Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Search
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cinema

ಕಲರ್ಸ್ ಕನ್ನಡದಿಂದ ‘ನಾನು ಭಾಗ್ಯ’ ಅಭಿಯಾನ

Public TV
Last updated: December 5, 2024 2:50 pm
Public TV
Share
2 Min Read
bhagyalakshmi serial
SHARE

ತನ್ನನ್ನು ತಾನು ಕಂಡುಕೊಂಡ ಭಾಗ್ಯಳ ದಿಟ್ಟ ಪಯಣದಿಂದ ಹುರುಪು ಪಡೆದು ಅವಳಂತೆ ಎಲ್ಲ ಎಲ್ಲೆಗಳನ್ನು ದಾಟಬಯಸುವ ಹೆಂಗಳೆಯರ ಕೆಚ್ಚು ಹಾಗೂ ಸ್ಥೈರ್ಥವನ್ನು ಸಂಭ್ರಮಿಸುವುದೇ ‌’ಭಾಗ್ಯಲಕ್ಷ್ಮಿ’ ಸೀರಿಯಲ್ (Bhagyalakshmi Serial) ‘ನಾನು ಭಾಗ್ಯ’ (Nanu Bhagya) ಅಭಿಯಾನದ ಗುರಿ. ಇದನ್ನೂ ಓದಿ:ವೈವಾಹಿಕ ಜೀವನಕ್ಕೆ ಕಾಲಿಟ್ಟ ನಾಗಚೈತನ್ಯ, ಶೋಭಿತಾ – ನಾಗಾರ್ಜುನ ಭಾವುಕ

bhagyalakshmi

ಸಾಮಾನ್ಯ ಮಧ್ಯಮ ವರ್ಗದ ಕುಟುಂಬದಲ್ಲಿ ಬೆಳೆದರೂ, ತನಗೊದಗಿದ ಪರಿಸ್ಥಿತಿಯನ್ನು ಎದುರಿಸುತ್ತಾ ಕೆಚ್ಚು, ಮಹತ್ವಾಕಾಂಕ್ಷೆಗಳ ಹಾದಿ ತುಳಿದ ಭಾಗ್ಯಳ ಪಯಣ ವೀಕ್ಷಕರ ಮನಸನ್ನು ಇನ್ನಿಲ್ಲದಂತೆ ತಟ್ಟಿದೆ. ಎದುರಾದ ಸವಾಲುಗಳನ್ನೆಲ್ಲಾ ನಿಭಾಯಿಸುತ್ತಾ, ಎಲ್ಲ ನಿರೀಕ್ಷೆಗಳು ಹುಸಿಯಾಗುವಂತೆ ಬೆಳೆಯುತ್ತಿರುವ ಭಾಗ್ಯಳ ಕತೆ ನಾಡಿನ ಹೆಣ್ಣು ಮಕ್ಕಳಿಗೆ ಹೊಸ ಹುರುಪು ತುಂಬುತ್ತಿದೆ. ಕಲರ್ಸ್ ಕನ್ನಡದ ಜನಪ್ರಿಯ ಧಾರಾವಾಹಿ ಭಾಗ್ಯಲಕ್ಷ್ಮಿ ಇದೀಗ ಏಳುನೂರನೇ ಸಂಚಿಕೆಯ ಹೊಸಿಲಿನಲ್ಲಿದ್ದು, ಭಾಗ್ಯ ತನ್ನ ಬದುಕಿನ ನಿರ್ಣಾಯಕ ತಿರುವಿನಲ್ಲಿ ನಿಂತಿದ್ದಾಳೆ. ಇಲ್ಲಿಂದ ಮುಂದಕ್ಕೆ ಕತೆ ಭಾರೀ ಬದಲಾವಣೆ ಕಾಣಲಿದೆ.

