– ಎಸ್ಪಿ ಮನವಿಗೂ ಡೋಂಟ್ ಕೇರ್
ಬೀದರ್: ಜನರಿಗೆ ಎಷ್ಟೇ ಬುದ್ಧಿ ಹೇಳಿದರೂ ಕೇಳುವ ಸ್ಥಿತಿಯಲ್ಲಿ ಇಲ್ಲ. ಅಕೌಂಟ್ಗೆ ಜಮೆಯಾಗಿರುವ ಹಣವನ್ನು ತೆಗೆದುಕೊಳ್ಳಲು ಸಾಮಾಜಿಕ ಅಂತರ ಕಾಯ್ದುಕೊಳ್ಳದ ಕಾರಣ ಬೀದರ್ ನಲ್ಲಿ ನೂಕು ನುಗ್ಗಲು ಉಂಟಾಗಿದೆ.
ಲಾಕ್ಡೌನ್ ನಿಂದ ಸಂಕಷ್ಟದಲ್ಲಿರುವ ಕುಟುಂಬಗಳಿಗೆ ಅನುಕೂಲವಾಗಲಿ ಎಂದು ಪ್ರಧಾನಿ ನರೇಂದ್ರ ಮೋದಿ ಮಹಿಳೆಯರ ಜನ್ಧನ್ ಅಕೌಂಟ್ಗೆ ಹಣ ಹಾಕಿದ್ದಾರೆ. ಆದರೆ ಗಡಿ ಜಿಲ್ಲೆ ಬೀದರ್ ನಲ್ಲಿ ಈ ಹಣವನ್ನು ತೆಗೆದುಕೊಳ್ಳಲು ವೇಳೆ ನೂರಾರು ಮಹಿಳೆಯರು ಸಾಮಾಜಿಕ ಅಂತರ ಕಾಯ್ದುಕೊಳ್ಳುತ್ತಿಲ್ಲ. ಎಲ್ಲಾ ಮಹಿಳೆಯರು ಗುಂಪು ಗುಂಪಾಗಿ ಬ್ಯಾಂಕ್ ಮುಂದೆ ಜಮಾಯಿಸಿದ್ದರು.
ಬೀದರ್ನ ಬ್ರೀಮ್ಸ್ ಆಸ್ಪತ್ರೆಯ ಮುಂಭಾಗದಲ್ಲಿರುವ ಎಸ್.ಬಿ.ಐ ಬ್ಯಾಂಕ್ನ ಗ್ರಾಹಕರ ಸೇವಾ ಕೇಂದ್ರದಲ್ಲಿ ಈ ದೃಶ್ಯಗಳು ಕಂಡು ಬಂದಿವೆ. ಸ್ವತಃ ಎಸ್ಪಿ ನಾಗೇಶ್ ಸ್ಥಳಕ್ಕೆ ಬಂದು ಮಹಿಳೆಯರಲ್ಲಿ ಮನವಿ ಮಾಡಿದರೂ ಮಹಿಳೆಯರು ಮಾತ್ರ ಸಾಮಾಜಿಕ ಅಂತರ ಕಾಪಾಡಿಕೊಳ್ಳಲಿಲ್ಲ.
ಬೀದರ್ ನಲ್ಲಿ ಈಗಾಗಲೇ 10 ಕೊರೊನಾ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿವೆ. ಈ ಹತ್ತು ಪ್ರಕರಣಗಳ ಪೈಕಿ ಓಲ್ಡ್ ಸಿಟಿಯಲ್ಲಿ ಬರೋಬ್ಬರಿ 8 ಪ್ರಕರಣಗಳು ಪತ್ತೆಯಾಗಿವೆ. ಜನ್ಧನ್ ಹಣ ತೆಗೆದುಕೊಳ್ಳಲು ಬಂದಿರುವ ಮಹಿಳೆಯರು ಬಹುತೇಕ ಓಲ್ಡ್ ಸಿಟಿಯ ನಿವಾಸಿಗಳಾಗಿದ್ದಾರೆ.