇಸಾಯಿ ಹೆಸರಿನಲ್ಲಿ ಮುಡಾ ಕೇಸ್ ಮುಚ್ಚಿ ಹಾಕಲು ಹೊರಟಿದ್ದಾರೆ ಎಂದು ಕಿಡಿಕಾರಿದ್ದರು.

BJP JDS Yediyurappa HD Kumaraswamy MUDA Scam 4

ಪರಮೇಶ್ವರ್ ಕುಮಾರಸ್ವಾಮಿ ಬಣ್ಣ ಬಯಲಾಗಿದೆ ಎನ್ನುವ ಮಾತಿಗೆ, ಪರಮೇಶ್ವರ್ ಅವರೇ ನನ್ನ ಬಣ್ಣ ಯಾವತ್ತು ಬದಲಾವಣೆಯಾಗುವುದಿಲ್ಲ. ನನ್ನದು ಒರಿಜಿನಲ್ ಕಲರ್. 2006-2007 ರಲ್ಲಿ ನಾನು ಯಡಿಯೂರಪ್ಪಗೆ ಅಧಿಕಾರ ಕೊಟ್ಟಿದ್ದರೆ ಇವತ್ತು ಕಾಂಗ್ರೆಸ್ ಇರುತ್ತಿರಲಿಲ್ಲ. ನಾನು ಅವತ್ತು ಯಡಿಯೂರಪ್ಪಗೆ ಅಧಿಕಾರ ಕೊಡಬೇಕು ಎಂದಿದ್ದೆ. ಆದರೆ ಕೆಲವು ಕಾರಣಗಳಿಂದ ಅದು ಸಾಧ್ಯವಾಗಲಿಲ್ಲ. ಒಂದು ವೇಳೆ ಅವತ್ತು ಬಿಜೆಪಿ ಮತ್ತು ನಾವು ಒಟ್ಟಾಗಿ ಇದ್ದರೆ ಇವತ್ತು ಕಾಂಗ್ರೆಸ್ ಇರುತ್ತಿರಲಿಲ್ಲ. ಪರಮೇಶ್ವರ್ ಅವರೇ 2018 ರಲ್ಲಿ ನನ್ನನ್ನು ಸಿಎಂ ಮಾಡಿ ಎಂದು ನಿಮ್ಮ ಮನೆಗೆ ಬಂದಿದ್ದಿನಾ? ನಮ್ಮ ಮನೆ ಬಾಗಿಲಿಗೆ ಬಂದವರು ನೀವು. ಮಲ್ಲಿಕಾರ್ಜುನ ಖರ್ಗೆಯವರನ್ನು ಸಿಎಂ ಮಾಡಿ ಎಂದು ಹೇಳಿದರೂ ಒತ್ತಡ ಮಾಡಿ ನನ್ನನ್ನು ಸಿಎಂ ಮಾಡಿದ್ದೀರಿ. ನೀವು ನನ್ನನ್ನ ಹೇಗೆ ನಡೆಸಿಕೊಂಡಿದ್ದೀರಿ ಗೊತ್ತಿಲ್ಲವಾ ಎಂದು ಜರಿದರು. ಇದನ್ನೂ ಓದಿ: ಮುಡಾ ಹಗರಣದಲ್ಲಿ ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕು: ಬಿಎಸ್‌ವೈ

ದೇವೇಗೌಡರನ್ನ ಪ್ರಧಾನಿ ಮಾಡಿದ್ದು ಕಾಂಗ್ರೆಸ್ ಇಲ್ಲ. ಕಮ್ಯುನಿಸ್ಟ್ ಪಕ್ಷದ ಜೊತೆ ಸೇರಿ 13-14 ಪಕ್ಷ ಬೆಂಬಲ ಕೊಟ್ಟಿದ್ದರಿಂದ ಅವರು ಪ್ರಧಾನಿಯಾಗಿದ್ದರು. ಅವತ್ತು ದೇವೇಗೌಡರನ್ನು ಪ್ರಧಾನಿ ಕುರ್ಚಿಯಿಂದ  ಕೆಳಗಿಳಿಸಿದ್ದು ಕಾಂಗ್ರೆಸ್. ಅವರು ದೇವೇಗೌಡರನ್ನು ಪ್ರಧಾನಿ ಕುರ್ಚಿಯಿಂದ ಅದ್ಯಾಕೆ ಕೆಳಗಿಳಿಸಿದರು ಎಂದು ಪ್ರಶ್ನಿಸಿದರು.

