Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಉಪಚುನಾವಣಾ ಕಣದಲ್ಲಿ ಬೆಟ್ಟಿಂಗ್ ಭರಾಟೆ – ಕುತೂಹಲ ಹೆಚ್ಚಿಸಿದ ಚನ್ನಪಟ್ಟಣ ಫಲಿತಾಂಶ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಉಪಚುನಾವಣಾ ಕಣದಲ್ಲಿ ಬೆಟ್ಟಿಂಗ್ ಭರಾಟೆ – ಕುತೂಹಲ ಹೆಚ್ಚಿಸಿದ ಚನ್ನಪಟ್ಟಣ ಫಲಿತಾಂಶ

Districts

ಉಪಚುನಾವಣಾ ಕಣದಲ್ಲಿ ಬೆಟ್ಟಿಂಗ್ ಭರಾಟೆ – ಕುತೂಹಲ ಹೆಚ್ಚಿಸಿದ ಚನ್ನಪಟ್ಟಣ ಫಲಿತಾಂಶ

Public TV
Last updated: November 16, 2024 8:37 am
Public TV
Share
3 Min Read
Channapatna BY Election Betting
SHARE

ರಾಮನಗರ: ಚನ್ನಪಟ್ಟಣ, ಶಿಗ್ಗಾಂವಿ ಹಾಗೂ ಸಂಡೂರು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯ ಭರಾಟೆ ಮುಗಿದಿದೆ. ಇನ್ನೇನಿದ್ದರೂ ಫಲಿತಾಂಶ ಬರಬೇಕು. ಈ ನಡುವೆ ಗೆಲ್ಲುವ ಕುದುರೆ ಯಾರೆಂಬ ಲೆಕ್ಕಾಚಾರ ತೀವ್ರಗೊಂಡಿದೆ. ಕ್ಷೇತ್ರಗಳಲ್ಲಿ ಬೆಟ್ಟಿಂಗ್ ಭರ್ಜರಿಯಾಗಿ ನಡೆಯುತ್ತಿದ್ದು, ಶಿಗ್ಗಾಂವಿ, ಸಂಡೂರು ಕ್ಷೇತ್ರಕ್ಕಿಂತ ಚನ್ನಪಟ್ಟಣವೇ (Channapatna) ಎಲ್ಲರ ಫೇವರೆಟ್ ಆಗಿದೆ. ದೊಡ್ಡ ಮಟ್ಟದಲ್ಲೇ ಇಲ್ಲಿ ಬಾಜಿ ನಡೆಯುತ್ತಿದೆ.

ಇಡೀ ರಾಜ್ಯದ ಗಮನ ಸೆಳೆದಿದ್ದ ಚನ್ನಪಟ್ಟಣ ಉಪಚುನಾವಣೆಯ (By Election) ಮತದಾನ ಮುಗಿದಿದ್ದು, ಇದೀಗ ಕ್ಷೇತ್ರದಲ್ಲಿ ಸೋಲು-ಗೆಲುವಿನ ಲೆಕ್ಕಾಚಾರ ಶುರುವಾಗಿದೆ. ಜೊತೆಗೆ ಬೆಟ್ಟಿಂಗ್ ಭರಾಟೆ ಕೂಡಾ ಹೆಚ್ಚಾಗಿದೆ. ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಹಾಗೂ ಸಿ.ಪಿ ಯೋಗೇಶ್ವರ್ (CP Yogeshwar) ತುರುಸಿನ ಫೈಟ್ ನಡೆದಿದೆ. ಈ ಚುನಾವಣೆ ತೀವ್ರ ಹಣಾಹಣಿಗೆ ಕಾರಣವಾಗಿದೆ. ಹೀಗಾಗಿ ಚನ್ನಪಟ್ಟಣದತ್ತ ಬೆಟ್ಟಿಂಗ್‌ದಾರರು ಹೆಚ್ಚಿನ ಆಸಕ್ತಿ ತೋರಿಸುತ್ತಿದ್ದಾರೆ. ಇದನ್ನೂ ಓದಿ: ಕುಮಾರಸ್ವಾಮಿ ವಿರುದ್ಧ ವರ್ಣ ನಿಂದನೆ – ಜಮೀರ್ ವಿರುದ್ಧ ದೂರು