bhagyalakshmi serial 1

ಆರಂಭದಲ್ಲಿ ತನ್ನ ಗಂಡನ ಸಾಂಪ್ರದಾಯಿಕ ಮನೆಗೆ ತಕ್ಕ ಸೊಸೆಯಾಗಲು ಹೆಣಗಿದ ಭಾಗ್ಯಳ ಪ್ರೀತಿ ಮತ್ತು ತಾಳ್ಮೆ ಅವಳ ಅತ್ತೆ ಕುಸುಮಳ ಮನಗೆದ್ದಿದ್ದವು. ಅದೇ ಉತ್ಸಾಹದಲ್ಲಿ ಎರಡು ಮಕ್ಕಳಾದ ಮೇಲೂ ಮತ್ತೆ ಶಾಲೆಗೆ ಸೇರಿ ಹತ್ತನೇ ಕ್ಲಾಸಿನ ಪರೀಕ್ಷೆಯನ್ನೂ ಮುಗಿಸಿದ ಭಾಗ್ಯ ತನ್ನ ಕುಟುಂಬ ಹಾಗೂ ಮಕ್ಕಳ ಗೌರವ ಗಳಿಸಿದಳು. ಹೆಸರಾಂತ ಫೈವ್ ಸ್ಟಾರ್ ಹೋಟೆಲಿನಲ್ಲಿ ಮುಖ್ಯ ಶೆಫ್ ಆಗಿ ಕೆಲಸ ಶುರುಮಾಡಿದಾಗಲಂತೂ ಅವಳ ಪಯಣ ಹೊಸ ಮಜಲಿಗೇರಿತ್ತು.

sushma rao 1

ಆದರೂ ಇದೀಗ ಭಾಗ್ಯ ತನ್ನ ಕುಟುಂಬದ ತಳಪಾಯವನ್ನೇ ಅಲುಗಾಡಿಸುವಂಥ ಸತ್ಯಕ್ಕೆ ಮುಖಾಮುಖಿಯಾಗಿದ್ದಾಳೆ. ತನ್ನ ಗಂಡ ತಾಂಡವನ ಮೋಸ ಬಟಾಬಯಲಾಗಿ ಕಂಗೆಟ್ಟ ಅವಳಿಗೆ ಸಂಸಾರದಲ್ಲಿ ಉಳಿಯಬೇಕೋ ಬೇಡವೊ ಅನ್ನುವ ಪ್ರಶ್ನೆ ಎದುರಾಗಿತ್ತು. ಸಂಸಾರದೊಳಗೇ ಇದ್ದು ತನ್ನನ್ನು ತಾನು ಮರಳಿ ಕಂಡುಕೊಳ್ಳುವ ಕೆಚ್ಚಿನ ನಿರ್ಧಾರ ತೆಗೆದುಕೊಂಡಿರುವ ಭಾಗ್ಯಳ ಇದುವರೆಗೆ ಕಂಡಿರದ ಹೊಸ ಮುಖದ ಪರಿಚಯ ವೀಕ್ಷಕರಿಗೆ ಮುಂಬರುವ ಸಂಚಿಕೆಗಳಲ್ಲಿ ಆಗಲಿದೆ. ತನ್ನನ್ನು ತಾನು ಸಂಪೂರ್ಣವಾಗಿ ಬದಲಾಯಿಸಿಕೊಂಡು ತನ್ನ ಮುಂದಿನ ಹೆಜ್ಜೆಗಳನ್ನು ದೃಢವಾಗಿ ಇಡಲಿರುವ ಸ್ವತಂತ್ರ ಭಾಗ್ಯಳನ್ನು ಅವರು ನೋಡಲಿದ್ದಾರೆ.

sushma rao

ಭಾಗ್ಯಳ ಈ ದಿಟ್ಟ ತಿರುವಿನ ಕ್ಷಣವನ್ನು ಸಂಭ್ರಮಿಸಲು ಕಲರ್ಸ್ ಕನ್ನಡ ‘ನಾನು ಭಾಗ್ಯ’ (Nanu Bhagya) ಅನ್ನುವ ಅಭಿಯಾನವೊಂದನ್ನು ಆರಂಭಿಸಿದೆ. ಈ ಅಭಿಯಾನಕ್ಕೆಂದೇ #IAMBHAGYA ಅನ್ನುವ ಹ್ಯಾಷ್ ಟ್ಯಾಗ್ ಆರಂಭಿಸಲಾಗಿದೆ. ಇದರ ಮುಖಾಂತರ ಎಲ್ಲ ಹೆಣ್ಣುಮಕ್ಕಳನ್ನು ಸಮಾಜದ ಒತ್ತಡಗಳನ್ನು ಮೀರಿ ತಮ್ಮ ಕನಸನ್ನು ಬೆಂಬತ್ತುವಂತೆ ಉತ್ತೇಜಿಸುವುದು ಕಲರ್ಸ್ ಕನ್ನಡದ ಉದ್ದೇಶ. ಇದಕ್ಕಾಗಿ ಪ್ರೊಮೊ ಹಾಡೊಂದನ್ನು ಸಹ ನಿರ್ಮಿಸಲಾಗಿದೆ. ಈ ಹಾಡಿಗೆ ಗಿರಿಧರ್ ದಿವಾನ್ ಸಂಗೀತ ನೀಡಿದ್ದು, ಪ್ರದ್ಯುಮ್ನ ಗೀತೆ ರಚಿಸಿದ್ದಾರೆ.

