Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೀದರ್ | ಬರೋಬ್ಬರಿ 13,295 ಎಕರೆ ಆಸ್ತಿ ವಕ್ಫ್ ಪಾಲು!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bidar | ಬೀದರ್ | ಬರೋಬ್ಬರಿ 13,295 ಎಕರೆ ಆಸ್ತಿ ವಕ್ಫ್ ಪಾಲು!

Bidar

ಬೀದರ್ | ಬರೋಬ್ಬರಿ 13,295 ಎಕರೆ ಆಸ್ತಿ ವಕ್ಫ್ ಪಾಲು!

Public TV
Last updated: November 15, 2024 9:37 am
Public TV
Share
3 Min Read
Bidar Waqf
SHARE

– 217 ಎಕರೆ ಸುಪರ್ದಿಗೆ ಪಡೆದು ಬೇಲಿ

ಬೀದರ್: ವಕ್ಫ್ ವಕ್ರದೃಷ್ಟಿ ಜಿಲ್ಲೆ ಜಿಲ್ಲೆಗೂ ಹಬ್ಬಿದ್ದು, ಬೀದರ್‌ನ ಬರೋಬ್ಬರಿ 13,295 ಎಕರೆ ಆಸ್ತಿ ವಕ್ಫ್ ಪಾಲಾಗಿದೆ.

ರೈತರ ಜಮೀನು, ಮಠ, ದೇವಸ್ಥಾನ, ಶಾಲೆ, ಆಸ್ಪತ್ರೆ ಹೀಗೆ ಎಲ್ಲವೂ ವಕ್ಫ್ ಆಸ್ತಿಯಾಗುತ್ತಿದೆ. ಈಗ ಬಸವಣ್ಣನ ಕರ್ಮಭೂಮಿ ಬೀದರ್‌ನಲ್ಲಿ ಬರೋಬ್ಬರಿ 13,295 ಎಕರೆ ಜಾಗ ವಕ್ಫ್‌ಗೆ  ಸೇರಿದೆ ಎಂಬ ಸ್ಫೋಟಕ ಮಾಹಿತಿ ಬಹಿರಂಗವಾಗಿದೆ.

Bidar Waqf 3

ಒಂದು ಕಡೆ ತಲಾ ತಲಾಂತರಗಳಿಂದ ಕೃಷಿ ಮಾಡುತ್ತಿದ್ದ ಸಾವಿರಾರು ಎಕರೆ ರೈತರ ಜಮೀನು ವಕ್ಫ್ ಆಗಿದೆ. ಇನ್ನೊಂದು ಕಡೆ 13,295 ಎಕರೆ ಜಮೀನು ವಕ್ಫ್ ಪಾಲು ಎಂದು ವಕ್ಫ್ ಬೋರ್ಡ್ ಅಧಿಕೃತ ದಾಖಲೆಯನ್ನು ನೀಡಿದೆ.

ಐತಿಹಾಸಿಕ ಸ್ಮಾರಕಗಳು, ಪ್ರವಾಸಿ ತಾಣಗಳು, ಗ್ರಾಮಕ್ಕೆ ಗ್ರಾಮ, ಸರ್ಕಾರಿ ಆಸ್ಪತ್ರೆ, ಸಹಸ್ರಾರು ರೈತರ ಫಲವತ್ತಾದ ಕೃಷಿ ಭೂಮಿ ಈಗ ವಕ್ಫ್ ಆಸ್ತಿಯಾಗಿ ಪಹಣಿಯಲ್ಲಿ ಬದಲಾಗಿದೆ. ವಕ್ಫ್ ಬೋರ್ಡ್ ಅಧಿಕಾರಿಗಳು ನೀಡಿರುವ ಮಾಹಿತಿ ಪ್ರಕಾರ, ಜಿಲ್ಲೆಯಲ್ಲಿ ಒಟ್ಟು 13,295 ಎಕರೆ ಭೂಮಿ ವಕ್ಫ್ ಆಸ್ತಿಯಾಗಿದೆ. ಜಿಲ್ಲೆಯಲ್ಲಿ 2,747 ವಕ್ಫ್ ಸಂಸ್ಥೆಗಳು ಹಾಗೂ 3,822 ವಕ್ಫ್ ಆಸ್ತಿಗಳ ಸಂಖ್ಯೆ ಸೇರಿ ಒಟ್ಟು 13,295 ಎಕರೆ ಜಮೀನು ವಕ್ಫ್ ಆಸ್ತಿಯಾಗಿದೆ. ಈಗಾಗಲೇ ಜಿಲ್ಲೆಯಲ್ಲಿ 217 ಎಕರೆ ವಕ್ಫ್ ಬೋರ್ಡ್ ತನ್ನ ಸುಪರ್ದಿಗೆ ತೆಗೆದುಕೊಂಡು ಬೇಲಿ ಹಾಕಿದ್ದು, ಜಿಲ್ಲೆಯ ಪ್ರಮುಖ ಆಸ್ತಿಗಳ ಮೇಲೆ ವಕ್ಫ್ ಕೆಂಗಣ್ಣು ಹಾಕಿದೆ.ಇದನ್ನೂ ಓದಿ: ಇಂದಿನಿಂದ ಶಬರಿಮಲೆ ಅಯ್ಯಪ್ಪ ಸ್ವಾಮಿ ಮಂಡಲ ಪೂಜೆ, ದರ್ಶನ ಆರಂಭ