CP Yogeshwar

ಸೋಲು, ಗೆಲುವು ಹಾಗೂ ಗೆಲುವಿನ ಅಂತರಕ್ಕೆ ಲಕ್ಷ ಲಕ್ಷ ಹಣ ಬೆಟ್ಟಿಂಗ್ ಕಟ್ಟಲಾಗುತ್ತಿದೆ. ಚನ್ನಪಟ್ಟಣ ತಾಲೂಕು ಮಾತ್ರವಲ್ಲದೇ ಅಕ್ಕಪಕ್ಕದ ತಾಲೂಕುಗಳು, ಜಿಲ್ಲೆಗಳಲ್ಲೂ ಸಹ ಫಲಿತಾಂಶದ ಮೇಲೆ ಬೆಟ್ಟಿಂಗ್ ಕಟ್ಟಲಾಗುತ್ತಿದೆ. ಅಲ್ಲದೇ ಗುರುವಾರ ಸಿ.ಪಿ.ಯೋಗೇಶ್ವರ್ ಹೇಳಿಕೆ ಬಳಿಕವೂ ಬೆಟ್ಟಿಂಗ್ ಕಟ್ಟುವವರ ಸಂಖ್ಯೆ ಕೂಡಾ ಹೆಚ್ಚಾಗಿದೆ. ಯಾವ ಭಾಗದಲ್ಲಿ ಯಾರಿಗೆ ಲೀಡ್, ಎಷ್ಟು ಮತಗಳು ಲೀಡ್ ಸೇರಿದಂತೆ ಇನ್ನಿತರ ವಿಚಾರಗಳ ಮೇಲೂ ಒನ್ ಟು ಡಬಲ್ ಎಂಬತೆ ಬೆಟ್ಟಿಂಗ್ ಕಟ್ಟಲಾಗುತ್ತಿದೆ. ಇದನ್ನೂ ಓದಿ: ಉತ್ತರ ಪ್ರದೇಶ ಆಸ್ಪತ್ರೆಯಲ್ಲಿ ಅಗ್ನಿ ಅವಘಡ – 10 ಮಕ್ಕಳು ಸಜೀವ ದಹನ

ಚುನಾವಣೆಯ ಕೊನೆಯ ಹಂತದಲ್ಲಿ ಸಚಿವ ಜಮೀರ್ ಅಹ್ಮದ್ (Zameer Ahmed) ನೀಡಿದ್ದ ‘ಕರಿಯ’ ಹೇಳಿಕೆ ಚುನಾವಣೆಯಲ್ಲಿ ಪ್ರಭಾವ ಬೀರಿದೆ. ಇದನ್ನು ಸ್ವತಃ ಸಿಪಿವೈ ಒಪ್ಪಿಕೊಂಡಿದ್ದಾರೆ. ಇನ್ನು ಚನ್ನಪಟ್ಟಣದಲ್ಲಿ ಗೆಲ್ಲುವ ಬಗ್ಗೆ ಪೂರ್ತಿ ವಿಶ್ವಾಸವನ್ನು ಅವರು ವ್ಯಕ್ತಪಡಿಸಿಲ್ಲ. ಸಿಪಿವೈ ಈ ಹೇಳಿಕೆ ಬೆಟ್ಟಿಂಗ್ ಮೇಲೂ ಪ್ರಭಾವ ಬೀರಿದೆ ಎನ್ನಲಾಗುತ್ತಿದೆ. ಇದನ್ನೂ ಓದಿ: ಆಫ್ರಿಕಾ ವಿರುದ್ಧ ದಾಖಲೆಯ ಜಯದೊಂದಿಗೆ ಸರಣಿ ಗೆದ್ದ ಟೀಂ ಇಂಡಿಯಾ

