Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಭಾರತ್ ಬಂದ್: 100ಕ್ಕೂ ಹೆಚ್ಚು ರೈತರ ಬಂಧನ, ಬಿಡುಗಡೆ

Public TV
Last updated: September 27, 2021 5:32 pm
Public TV
Share
2 Min Read
kuruburu shantakumar 12
SHARE

ಬೆಂಗಳೂರು: ಕೇಂದ್ರದ ಮೂರು ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ಕರೆ ನೀಡಲಾಗಿದ್ದ ಭಾರತ್ ಬಂದ್ ಬೆಂಬಲಿಸಲು ಬಂದಿದ್ದ 100ಕ್ಕೂ ಹೆಚ್ಚು ರೈತರನ್ನು ಬಂಧಿಸಿ, ಬಿಡುಗಡೆ ಮಾಡಲಾಗಿದೆ.

kuruburu 16ಮೌರ್ಯ ಸರ್ಕಲ್‍ನಲ್ಲಿ ಒಂದುಗೂಡಿ ವಿನೂತನ ರೀತಿಯ ಮೆರವಣಿಗೆ ನಡೆಸಲು ರೈತರು ಯತ್ನಿಸಿದ್ದಾರೆ. ಈ ವೇಳೆ ರೈತ ಮುಖಂಡರನ್ನು ಬಂಧಿಸಲು ಯತ್ನಿಸಿದಾಗ ಪೊಲೀಸರು ಹಾಗೂ ರೈತರ ನಡುವೆ ಭಾರಿ ವಾಗ್ವಾದ ನಡೆಯಿತು. ಏಕೆ ಬಂಧನ ಮಾಡುತ್ತೀರಿ, ನಾವು ಮೆರವಣಿಗೆಯನ್ನೇ ಆರಂಭಿಸಿಲ್ಲ, ನಮ್ಮ ರೈತರು ಬರುತ್ತಿದ್ದಾರೆ. ಅಲ್ಲಿ ತನಕ ಊರಿನಿಂದ ತಂದಿರುವ ತಿಂಡಿಯನ್ನು ತಿಂದು ಮುಂದೆ ಸಾಗುತ್ತೇವೆ ಎಂದು ರೈತರು ಪೊಲೀಸರ ಬಳಿ ಹೇಳಿದ್ದಾರೆ. ಇದನ್ನೂ ಓದಿ: ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್ ಎದುರಲ್ಲೇ ಶಾಸಕಿ ರೂಪಾಲಿ ನಾಯ್ಕ್ ಗರಂ

kuruburu shantakumar11ಇದಕ್ಕೆ ಅವಕಾಶ ನೀಡದ ಪೊಲೀಸರು, ಯಾವುದೇ ಪ್ರತಿ ಉತ್ತರ ನೀಡದೆ ರೈತರನ್ನು ಬಂಧಿಸಿದರು. ಪೊಲೀಸರ ಈ ನಡೆಯನ್ನು ಖಂಡಿಸಿದ ಕುರುಬೂರು ಶಾಂತಕುಮಾರ್, ಕಾನೂನುಬಾಹಿರ ಕ್ರಮಗಳನ್ನ ಕೈಗೊಳ್ಳುತ್ತಿರುವುದು ಪೊಲೀಸರ ಸರ್ವಾಧಿಕಾರಿ ಧೋರಣೆಯಾಗಿದೆ. ಇದನ್ನು ನಾವು ಸಹಿಸಲು ಸಾಧ್ಯವಿಲ್ಲ. ಮುಂದಿನ ದಿನಗಳಲ್ಲಿ ತಕ್ಕಪಾಠ ಕಲಿಸುತ್ತೇವೆ. ಕೇಂದ್ರದ ಕೆಲವು ಮಂತ್ರಿಗಳು ರೈತ ಚಳುವಳಿಯ ಬಗ್ಗೆ ಹಗುರವಾಗಿ ಕೋಲೆ ಬಸವನ ರೀತಿ ಮಾತನಾಡುತ್ತಿದ್ದಾರೆ. ಇವರಿಗೆ ಕೃಷಿ ಕಾಯ್ದೆಗಳ ದುಷ್ಪರಿಣಾಮಗಳ ಬಗ್ಗೆ ಅರಿವೇ ಇಲ್ಲ ಬೇಕಿದ್ದರೆ ರೈತ ಮುಖಂಡರ ಸಭೆ ಕರೆದು ಚರ್ಚಿಸಲಿ ಎಂದು ಬಹಿರಂಗ ಸವಾಲು ಹಾಕಿದರು. ಇದನ್ನೂ ಓದಿ: ತಪ್ಪು ಕಲ್ಪನೆಗಳಿಂದ ಭಾರತ್ ಬಂದ್ ಕರೆ ನೀಡಲಾಗಿದೆ: ಲಕ್ಷ್ಮಣ್ ಸವದಿ

