– ಬಿಜೆಪಿ ಸರ್ಕಾರಕ್ಕೆ ಯಾರ ಆಹಾರ ಪದ್ಧತಿಯ ಬಗ್ಗೆಯೂ ಅಸಮಾಧಾನ ಇಲ್ಲ
ಗಾಂಧಿನಗರ: ಬೀದಿಬದಿ ಮಾಂಸಾಹಾರ ಮಾರಾಟಕ್ಕೆ ನಿರ್ಬಂಧವಿದೆ. ಆದರೆ ಯಾರ ಆಹಾರ ಪದ್ಧತಿಯ ಬಗ್ಗೆಯೂ ನಮ್ಮ ಬಿಜೆಪಿ ಸರ್ಕಾರಕ್ಕೆ ಅಸಮಧಾನವಾಗಲೀ, ತೊಂದರೆಯಾಗಲೀ ಇಲ್ಲ ಎಂದು ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಹೇಳಿದ್ದಾರೆ.
ಆನಂದ್ ಜಿಲ್ಲೆಯ ಬಂಧಾನಿ ಗ್ರಾಮದಲ್ಲಿ ಬಿಜೆಪಿಯ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದರು. ಈ ವೇಳೆ ಮಾತನಾಡಿದ ಅವರು, ಒಂದಷ್ಟು ಜನರು ಸಸ್ಯಾಹಾರ ತಿನ್ನುತ್ತಾರೆ. ಇನ್ನೊಂದಷ್ಟು ಮಂದಿ ಮಾಂಸಾಹಾರ ಸೇವನೆ ಮಾಡುತ್ತಾರೆ. ಆದರೆ ಯಾರ ಆಹಾರ ಪದ್ಧತಿಯ ಬಗ್ಗೆಯೂ ನಮ್ಮ ಬಿಜೆಪಿ ಸರ್ಕಾರಕ್ಕೆ ಅಸಮಧಾನವಾಗಲೀ, ತೊಂದರೆಯಾಗಲೀ ಇಲ್ಲ. ಆದರೆ ಕೆಲವು ಸ್ಥಳಗಳಲ್ಲಿ ಇರುವ ಆಹಾರ ಮಾರಾಟ ಅಂಗಡಿ, ಕೈಗಾಡಿಗಳನ್ನು ತೆಗೆಯಬೇಕೆಂದು ಬೇಡಿಕೆ ಇದೆ. ಹೀಗಾಗಿ ಈ ಆದೇಶ ಜಾರಿಗೆ ತಂದಿದ್ದೇವೆ ಎಂದು ಹೇಳಿದ್ದಾರೆ.
ರಸ್ತೆ ಬದಿಯಲ್ಲಿ ಗಾಡಿಗಳಲ್ಲಿ ಆಹಾರ ತಯಾರಿಸಿ ಮಾರಾಟ ಮಾಡುವ ಅನೇಕರು ಸ್ವಚ್ಛತೆ ನಿರ್ವಹಣೆ ಮಾಡದಿರುವುದು ನಮಗೆ ಆತಂಕ ತಂದಿದೆ. ವಾಹನ ಮತ್ತು ಜನರ ಸಂಚಾರಕ್ಕೆ ಅನಾನೂಕೂಲ ಮಾಡುವ ಕೈಗಾಡಿಗಳನ್ನು ನಿರ್ಬಂಧಿಸುವ ನಿರ್ಧಾರ ತೆಗೆದುಕೊಂಡಿದ್ದು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಥ್ರೋಬಾಲ್ ಆಡಿ ಗಮನಸೆಳೆದ ನಟಿ ರೋಜಾ
ಬಿಜೆಪಿ ಅಧಿಕಾರದಲ್ಲಿರುವ ಅಹ್ಮದಾಬಾದ್ ನಗರಾಡಳಿತ ಹೀಗೊಂದು ರೂಲ್ಸ್ ಮಾಡಿದೆ. ರಸ್ತೆ ಬದಿಯಲ್ಲಿ ಮತ್ತು ಶಾಲೆ, ಧಾರ್ಮಿಕ ಸ್ಥಳಗಳಿಂದ 100 ಮೀಟರ್ ಅಂತರದಲ್ಲಿ ಮಾಂಸಾಹಾರ ಮಾರಾಟ ಮಾಡುವಂತಿಲ್ಲ ಎಂದು ಹೇಳಿದೆ. ಅದರ ಬೆನ್ನಲ್ಲೇ ಮುಖ್ಯಮಂತ್ರಿ ಅದನ್ನು ಈ ಹೇಳಿಕೆಗಳ ಮೂಲಕ ಸಮರ್ಥಿಸಿಕೊಂಡಿದ್ದಾರೆ. ಬರೀ ಅಹ್ಮದಾಬಾದ್ ಅಷ್ಟೇ ಅಲ್ಲ, ವಡೋದರ, ರಾಜಕೋಟ್, ಭಾವ್ನಗರಗಳಲ್ಲೂ ಸ್ಥಳೀಯ ರಾಜಕೀಯ ಮುಖಂಡರು ಇದೇ ಸೂಚನೆ ನೀಡಲಾಗಿದೆ. ಇದನ್ನೂ ಓದಿ: ಕೇರಳದಲ್ಲಿ ಭಾರೀ ಮಳೆ – 8 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್