Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಹಿಳಾ ಸಮಾನತೆ ಸಾರಿದ ನೆಲದಲ್ಲಿ ಪುರುಷರದ್ದೇ ದರ್ಬಾರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bidar | ಮಹಿಳಾ ಸಮಾನತೆ ಸಾರಿದ ನೆಲದಲ್ಲಿ ಪುರುಷರದ್ದೇ ದರ್ಬಾರ್

Bidar

ಮಹಿಳಾ ಸಮಾನತೆ ಸಾರಿದ ನೆಲದಲ್ಲಿ ಪುರುಷರದ್ದೇ ದರ್ಬಾರ್

Public TV
Last updated: March 30, 2023 12:48 pm
Public TV
Share
2 Min Read
Bidar Election
SHARE

ಬೀದರ್: ವೈಚಾರಿಕ ಕ್ರಾಂತಿಯ ಮೂಲಕ ಮಹಿಳೆಯರಿಗೆ ಸಮಾನತೆಯ ಸಂದೇಶ ಸಾರಲು ನೆಲೆ ಒದಗಿಸಿದ ಗಡಿ ಜಿಲ್ಲೆ ಬೀದರ್‌ನಲ್ಲೇ (Bidar) ಇಂದಿಗೂ ಸಮಾನತೆ ಆಶಯದ ಪರಿಕಲ್ಪನೆ ಈಡೇರಲು ಸಾಧ್ಯವಾಗಿಲ್ಲ.

ಸ್ವತಂತ್ರ್ಯ ಭಾರತದ ಆರಂಭದ ಮೂರು ಚುನಾವಣೆ (Election) ಹೊರುಪಡಿಸಿದರೆ ಯಾವ ಮಹಿಳಾ ಅಭ್ಯರ್ಥಿಯೂ ಸಹ ಕಲ್ಯಾಣ ನಾಡಿನಿಂದ ಚುನಾಯಿತರಾಗಿಲ್ಲ. ಟಿಕೆಟ್ ಹಂಚಿಕೆಯಲ್ಲೂ ಮಹಿಳಾ ಪ್ರಾತಿನಿಧ್ಯದ ಕೊರಗು ಅಂಟಿಕೊಂಡೇ ಬಂದಿದೆ.

ಮಹಿಳೆಯರಿಗೆ ಸಮಾನ ಸ್ಥಾನಮಾನದ ಕುರಿತು ಪ್ರತಿಪಾದಿಸಿದ ಬಸವ ಭೂಮಿಯಲ್ಲಿಯೇ ಇಂದಿಗೂ ಸ್ತ್ರೀಯರ ಸ್ಥಿತಿಗತಿಯಲ್ಲಿ ಯಾವುದೇ ಬದಲಾವಣೆ ಕಾಣಲು ಸಾಧ್ಯವಾಗಿಲ್ಲ. ಎರಡು ರಾಜ್ಯಗಳಿಗೆ ಹೊಂದಿಕೊಂಡಿರುವ ಗಡಿ ಜಿಲ್ಲೆಯ 6 ವಿಧಾನಸಭೆ ಕ್ಷೇತ್ರಗಳಿಂದ ಇಲ್ಲಿಯವರೆಗೆ ಕೇವಲ ಇಬ್ಬರು ಮಹಿಳೆಯರು ಮಾತ್ರ ಗೆದ್ದಿದ್ದಾರೆ. ಇದನ್ನೂ ಓದಿ: ಮೊಹಮ್ಮದ್ ನಲಪಾಡ್ ವಿರುದ್ಧ ದೂರು ದಾಖಲು

Congress 1

ಬಸವಕಲ್ಯಾಣ (Basavakalyana) ಕ್ಷೇತ್ರದಿಂದ 1957 ಹಾಗೂ 1962ರಲ್ಲಿ ಅನ್ನಪೂರ್ಣಬಾಯಿ ಮತ್ತು ಹುಲಸೂರ (Hulasuru) ಕ್ಷೇತ್ರದಿಂದ (ಕ್ಷೇತ್ರ ಪುನರ್ ವಿಂಗಡನೆ ಬಳಿಕ ಕೈಬಿಡಲಾಗಿದೆ) 1985ರಲ್ಲಿ ಶಿವಕಾಂತಾ ಚತುರೆ ಗೆಲುವು ಸಾಧಿಸಿದ್ದರು. ಜಿಲ್ಲೆಯಲ್ಲಿ 1989ರಿಂದ ಈಚೆಗೆ ಒಬ್ಬ ಮಹಿಳಾ ಅಭ್ಯರ್ಥಿಯೂ ವಿಧಾನಸಭೆ ಮತ್ತು ಇಲ್ಲಿಯವರೆಗೆ ಲೋಕಸಭೆಗೆ ಆಯ್ಕೆಯಾಗಿಲ್ಲ.

