ಬೀದರ್: ಹೈಕೋರ್ಟ್ ಮಾರ್ಗದರ್ಶನದಂತೆ ಬೀದರ್ ಭಾಲ್ಕಿ ತಾಲೂಕಿನ ವಸತಿ ಶಾಲೆಗಳಿಗೆ ಜಿಲ್ಲಾ ಸೀನಿಯರ್ ಸಿವಿಲ್ ನ್ಯಾಯಾಧೀಶರು ದಿಢೀರ್ ಭೇಟಿ ನೀಡಿ ವಸತಿ ಶಾಲೆಯ ಅವ್ಯವಸ್ಥೆಯನ್ನು ಕಂಡು ಅಧಿಕಾರಿಗಳನ್ನು ತರಾಟೆ ತೆಗೆದುಕೊಂಡಿದ್ದಾರೆ.
ಜಿಲ್ಲಾ ಸೀನಿಯರ್ ಸಿವಿಲ್ ನ್ಯಾಯಾಧೀಶರಾದ ಆರ್. ರಾಘವೇಂದ್ರರವರು ಇಂದು ವಸತಿ ಶಾಲೆಗಳಿಗೆ ದಿಢೀರ್ ಭೇಟಿ ನೀಡುವ ಮೂಲಕ ಅಧಿಕಾರಿಗಳಿಗೆ ಶಾಕ್ ನೀಡಿದ್ದರು.
ವಸತಿ ಶಾಲೆಯಲ್ಲಿ ಆಹಾರ ಸಂಗ್ರಹದಲ್ಲಿ ನಿರ್ವಹಣೆ ಇಲ್ಲದೆ ಇರುವುದು, ಶುದ್ಧ ಕುಡಿಯುವ ನೀರು, ಸ್ಥಾನ ಮಾಡಲು ಬಿಸಿ ನೀರಿನ ಸಮಸ್ಯೆ, ಸೇರಿದಂತೆ ಹಲವು ಅವ್ಯವಸ್ಥೆಯಿಂದ ಕೂಡಿತ್ತು. ಅದನ್ನು ಕಂಡ ನ್ಯಾಯಾಧೀಶರು ಅಧಿಕಾರಿಗಳಿಗೆ ಸಖತ್ ಕ್ಲಾಸ್ ತೆಗೆದುಕೊಂಡು ಸರಿಪಡಿಸುವಂತೆ ಸೂಚಿಸಿದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvnews