Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಾನು ಇದ್ದಿದ್ದರೆ ಚಂದನ್, ನಿವೇದಿತಾಗೂ ಮದುವೆ ಮಾಡಿಸುತ್ತಿದ್ದೆ: ವಾಟಾಳ್ ನಾಗರಾಜ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ನಾನು ಇದ್ದಿದ್ದರೆ ಚಂದನ್, ನಿವೇದಿತಾಗೂ ಮದುವೆ ಮಾಡಿಸುತ್ತಿದ್ದೆ: ವಾಟಾಳ್ ನಾಗರಾಜ್

Bengaluru City

ನಾನು ಇದ್ದಿದ್ದರೆ ಚಂದನ್, ನಿವೇದಿತಾಗೂ ಮದುವೆ ಮಾಡಿಸುತ್ತಿದ್ದೆ: ವಾಟಾಳ್ ನಾಗರಾಜ್

Public TV
Last updated: October 8, 2019 7:25 pm
Public TV
Share
2 Min Read
collage vatal nagaraj
SHARE

ಬೆಂಗಳೂರು: ನಾನು ಯುವ ದಸರಾ ಕಾರ್ಯಕ್ರಮದಲ್ಲಿ ಇದ್ದಿದ್ದರೆ ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡರಿಗೂ ಮದುವೆ ಮಾಡಿಸುತ್ತಿದ್ದೆ ಎಂದು ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಹೇಳಿದ್ದಾರೆ.

ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯುವ ದಸರಾ ಕಾರ್ಯಕ್ರಮದಲ್ಲಿ ಪ್ರೇಮ ನಿವೇದನೆ ಮಾಡಿಕೊಂಡ ಚಂದನ್ ಶೆಟ್ಟಿಗೆ ನನ್ನ ಬೆಂಬಲವಿದೆ. ಪ್ರೇಮಿಗಳಿಗೆ ನನ್ನ ಬೆಂಬಲ ಯಾವಾಗಲೂ ಇದ್ದೆ ಇರುತ್ತದೆ. ನಾನು ಅಲ್ಲಿ ಇದ್ದಿದ್ದರೆ ಅವರಿಬ್ಬರಿಗೂ ಮದುವೆ ಮಾಡಿಸುತ್ತಿದ್ದೆ ಎಂದು ತಿಳಿಸಿದ್ದಾರೆ.

chandan shetty 1

ಚಂದನ್ ಮತ್ತು ನಿವೇದಿತಾ ಅವರ ಮೇಲೆ ಪೊಲೀಸ್ ದೂರು ದಾಖಲಿಸಿರುವುದು ತಪ್ಪು. ಅವರು ಠಾಣೆಗೆ ಕರೆದುಕೊಂಡು ಹೋಗಿ ಮದುವೆ ಮಾಡಿಸಬೇಕಿತ್ತು. ಅದನ್ನು ಬಿಟ್ಟು ಕೇಸ್ ಹಾಕಿದ್ದಾರೆ. ನಾನು ದಸರಾ ಮುಗಿದ ಮೇಲೆ ಈ ವಿಚಾರವಾಗಿ ರಾಜ್ಯಾದ್ಯಂತ ಹೋರಾಟ ಮಾಡುತ್ತೇನೆ. ನಾವು ಅವರಿಗೆ ಬೆಂಬಲ ನೀಡಬೇಕು ಅದನ್ನು ಬಿಟ್ಟು ಮಂತ್ರಿ ರೀತಿ ಶಾಪ ಹಾಕಬಾರದು. 6 ತಿಂಗಳ ನಂತರ ಏನೋ ಆಗುತ್ತೆ ಎಂದು ಶಾಪ ಹಾಕಿದರೆ ಅವರ ಗತಿ ಏನ್ ಆಗಬೇಕು ಎಂದು ಪ್ರಶ್ನೆ ಮಾಡಿದರು. ಇದನ್ನು ಓದಿ:  ಪ್ರೀತಿ ಒಪ್ಪಿಕೊಂಡ ಗೊಂಬೆಗೆ ಥ್ಯಾಂಕ್ಸ್ ಹೇಳಿದ ಚಂದನ್ ಶೆಟ್ಟಿ

