ನವದೆಹಲಿ: ಕೇಂದ್ರದ ಕಾರ್ಮಿಕ-ರೈತ ವಿರೋಧಿ ಕ್ರಮಗಳು ಹಾಗೂ ಕಾರ್ಪೊರೇಟ್ ಪರ ನಿಲುವು ಖಂಡಿಸಿ ನಾಳೆ (ಬುಧವಾರ) ಭಾರತ್ ಬಂದ್ಗೆ (Bharat Bandh) 10ಕ್ಕೂ ಹೆಚ್ಚು ಸಂಘಟನೆಗಳು ಕರೆ ನೀಡಿವೆ.
ಬ್ಯಾಂಕಿಂಗ್, ಇನ್ಶುರೆನ್ಸ್, ಪೋಸ್ಟ್, ಗಣಿ, ಹೆದ್ದಾರಿ ಕಾರ್ಮಿಕರು ಸೇರಿದಂತೆ 25 ಕೋಟಿಗೂ ಅಧಿಕ ಸಂಘಟಿತ ಹಾಗೂ ಅಸಂಘಟಿತ ಕಾರ್ಮಿಕರು ಬಂದ್ನಲ್ಲಿ ಭಾಗಿಯಾಗುವ ಸಾಧ್ಯತೆ ಇದೆ. ಆದರೆ, ರಾಜ್ಯಕ್ಕೆ ಭಾರತ್ ಬಂದ್ ಬಿಸಿ ತಟ್ಟುವ ಸಾಧ್ಯತೆ ಕಡಿಮೆ ಇದೆ. ರಾಜ್ಯದಲ್ಲಿ ಶಾಲಾ ಕಾಲೇಜುಗಳು, ಮೆಟ್ರೋ, ಬಸ್ ಸಂಚಾರ, ಖಾಸಗಿ ಕಂಪನಿಗಳು ಇರಲಿವೆ. ಆದರೆ, ಬ್ಯಾಂಕಿಂಗ್ ಸೇವೆಯಲ್ಲಿ ಸ್ವಲ್ಪ ವ್ಯತ್ಯಯವಾಗುವ ಸಾಧ್ಯತೆ ಇದೆ.
ಕಳೆದ ವರ್ಷ ಕಾರ್ಮಿಕ ಸಚಿವ ಮನ್ಸುಖ್ ಮಾಂಡವಿಯಾ ಅವರಿಗೆ ವಿವರವಾದ 17 ಅಂಶಗಳ ಬೇಡಿಕೆ ಪಟ್ಟಿಯನ್ನು ಸಲ್ಲಿಸಿದ್ದರೂ, ಸರ್ಕಾರದಿಂದ ಯಾವುದೇ ಪ್ರತಿಕ್ರಿಯೆ ಕಂಡುಬಂದಿಲ್ಲ ಎಂದು ಒಕ್ಕೂಟಗಳು ಹೇಳುತ್ತವೆ. ಸರ್ಕಾರ ದೇಶದ ಕಲ್ಯಾಣ ರಾಜ್ಯ ಸ್ಥಾನಮಾನವನ್ನು ಕೈಬಿಟ್ಟಿದೆ. ಅದು ವಿದೇಶಿ ಮತ್ತು ಭಾರತೀಯ ಕಾರ್ಪೊರೇಟ್ಗಳ ಹಿತಾಸಕ್ತಿಗಾಗಿ ಕೆಲಸ ಮಾಡುತ್ತಿದೆ. ಇದು ತೀವ್ರವಾಗಿ ಅನುಸರಿಸುತ್ತಿರುವ ನೀತಿಗಳಿಂದ ಸ್ಪಷ್ಟವಾಗಿದೆ ಎಂದು ಯೂನಿಯನ್ ಫೋರಂ ಹೇಳಿಕೆಯಲ್ಲಿ ತಿಳಿಸಿದೆ.
ಕರ್ನಾಟಕದಲ್ಲಿ ಭಾರತ ಬಂದ್ ಎಫೆಕ್ಟ್ ಇಲ್ಲದಿದ್ದರೂ ಉತ್ತರ ಭಾರತದ ಹಲವೆಡೆ ಬಂದ್ ಆಗುವ ಸಾಧ್ಯತೆ ಇದೆ. ಇನ್ನು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ನಾಳೆ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ ನಡೆಯಲಿದೆ.
ಏನಿರುತ್ತೆ? ಏನಿರಲ್ಲ?
– ನಾಳೆ ಕೈಗಾರಿಕೆಗಳು ಬಹುತೇಕ ಬಂದ್ .
– ಕೆಲ ಬ್ಯಾಂಕ್ ಗಳಲ್ಲಿ ಸೇವೆ ವ್ಯತ್ಯಯ ಆಗಬಹುದು.
– ಎಲ್ಲಾ ಬ್ಯಾಂಕ್ ಗಳು ಕ್ಲೋಸ್ ಇರಲ್ಲ.
– ಬ್ಯಾಂಕ್ ಒಟ್ಟು 8 ಯೂನಿಯನ್ ಇದೆ, ಅದ್ರಲ್ಲಿ 3 ಟ್ರೇಡ್ ಯೂನಿಯನ್ ಬೆಂಬಲ ಇದೆ.
– ವಿಮೆ ಕಚೇರಿ ಬಂದ್ ಸಾಧ್ಯತೆ.
– ಬಾಷ್, ಟೊಯೋಟಾ ಸೇರಿದಂತೆ ಪ್ರಮುಖ ಕೈಗಾರಿಕೆಗಳು ಬಂದ್.
– ಪೋಸ್ಟ್ ಆಫೀಸ್ ಇರಲಿದೆ.