ಒಂದೆಡೆ ಕಣ್ಣಕ್ಕಿಳಿದ ಒಂದೆರೆಡು ಮಹಿಳಾ ಅಭ್ಯರ್ಥಿಗಳಿಗೆ ಮತದಾರರಿಂದ ಬೆಂಬಲವಿಲ್ಲ. ಮತ್ತೊಂದೆಡೆ ಅಭ್ಯರ್ಥಿಗಳು ಸಮಮರ್ಥರಾಗಿದ್ದರೂ ರಾಜಕೀಯ ಪಕ್ಷಗಳು ಅವರಿಗೆ ಟಿಕೆಟ್ ನೀಡುವಲ್ಲಿ ಆಸಕ್ತಿ ತೋರಿಸುತ್ತಿಲ್ಲ.

bjp flag

ಪರಭಾವಗೊಂಡ ಮಹಿಳಾ ಅಭ್ಯರ್ಥಿಗಳು
ಬೀದರ ವಿಧಾನಸಭೆ ಕ್ಷೇತ್ರದಿಂದ 1989ರಲ್ಲಿ ಮಸ್ತಾನಭಿ ಮೌಲನಭಿ ಪಕ್ಷೇತರ ಅಭ್ಯರ್ಥಿಯಾಗಿ, 2004ರಲ್ಲಿ ರಫತ್ ಮತೀನ್ ಕಾಂಗ್ರೆಸ್ (Congress) ಅಭ್ಯರ್ಥಿಯಾಗಿ, 2008ರಲ್ಲಿ ಜೆಡಿಎಸ್‍ನಿಂದ (JDS) ರಾಜಶ್ರೀ ಸ್ವಾಮಿ, ಭಾಲ್ಕಿ ಕ್ಷೇತ್ರದಿಂದ 1994ರಲ್ಲಿ ಬಿಎಎಸ್‍ಪಿಯಿಂದ ಶೋಭಾ ವಿಜಯ, ಹುಮನಾಬಾದ್ ಕ್ಷೇತ್ರದಿಂದ 2004ರಲ್ಲಿ ಶೋಭಾರ ರಾಣಿ, ಮೀಸಲು ಕ್ಷೇತ್ರವಾಗಿ ಹುಲಸೂರನಿಂದ 1962ರಲ್ಲಿ ಕಾಂಗ್ರೆಸ್‍ನಿಂದ ಸುಭದ್ರಾಬಾಯಿ, 1989ರಲ್ಲಿ ಆರ್‌ಪಿಐನಿಂದ ಗಂಗಮ್ಮ ಫುಲೆ, 1999ರಲ್ಲಿ ಪಕ್ಷೇತರರಾಗಿ ಎಚ್.ಮಹಾದೇವಿ, 2004ರಲ್ಲಿ ಪಕ್ಷೇತರರಾಗಿ ಶೋಭಾಬಾಯಿ ಬಿಜಾಪೂರೆ ಮತ್ತು ಬಸವಕಲ್ಯಾಣ ಕ್ಷೇತ್ರದಿಂದ 2008ರಲ್ಲಿ ಭಗಿರತಿ ಶಿವರಾಜ ಪಕ್ಷೇತರರಾಗಿ, 20013ರಲ್ಲಿ ಬಸವಕಲ್ಯಾಣದಿಂದ ಮಲ್ಲಮ್ಮ ಅಟ್ಟೂರ ಕೆಜೆಪಿಯಿಂದ (KJP) ಹಾಗೂ ಶಾಸಕ ನಾರಾಯಣರಾವ್ ಅಕಾಲಿಕ ನಿಧನದಿಂದ 2021 ರ ಮೇ ನಲ್ಲಿ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್‍ನಿಂದ ಪತ್ನಿ ಮಲ್ಲಮ್ಮ ಬಿ ನಾರಾಯಣರಾವ್ ಸ್ಪರ್ಧೆ ಮಾಡಿ ಸೋಲು ಕಂಡಿದ್ದರು. ಬೀದರ್ ದಕ್ಷಿಣದಿಂದ ಮೀನಾಕ್ಷಿ ಸಂಗ್ರಾಮ ಕಾಂಗ್ರೆಸ್‍ನಿಂದ ಸ್ಪರ್ಧಿಸಿದ್ದರು. ಆದರೆ, ಅಲ್ಪ ಮತಗಳನ್ನು ಪಡೆಯುವ ಮೂಲಕ ಪರಾಭವಗೊಂಡಿದ್ದರು.