ನಡೆದಿದ್ದೇನು?
ಕಳೆದ ಶನಿವಾರ ಯುವ ದಸರಾ ಕಾರ್ಯಕ್ರಮದಲ್ಲಿ ಚಂದನ್ ನಿವೇದಿತಾ ಪೋಷಕರು ಸೇರಿದಂತೆ ಸಾವಿರಾರು ಮಂದಿ ಭಾಗವಹಿಸಿದ್ದರು. ಕಾರ್ಯಕ್ರಮ ನೀಡಿ ಜನರನ್ನು ಮನರಂಜಿಸುತ್ತಿದ್ದ ಚಂದನ್ ವೇದಿಕೆಯಲ್ಲೇ ನಿವೇದಿತಾಳಿಗೆ ಮಂಡಿಯೂರಿ ಪ್ರಪೋಸ್ ಮಾಡಿದ್ದರು ಅಲ್ಲದೇ ಉಂಗುರ ಕೂಡ ತೊಡಿಸಿದ್ದರು. ಈ ವೇಳೆ ನೆರೆದಿದ್ದ ಮಂದಿ ಶಿಳ್ಳೆ ಹೊಡೆದು ಚಪ್ಪಾಳೆ ತಟ್ಟುವ ಮೂಲಕ ಇಬ್ಬರನ್ನೂ ಅಭಿನಂದಿಸಿದ್ದರು.

chandan love

ಈ ಬೆನ್ನಲ್ಲೇ ಪ್ರಪೋಸ್ ಮಾಡಿರುವ ವಿಚಾರ ಭಾರೀ ವಿವಾದಕ್ಕೀಡಾಗಿತ್ತು. ದಸರಾ ಕಾರ್ಯಕ್ರಮದ ವೇದಿಕೆಯಲ್ಲೇ ಇದು ಬೇಡವಾಗಿತ್ತು ಎಂದು ಅನೇಕರು ಖಂಡಿಸಿದರು. ಇನ್ನೂ ಕೆಲವರು ಮೆಚ್ಚುಗೆಯನ್ನೂ ವ್ಯಕ್ತಪಡಿಸಿದ್ದರು. ಈ ಸಂಬಂಧ ಪ್ರತಿಕ್ರಿಯಿಸಿದ ಚಂದನ್, ನಾನು ಮಾಡಿರುವುದು ತಪ್ಪಾಗಿದ್ದರೆ ಕ್ಷಮಿಸಿ ಬಿಡಿ ಅಂದಿದ್ದಾರೆ. ಇತ್ತ ನಾವು ವೇದಿಕೆಯಲ್ಲಿ ಮದುವೆಯಾಗಿಲ್ಲ. ಒಂದು ವೇಳೆ ನಾವು ಅಲ್ಲಿ ಮದುವೆಯಾಗುತ್ತಿದ್ದರೆ ಅದನ್ನು ನಾನು ತಪ್ಪು ಅಂತ ಒಪ್ಪಿಕೊಳ್ಳುತ್ತಿದ್ದೆ ಎಂದು ಸಮರ್ಥಿಸಿಕೊಂಡಿದ್ದರು. ಇದನ್ನು ಓದಿ: ಚಂದನ್-ನಿವೇದಿತಾ ನಿಶ್ಚಿತಾರ್ಥ ಮಾಡ್ಕೊಂಡಿರೋದು ಅಕ್ಷಮ್ಯ ಅಪರಾಧ- ವಿ.ಸೋಮಣ್ಣ