 

ಮುಡಾ ಅಕ್ರಮಕ್ಕೆ ಸಂಬಂಧಿಸಿದಂತೆ ಡಿ.ಕೆ.ಶಿವಕುಮಾರ್ ಅವರೇ ಸಿದ್ದರಾಮಯ್ಯ ವಿರುದ್ದ ದಾಖಲಾತಿ ಕೊಟ್ಟಿದ್ದಾರೆ. ಅವರು ಯಾರ್ ಯಾರ ಕೈಯಲ್ಲಿ ದಾಖಲಾತಿ ಕೊಟ್ಟಿದ್ದಾರೆ ಎಂದು ನಮಗೆ ಗೊತ್ತಿದೆ. ಈಗ ನಾನು ಸಿದ್ದರಾಮಯ್ಯ ಪರ ಎಂದು ನಾಟಕ ಮಾಡುತ್ತಿದ್ದಾರೆ. ನೀವು 100 ಅಲ್ಲ ಇನ್ನು 200 ಪ್ರಶ್ನೆ ಕೇಳಿದರೂ ಉತ್ತರ ಕೊಡುತ್ತೇನೆ. ನಮ್ಮ ಕಾರ್ಯಕರ್ತರು ಉತ್ಸಾಹದಲ್ಲಿದ್ದು, ಈ ಸರ್ಕಾರ ತೆಗೆಯಬೇಕೆಂದು ನಿರ್ಧಾರ ಮಾಡಿದ್ದಾರೆ ಎಂದು ಡಿಕೆಶಿಗೆ ತಿರುಗೇಟು ನೀಡಿದರು.

ನೀವು ಗ್ಯಾರಂಟಿ ಹೆಸರಿನಲ್ಲಿ ಏನೇನು ಮಾಡುತ್ತಿದ್ದೀರಿ? ರೈತರಿಗೆ ಪ್ರೋತ್ಸಾಹ ಧನ ನೀಡಿಲ್ಲ. ಬಿಜೆಪಿ-ಜೆಡಿಎಸ್ ನಡುವೆ ಬಿರುಕು ತರಲು ಯಾರಿಂದಲೂ ಸಾಧ್ಯವಿಲ್ಲ. ನಿಮ್ಮ ಹಗರಣಗಳನ್ನ ಬಿಚ್ಚಿಡಲು ನಾವಿಬ್ಬರು ಒಟ್ಟಾಗಿ ಕೆಲಸ ಮಾಡುತ್ತೇವೆ ಎಂದು ತೀರುಗೇಟು ನೀಡಿದರು.

 

24 ಗಂಟೆಯಲ್ಲಿ ಮೇಕೆದಾಟು ತರುತ್ತೇನೆ ಎಂದು ಕುಮಾರಸ್ವಾಮಿ ಹೇಳಿದರು ಎಂದು ಡಿಕೆಶಿ ಹೇಳುತ್ತಾರೆ. ಯಾರೋ ಹುಚ್ಚರು ಅವರಿಗೆ ಹೇಳಿರಬೇಕು. ನಾನು 24 ಗಂಟೆಯಲ್ಲಿ ಮೇಕೆದಾಟು ತರುತ್ತೇನೆ ಎಂದು ಹೇಳಿಲ್ಲ. ಹೇಳಿರುವುದನ್ನು ತೋರಿಸಿದರೆ ತಲೆ ಬಾಗುತ್ತೇನೆ. ತಾಕತ್ತು ಇದ್ದರೆ ನಿಮ್ಮ ಸ್ನೇಹಿತರಾದ ಡಿಎಂಕೆ ಸ್ಟಾಲಿನ್ ಜೊತೆ ಮಾತನಾಡಿ. ಇವರು ತಮಿಳುನಾಡಿಗೆ ಹೆಚ್ಚು ನೀರು ಬಿಟ್ಟಿದ್ದಾರೆ. ಈ ಬಾರಿ ಮೋದಿ ಅವರನ್ನು ಕಾನೂನು ಬದ್ದವಾಗಿ ಮನವೊಲಿಕೆ ಮಾಡುತ್ತೇವೆ ಎಂದು ತಿಳಿಸಿದರು.

