Bengaluru City
ಬೆಂಗಳೂರು ಟ್ರಾಫಿಕ್ ಸಿಗ್ನಲ್ಗಳಲ್ಲಿ ಭಿಕ್ಷಾಟನೆಗೆ ಬ್ರೇಕ್

ಬೆಂಗಳೂರು: ಟ್ರಾಫಿಕ್ ಸಿಗ್ನಲ್ಗಳಲ್ಲಿ ಭಿಕ್ಷಾಟನೆಗೆ ಬ್ರೇಕ್ ಬಿದ್ದಿದೆ. ಸಿಗ್ನಲ್ಗಳಲ್ಲಿ ಭಿಕ್ಷೆ ಬೇಡುವುದು ಹಾಗೂ ಹಣ ವಸೂಲಿ ಮಾಡುವುದು ತಡೆಯುವಂತೆ ನಗರ ಪೊಲೀಸ್ ಕಮಿಷನರ್ ಕಮಲ್ ಪಂತ್ ಆದೇಶ ಪ್ರಕಟಿಸಿದ್ದಾರೆ.
ಭಿಕ್ಷಾಟನೆಯಿಂದ ಟ್ರಾಫಿಕ್ ಸಮಸ್ಯೆ ಹಾಗೂ ಸಾರ್ವಜನಿಕರ ಜೊತೆ ಅನುಚಿತ ವರ್ತನೆ ನಡೆಯುತ್ತಿದೆ. ಹಣ ನೀಡಲು ನಿರಾಕರಿಸುವ ವೇಳೆ ವಾಹನ ಸವಾರರ ಜೊತೆ ಅನುಚಿತ ವರ್ತನೆ ತೋರಿ ತೊಂದರೆಯಾಗುತ್ತದೆ. ಈ ಕಾರಣದಿಂದಾಗಿ ಸಿಗ್ನಲ್ಗಳಲ್ಲಿ ಭಿಕ್ಷಾಟನೆ ಮಾಡುವುದನ್ನು ಸಂಪೂರ್ಣವಾಗಿ ನಿಲ್ಲಿಸಬೇಕು ಎಂದು ಕಮಿಷನರ್ ಸೂಚನೆ ನೀಡಿದ್ದಾರೆ.
ಭಿಕ್ಷಾಟನೆ ತಡೆಯಲು ಕಮಿಷನರ್ ಸಿಬ್ಬಂದಿಗೆ ಸೂಚನೆ ನೀಡಿದ್ದಾರೆ. ಲಾ ಆಂಡ್ ಆರ್ಡರ್ ಹಾಗೂ ಟ್ರಾಫಿಕ್ ಪೊಲೀಸರು ಜಂಟಿಯಾಗಿ ಕಾರ್ಯಾಚರಣೆ ನೆಡಸಿ ಕ್ರಮ ಕೈಗೊಳ್ಳುಬೇಕು. ಎಲ್ಲಾ ಡಿಸಿಪಿಗಳು ತಮ್ಮ ವಿಭಾಗಗಳಲ್ಲಿ ಭಿಕ್ಷೆ ಬೇಡುವುದನ್ನು ತಪ್ಪಿಸ ಬೇಕು. ಆಯಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕ್ರಮಕ್ಕೆ ಸೂಚನೆ ನೀಡಲಾಗಿದೆ.