ಬೀದರ್ ತಾಲೂಕಿನಲ್ಲಿ 5,232 ಎಕರೆ, ಔರಾದ್‌ನಲ್ಲಿ 331 ಎಕರೆ, ಹುಮ್ನಾಬಾದ್‌ನಲ್ಲಿ 2,798 ಎಕರೆ, ಬಸವಕಲ್ಯಾಣದಲ್ಲಿ 3,292 ಎಕರೆ ಹಾಗೂ ಭಾಲ್ಕಿಯಲ್ಲಿ 1,635 ಎಕರೆ ಜಮೀನು ವಕ್ಫ್ ಆಸ್ತಿ ಇದೆ ಎಂದು ವಕ್ಫ ಮಂಡಳಿ ಜಿಲ್ಲಾ ಕಚೇರಿಯ ಸರ್ಕಾರಿ ದಾಖಲೆಯಲ್ಲಿ ನಮೂದಿಸಿದೆ. ನಾವು 50 ವರ್ಷದಿಂದ ಉಳುಮೆ ಮಾಡುತ್ತಿದ್ದ ಜಮೀನು ಏಕಾಏಕಿ ವಕ್ಫ್ ಬೋರ್ಡ್ ಎಂದು ಪಹಣಿಯಲ್ಲಿ ಬದಲಾಗಿದೆ. ಇಡೀ ಊರಿಗೇ ಊರು, ಸ್ಮಾರಕಗಳು, ರೈತರ ಜಮೀನುಗಳು, ಸರ್ಕಾರಿ ಜಾಗಗಳು, ಮಠ, ಮಂದಿರಗಳು ವಕ್ಫ್‌ಗೆ ಸೆರ್ಪಡೆಯಾಗಿವೆ. ಶೀಘ್ರವೇ ವಕ್ಫ್ ಹೋಗದೇ ಇದ್ದರೆ ಸರ್ಕಾರದ ವಿರುದ್ಧ ನಾವು ಹೋರಾಟಕ್ಕೆ ಇಳಿಯುತ್ತೇವೆ ಎಂದು ಸರ್ಕಾರಕ್ಕೆ ರೈತರು ಎಚ್ಚರಿಕೆ ನೀಡಿದ್ದಾರೆ.