 

View this post on Instagram

 

A post shared by Colors Kannada Official (@colorskannadaofficial)

ಭಾಗ್ಯಳ ಮುಂದಿನ ಹೆಜ್ಜೆಗಳು ಅವಳನ್ನು ಎಲ್ಲಿಗೆ ಕರೆದೊಯ್ಯಲಿವೆ ಎಂಬ ಕುತೂಹಲ ತಣಿಯಲು ನೀವು ಕಲರ್ಸ್ ಕನ್ನಡ ವೀಕ್ಷಿಸುವುದನ್ನು ಮರೆಯಬೇಡಿ.

TAGGED:bhagyalakshmi seriali am bhagyaಭಾಗ್ಯಲಕ್ಷ್ಮಿ ಸೀರಿಯಲ್‌ಸುಷ್ಮಾ ರಾವ್‌ʼ
Share This Article
Facebook Whatsapp Whatsapp Telegram

You Might Also Like

Forever Naveen Kumar Kannada Cinema Sandalwood
Cinema

ಸೆಲೆಬ್ರಿಟಿ ವಸ್ತ್ರವಿನ್ಯಾಸಕ ನವೀನ್ ಕುಮಾರ್‌ಗೆ ಅಮೆರಿಕ ಗೌರವ

Public TV
By Public TV
13 minutes ago
Mangaluru Rain
Dakshina Kannada

ಮಂಗಳೂರಿನಲ್ಲಿ ಭಾರೀ ಮಳೆ – ಪಂಪ್‌ವೆಲ್ ಸರ್ಕಲ್ ಮತ್ತೆ ಮುಳುಗಡೆ

Public TV
By Public TV
27 minutes ago
ED 1
Bengaluru City

Exclusive | ವಾಲ್ಮೀಕಿ ಹಗರಣ: ಬಳ್ಳಾರಿ ಚುನಾವಣೆಗೆ 27 ಕೋಟಿ ಬಳಕೆಯಾಗಿದ್ದು ಹೇಗೆ? – 87 ಕೋಟಿ ಎಲ್ಲೆಲ್ಲಿ ಹಂಚಿಕೆಯಾಯ್ತು?

Public TV
By Public TV
32 minutes ago
Siddaramaiah 4
Districts

ನಮ್ಮ ನಿರೀಕ್ಷೆಗಳಿಗೆ ವಿರುದ್ಧವಾಗಿ ಕೆಲವು ಘಟನೆಗಳು ನಡೆಯುತ್ತವೆ – ಕಾಲ್ತುಳಿತ ಪ್ರಕರಣಕ್ಕೆ ಸಿಎಂ ಬೇಸರ

Public TV
By Public TV
1 hour ago
Bunny Hop Catch
Cricket

`ಬನ್ನಿ ಹಾಪ್ ಕ್ಯಾಚ್’ ರೂಲ್ಸ್‌ಗೆ ಐಸಿಸಿ ಬ್ರೇಕ್ – ಶೀಘ್ರವೇ ಹೊಸ ರೂಲ್ಸ್

Public TV
By Public TV
1 hour ago
Temba Bavuma
Cricket

ಚೋಕರ್ಸ್‌ ಹಣೆಪಟ್ಟಿ ಕಳಚಿದ ಹರಿಣರು – ದ. ಆಫ್ರಿಕಾಗೆ ವಿಶ್ವ ಟೆಸ್ಟ್‌ ಚಾಂಪಿಯನ್‌ ಕಿರೀಟ, ದಶಕಗಳ ಕನಸು ನನಸು

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?