Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ಕರ್ನಾಟಕಕ್ಕೆ ಬಜೆಟ್‌ನಲ್ಲಿ ದೊಡ್ಡ ಅನ್ಯಾಯ: ಸಿಎಂ

Public TV
Last updated: February 1, 2025 4:45 pm
Public TV
Share
3 Min Read
Siddaramaiah
SHARE

– ಬೆಂಗಳೂರು ಮೂಲಭೂತ ಸೌಕರ್ಯಕ್ಕೆ ಕೇಂದ್ರದಿಂದ ಖಾಲಿ ಚೆಂಬು

ಮೈಸೂರು: ಈ ಬಜೆಟ್ ದೇಶದ ಆರ್ಥಿಕ ಬೆಳವಣಿಗೆಗೆ ಪೂರಕವಾಗಿಲ್ಲದ ಬಜೆಟ್. ಕರ್ನಾಟಕಕ್ಕೆ ದೊಡ್ಡ ಅನ್ಯಾಯ ಮಾಡಿರುವ ಬಜೆಟ್ ಇದು ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಕಿಡಿಕಾರಿದ್ದಾರೆ.

ಕೇಂದ್ರ ಬಜೆಟ್ (Union Budget 20255) ಹಿನ್ನೆಲೆ ಮೈಸೂರಿನಲ್ಲಿ (Mysuru) ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಾನು ಇನ್ನೂ ಪೂರ್ಣ ಬಜೆಟ್ ಓದಿಲ್ಲ. ಬಜೆಟ್ ಭಾಷಣವನ್ನು ಪೂರ್ಣವಾಗಿ ನೋಡಿಲ್ಲ. ಬರೀ ಮುಖ್ಯಾಂಶಗಳನ್ನು ನೋಡಿದ್ದೇನೆ. ದೇಶದ ಹಿತದೃಷ್ಟಿಯಿಂದ, ಕರ್ನಾಟಕ ಹಿತದೃಷ್ಟಿಯಿಂದ ನಿರಾಶದಾಯಕ ಬಜೆಟ್. ದೂರದೃಷ್ಟಿ ಇಲ್ಲದ ಬಜೆಟ್. ರಾಜ್ಯವೂ ಅನೇಕ ಬೇಡಿಕೆಗಳನ್ನು ಇಟ್ಟಿತ್ತು. ನಮ್ಮ ಬೇಡಿಕೆಗಳು ಬೇಡಿಕೆಗಳಾಗಿಯೇ ಉಳಿದಿವೆ. ಒಂದೇ ಒಂದು ಬೇಡಿಕೆಯೂ ಈಡೇರಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ಇದು ಜನಸಾಮಾನ್ಯರ ಬಜೆಟ್‌.. ಉಳಿತಾಯ, ಹೂಡಿಕೆಗೆ ಉತ್ತೇಜನ: ಮೋದಿ ಬಣ್ಣನೆ

ಬಜೆಟ್ ಗಾತ್ರವೂ ಕಡಿಮೆ ಆಗಿದೆ. ಕಳೆದ ಬಾರಿಗಿಂತ 1.04 ಲಕ್ಷ ಕೋಟಿ ಕಡಿಮೆ ಆಗಿದೆ. ತೆರಿಗೆ ಅವರು ಅಂದುಕೊಂಡಷ್ಟು ಸಂಗ್ರಹಿಸಿಲ್ಲ. ಕೇಂದ್ರ ಸರ್ಕಾರ ಸಾಲ 15,68,936 ಕೋಟಿ ಸಾಲ ಪಡೆಯುತ್ತಿದೆ. 12,70,000 ಕೋಟಿ ರೂ. ಬಡ್ಡಿ ಕಟ್ಟುತ್ತಿದೆ. ಈ ದೇಶದ ಸಾಲದ ಪ್ರಮಾಣ 202 ಲಕ್ಷ ಕೋಟಿಯಿಂದ 205 ಲಕ್ಷ ಕೋಟಿ ರೂ.ಗೆ ಏರುತ್ತಿದೆ. ಈ ಬಜೆಟ್ ನಿರಾಶದಾಯಕ ಬಜೆಟ್. ಕರ್ನಾಟಕಕ್ಕೆ ವಿರುದ್ದವಾಗಿರುವ ಬಜೆಟ್ ಇದು ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: Budget 2025| ಕಿತ್ತಾಟ ನಡೆಸಿದ್ರೂ ಮಾಲ್ಡೀವ್ಸ್‌ಗೆ ಅನುದಾನ ಹೆಚ್ಚಳ,ಬಾಂಗ್ಲಾಗೂ ಸಹಾಯ- ಯಾವ ದೇಶಕ್ಕೆ ಎಷ್ಟು ಕೋಟಿ?