ಪಾದಯಾತ್ರೆಯ ಬಗ್ಗೆ ಯಾರ ಒತ್ತಡವೂ ಇಲ್ಲ. ನಾನು ಯಾವ ಸಮಯದಲ್ಲಿ ಯಾವ ನಿರ್ಧಾರ ಕೈಗೊಳ್ಳಬೇಕು ಅದನ್ನ ಕೈಗೊಂಡಿದ್ದೇನೆ. ಮುಕ್ತವಾಗಿ ಚರ್ಚೆ ಮಾಡಿಯೇ ಪಾದಯಾತ್ರೆ ಮಾಡುತ್ತಿದ್ದೇವೆ. ಪಾದಯಾತ್ರೆ ಮುಂದೆ ಹಾಕಿದರೆ ಕಾಂಗ್ರೆಸ್‌ನವರು ಎಲ್ಲಿ ದಾಖಲೆ ತಿರುಚುತ್ತಾರೆ ಎಂದು ಪಾದಯಾತ್ರೆ ಮುಂದುವರೆಸಿದ್ದೇವೆ. ಮೈಸೂರು ತಲಪುವವರೆಗೆ ಈ ಸರ್ಕಾರದ ವಿಕೆಟ್‌ಗಳು ಬೀಳಬೇಕು. ಅದು ಕ್ಯಾಪ್ಟನ್ ನಿಂದಲೇ ಶುರುವಾಗಬೇಕು. ಒಂದೇ ತಾಯಿ ಮಕ್ಕಳ ರೀತಿ ಒಟ್ಟಾಗಿ ಎರಡು ಪಕ್ಷಗಳು ಕೆಲಸ ಮಾಡಬೇಕು. ಈ ಸರ್ಕಾರ ಸಂಪೂರ್ಣ ಭ್ರಷ್ಟಾಚಾರದಿಂದ ಕೂಡಿದೆ. ಮುಡಾ ಹಗರಣ, ವಾಲ್ಮೀಕಿ ಹಗರಣ, ವರ್ಗಾವಣೆ ದಂಧೆಯನ್ನ ಮಾಡುತ್ತಿದೆ. ಈ ಸರ್ಕಾರದ ವಿರುದ್ಧ ಎರಡು ಪಕ್ಷದ ಕಾರ್ಯಕರ್ತರು ಭಾಗಿಯಾಗಿ ಪಾದಯಾತ್ರೆ ಮಾಡುತ್ತಿದ್ದೇವೆ. ಮಂಡ್ಯ ಮಾತ್ರವಲ್ಲ ಇಡೀ ಮೈಸೂರಿನವರಗೆ ಪಾದಯಾತ್ರೆ ನಡೆಯುತ್ತದೆ ಎಂದು ಹೇಳಿದರು.