JDS FLAG

ಬೀದರ್ ದಕ್ಷಿಣದಿಂದ ಮತ್ತೊಮ್ಮೆ ಕಂಠೀರವ ಸ್ಟುಡಿಯೋ ಅಧ್ಯಕ್ಷೆ ಮೀನಾಕ್ಷಿ ಸಂಗ್ರಾಮ ಹೆಸರು ಕೇಳಿ ಬಂದಿತ್ತು. ಆದರೆ ಶಾಸಕ ಅಶೋಕ ಖೇಣಿ ಕಾಂಗ್ರೆಸ್ ಸೇರ್ಪಡೆಯಿಂದ ಅದು ಸಹ ಕೈತಪ್ಪಿದೆ. ಮಹಿಳೆಯರಿಗೆ 50% ನಷ್ಟು ಪ್ರಾತಿನಿಧ್ಯ ಸಿಗಲೇಬೇಕು ಎಂಬ ಒತ್ತಡ ಹೆಚ್ಚುತ್ತಿದೆ. ಆದರೆ ರಾಜಕೀಯ ಪಕ್ಷಗಳಿಂದ ಮಹಿಳೆಯರಿಗೆ ಟಿಕೆಟ್ ಹಂಚಿಕೆಯಲ್ಲಿ ಪ್ರಾತಿನಿಧ್ಯ ಸಿಗುತ್ತಿಲ್ಲ. ಈ ಚುನಾವಣೆಯಲ್ಲಾದರೂ ಸಮಾನತೆಯ ಪರಿಕಲ್ಪನೆ ಈಡೇರುತ್ತದೆಯೇ ಕಾದು ನೋಡಬೇಕಾಗಿದೆ.

ಮನೋಭಾವ ಬದಲಾಗಲಿ
ಚುನಾವಣೆಗೆ ಸ್ಪರ್ಧಿಸಲು ಜಿಲ್ಲೆಯಲ್ಲಿ ಮಹಿಳಾ ಅಭ್ಯರ್ಥಿಗಳಿಗೆ ಕೊರತೆ ಇಲ್ಲ. ಪುರುಷ ಪ್ರಧಾನ ಪ್ರತಿನಿಧಿಗಳು ಈ ವಿಷಯದಲ್ಲಿ ಅಡ್ಡಗಾಲು ಹಾಕುತ್ತಿದ್ದಾರೆ. ಬಸವಣ್ಣನ ಸಮಾನತೆಯ ನೆಲದಲ್ಲಿ ಕೇವಲ ಇಬ್ಬರು ಮಹಿಳೆಯರು ಶಾಸಕರಾಗಿ ಆಯ್ಕೆಯಾಗಿರುವುದು ದುರ್ದೈವದ ಸಂಗತಿ. 50% ರಷ್ಟು ಮತದಾರರು ಮಹಿಳೆಯರಿದ್ದಾರೆ. ಆದರೆ ಟಿಕೆಟ್ ಕೊಡುವಲ್ಲಿ ಮಾತ್ರ ಮಹಿಳೆಯರಿಗೆ ಎಲ್ಲಾ ರಾಜಕೀಯ ಪಕ್ಷಗಳು ನಿರ್ಲಕ್ಷ ತೋರುತ್ತಿವೆ ಎಂದು ಜಿಲ್ಲೆಯ ಮಹಿಳೆಯರು ಪಕ್ಷಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ತುಮಕೂರು ಗ್ರಾಮಾಂತರ ಜೆಡಿಎಸ್ ಶಾಸಕ ಗೌರಿಶಂಕರ್ ಅನರ್ಹ

