ಬೀದರ್: ಪ್ರೀತಿಯನ್ನು ನಿರಾಕರಿಸಿದ್ದಕ್ಕೆ ಕಾಲೇಜು ವಿದ್ಯಾರ್ಥಿನಿಯನ್ನು ಅತ್ಯಾಚಾರ ಮಾಡಿ ಕತ್ತು ಕತ್ತರಿಸಿ ಭೀಕರವಾಗಿ ಹತ್ಯೆ ಮಾಡಿದ್ದನ್ನು ಖಂಡಿಸಿ ಕರೆನೀಡಿದ್ದ ಬೀದರ್ ಬಂದ್ ಹಿಂಸಾಚಾರಕ್ಕೆ ತಿರುಗಿದ ಹಿನ್ನೆಲೆಯಲ್ಲಿ ಪ್ರತಿಭಟನಾ ನಿರತರನ್ನು ನಿಯಂತ್ರಿಸಲು ಪೊಲೀಸರು ಲಾಠಿಚಾರ್ಜ್ ಮಾಡಿದ್ದಾರೆ.
ಇಂದು ಎಬಿವಿಪಿ, ಎಸ್ಎಫ್ಐ ಸೇರಿದಂತೆ ವಿವಿಧ ಸಂಘಟನೆಗಳು ಬೀದರ್ ಬಂದ್ ಗೆ ಕರೆ ನೀಡಿದ್ದವು. ಈ ವೇಳೆ ಅತ್ಯಾಚಾರ ಕೃತ್ಯ ಖಂಡಿಸಿ 2 ಸಾವಿರಕ್ಕೂ ಹೆಚ್ಚಿನ ಜನರು ಪ್ರತಿಭಟನೆ ಮಾಡುತ್ತಿದ್ದರು. ಈ ವೇಳೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರತಿಭಟನಾಕಾರರು ನೆರೆದಿದ್ದ ಕಾರಣ ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದಾರೆ.
ನಗರದ ಅಂಬೇಡ್ಕರ್ ವೃತದಲ್ಲಿ ಪ್ರತಿಭಟನಾಕಾರರು ಕೃತ್ಯವನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ಸರ್ಕಲ್ ನ ಒಂದು ಭಾಗದಲ್ಲಿ ಪ್ರತಿಭಟನಾಕಾರರು ಪ್ರತಿಭಟನೆ ನಡೆಸಲು ಅವಕಾಶ ನೀಡಲಾಗಿದ್ದು ಮತ್ತೊಂದು ಭಾಗದಲ್ಲಿ ಸಂಚಾರ ಸುಗಮ ಮಾಡಲು ಪೊಲೀಸರು ಹರಸಾಹಸ ಪಟ್ಟಿದ್ದರು.
ಲಾಠಿ ಚಾರ್ಜ್ ನಂತರ ಪ್ರತಿಭಟನಾಕಾರರು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಈ ವೇಳೆ ನಾಲ್ವರು ವಿದ್ಯಾರ್ಥಿಗಳು ಗಾಯಗೊಂಡಿದ್ದು, ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಸಂಸದ ಭಗವಂತ ಖೂಬಾ ಅವರು ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಏನಿದು ರೇಪ್ ಪ್ರಕರಣ?
ಬೀದರ್ ಜಿಲ್ಲೆ ಭಾಲ್ಕಿ ತಾಲೂಕಿನ ಖಾನಾಪುರ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಇದೇ ತಿಂಗಳ 27 ರಂದು ಭಾಲ್ಕಿ ತಾಲೂಕಿ ಕೋಸಮ್ ಗ್ರಾಮದ ಪೂಜಾ (20) ವಿದ್ಯಾರ್ಥಿನಿ ಕೊಲೆಯಾಗಿತ್ತು. ವಿದ್ಯಾರ್ಥಿನಿ ಪೂಜಾ ನಗರದ ಅಕ್ಕಮಹಾದೇವಿ ಕಾಲೇಜಿನಲ್ಲಿ ಬಿಎ ಎರಡನೇಯ ವರ್ಷದಲ್ಲಿ ಓದುತ್ತಿದ್ದಳು.
ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ಪ್ರಕರಣದ ತನಿಖೆ ನಡೆಸಿ ಆರೋಪಿ ಶಂಶುದ್ದೀನ್ (24) ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು. ಕೊಲೆಯಾದ ವಿದ್ಯಾರ್ಥಿನಿ ಪೂಜಾಳನ್ನು ಆರೋಪಿ ಕಳೆದ ಎರಡು ವರ್ಷದಿಂದ ಪ್ರೀತಿಸುವಂತೆ ಒತ್ತಾಯಿಸುತ್ತಿದ್ದ. ಆದರೆ ಆರೋಪಿಯ ಪ್ರೀತಿಯನ್ನು ನಿರಾಕರಿಸಿದಾಗ ಒತ್ತಾಯ ಪೂರ್ವಕವಾಗಿ ಪೂಜಾಳನ್ನು ಅರಣ್ಯ ಪ್ರದಶಕ್ಕೆ ಕರೆದೊಯ್ದು ಕೊಲೆ ಮಾಡಿದ್ದ.
ವಿವಿದ ಸಂಘಟನೆಗಳ ಹೋರಾಟಗಾರರು ಬಂದ್ ನಡೆಸಿದ್ದರು ನಗರದಲ್ಲಿ ಶಾಲಾ – ಕಾಲೇಜುಗಳಿಗೆ ರಜೆ ನೀಡಿರಲಿಲ್ಲ. ಅಲ್ಲದೇ ಸಾರಿಗೆ ಬಸ್ ಸಂಚಾರ ಎಂದಿನಂತೆ ನಡೆಯಲು ಅವಕಾಶ ನೀಡಲಾಗಿತ್ತು. ವಿದ್ಯಾರ್ಥಿ ಮೇಲಿನ ಅತ್ಯಾಚಾರ ಪ್ರಕರಣದ ಕುರಿತು ಧನ್ನೂರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
https://www.youtube.com/watch?v=SMBS7IebDnE