Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜೀವನದಲ್ಲಿ ಭರವಸೆಯಿಲ್ಲ, ಜೈಲಿನಲ್ಲೇ ಸಾಯೋದು ಉತ್ತಮ: ಜೆಟ್‌ ಏರ್‌ವೇಸ್‌ ಸಂಸ್ಥಾಪಕ ಗೋಯಲ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಜೀವನದಲ್ಲಿ ಭರವಸೆಯಿಲ್ಲ, ಜೈಲಿನಲ್ಲೇ ಸಾಯೋದು ಉತ್ತಮ: ಜೆಟ್‌ ಏರ್‌ವೇಸ್‌ ಸಂಸ್ಥಾಪಕ ಗೋಯಲ್‌

Latest

ಜೀವನದಲ್ಲಿ ಭರವಸೆಯಿಲ್ಲ, ಜೈಲಿನಲ್ಲೇ ಸಾಯೋದು ಉತ್ತಮ: ಜೆಟ್‌ ಏರ್‌ವೇಸ್‌ ಸಂಸ್ಥಾಪಕ ಗೋಯಲ್‌

Public TV
Last updated: January 7, 2024 1:01 pm
Public TV
Share
2 Min Read
NARESH GOYAL
SHARE

ಮುಂಬೈ: ಬದುಕಿನ ಎಲ್ಲ ಭರವಸೆಯನ್ನೂ ಕಳೆದುಕೊಂಡಿದ್ದೇನೆ. ಹೀಗಾಗಿ ನಾನು ಈಗಿರುವ ಸ್ಥಿತಿಯಲ್ಲಿ ಬದುಕುವುದಕ್ಕಿಂತ ಜೈಲಿನಲ್ಲಿ ಸಾಯುವುದೇ ಉತ್ತಮ ಎಂದು ಜೆಟ್‌ ಏರ್‌ವೇಸ್‌ ಸಂಸ್ಥಾಪಕ ನರೇಶ್‌ ಗೋಯಲ್‌ (Jet Airways Founder Naresh Goyal) ಹೇಳಿದ್ದಾರೆ.

ಕೆನರಾ ಬ್ಯಾಂಕ್‌ನಲ್ಲಿ 538 ಕೋಟಿ ವಂಚನೆ ಮಾಡಿದ ಆರೋಪದ ಮೇಲೆ ಆರೋಪಿಯಾಗಿರುವ ಅವರು ಶನಿವಾರ ವಿಶೇಷ ನ್ಯಾಯಾಲದಯಲ್ಲಿ (Special Court) ಈ ಮಾತನ್ನು ಹೇಳಿದರು. ಬ್ಯಾಂಕ್ ವಂಚನೆಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ED) ಕಳೆದ ವರ್ಷ ಸೆಪ್ಟೆಂಬರ್ 1 ರಂದು ಗೋಯಲ್ ಅವರನ್ನು ಬಂಧಿಸಿತ್ತು. ಅವರು ಪ್ರಸ್ತುತ ಇಲ್ಲಿನ ಆರ್ಥರ್ ರೋಡ್ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ.

ವಿಶೇಷ ನ್ಯಾಯಾಧೀಶ ಎಂ.ಜಿ.ದೇಶಪಾಂಡೆ ಅವರ ಮುಂದೆ ಗೋಯಲ್ ಅವರು ಜಾಮೀನು ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆಗಾಗಿ ಗೋಯಲ್ ಅವರನ್ನು ಶನಿವಾರ ವಿಶೇಷ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು. ಈ ವೇಳೆ ಗೋಯಲ್‌ ಅವರು ಕೆಲವು ನಿಮಿಷಗಳ ವೈಯಕ್ತಿಕ ವಿಚಾರಣೆಗೆ ಮನವಿ ಮಾಡಿದ್ದು, ಇದಕ್ಕೆ ನ್ಯಾಯಾಧೀಶರು ಅನುಮತಿ ನೀಡಿದರು.