TAGGED:BasavakalyanabidarcongresselectionHulasurujdsಕಾಂಗ್ರೆಸ್ಚುನಾವಣೆಜೆಡಿಎಸ್ಬೀದರ್ಹುಲಸೂರ
Share This Article
Facebook Whatsapp Whatsapp Telegram

Cinema news

Rashmika Mandanna Christmas
ವಿದೇಶದಿಂದಲೇ ವಿಶ್ ಮಾಡಿದ ರಶ್! – ಫೋಟೋ ಕೃಪೆ ವಿಜಯ್?
Cinema Latest South cinema Top Stories
Surya Movie
`ಸೂರ್ಯ’ ಸಿನಿಮಾ ಟ್ರೈಲರ್ ರಿಲೀಸ್ : ಸಾಗರ್ ನಿರ್ದೇಶನದ ಸಿನಿಮಾ
Cinema Karnataka Latest Sandalwood Top Stories
Dhruva Sarja Prem KD Ravichandran
ಅಣ್ತಮ್ಮ ಜೋಡೆತ್ತು ಕಣೋ ಹಾಡಿನ ಜೊತೆ ಕೆಡಿ ಸಿನಿಮಾ ರಿಲೀಸ್ ಡೇಟ್ ಔಟ್‌
Cinema Latest Sandalwood Top Stories
Bigg Boss Maalu
ಬಿಗ್‌ಬಾಸ್‌ ಮನೆಗೆ ಮಾಳು ಮಡದಿ ಎಂಟ್ರಿ  –  ಅಪ್ಪನಂತೆ ಹೇರ್‌ಕಟ್‌… ಮಕ್ಕಳೊಂದಿಗೆ ತರ್ಲೆ ಮಾಡಿದ ಗಿಲ್ಲಿ
Cinema Latest Top Stories TV Shows

You Might Also Like

bengaluru park
Bengaluru City

ಹೊಸ ವರ್ಷ ಸಂಭ್ರಮಾಚರಣೆ ದಿನ ಬೆಂಗಳೂರಿನಲ್ಲಿ ಪಾರ್ಕ್‌ಗಳು ಬಂದ್‌

Public TV
By Public TV
16 minutes ago
Tipper collision Four people travelling on the same bike died on the spot Chikkaballpura
Chikkaballapur

ಒಂದೇ ಬೈಕಿನಲ್ಲಿದ್ದ ನಾಲ್ವರು ಬಲಿ – ರಾಜ್ಯ ಸರ್ಕಾರದಿಂದ 5 ಲಕ್ಷ ಪರಿಹಾರ ಘೋಷಣೆ

Public TV
By Public TV
24 minutes ago
Banakal PSI fined by Police Board for private car
Chikkamagaluru

ಖಾಸಗಿ ಕಾರಿಗೆ ಪೊಲೀಸ್ ಬೋರ್ಡ್ – ಪೊಲೀಸರಿಗೆ ದಂಡ ವಿಧಿಸಿದ ಬಣಕಲ್ ಪಿಎಸ್‌ಐ 

Public TV
By Public TV
33 minutes ago
Mandya Mining
Crime

ಮಂಡ್ಯ | ಗಣಿಗಾರಿಕೆ ಪ್ರಪಾತಕ್ಕೆ ಬಿದ್ದ ಟಿಪ್ಪರ್ – ಚಾಲಕ‌ ಸಾವು

Public TV
By Public TV
54 minutes ago
PM Rashtriya Bal Puruskar Shravan Singh
Latest

ಆಪರೇಷನ್‌ ಸಿಂಧೂರ್ ಸಮಯದಲ್ಲಿ ಸೈನ್ಯಕ್ಕೆ ನೆರವು – 10ರ ಬಾಲಕ ಶ್ರವಣ್ ಸಿಂಗ್‌ಗೆ ಪಿಎಂ ರಾಷ್ಟ್ರೀಯ ಬಾಲ ಪುರಸ್ಕಾರ

Public TV
By Public TV
55 minutes ago
NARENDRA MODI HD DEVEGOWDA
Bengaluru City

ಲೋಕಸಭೆ, ವಿಧಾನಸಭೆಗಷ್ಟೇ ಬಿಜೆಪಿ-ಜೆಡಿಎಸ್ ಮೈತ್ರಿ, ಸ್ಥಳೀಯ ಸಂಸ್ಥೆಗಳ ಚುನಾವಣೆಗಿಲ್ಲ: ಹೆಚ್‌ಡಿಡಿ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?