kuruburu 14ರೈತರು ಉತ್ಪನ್ನಗಳನ್ನ ಎಲ್ಲಿ ಬೇಕಾದರೂ ಯಾರಿಗಾದರೂ ಮಾರಾಟ ಮಾಡಬಹುದು ಎನ್ನುತ್ತಾರೆ. ನಾವು ವಿಧಾನಸೌಧಕ್ಕೆ ಹಣ್ಣು ತರಕಾರಿಗಳನ್ನ ಮಾರಲು ಹೋಗುತ್ತಿದ್ದರೆ ಪೊಲೀಸರೇ ತಡೆಯುತ್ತಿದ್ದಾರೆ. ಇಂತಹ ನಡೆ ರೈತರ ಕಣ್ಣಿಗೆ ಮಣ್ಣೆರಚುವ ಕೇಂದ್ರ ಸರ್ಕಾರದ ಕುತಂತ್ರವಲ್ಲವೇ ಎಂದು ಕಿಡಿಕಾರಿದರು. ವಿಧಾನಸೌಧ ಬಳಿ ಎತ್ತಿನಗಾಡಿ ಕುದುರೆಗಾಡಿ ಪ್ರತಿಭಟನೆ ನಡೆಸುವಾಗ ಯಾವುದನ್ನೂ ಕೇಳದ ಪೊಲೀಸರು, ನಮ್ಮನ್ನ ಮಾತ್ರ ಅನುಮತಿ ಪಡೆಯಲಾಗಿದೆಯೇ ಎಂದು ಕೇಳುತ್ತಾರೆ. ಇದು ಪೊಲೀಸರ ಕಾರ್ಯವೈಖರಿ ಎಂದು ವ್ಯಂಗ್ಯವಾಡಿದರು.

ಕೇಂದ್ರ ಸರ್ಕಾರ ಇನ್ನೂ ಎಚ್ಚೆತ್ತುಕೊಳ್ಳದಿದ್ದರೆ ಗಂಭೀರ ಪರಿಣಾಮವನ್ನು ಎದುರಿಸಬೇಕಾಗುತ್ತದೆ. ನವೆಂಬರ್ 26ಕ್ಕೆ ಹೋರಾಟಕ್ಕೆ ಒಂದು ವರ್ಷ ತುಂಬುತ್ತದೆ. ಆಗ ದೇಶದ ಎಲ್ಲಾ ರಾಜ್ಯಗಳಿಂದ 5 ಕೋಟಿಗೂ ಹೆಚ್ಚು ರೈತರು ದೆಹಲಿ ಪ್ರವೇಶ ಮಾಡುತ್ತಾರೆ. ಸರ್ಕಾರದ ಯಾವುದೇ ಕುತಂತ್ರದ ಕಾರ್ಯತಂತ್ರಗಳಿಗೂ ನಾವು ಬಗ್ಗುವುದಿಲ್ಲ ಎಂದು ಎಚ್ಚರಿಸಿದರು.

kurubur17ಇದೇ ಸಂದರ್ಭದಲ್ಲಿ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ನಾರಾಯಣ ರೆಡ್ಡಿ ಮಾತನಾಡಿ, ರೈತರು ಕರೆ ನೀಡಿರುವ ಭಾರತ್ ಬಂದ್ ವಿಫಲಗೊಳಿಸಲು ಸರ್ಕಾರ ಪೊಲೀಸ್ ಬಲದ ಮೂಲಕ ಯತ್ನಿಸುತ್ತಿದೆ. ಪೊಲೀಸರು ಕಾನೂನು ಪಾಲಕರಾಗದೇ ಮಂತ್ರಿಗಳ ಗುಲಾಮರ ರೀತಿ ನಡೆದುಕೊಳ್ಳುತ್ತಿದ್ದಾರೆ. ಇದು ಸರಿಯಾದ ಕ್ರಮವಲ್ಲ ಎಂದರು.

ನೂರಕ್ಕೂ ಹೆಚ್ಚು ರೈತರನ್ನು ಪೊಲೀಸರು ಆಡುಗೋಡಿ ಪೊಲೀಸ್ ಮೈದಾನಕ್ಕೆ ಕರೆದೊಯ್ದಾಗ ಅಲ್ಲಿ ರೈತರು 1 ಗಂಟೆ ಕಾಲ ಬಸ್ಸಿನಿಂದ ಕೆಳಗೆ ಇಳಿಯದೆ ಪೊಲೀಸರ ಕಾನೂನುಬಾಹಿರ ವರ್ತನೆಯನ್ನ ಖಂಡಿಸಿದ್ದಾರೆ. 3 ಗಂಟೆ ನಂತರ ಬಂಧಿತ ರೈತರು, ರೈತ ಮಹಿಳೆಯರು, ಬೀದಿ ಬದಿ ವ್ಯಾಪಾರಿಗಳನ್ನು ಬಿಡುಗಡೆಗೊಳಿಸಿದರು. ಪ್ರತಿಭಟನೆಯಲ್ಲಿ ಅಂದಪ್ಪ ಕೊಳೂರ, ಬೆಂಗಳೂರು ನಗರಾಧ್ಯಕ್ಷೆ ಶಿವಮ್ಮ, ಚನ್ನರಾಯಪಟ್ಟಣದ ಪ್ರೇಮ, ಮೈಸೂರು ಜಿಲ್ಲೆಯ ನಾಗರಾಜ್, ಪ್ರಜಾ ಪರಿವರ್ತನಾ ವೇದಿಕೆಯ ಗೋವಿಂದರಾಜು ಹೆಸರಘಟ್ಟ, ಶಿವರುದ್ರಪ್ಪ ಇನ್ನು ಮುಂತಾದವರಿದ್ದರು.