ಜಡ್ಜ್‌ ಮುಂದೆ ಕಣ್ಣೀರಿಟ್ಟು ಹೇಳಿದ್ದೇನು ಗೋಯಲ್..?:‌  ಜಡ್ಜ್‌ ಮುಂದೆ ಕೈಕಟ್ಟಿ ಕಣ್ಣೀರು ಸುರಿಸುತ್ತಾ, ಪತ್ನಿ ಆರೋಗ್ಯದ ಕುರಿತು ಮಾತನಾಡಿದರು. ಪತ್ನಿ ಅನಿತಾಳನ್ನು ತಾನು ತುಂಬಾ ಮಿಸ್ ಮಾಡಿಕೊಳ್ಳುತ್ತಿದ್ದೇನೆ. ಆಕೆ ಕ್ಯಾನ್ಸರ್‌ನ ಮುಂದುವರಿದ ಹಂತದಲ್ಲಿದ್ದಾಳೆ.‌ ಸದ್ಯ ಆಕೆ ಹಾಸಿಗೆ ಹಿಡಿದಿದ್ದು, ಇತ್ತ ಇರುವ ಒಬ್ಬಳೇ ಮಗಳು ಕೂಡ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವುದರಿಂದ ಅವಳನ್ನು ನೋಡಿಕೊಳ್ಳುವವರು ಯಾರೂ ಇಲ್ಲ. ಅಲ್ಲದೇ ಗೋಯಲ್ ತನ್ನ ಮೊಣಕಾಲುಗಳನ್ನು ತೋರಿಸಿದರು. ಅವು ಊದಿಕೊಂಡಿವೆ ಮತ್ತು ನೋವಿನಿಂದ ಕೂಡಿದೆ. ಕಾಲುಗಳನ್ನು ಮಡಚಲು ಸಾಧ್ಯವಾಗುತ್ತಿಲ್ಲ. ಮೂತ್ರ ವಿಸರ್ಜಿಸುವಾಗ ತೀವ್ರವಾದ ನೋವು ಮತ್ತು ಕೆಲವೊಮ್ಮೆ ಮೂತ್ರದ ಮೂಲಕ ರಕ್ತವು ಬರುತ್ತದೆ ಎಂದು ಗೋಯಲ್ ನ್ಯಾಯಾಲಯದ ಗಮನಕ್ಕೆ ತಂದರು.‌

NARESH GOYAL 1

ಆರೋಗ್ಯ ತಾಪಸಣೆಗಾಗಿ ನನ್ನನ್ನು ಜೆಜೆ ಆಸ್ಪತ್ರೆಗೆ ಕರೆದೊಯ್ಯಲಾಗುತ್ತದೆ. ಆದರೆ ಆಸ್ಪತ್ರೆಗೆ ಹೋಗಿ ಹೆಚ್ಚು ಹೊತ್ತು ಸರದಿಯಲಿ ನಿಲ್ಲಲು ಆಗುತ್ತಿಲ್ಲ. ಅಷ್ಟೊಂದು ಶಕ್ತಿ ನನಗಿಲ್ಲ. ಹೀಗಾಗಿ ಪದೇ ಪದೇ ಆಸ್ಪತ್ರೆಗೆ ಹೋಗುವುದು ನನಗೆ ಬೇಸರ ಅನಿಸಿದೆ. ಈ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ಕರೆದುಕೊಂಡು ಹೋಗುವ ಬದಲು ನನ್ನನ್ನು ಜೈಲಿನಲ್ಲಿಯೇ ಸಾಯಲು ಬಿಡಿ. ಜೀವನದ ಪ್ರತಿಯೊಂದು ಭರವಸೆಯನ್ನು ಕಳೆದುಕೊಂಡಿದ್ದೇನೆ. ಇಂತಹ ಪರಿಸ್ಥಿತಿಯಲ್ಲಿ ಜೀವಂತವಾಗಿರುವುದಕ್ಕಿಂತ ಸಾಯುವುದು ಉತ್ತಮ ಎಂದು ಗೋಯಲ್‌ ಹೇಳಿದರು.

ಗೋಯಲ್‌ ನಿವೇದನೆ ಆಲಿಸಿದ ಬಳಿಕ ಮಾತನಾಡಿದ ವಿಶೇಷ ಜಡ್ಜ್‌, ಗೋಯಲ್‌ ಅವರ ಮಾತುಗಳನ್ನು ತಾಳ್ಮೆಯಿಂದ ಆಲಿಸಿದ್ದೇನೆ. ಅವರು ಮಾತನಾಡುವಾಗ ಅವರ ದೇಹ ನಡುಗುತ್ತಿತ್ತು. ನಿಂತುಕೊಳ್ಳಲು ಕೂಡ ಅವರಿಗೆ ಸಹಾಯ ಬೇಕಾದಂತಹ ಪರಿಸ್ಥಿತಿಯಲ್ಲಿದ್ದಾರೆ. ಅವರಿಗೆ ಕಾಲು ಮಡಿಚಲೂ ಕೂಡ ಆಗುತ್ತಿಲ್ಲ ಎಂದರು. ಇದನ್ನೂ ಓದಿ: ಅಯೋಧ್ಯೆಗೆ ನನ್ನನ್ನು ಆಹ್ವಾನಿಸಿಲ್ಲ: ಡಿ.ಕೆ ಶಿವಕುಮಾರ್