nikhil kumaraswamy

ಚನ್ನಪಟ್ಟಣದ ಜೊತೆಗೆ ಮಂಡ್ಯದವರೂ (Mandya) ಕೂಡ ಹೆಚ್ಚಿನ ಪ್ರಮಾಣದಲ್ಲಿ ಬೆಟ್ಟಿಂಗ್‌ಗೆ ಇಳಿದಿದ್ದಾರೆ. ಮಂಡ್ಯ ಜಿಲ್ಲೆಯದ್ದಾಗಲಿ, ಪಕ್ಕದ ಜಿಲ್ಲೆಯದ್ದಾಗಲಿ ಒಂದು ಕೈ ನೋಡೇ ಬಿಡೋಣಾ ಎಂದು ಬೆಟ್ಟಿಂಗ್ ಕಟ್ಟುತ್ತಾರೆ. ಇದೀಗ ಮಂಡ್ಯ ಜಿಲ್ಲೆಯ ಜನರ ಕಣ್ಣು ಬಿದ್ದಿರೋದು ಚನ್ನಪಟ್ಟಣ ಉಪಚುನಾವಣೆಯ ಫಲಿತಾಂಶದ ಮೇಲೆ. ಚನ್ನಪಟ್ಟಣ ಉಪಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಪರ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಕೆಲಸ ಮಾಡಿದ್ದು ಸಹ ಮಂಡ್ಯ ಜಿಲ್ಲೆಯ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಕಾರ್ಯಕರ್ತರು. ಮತದಾನದ ಬಳಿಕ ಕಾರ್ಯಕರ್ತರು ಮಾತ್ರವಲ್ಲ ಸಾಮಾನ್ಯ ಜನರು ಸಹ ಈ ಫಲಿತಾಂಶದ ಮೇಲೆ ಬಾಜಿ ಕಟ್ಟುತ್ತಿದ್ದಾರೆ. ಇದೀಗ ಯೋಗೇಶ್ವರ್ ಯಾರೇ ಗೆದ್ದರೂ ಕೂದಳೆಯ ಅಂತರದಲ್ಲಿ ಗೆಲ್ಲುತ್ತಾರೆ ಎಂಬ ಹೇಳಿಕೆ ಬಳಿಕ ಬೆಟ್ಟಿಂಗ್ ಲೆಕ್ಕಾಚಾರ ಬದಲಾಗಿದೆ. ಇದನ್ನೂ ಓದಿ: ಹಾಸನ| 1.49 ಕೋಟಿ ಹಣ ದುರುಪಯೋಗ ಆರೋಪ – ಗ್ರಾಮ ಪಂಚಾಯ್ತಿ ಕಾರ್ಯದರ್ಶಿ ಅಮಾನತು

50:50 ಅನುಪಾತದಲ್ಲಿ ಬೆಟ್ಟಿಂಗ್ ನಡೆದಿದೆ. ಈಗ ಸದ್ಯ ಒಂದು ಲಕ್ಷಕ್ಕೆ ಒಂದು ಲಕ್ಷ ಎಂಬಂತೆ ಸ್ಟ್ರೈಟ್ ಫೈಟ್ ಬೆಟ್ಟಿಂಗ್ ಮಾಡಲಾಗುತ್ತಿದೆ. ಸಕ್ಕರೆ ನಾಡಲ್ಲಿ ಬೊಂಬೆ ನಗರಿಯ ಅಧಿಪತಿ ಯಾರು ಎಂದು ಬೆಟ್ಟಿಂಗ್ ನಡೆಯುತ್ತಿದೆ. ಮೂಲಗಳ ಪ್ರಕಾರ ಚನ್ನಪಟ್ಟಣ ಹಾಗೂ ರಾಮನಗರ ಜಿಲ್ಲೆಗಿಂತ ಮಂಡ್ಯ ಜಿಲ್ಲೆಯಲ್ಲಿಯೇ ಚನ್ನಪಟ್ಟಣ ಉಪಚುನಾವಣೆಯ ಫಲಿತಾಂಶದ ಮೇಲೆ ಬೆಟ್ಟಿಂಗ್ ಕಟ್ಟುತ್ತಿದ್ದಾರೆ ಎನ್ನಲಾಗುತ್ತಿದೆ. ಒಟ್ಟಿನಲ್ಲಿ ಬೆಟ್ಟಿಂಗ್ ಕಾನೂನು ಬಾಹಿರವಾದರೂ ಬಾಜಿ ಕಟ್ಟಿ ನೋಡು ಬಾರಾ ಮೀಸೆ ಮಾವಾ ಅನ್ನೋ ಹಾಡು ಇದೀಗ ಚನ್ನಪಟ್ಟಣ ಚುನಾವಣೆಗೆ ಅನ್ವಯಿಸುತ್ತಿದೆ. ಇದನ್ನೂ ಓದಿ: ಅಕ್ರಮ ಆಸ್ತಿ ಗಳಿಕೆ ಪ್ರಕರಣ – ಸಚಿವ ಜಮೀರ್‌ ಅಹ್ಮದ್‌ಗೆ ಲೋಕಾಯುಕ್ತ ನೋಟಿಸ್‌