Bidar Waqf 1

ಬೀದರ್ ತಾಲೂಕಿನ ಚಟ್ನಳ್ಳಿ ಗ್ರಾಮವೊಂದರಲ್ಲೇ 200 ರೈತರ 960 ಎಕರೆ ಭೂಮಿ 2013ರಲ್ಲಿ ವಕ್ಫ್ ಬೋರ್ಡ್ ಎಂದು ಪಹಣಿಯಲ್ಲಿ ಬದಲಾಗಿದೆ. 50 ವರ್ಷದಿಂದ ಈ ಗ್ರಾಮದ ರೈತರು ಇದೇ ಜಮೀನುಗಳಲ್ಲಿ ಕೃಷಿಯನ್ನು ಮಾಡಿಕೊಂಡು ಬರುತ್ತಿದ್ದು, ಈಗಾ ಏಕಾಏಕಿ ವಕ್ಫ್‌ಗೆ  ಸೇರ್ಪಡೆಯಾಗಿದೆ. ಬೀದರ್ ತಾಲೂಕಿನ ಧರ್ಮಪೂರ ಗ್ರಾಮದಲ್ಲಿ 26 ಎಕರೆ ಜಮೀನಲ್ಲಿರುವ ಇಡೀ ಗ್ರಾಮವೇ ವಕ್ಫ್‌ಗೆ  ಸೇರ್ಪಡೆಯಾಗಿದೆ. ಇದರಲ್ಲಿ ಸರ್ಕಾರಿ ಶಾಲೆಗಳು, ಅಂಗನವಾಡಿ, ಮಠ, ಮಂದಿಗಳು ಇದ್ದು, ಇಡೀ ಗ್ರಾಮದ ಜನರು ಕಂಗಾಲಾಗಿದ್ದಾರೆ. ಔರಾದ್ ತಾಲೂಕಿನ ತೋರಣ ಗ್ರಾಮದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರ ಕೂಡಾ ಈಗಾ ವಕ್ಫ್‌ಗೆ ಸೇರಿದೆ.

ಐತಿಹಾಸಿಕ ಬೀದರ್ ಕೋಟೆಯ ಸೋಲಾ ಕಂಬ, ಅಷ್ಟೂರಿನ ಐತಿಹಾಸಿಕ 14 ಗುಂಬಜ್‌ಗಳು, ಬರೀದ್ ಶಾಯಿ ಗುಂಬಜ್, ಶಬಲ್ ಬರೀದ್ ಗುಂಬಜ್‌ಗಳು ವಕ್ಫ್‌ಗೆ  ಸೇರ್ಪಡೆಯಾಗಿವೆ. 1974ರಲ್ಲಿ ಗೆಜೆಟ್ ನೋಟಿಫಿಕೇಷನ್ ಬಳಿಕ ಐತಿಹಾಸಿಕ ಸ್ಮಾರಕಗಳನ್ನು ವಕ್ಫ್‌ಗೆ ಸೇರ್ಪಡೆ ಮಾಡಲಾಗಿದೆ. ಪುರಾತತ್ವ ಇಲಾಖೆಯ ಅಡಿಯಲ್ಲಿರುವ ಈ ಆಸ್ತಿಗಳು ಏಕಾಏಕಿ ವಕ್ಫ್‌ಗೆ ಹೇಗೆ ಸೆರ್ಪಡೆಯಾಗಿವೆ ಎಂದು ಜನರು ಪ್ರಶ್ನೆ ಮಾಡುತ್ತಿದ್ದಾರೆ.

Bidar Waqf 2

ರೈತರ ಸಾವಿರಾರು ಎಕರೆ ಜಮೀನು, ಐತಿಹಾಸಿಕ ಸ್ಮಾರಕಗಳು, ಸರ್ಕಾರಿ ಆಸ್ಪತ್ರೆಗಳು, ಇಡೀ ಗ್ರಾಮವನ್ನೇ ವಕ್ಫ್‌ಗೆ ಸೇರಿಸಿದ್ದು, ಜನರನ್ನು ರೊಚ್ಚಿಗೇಳುವಂತೆ ಮಾಡಿದೆ. ವಕ್ಫ್ ಕಾಯಿದೆಯನ್ನು ಬದಲಾಯಿಸಿದರೆ ಒಳ್ಳೆಯದು. ಇಲ್ಲವಾದರೆ ರೈತರ ಪರವಾಗಿ ಬಿಜೆಪಿ ಶಾಸಕ ಶೈಲೇಂದ್ರ ಬೆಲ್ದಾಳೆ ಮಾತನಾಡಿ, ನಾನು ಕ್ಷೇತ್ರ ಶಾಸಕನಾಗಿ ಬೆಂಗಳೂರು ಚಲೋ ಮಾಡುತ್ತೇನೆ ಎಂದು ಸರ್ಕಾರ ಹಾಗೂ ಸಚಿವರ ವಿರುದ್ಧ ಶಾಸಕರು ಕಿಡಿಕಾರಿದ್ದಾರೆ.ಇದನ್ನೂ ಓದಿ: ಲೆಬನಾನ್‌ ಮೇಲೆ ಇಸ್ರೇಲ್‌ ದಾಳಿ – 12 ಬಲಿ