ಕರ್ನಾಟಕ ಹೆಚ್ಚು ತೆರಿಗೆ ಕಟ್ಟುತ್ತಿರುವ ರಾಜ್ಯಗಳಲ್ಲಿ 2ನೇ ಸ್ಥಾನದಲ್ಲಿದೆ. ರಾಜಕೀಯ ಕಾರಣಕ್ಕೆ ಬಿಹಾರ, ಆಂಧ್ರಕ್ಕೆ ಹೆಚ್ಚು ಅನುದಾನ ಸಿಕ್ಕಿದೆ. ಬಿಹಾರ, ಆಂಧ್ರ ಪ್ರದೇಶಕ್ಕೆ ಹೆಚ್ಚು ಅನುದಾನ ಸಿಕ್ಕಿದೆ. ಮೇಕೆದಾಟು, ಭದ್ರಾ ಮೇಲ್ದಂಡೆ, ಕೃಷ್ಣ ಮೇಲ್ದಂಡೆ ಯೋಜನೆ ಯಾವುದಕ್ಕೂ ಹಣ ಕೊಟ್ಟಿಲ್ಲ. ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ರೂ. ಕೊಡುತ್ತೇವೆ ಎಂದು ಕಳೆದ ಬಾರಿ ಘೋಷಿಸಿದ್ದರು. ಈವರೆಗೆ ಒಂದೂ ನಯಾಪೈಸೆಯೂ ಬಂದಿಲ್ಲ. ರಾಜಸ್ಥಾನ ಬಿಟ್ಟರೆ ಕರ್ನಾಟಕ ಹೆಚ್ಚು ಒಣ ಭೂಮಿ ಇರುವ ರಾಜ್ಯ. ಈ ರಾಜ್ಯಕ್ಕೆ ನೀರಾವರಿ ಯೋಜನೆಗಳಿಗೆ ಒಂದು ರೂಪಾಯಿ ಕೊಟ್ಟಿಲ್ಲ. ರಾಯಚೂರಿಗೆ ಏಮ್ಸ್ ಘೋಷಣೆ ಮಾಡುತ್ತಾರೆ ಎಂದು ನಿರೀಕ್ಷೆ ಇತ್ತು. ಕೇಂದ್ರ ಸಚಿವ ನಡ್ಡಾ ಇದಕ್ಕೆ ಭರವಸೆ ಕೊಟ್ಟಿದ್ದರು. ಅದರ ಪ್ರಸ್ತಾಪವೂ ಇಲ್ಲ ಎಂದು ಗುಡುಗಿದರು. ಇದನ್ನೂ ಓದಿ: ಎತ್ತುಗಳಿಗೆ ಸ್ನಾನ ಮಾಡಿಸಲು ಕೆರೆಗೆ ಹೋಗಿದ್ದ ರೈತನ ಮೇಲೆ ಮೊಸಳೆ ದಾಳಿ

ಬೆಂಗಳೂರಿನ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ, ಬ್ಯುಸಿನೆಸ್ ಕಾರಿಡಾರ್ ಮಾಡಲು ಹಣ ಕೇಳಿದ್ದೆವು. ಅದಕ್ಕೆ ಅವರು ಕೊಟ್ಟಿದ್ದು ಖಾಲಿ ಚೆಂಬು. ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರಿಗೆ ಗೌರವ ಧನ ಹೆಚ್ಚಿಸಲು ಕೇಳಿದ್ದೆವು, ಒಂದು ರೂಪಾಯಿ ಕೊಟ್ಟಿಲ್ಲ. ವಸತಿ ಯೋಜನೆಯ ಹಣ ಒಂದೂವರೆ ಲಕ್ಷದಿಂದ ಐದು ಲಕ್ಷಕ್ಕೆ ಹೆಚ್ಚಿಸಲು ಕೇಳಿದ್ದೆವು, ಅದನ್ನೂ ಮಾಡಿಲ್ಲ. ಮೋದಿ ಅವರ ಸರ್ಕಾರದ ಬಜೆಟ್ ಕರ್ನಾಟಕಕ್ಕೆ ಚೆಂಬು ಕೊಡುವುದನ್ನು ಮುಂದುವರಿಸಿದೆ ಎಂದು ಹರಿಹಾಯ್ದರು. ಇದನ್ನೂ ಓದಿ: Union Budget 2025: 77 ನಿಮಿಷಗಳ ಕಾಲ 8ನೇ ಬಜೆಟ್ ಮಂಡಿಸಿದ ಸೀತಾರಾಮನ್