ಆರೋಪಿಯನ್ನು ಅಸಹಾಯಕನಾಗಿ ಬಿಡುವುದಿಲ್ಲ. ಹೀಗಾಗಿ ಸರಿಯಾದ ಚಿಕಿತ್ಸೆಯೊಂದಿಗೆ ಅವರ ಮಾನಸಿಕ ಮತ್ತು ದೈಹಿಕ ಆರೋಗ್ಯದ ಬಗ್ಗೆ ಕಾಳಜಿಯನ್ನು ತೆಗೆದುಕೊಳ್ಳಲಾಗುವುದು ಎಂದು ಭರವಸೆ ನೀಡಿದ್ದೇನೆ ಎಂದರು. ಗೋಯಲ್ ಆರೋಗ್ಯದ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ‌ ವಕೀಲರಿಗೆ ನ್ಯಾಯಾಲಯ ಸೂಚಿಸಿದೆ. ಗೋಯಲ್ ಜಾಮೀನು ಅರ್ಜಿಗೆ ಇಡಿ ಪ್ರತಿಕ್ರಿಯೆ ನೀಡಿದ್ದು, ಜನವರಿ 16 ರಂದು ಪ್ರಕರಣದ ಮುಂದಿನ ವಿಚಾರಣೆ ನಡೆಯಲಿದೆ.

TAGGED:canera bankcheatingjet airways foundermumbaiNaresh Goyalಕೆನರಾ ಬ್ಯಾಂಕ್ಜೆಟ್‌ ಏರ್‌ವೇಸ್‌ ಸಂಸ್ಥಾಪಕನರೇಶ್ ಗೋಯಲ್ಮುಂಬೈ
Share This Article
Facebook Whatsapp Whatsapp Telegram

Cinema news

Premi Movie 2
`ಪ್ರೇಮಿ’ಗಾಗಿ ಮೊದಲ ಹಾಡು ಬಿಡುಗಡೆ
Cinema Latest Sandalwood
MB Khazima
ವಿಶ್ವ ಚಾಂಪಿಯನ್ ಖಾಜಿಮಾ ಬಯೋಪಿಕ್‌ಗೆ ಚಾಲನೆ
Cinema Latest Sandalwood South cinema Top Stories
Dhruva sarja
ರಂಗನತಿಟ್ಟು ಪಕ್ಷಿಧಾಮದ ಕಾರ್ಮಿಕರಿಗೆ ಧ್ರುವ ಸಹಾಯಹಸ್ತ – ರಿಯಲ್‌ ಹೀರೋ ಅಂದ್ರು ಫ್ಯಾನ್ಸ್‌
Cinema Latest Sandalwood Top Stories
Jaggesh 3
`ರಾಯರೆ ನನ್ನ ಉಸಿರು’ ಅಂತ ಭಾವುಕರಾದ ನಟ ಜಗ್ಗೇಶ್
Cinema Latest Sandalwood

You Might Also Like

Air Force Officer
Latest

ಪಾಕಿಸ್ತಾನ ಪರ ಸ್ಪೈ – ವಾಯುಪಡೆಯ ನಿವೃತ್ತ ಅಧಿಕಾರಿ ಅಸ್ಸಾಂನಲ್ಲಿ ಬಂಧನ

Public TV
By Public TV
7 minutes ago
Siddaramaiah Congress D.K Shivakumar
Bengaluru City

ದೆಹಲಿಯತ್ತ ಮುಖ ಮಾಡಿದ ‘ಕೈ’ ನಾಯಕರು – ಸಮಾವೇಶ ನೆಪದಲ್ಲೇ ಹೈಕಮಾಂಡ್ ಭೇಟಿ ಮಾಡ್ತಾರಾ?

Public TV
By Public TV
57 minutes ago
Green Cinema
Cinema

ಒಟಿಟಿಗೆ ಬಂತು ಸೈಕಲಾಜಿಕಲ್ ಥ್ರಿಲ್ಲರ್ ‘ಗ್ರೀನ್’ ಸಿನಿಮಾ

Public TV
By Public TV
1 hour ago
Raichuru Beer Abhisheka
Cinema

ತೆಲುಗು ನಟ ಬಾಲಕೃಷ್ಣ ಸಿನಿಮಾ ಪೋಸ್ಟರ್‌ಗೆ ಬಿಯರ್ ಅಭಿಷೇಕ: ಅಭಿಮಾನಿಯ ವಿಚಿತ್ರ ಪ್ರೇಮ

Public TV
By Public TV
1 hour ago
Chandra Lyout Constable Instagram Love copy
Bengaluru City

2ನೇ ಗಂಡನನ್ನು ಬಿಟ್ಟು ಕಾನ್ಸ್‌ಟೇಬಲ್ ಜೊತೆ ಮಹಿಳೆ ಎಸ್ಕೇಪ್ – ಪೇದೆ ಅಮಾನತು

Public TV
By Public TV
2 hours ago
dk shivakumar 1 6
Bengaluru City

ಮತಗಳ್ಳತನ ನಡೆದಿರುವುದು ಸತ್ಯ, ಇದರ ವಿರುದ್ಧ ಸೂಕ್ತ ಕ್ರಮ: ಡಿಕೆಶಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?