 

TAGGED:bengaluruBharath BandKuruburu Shanthakumarpolice departmentಕುರುಬೂರು ಶಾಂತಕುಮಾರ್ಪೊಲೀಸ್ ಇಲಾಖೆಬೆಂಗಳೂರುಭಾರತ್ ಬಂದ್ರಾಜ್ಯ ಸರ್ಕಾರರೈತರು
Share This Article
Facebook Whatsapp Whatsapp Telegram

Cinema Updates

ranjani raghavan
ಗೆಳೆಯನ ಜೊತೆ ರಂಜನಿ ರಾಘವನ್ ಲಾಂಗ್ ಡ್ರೈವ್
27 minutes ago
hamsalekha
ಕನ್ನಡ ಭಾಷೆ ಬಗ್ಗೆ ವಿವಾದಾತ್ಮಕ ಹೇಳಿಕೆ; ನೀವು ಕ್ಷಮೆ ಕೇಳಿದ್ರೆ ಕ್ಷಮಾ ಹಾಸನ್ ಆಗ್ತೀರಿ: ಹಂಸಲೇಖ
13 hours ago
Ramya Kamal Hassan 2
ಕಮಲ್‌ ಹಾಸನ್‌ ಪರ ಬ್ಯಾಟ್‌ ಬೀಸಿದ ರಮ್ಯಾ – ಸಿನಿಮಾ ಬಹಿಷ್ಕರಿಸುವುದು ಸ್ವಲ್ಪ ಜಾಸ್ತಿ ಆಯ್ತು ಅಲ್ಲವೇ? ಎಂದ ನಟಿ
16 hours ago
Kamal Haasan Karave Protest Film Chamber
ನಟ ಕಮಲ್ ಹಾಸನ್ ಕ್ಷಮೆಯಾಚನೆಗೆ ಆಗ್ರಹ – ಫಿಲಂ ಚೇಂಬರ್‌ಗೆ ಕರವೇ ಮುತ್ತಿಗೆ
17 hours ago

You Might Also Like

mangaluru Rain Death
Dakshina Kannada

ದ.ಕನ್ನಡ | ಭಾರೀ ಮಳೆಗೆ ಗುಡ್ಡ, ಮನೆ ಕುಸಿತ – ಬಾಲಕಿ ಸೇರಿ ಇಬ್ಬರು ಸಾವು

Public TV
By Public TV
11 minutes ago
Abdul Rahim Murder
Crime

ಅಬ್ದುಲ್‌ ರಹಿಮಾನ್‌ ಹತ್ಯೆ ಕೇಸ್‌ | ಮತ್ತಿಬ್ಬರು ಆರೋಪಿಗಳು ಅರೆಸ್ಟ್‌ – ಹತ್ಯೆಗೆ ಕಾರಣವೇ ಇನ್ನೂ ಸಸ್ಪೆನ್ಸ್!‌

Public TV
By Public TV
1 hour ago
Punjab Firecracker Factory 2
Crime

ಪಂಜಾಬ್‌ನಲ್ಲಿ ಪಟಾಕಿ ಕಾರ್ಖಾನೆಯಲ್ಲಿ ಭಾರೀ ಸ್ಫೋಟ – ಐವರು ಸಾವು, 25 ಮಂದಿಗೆ ಗಾಯ

Public TV
By Public TV
1 hour ago
Bengaluru
Bengaluru City

ಸಲೂನ್‌ಗೆ ನುಗ್ಗಿ ಲೇಡಿ ರೌಡಿ ಗ್ಯಾಂಗ್‌ನಿಂದ ದಾಂಧಲೆ – ಮೂವರು ಅರೆಸ್ಟ್‌

Public TV
By Public TV
2 hours ago
Pakistan Spy 2
Crime

ಬೇಹುಗಾರಿಕೆಗಾಗಿ ಭಾರತೀಯ ಮೊಬೈಲ್‌ ಸಿಮ್‌ ಕಾರ್ಡ್‌ ಪೂರೈಸುತ್ತಿದ್ದ ಪಾಕ್‌ ಸ್ಪೈ ಅರೆಸ್ಟ್‌

Public TV
By Public TV
2 hours ago
KRS Dam
Districts

ನಾಲ್ಕೇ ದಿನಕ್ಕೆ KRSನಲ್ಲಿ 11 ಅಡಿ ನೀರು ಹೆಚ್ಚಳ – ಹಲವು ವರ್ಷಗಳ ಬಳಿಕ ಮೇ ತಿಂಗಳಲ್ಲೇ 100 ಅಡಿ ಭರ್ತಿ!

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?