 

TAGGED:bjphd kumaraswamyjdsMUDA Scamsiddaramaiahಜೆಡಿಎಸ್ಬಿಜೆಪಿಮುಡಾ ಹಗರಣಸಿದ್ದರಾಮಯ್ಯಹೆಚ್‍ಡಿ ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema news

rishab shetty public tv anniversary
ಪಬ್ಲಿಕ್‌ ಟಿವಿಗೆ ಇನ್ನೂ ಟೀನೇಜ್‌, ರಂಗಣ್ಣ ಸರ್‌ ಈ ಸಮಾಜಕ್ಕೆ ದೊಡ್ಡ ಕೊಡುಗೆ: ರಿಷಬ್‌ ಶೆಟ್ಟಿ
Bengaluru City Cinema Latest Main Post Sandalwood
Sathish Ninasam Public TV Anniversary
ಆಟೋ ಡ್ರೈವರ್‌ಗಳಿಂದ ಕಾರಿನಲ್ಲಿ ಓಡಾಡೋರು ನಿಮ್ಮನ್ನ ಇಷ್ಟ ಪಡ್ತಾರೆ, ರಂಗಣ್ಣ ಸರ್‌ ಮಾಸ್‌ ಹೀರೋ: ನೀನಾಸಂ ಸತೀಶ್‌ ಬಣ್ಣನೆ
Bengaluru City Cinema Latest Main Post Sandalwood
Toxic
ʻಟಾಕ್ಸಿಕ್‌ʼ ಚಿತ್ರತಂಡಕ್ಕೆ ಮತ್ತೊಂದು ಸಂಕಷ್ಟ – ಸಿನಿಮಾ ವಿರುದ್ಧ ಕ್ರೈಸ್ತರ ಒಕ್ಕೂಟ ದೂರು
Bengaluru City Cinema Latest Main Post Sandalwood
nandini milk sudha rani
ನಂದಿನಿ ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ನಟಿ ಸುಧಾರಾಣಿ ಆಯ್ಕೆ
Bengaluru City Cinema Latest Main Post Sandalwood

You Might Also Like

ICC Mens T20 World Cup ind vs Namibia Jasprit Bumrahs stunning catch Axar Patel shocked
Cricket

ಬುಮ್ರಾ ಸ್ಟನ್ನಿಂಗ್‌ ಕ್ಯಾಚ್‌ – ಅಕ್ಷರ್‌ ಪಟೇಲ್‌ ಶಾಕ್‌!

Public TV
By Public TV
7 hours ago
kids died accident
Districts

ಶಾಲಾ ಬಸ್ ಹರಿದು ಮಕ್ಕಳು ಸಾವು – ಸ್ವಗ್ರಾಮದಲ್ಲಿ ನೆರವೇರಿದ ಅಂತ್ಯಕ್ರಿಯೆ

Public TV
By Public TV
8 hours ago
Ishan Kishan Hardik Pandya
Cricket

ಕಿಶನ್‌ ದಾಖಲೆಯ ಫಿಫ್ಟಿ, ಪಾಂಡ್ಯ ಆಲ್‌ರೌಂಡರ್‌ ಆಟ – ನಮೀಬಿಯಾ ವಿರುದ್ಧ 93 ರನ್‌ಗಳ ಭರ್ಜರಿ ಜಯ

Public TV
By Public TV
8 hours ago
DK Shivakumar Rahul Gandhi Sonia Gandhi 1 1
Bengaluru City

ಸಿಎಂ ಪಟ್ಟಕ್ಕೆ ಡಿಕೆಶಿ ಪಟ್ಟು – ಸೋನಿಯಾ, ರಾಹುಲ್‌ ಕೊಟ್ಟ ಅಭಯವೇನು?

Public TV
By Public TV
8 hours ago
Chikkamagaluru
Chikkamagaluru

2 ದಿನಗಳ ಬಳಿಕ ಮತ್ತೆ ಕಾಫಿನಾಡಲ್ಲಿ ಅಪರಿಚಿತ ಲಘು ವಿಮಾನ ಹಾರಾಟ

Public TV
By Public TV
9 hours ago
RCB 3
Bengaluru City

ಆರ್‌ಸಿಬಿ ಅಭಿಮಾನಿಗಳಿಗೆ ಗುಡ್‌ನ್ಯೂಸ್‌ – ಚಿನ್ನಸ್ವಾಮಿಯಲ್ಲಿ ಐಪಿಎಲ್‌ಗೆ ಸರ್ಕಾರ ಅನುಮತಿ

Public TV
By Public TV
10 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?