ಬೀದರ್: ನಗರದ ಸಾಯಿ ಕಾಲೋನಿಯಲ್ಲಿ ನಿರ್ಮಾಣ ಹಂತದಲ್ಲಿದ್ದ ಶ್ರೀ ಸಾಯಿ ಮಂದಿರದ ಮೇಲ್ಛಾವಣಿ ಕುಸಿದು ಭಾರೀ ಅವಘಡ ತಪ್ಪಿದೆ.
ಲಕ್ಷಾಂತರ ಭಕ್ತರು ನೀಡಿದ ದೇಣಿಗೆ ಹಣದಲ್ಲಿ ಹಲವು ತಿಂಗಳುಗಳಿಂದ ಶ್ರೀ ಸಾಯಿ ಮಂದಿರದ ನಿರ್ಮಾಣವಾಗುತ್ತಿದೆ. ಆದರೆ ಶನಿವಾರ ದೇವಸ್ಥಾನ ಕುಸಿದು ಬಿದ್ದಿದೆ. ಅದೃಷ್ಟವಷಾತ್ ಈ ವೇಳೆ ಸ್ಥಳದಲ್ಲಿ ಕಾರ್ಮಿಕರು, ಸಾರ್ವಜನಿಕರು ಇರಲಿಲ್ಲ. ಹೀಗಾಗಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಕುಸಿದು ಬಿದ್ದ ಕಟ್ಟಡದ ಪಕ್ಕದ ಕಟ್ಟಡದಲ್ಲಿ ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಹೀಗಾಗಿ ಕಾರ್ಮಿಕರು ಅಪಾಯದಿಂದ ಪಾರಾಗಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಅಗ್ನಿ ಶಾಮಕ ದಳವು ಕುಸಿದಿರುವ ಕಟ್ಟಡವನ್ನು ತೆರವು ಗೊಳಿಸಿದೆ. ಗಾಂಧಿಗಂಜ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.