ಬೀದರ್: ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ (Congress) ಸರ್ಕಾರ ವಿಕ್ರಂ ಸಿಂಹರನ್ನು ಬಂಧಿಸಿರುವುದು ಕಾನೂನಿನ ವಿರುದ್ಧವಾಗಿದೆ. ಎಫ್ಐಆರ್ನಲ್ಲಿ ಹೆಸರಿಲ್ಲದಿದ್ದರೂ ಅವರನ್ನು ಬಂಧಿಸಲಾಗಿದ್ದು, ಸಂಸದ ಪ್ರತಾಪ್ ಸಿಂಹ (Pratap Simha) ಅವರನ್ನು ಟಾರ್ಗೆಟ್ ಮಾಡುತ್ತಿದ್ದಾರೆ ಎಂದು ಕೇಂದ್ರ ಸಚಿವ ಭಗವಂತ ಖೂಬಾ (Bhagwanth Khuba) ಅವರು ಆರೋಪಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರತಾಪ್ ಸಿಂಹ ಅವರಿಗೆ ಕೆಟ್ಟ ಹೆಸರು ತರಲು ಹೀಗೆ ಮಾಡಿದ್ದಾರೆ. ಇದು ಸಿಎಂ ಸಿದ್ದರಾಮಯ್ಯನವರ ಕುತಂತ್ರವಾಗಿದೆ. ಈ ರೀತಿ ಕುತಂತ್ರ ಮಾಡಿದರೂ ಸಹ ಪ್ರತಾಪ್ ಸಿಂಹ ಅವರನ್ನು ಅಲ್ಲಿಯ ಜನ 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಲಿದ್ದಾರೆ ಎಂದಿದ್ದಾರೆ. ಇದನ್ನೂ ಓದಿ: ನಮ್ಮನ್ನು ರಾಜಕೀಯವಾಗಿ ಮುಗಿಸಲು ವ್ಯವಸ್ಥಿತ ಪಿತೂರಿ ನಡೆಯುತ್ತಿದೆ: ವಿಕ್ರಂ ಸಿಂಹ
ಕಾನೂನು ಸುವ್ಯವಸ್ಥೆ ಹಾಗೂ ಪೊಲೀಸರು ಯಾರ ಮೂಗಿನ ಅಳತೆ ಮೇಲೆ ಕೆಲಸ ಮಾಡುತ್ತಿರುವುದು ಗೊತ್ತಿದೆ. ಇದು ಸರಿಯಾದ ನಡೆಯಲ್ಲ. ಪ್ರತಾಪ್ ಸಿಂಹ ಅವರೇ ನೀವು ಎದೆಗುಂದುವುದು ಬೇಡ, ಸತ್ಯಕ್ಕೆ ಜಯವಾಗಲಿದೆ ಎಂದಿದ್ದಾರೆ.
ಕಾನೂನು ಎಲ್ಲರಿಗೂ ಒಂದೇ ಎನ್ನುವುದು ದೇಶದ ಜನರಿಗೆ ಗೊತ್ತಿದೆ, ನಿಮ್ಮ ಕ್ಷೇತ್ರದಲ್ಲಿ ದಲಿತರ ಮೇಲೆ ಹಾಗೂ ಸಾಮಾನ್ಯರಿಗೆ ಎಷ್ಟು ದೌರ್ಜನ್ಯವಾಗುತ್ತಿದೆ ಗೊತ್ತಾ ಎಂದು ಅವರು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಮರಗಳ್ಳತನ ಪ್ರಕರಣದಲ್ಲಿ ಸಂಸದ ಪ್ರತಾಪ್ ಸಿಂಹ ಸಹೋದರ ವಿಕ್ರಂ ಸಿಂಹ ಬಂಧನ