ಬೆಂಗಳೂರು: ಕಟ್ಟಡ ನಿರ್ಮಾಣದ (Building Construction) ವೇಳೆ ಮಣ್ಣು ಕುಸಿದು ಇಬ್ಬರು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ (Bengaluru) ಕೋರಮಂಗಲದ (Koramangala) ಸಿದ್ದಾರ್ಥ ಕಾಲೋನಿಯಲ್ಲಿ ನಡೆದಿದೆ.
ಜಾರ್ಖಂಡ್ ಮೂಲದ ಲಾಲ್ ಮದನ್ (33), ರಜಾವುದ್ದೀನ್ (35) ಮೃತರು. ಘಟನೆಯಲ್ಲಿ ಸೈಫುಲ್ಲಾ (28) ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕಳೆದ ಮೂರು ತಿಂಗಳಿನಿಂದ ಇಲ್ಲಿ ಕಟ್ಟಡ ನಿರ್ಮಾಣದ ಕೆಲಸ ನಡೆಯುತ್ತಿದೆ. ಇಂದು ಪಿಲ್ಲರ್ ನಿರ್ಮಾಣ ಮಾಡಲು ಸುಮಾರು ಇಪ್ಪತ್ತು ಅಡಿಯಷ್ಟು ಆಳಕ್ಕೆ ಮಣ್ಣು ತೆಗೆಯಲಾಗಿತ್ತು. ಈ ಜಾಗದಲ್ಲಿ ಸುಮಾರು ಎಂಟು ಜನ ಕೆಲಸ ಮಾಡುತ್ತಿದ್ದರು. ಈ ವೇಳೆ ಏಕಾಏಕಿ ಜನರ ಮೇಲೆ ಮಣ್ಣು ಕುಸಿದಿದ್ದು, ಮೂವರು ಮಣ್ಣಿನ ಅಡಿ ಸಿಲುಕಿದ್ದಾರೆ. ಇದನ್ನೂ ಓದಿ: ಡಿಸಿಎಂ ಸಿಟಿ ರೌಂಡ್ಸ್ – ಗುಂಡಿ, ವೈಟ್ ಟಾಪಿಂಗ್ ಕಾಮಗಾರಿ ವೀಕ್ಷಿಸಿದ ಡಿಕೆಶಿ
ರಕ್ಷಣಾ ಕೆಲಸ ಮಾಡುವಷ್ಟರಲ್ಲಿ ಇಬ್ಬರು ಸಾವನ್ನಪ್ಪಿದ್ದು, ಮತ್ತೊಬ್ಬ ಪಾರಾಗಿದ್ದಾನೆ. ಸ್ಥಳಕ್ಕೆ ಬಂದ ಪೊಲೀಸರು, ಅಗ್ನಿ ಶಾಮಕ ಸಿಬ್ಬಂದಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಬಿಹಾರ ಮತದಾರರ ಪಟ್ಟಿಯಿಂದ 65 ಲಕ್ಷ ಹೆಸರು ಡಿಲೀಟ್ – ಅಂತಿಮ ಪಟ್ಟಿ ರಿಲೀಸ್