chandan love 1

ಈ ಮಧ್ಯೆ ಉಸ್ತುವಾರಿ ಸಚಿವ ವಿ ಸೋಮಣ್ಣ ಪ್ರತಿಕ್ರಿಯಿಸಿ, ಯುವ ದಸರಾ ವೇದಿಕೆಯಲ್ಲಿ ಗಾಯಕ ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ನಿಶ್ಚಿತಾರ್ಥ ಮಾಡಿಕೊಂಡಿರುವುದು ಅಕ್ಷಮ್ಯ ಅಪರಾಧ. ನಾಡಿನ ಅಧಿದೇವತೆಯ ನಾಡಹಬ್ಬದ ವೇದಿಕೆಯಲ್ಲಿ ಈ ರೀತಿ ಆಗಬಾರದಿತ್ತು. ತಪ್ಪೆಸಗಿರುವ ಅವರಿಬ್ಬರಿಗೂ ಬರುವ ಆರು ತಿಂಗಳಲ್ಲಿ ದೇವಿಯೇ ಶಿಕ್ಷೆ ನೀಡುತ್ತಾರೆ. ಈ ರೀತಿ ಆಗುತ್ತದೆ ಎಂದು ನಿರೀಕ್ಷೆ ಮಾಡಿರಲಿಲ್ಲ. ಇದಕ್ಕೆ ದಸರಾ ಉಪಸಮಿತಿ ಕಾರಣವಲ್ಲ. ಈ ಸಂಬಂಧ ಮೈಸೂರು ಜಿಲ್ಲಾ ಅಧೀಕ್ಷಕ ಹಾಗೂ ಯುವ ದಸರಾ ಉಪಸಮಿತಿಯ ಕಾರ್ಯಾಧ್ಯಕ್ಷರೂ ಆಗಿರುವ ರಿಷ್ಯಂತ್ ಸೂಕ್ತ ಕ್ರಮ ಕೈಗೊಳ್ಳಲಿದ್ದಾರೆ. ಚಂದನ್ ಶೆಟ್ಟಿ ಮತ್ತು ನಿವೇದಿತಾರಿಗೆ ಕಾರಣ ಕೇಳಿ ಪೊಲೀಸ್ ಇಲಾಖೆಯಿಂದ ನೋಟಿಸ್ ನೀಡಲಾಗುತ್ತದೆ ಎಂದು ಕಿಡಿಕಾರಿದ್ದರು.

TAGGED:bengaluruChandan ShettylovemarriageNivedita Gowdavatal nagarajyuvadasaraಚಂದನ್ ಶೆಟ್ಟಿನಿವೇದಿತಾ ಗೌಡಪ್ರೀತಿಬೆಂಗಳೂರುಮದುವೆಯುವದಸರಾವಾಟಾಳ್ ನಾಗರಾಜ್
Share This Article
Facebook Whatsapp Whatsapp Telegram

Cinema news

Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories
Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories

You Might Also Like

abdul jabbar 3
Bengaluru City

ಕಾಂಗ್ರೆಸ್‌ನಿಂದ ಎಂಎಲ್‌ಸಿ ಅಬ್ದುಲ್ ಜಬ್ಬಾರ್ ಅಮಾನತು

Public TV
By Public TV
5 minutes ago
Samrat Choudhary
Latest

ಬಿಹಾರದ ಮೊದಲ ಬಿಜೆಪಿ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ ಸಾಮ್ರಾಟ್ ಚೌಧರಿ

Public TV
By Public TV
28 minutes ago
h.d.kumaraswamy Sri Kshetra Adichunchanagiri
Latest

ಸಣ್ಣ ಮಠವನ್ನು ದೊಡ್ಡ ಮರವನ್ನಾಗಿ ಬೆಳೆಸಿದ್ದು ಬಾಲಗಂಗಾಧರನಾಥರು: ಹೆಚ್‌ಡಿಕೆ ಸ್ಮರಣೆ

Public TV
By Public TV
35 minutes ago
sindhanuru
Districts

ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ – ಮೂವರು ಅರೆಸ್ಟ್, ಓರ್ವ ಮಹಿಳೆಯ ರಕ್ಷಣೆ

Public TV
By Public TV
54 minutes ago
Modi SIddramaiah
Bengaluru City

HALನಲ್ಲಿ ಪ್ರಧಾನಿ ಮೋದಿ ಸ್ವಾಗತಿಸಿದ ಸಿಎಂ –  ರಾಜ್ಯಕ್ಕೆ ಸಂಬಂಧಿಸಿದ 18 ಬೇಡಿಕೆಗಳ ಪಟ್ಟಿ ಕೊಟ್ಟ ಸಿದ್ದರಾಮಯ್ಯ

Public TV
By Public TV
1 hour ago
yogesh gowda
Bengaluru City

ಯೋಗೇಶ್ ಗೌಡ ಹತ್ಯೆ ಕೇಸ್‌ | ಮಧ್ಯಾಹ್ನ 3 ಗಂಟೆಗೆ ತೀರ್ಪು – ಆರೋಪಿಗಳ ಎದೆಯಲ್ಲಿ ಢವಢವ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?