TAGGED:ChannapatnacongressCP Yogeshwarjdsmandyanikhil kumaraswamyramanagaraಕಾಂಗ್ರೆಸ್ಚನ್ನಪಟ್ಟಣಜೆಡಿಎಸ್ನಿಖಿಲ್ ಕುಮಾರಸ್ವಾಮಿಬೆಟ್ಟಿಂಗ್ಮಂಡ್ಯರಾಮನಗರಸಿಪಿ ಯೋಗೇಶ್ವರ್
Share This Article
Facebook Whatsapp Whatsapp Telegram

Cinema news

actor mayur patel car accident
ಕುಡಿದು ವಾಹನ ಚಲಾಯಿಸಿ ಕಾರುಗಳಿಗೆ ಸರಣಿ ಅಪಘಾತ; ನಟ ಮಯೂರ್ ಪಟೇಲ್ ವಿರುದ್ಧ FIR
Cinema Crime Latest Main Post Sandalwood
Ranveer Singh Rishab Shetty Kantara
ತುಳುನಾಡಿನ ದೈವಕ್ಕೆ ʻಹೆಣ್ಣು ದೆವ್ವʼ ಅಂತ ಅಪಮಾನ – ರಣವೀರ್ ಸಿಂಗ್‌ ವಿರುದ್ಧ FIR
Bengaluru City Cinema Crime Latest Main Post
Suri Anna 2
ಹರೀಶ್ ರಾಯ್ ನಟಿಸಿದ ಕೊನೆ ಚಿತ್ರ ಸೂರಿ ಅಣ್ಣ ಟ್ರೈಲರ್ ಬಿಡುಗಡೆ
Cinema Latest Main Post Sandalwood
Arijith Singh
ಹಿನ್ನೆಲೆ ಗಾಯನಕ್ಕೆ ಗುಡ್ ಬೈ ಹೇಳಿದ ಅರಿಜಿತ್ ಸಿಂಗ್
Bollywood Cinema Latest Main Post

You Might Also Like

Priyank Kharge V Sunil Kumar
Bengaluru City

ರಾಜ್ಯ ಸರ್ಕಾರದ ಯೋಜನೆಗೆ ಪಂಚಾಯತ್‌ಗಳು ವಿರೋಧಿಸಿ ಜಾಹೀರಾತು ನೀಡಿದ್ರೆ ಒಪ್ಪುತ್ತೀರಾ? – ಸದನದಲ್ಲಿ ಕೋಲಾಹಲ

Public TV
By Public TV
11 minutes ago
Council Session
Bengaluru City

ಹರಿಪ್ರಸಾದ್ ರಿಂದ ವಿವಾದಾತ್ಮಕ ಮಾತು – ವಿಧಾನ ಪರಿಷತ್ ‌ಕಲಾಪವೇ ಬಲಿ

Public TV
By Public TV
17 minutes ago
Davanagere Crime News husband commits suicide after wife elopes with her lover 2 Arrested
Crime

ಮದುವೆಯಾಗಿ ಎರಡೇ ತಿಂಗಳಿಗೆ ಪರಾರಿ – ಪತಿ ಆತ್ಮಹತ್ಯೆಗೆ ಕಾರಣರಾದ ಪತ್ನಿ, ಪ್ರಿಯಕರ ಅಂದರ್‌

Public TV
By Public TV
18 minutes ago
Karnataka Police 2
Bengaluru City

ಕರ್ನಾಟಕ ಪೊಲೀಸರಿಗೆ ರಜೆ ಭಾಗ್ಯ – ಹುಟ್ಟುಹಬ್ಬ, ವಿವಾಹ ವಾರ್ಷಿಕೋತ್ಸವಕ್ಕೆ ಸಾಂದರ್ಭಿಕ ರಜೆ

Public TV
By Public TV
38 minutes ago
Traffic Police 1
Bidar

ಹೆಲ್ಮೆಟ್ ಧರಿಸದೇ ಬೈಕ್ ಚಾಲನೆ – 6 ವರ್ಷದಲ್ಲಿ ಬರೋಬ್ಬರಿ 9.73 ಕೋಟಿ ದಂಡ ವಸೂಲಿ

Public TV
By Public TV
1 hour ago
RD Patil PSI Exam Scam
Kalaburagi

ಮೈಸೂರು ಕಾರಾಗೃಹಕ್ಕೆ ಪಿಎಸ್‌ಐ ಹಗರಣದ ಕಿಂಗ್‌ಪಿನ್ ಆರ್.ಡಿ.ಪಾಟೀಲ್ ಶಿಫ್ಟ್

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?