ಬೆಂಗಳೂರು: ಸಿಲಿಕಾನ್ ಸಿಟಿಯ ಯಶವಂತಪುರದಿಂದ ರಾಜಸ್ಥಾನದ ಬಿಕಾನೇರ್ ಹೋಗುವ ರೈಲಿನಲ್ಲಿ ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿದೆ.
ಯಶವಂತಪುರ-ಬಿಕಾನೇರ್ ರೈಲಿನ ಎಸಿ ಕೋಚ್ನಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಬೆಂಗಳೂರು ಹೊರವಲಯದ ಚಿಕ್ಕಬಾಣಾವರ ಬಳಿಯ ರೈಲ್ವೆ ನಿಲ್ದಾಣದ ಬಳಿ ಎಸಿ ಬೋಗಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ರೈಲ್ವೆ ಸಿಬ್ಬಂದಿ ಹಾಗೂ ಅಗ್ನಿ ಶಾಮಕ ಸಿಬ್ಬಂದಿ ಕೂಡಲೇ ಬೆಂಕಿಯನ್ನು ನಂದಿಸಿದ್ದಾರೆ.
ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಆದರೆ ಬೋಗಿಯಲ್ಲಿದ್ದ ಕೆಲ ಸೀಟ್ಗಳು ಸುಟ್ಟು ಹೋಗಿದೆ. ರೈಲಿನಲ್ಲಿ ಬೆಂಕಿ ಹೇಗೆ ಹೊತ್ತಿಕೊಂಡಿತು ಎನ್ನುವ ಬಗ್ಗೆ ಯಾವುದೇ ನಿಖರ ಮಾಹಿತಿ ಲಭ್ಯವಾಗಿಲ್ಲ.