ಬೀದರ್: ದರೋಡೆಕೋರರ ಗುಂಡೇಟಿನಿಂದ ಗಾಯಗೊಂಡಿದ್ದ ಶಿವಕುಮಾರ್ ಅವರಿಗೆ ಬಿಜೆಪಿ (BJP) ಜಿಲ್ಲಾ ಘಟಕದಿಂದ 1 ಲಕ್ಷ ಪರಿಹಾರ ಹಣ ನೀಡಿದರು.
ಬಿಜೆಪಿ ಜಿಲ್ಲಾ ಘಟಕ ಶಿವಕುಮಾರ್ ಮನೆಗೆ ಮನೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ಈ ವೇಳೆ ಬಿಜೆಪಿ ಜಿಲ್ಲಾ ಘಟಕದ ವತಿಯಿಂದ 1 ಲಕ್ಷ ರೂ. ನೆರವು ನೀಡಲಾಯಿತು. ಸರ್ಕಾರದಿಂದ ಇಲ್ಲಿಯವರೆಗೆ 1 ರೂ. ಸಹ ಪರಿಹಾರ ದೊರೆತಿಲ್ಲ, (ಎಟಿಎಂ) ಸಿಎಂಎಸ್ ಕಂಪನಿಯಿಂದ ಆಸ್ಪತ್ರೆಯ ಚಿಕಿತ್ಸೆ ವೆಚ್ಚ ಭರಿಸಲಾಗಿದೆ ಎಂದು ಸಂತ್ರಸ್ತ ಕುಟುಂಬದವರು ಅಳಲು ತೋಡಿಕೊಂಡರು.ಇದನ್ನೂ ಓದಿ: ಕುಂಭಮೇಳದಿಂದ ಅಯೋಧ್ಯೆಗೆ ತೆರಳುತ್ತಿದ್ದ ಕೊಪ್ಪಳದ ಯುವಕ ದುರಂತ ಸಾವು
Advertisement
Advertisement
ಈ ವೇಳೆ ಬಿಜೆಪಿ ಮುಖಂಡರು ಸರ್ಕಾರದಿಂದ ಪರಿಹಾರ ಒದಗಿಸುವುದಾಗಿ ಭರವಸೆ ನೀಡಿದರು. ಸರ್ಕಾರ ಶೀಘ್ರದಲ್ಲಿ ಸಂತ್ರಸ್ತ ಎರಡು ಕುಟುಂಬಕ್ಕೆ ಸೂಕ್ತ ಪರಿಹಾರ ಹಾಗೂ ಉದ್ಯೋಗ ನೀಡದಿದ್ದರೆ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.
Advertisement
ಈ ಸಂದರ್ಭದಲ್ಲಿ ಬೀದರ್ ದಕ್ಷಿಣ ಕ್ಷೇತ್ರದ ಶಾಸಕರಾದ ಡಾ. ಶೈಲೇಂದ್ರ ಬೆಲ್ದಾಳೆ, ಬಿಜೆಪಿ ಜಿಲ್ಲಾಧ್ಯಕ್ಷರಾದ ಸೋಮನಾಥ್ ಪಾಟೀಲ್, ಮುಖಂಡರಾದ ಬಾಬು ವಾಲಿ, ರಾಜಶೇಖರ ನಾಗಮೂರ್ತಿ, ನಗರ ಅಧ್ಯಕ್ಷ ಶಶಿ ಹೊಸಳ್ಳಿ, ರಾಜಕುಮಾರ ಪಾಟೀಲ್, ವೀರು ದಿಗ್ವಾಲ, ವೀರೇಶ ಸ್ವಾಮಿ ಇದ್ದರು.ಇದನ್ನೂ ಓದಿ: 8 ವರ್ಷದಲ್ಲಿ 46 ಮಂದಿ ಜಲಸಮಾಧಿ: ಸಾವಿನ ಕೂಪವಾದ ವಿಸಿ ನಾಲೆ