ಚಂಡೀಗಢ: ಪಂಜಾಬ್ ನೂತನ ಮುಖ್ಯಮಂತ್ರಿಯಾಗಿ ಆಮ್ ಆದ್ಮಿ ಪಕ್ಷದ ಭಗವಂತ್ ಮಾನ್ ಅವರು ಮಾರ್ಚ್ 16ರಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ಬೆನ್ನೆಲ್ಲೇ ರಾಜ್ಯದ ಅನೇಕ ವಿವಿಐಪಿಗಳು ಸೇರಿದಂತೆ 122 ಮಾಜಿ ಸಂಸದರು ಮತ್ತು ಶಾಸಕರಿಗೆ ನೀಡಿದ್ದ ಭದ್ರತೆಯನ್ನು ಹಿಂಪಡೆಯಲು ಆದೇಶ ಹೊರಡಿಸಿದ್ದಾರೆ.
ಕೇಂದ್ರ ಗೃಹ ಸಚಿವಾಲಯದ ಸೂಚನೆ ಮೇರೆಗೆ ಬಾದಲ್ ಕುಟುಂಬಕ್ಕೆ ಭದ್ರತೆ ನೀಡಲಾಗಿದ್ದು, ಮಾಜಿ ಸಿಎಂಗಳಾದ ಕ್ಯಾಪ್ಟನ್ ಅಮರಿಂದರ್ ಸಿಂಗ್, ಚರಣ್ಜಿತ್ ಸಿಂಗ್ ಚನ್ನಿ, ಉಳಿದ ಎಲ್ಲ ಕಾಂಗ್ರೆಸ್ ಮತ್ತು ಅಕಾಲಿದಳದ ನಾಯಕರಿಗೆ ನೀಡಿದ ಭದ್ರತೆಯನ್ನು ಹಿಂಪಡೆಯಲಾಗಿದೆ. ಇದನ್ನೂ ಓದಿ: ಗೆಳತಿ ಜೊತೆ ಬೆಂಗಳೂರಿನಲ್ಲಿ ಕಾಣಿಸಿಕೊಂಡ ಕೆಎಲ್ ರಾಹುಲ್
ಒಂದೆಡೆ ಪೊಲೀಸ್ ಠಾಣೆಗಳು ಖಾಲಿ ಬಿದ್ದಿದ್ದರೆ, ಮತ್ತೊಂದೆಡೆ ನಾಯಕರ ಮನೆ ಮುಂದೆ ಟೆಂಟ್ ಹಾಕಿ ಭದ್ರತೆ ಕಲ್ಪಿಸಲಾಗಿದೆ. ಆದರೆ ಈ ಎಲ್ಲದಕ್ಕಿಂತಲೂ ಮೂರೂವರೆ ಕೋಟಿ ಜನರಿಗೆ ಸುರಕ್ಷತೆ ಒದಗಿಸುವುದು ಹೆಚ್ಚು ಮುಖ್ಯ. ಇದರ ಹೊರೆಯನ್ನು ಪೊಲೀಸರ ಮೇಲೆ ಹೊರೆಸುತ್ತೇವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಮಾರ್ಚ್ 16ಕ್ಕೆ ಭಗವಂತ್ ಮಾನ್ ಪ್ರಮಾಣ ವಚನ ಸ್ವೀಕಾರ
ಪಂಜಾಬ್ ಚುನಾವಣೆಯಲ್ಲಿ ಭಾರೀ ಗೆಲುವಿನ ನಂತರ ಭಗವಂತ್ ಮಾನ್ ಅವರು ಶನಿವಾರ ರಾಜ್ಯಪಾಲ ಬನ್ವಾರಿಲಾಲ್ ಪುರೋಹಿತ್ ಅವರನ್ನು ಭೇಟಿ ಮಾಡಿ ರಾಜ್ಯದಲ್ಲಿ ಹೊಸ ಸರ್ಕಾರ ರಚಿಸಲು ಹಕ್ಕು ಮಂಡಿಸಿದರು. ಮಾರ್ಚ್ 16ರಂದು ಮಧ್ಯಾಹ್ನ 12:30ಕ್ಕೆ ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ಅವರ ಹುಟ್ಟೂರಿನಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ ಎಂದು ತಿಳಿಸಿದ್ದಾರೆ. 117 ಸದಸ್ಯ ಬಲದ ಪಂಜಾಬ್ ವಿಧಾನಸಭೆಯಲ್ಲಿ ಆಪ್ ಪಕ್ಷ 92 ಸ್ಥಾನಗಳನ್ನು ಗೆಲುವು ಸಾಧಿಸಿದೆ.