 

TAGGED:bidarWaqf BoardWaqf Property
Share This Article
Facebook Whatsapp Whatsapp Telegram

Cinema news

Kichcha Sudeep
ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ʻರಣ ಹದ್ದುʼ ತಂದ ಸಂಕಷ್ಟ – ಅರಣ್ಯಾಧಿಕಾರಿಗೆ ದೂರು
Cinema Districts Karnataka Latest Ramanagara Top Stories TV Shows
Romanchaka song release from the movie Landlord Ritanya Vijay
ಲ್ಯಾಂಡ್‌ಲಾರ್ಡ್ ಸಿನಿಮಾದ ರೋಮಾಂಚಕ ಸಾಂಗ್ ರಿಲೀಸ್
Cinema Latest Sandalwood
Mallamma Bigg Boss Kannada 12
ಬಿಗ್‌ಬಾಸ್ ಮನೆಗೆ ಮತ್ತೆ ಮರಳಿದ ಮಲ್ಲಮ್ಮ – ಧ್ರುವಂತ್‌ಗೆ ಶಾಕ್
Latest Top Stories TV Shows
Bigg Boss Rashika raghu
BBK 12 | ಫಿನಾಲೆ ವಾರಕ್ಕೆ ಕೊನೆಯ ಸ್ಪರ್ಧಿಯಾಗಿ ರಘು ಎಂಟ್ರಿ – ರಾಶಿಕಾ ಔಟ್
Cinema Districts Karnataka Latest Main Post TV Shows

You Might Also Like

SIDDARAMAIAH DK SHIVAKUMAR MALLIKARJUN KHARGE
Bengaluru City

ಸಿಎಂ-ಡಿಸಿಎಂ ನಡ್ವೆ ಕಾಂಪ್ರಮೈಸ್ ಥಿಯರಿ – ʻಕೈʼ ಹೈಕಮಾಂಡ್ ಧರ್ಮಸಂಕಟದಿಂದ ಪಾರಾಗುತ್ತಾ..?

Public TV
By Public TV
9 minutes ago
Trump Modi
Latest

ನಾವು ನಿಜವಾದ ಸ್ನೇಹಿತರು, ಮುಂದಿನ ವರ್ಷದ ಒಳಗಡೆ ಭಾರತಕ್ಕೆ ಬರಲಿದ್ದಾರೆ ಟ್ರಂಪ್‌: ಅಮೆರಿಕ

Public TV
By Public TV
16 minutes ago
DK Shivakumar 11
Bengaluru City

ಸಂಕ್ರಾಂತಿ ಮಾರನೇ ದಿನವೇ ಡಿಕೆಶಿ ಡೆಲ್ಲಿ ಟೂರ್ – ರಾಹುಲ್ ಭೇಟಿಗೆ ಸಮಯ ಕೇಳಿದ ಡಿಕೆಶಿ

Public TV
By Public TV
17 minutes ago
Ganga River
Latest

ಮಕರ ಸಂಕ್ರಾಂತಿ 2026: ಗಂಗೆ ಭಗಿರಥನಿಗೊಲಿದ ದಿನ – ಪವಿತ್ರ ಸ್ನಾನದಿಂದ ಕೋಟಿ ಪುಣ್ಯ!

Public TV
By Public TV
33 minutes ago
Artist creates a portrait of Prahlad Joshi using grains 1
Bagalkot

ಧವಸ-ಧಾನ್ಯ ಬಳಸಿ ಕಲಾವಿದನಿಂದ ಪ್ರಹ್ಲಾದ್‌ ಜೋಶಿ ಚಿತ್ರ ರಚನೆ

Public TV
By Public TV
1 hour ago
Bheemanna Khandre Eshwar Khandre
Bidar

ನಮ್ಮ ತಂದೆ ಆರೋಗ್ಯ ಸ್ಥಿತಿ ಗಂಭೀರವಾಗಿದೆ, ವೈದ್ಯರು ಸತತವಾಗಿ ಚಿಕಿತ್ಸೆ ನೀಡುತ್ತಿದ್ದಾರೆ: ಈಶ್ವರ್ ಖಂಡ್ರೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?