– ಪತಿ ಹುಡುಕಿಕೊಡಿ ಎಂದು ಪೊಲೀಸ್ ಠಾಣೆ ಮೆಟ್ಟಿಲೇರಿದ ಮಹಿಳೆ – ಮುಂದಾಗಿದ್ದೇನು?
ಬೆಂಗಳೂರು: ಮದುವೆಯಾದ ಮೂರೇ ತಿಂಗಳಿಗೆ ಪತ್ನಿಯನ್ನು ಗರ್ಭಿಣಿ ಮಾಡಿ, ಪತಿ ಎಸ್ಕೇಪ್ ಆಗಿರುವ ಘಟನೆ ಬೆಂಗಳೂರಿನ(Bengaluru) ಕಾಮಾಕ್ಷಿಪಾಳ್ಯದಲ್ಲಿ(Kamakshipalya) ನಡೆದಿದೆ.
ಕುಣಿಗಲ್(Kunigal) ಮೂಲದ ಯುವತಿಯು ಬೆಂಗಳೂರಿನ ಖಾಸಗಿ ಮಾಲ್ನಲ್ಲಿ ಕೆಲಸ ಮಾಡುತ್ತಿದ್ದರು. ಈ ವೇಳೆ ಹೇಮಂತ್ ಕುಮಾರ್ ಪರಿಚಿತಯವಾಗಿತ್ತು. ಹೇಮಂತ್, ಯುವತಿಯ ಬೆನ್ನು ಬಿದ್ದು ಪ್ರೀತಿಸುವಂತೆ ಒತ್ತಾಯ ಮಾಡಿದ್ದ. ನಂತರ ಕಳೆದ ಮಾರ್ಚ್ನಲ್ಲಿ ಇಬ್ಬರು ವಿವಾಹವಾಗಿದ್ದರು. ಆದರೆ ಮದುವೆಯಾದ ಮೂರೇ ತಿಂಗಳಲ್ಲಿ ಪತ್ನಿಯ ನಡತೆ ಸರಿಯಲ್ಲ ಎಂದು ದೂಷಿಸಿ, ಮನೆಬಿಟ್ಟು ಹೋಗಿದ್ದ. ಇದನ್ನೂ ಓದಿ: ಮಡೆನೂರು ಮನು ವಿವಾದದಲ್ಲಿ ಅಪ್ಪಣ ಹೆಸರು ತಳುಕು – ನಟ ಹೇಳಿದ್ದೇನು?
ಇದೀಗ 3 ತಿಂಗಳ ಗರ್ಭಿಣಿಯಾಗಿರೋ ಪತ್ನಿ, ಪತಿಗಾಗಿ ಹುಡುಕಾಟ ನಡೆಸಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಪಶ್ಚಿಮ ವಿಭಾಗ ಮಹಿಳಾ ಪೊಲೀಸ್ ಠಾಣೆಗೆ ಪತ್ನಿ ದೂರು ನೀಡಲಾಗಿದೆ. ಪೊಲೀಸರು ಪತಿ, ಪತ್ನಿ ಇಬ್ಬರನ್ನೂ ಕರೆಸಿ ತಿಳಿ ಹೇಳಿ ಕಳುಹಿಸಿದ್ದಾರೆ.