ಬೀದರ್: ಮತ ಕೇಳಲು ಹೋದ ಶಾಸಕ ಅಶೋಕ್ ಖೇಣಿಗೆ ಮತ್ತೆ ಮತದಾರ ಪ್ರಭು ಕಾರಿಗೆ ಮುತ್ತಿಗೆ ಹಾಕಿ ಬೆವರಿಳಿಸಿದ ಘಟನೆ ಬೀದರ್ ತಾಲೂಕಿನ ಕಮಠಾಣ ಗ್ರಾಮದಲ್ಲಿ ನಡೆದಿದೆ.
ನನಗೆ ಮತ ನೀಡಿ ಎಂದು ಕೇಳಲು ಹೋಗಿದ್ದ ಖೇಣಿ ಅವರಿಗೆ ಗ್ರಾಮದಲ್ಲಿ ಯಾವುದೇ ಅಭಿವೃದ್ಧಿ ಕಾಮಗಾರಿ ಮಾಡದಕ್ಕೆ ಗ್ರಾಮಸ್ಥರು ಪ್ರಶ್ನೆಗಳ ಸುರಿ ಮಳೆ ಹಾಕಿ ವಿರುದ್ಧ ಘೋಷಣೆ ಕೂಗಿದ್ದಾರೆ. ಎರಡನೇಯ ಬಾರಿಗೆ ಗ್ರಾಮದಲ್ಲಿ ತರಾಟೆ ತೆಗೆದುಕೊಂಡಿದರಿಂದ ಕಕ್ಕಾಬಿಕ್ಕಿಯಾದ ಅಶೋಕ್ ಖೇಣಿ ಕಾರಿನಿಂದ ಕೆಳಗಿಳಿಯದೆ ಮೌನಕ್ಕೆ ಶರಣಾದ್ರು.
ಬೀದರ್ ದಕ್ಷಿಣ ಕ್ಷೇತ್ರವನ್ನು ಮಿನಿ ಸಿಂಗಾಪೂರ್ ಮಾಡುವುದಾಗಿ ಹೇಳಿದ್ದ ಖೇಣಿ ಚುನಾವಣೆ ಹತ್ತಿರ ಬರುತ್ತಿದ್ದಂತೆ ಜನರು ಮುತ್ತಿಗೆ ಹಾಕಿ ಬಿಸಿ ಮುಟ್ಟಿಸುತ್ತಿದ್ದಾರೆ. ಇದರಿಂದ ಖೇಣಿ ಅವರಿಗೆ ಚುನಾವಣಾ ಭಯ ಶುರುವಾಗಿದ್ದು 5 ವರ್ಷಗಳ ನಂತರ ಮತದಾರ ಪ್ರಭು ಶಾಸಕರಿಗೆ ತರಾಟೆ ತೆಗೆದುಕೊಂಡು ಪ್ರಶ್ನೆ ಮಾಡುತ್ತಿದ್ದಾರೆ.