ಬಡವರಿಗೆ, ಕಾರ್ಮಿಕರಿಗೆ, ಯುವಕರಿಗೆ, ಮಹಿಳೆಯರಿಗೆ, ರೈತರ ಅಭಿವೃದ್ಧಿಗೆ ಖರ್ಚು ಮಾಡುವುದು ಬಿಟ್ಟು ಕಾರ್ಪೊರೇಟ್ ಕಂಪನಿಗಳಿಗೆ ಹೆಚ್ಚು ಮಣೆ ಹಾಕಲಾಗಿದೆ. ಬಿಹಾರ ಚುನಾವಣೆ ಬರುತ್ತಿರುವ ಹಿನ್ನಲೆ ಮೂರ್ನಾಲ್ಕು ಬಾರಿ ಪ್ರಸ್ತಾಪ ಮಾಡಿದ್ದಾರೆ ಎಂದು ಕೆಂಡಕಾರಿದ್ದಾರೆ. ಇದನ್ನೂ ಓದಿ: Union Budget 2025: ಯಾವುದು ಅಗ್ಗ, ಯಾವುದು ದುಬಾರಿ?

TAGGED:congresskarnatakamysurunarendra modisiddaramaiahUnion Budget 2025ಕರ್ನಾಟಕಕೇಂದ್ರ ಬಜೆಟ್ಮೈಸೂರುಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema Updates

ileana 1 4
2ನೇ ಮಗುವಿನ ನಿರೀಕ್ಷೆಯಲ್ಲಿ ನಟಿ ಇಲಿಯಾನಾ
9 minutes ago
drithi puneeth rajkumar 1 1
ನ್ಯೂಯಾರ್ಕ್‌ನ ಸೆಂಟ್ರಲ್ ಪಾರ್ಕ್‌ನಲ್ಲಿ ಅಣ್ಣಾವ್ರ ಮೊಮ್ಮಕ್ಕಳು
46 minutes ago
hrithik roshan prithviraj sukumaran
ಹೃತಿಕ್ ರೋಷನ್‌ಗೆ ಪೃಥ್ವಿರಾಜ್ ಸುಕುಮಾರನ್ ಆ್ಯಕ್ಷನ್ ಕಟ್?
1 hour ago
ranjani raghavan
ಗೆಳೆಯನ ಜೊತೆ ರಂಜನಿ ರಾಘವನ್ ಲಾಂಗ್ ಡ್ರೈವ್
2 hours ago

You Might Also Like

Mangaluru UT Khader
Bengaluru City

ದಕ್ಷಿಣ ಕನ್ನಡದಲ್ಲಿ ಗುಡ್ಡ ಕುಸಿತ, ಪ್ರಾಣಹಾನಿ – ರಕ್ಷಣಾ ಕಾರ್ಯಕ್ಕೆ ಯು.ಟಿ ಖಾದರ್ ಸೂಚನೆ

Public TV
By Public TV
5 minutes ago
Salman Khurshid
Latest

ಆರ್ಟಿಕಲ್‌-370 ರದ್ದತಿ ಬಳಿಕ ಕಾಶ್ಮೀರ ಸಮೃದ್ಧಿ ಕಂಡಿದೆ – ಕಾಂಗ್ರೆಸ್‌ ನಾಯಕ ಸಲ್ಮಾನ್ ಖುರ್ಷಿದ್

Public TV
By Public TV
17 minutes ago
bengaluru police commissioner b dayanand
Bengaluru City

ಮಂಡ್ಯ ಬಾಲಕಿ ಸಾವು ಕೇಸ್ | ಎಚ್ಚೆತ್ತ ಬೆಂಗಳೂರು ಪೊಲೀಸರಿಂದ ಹೊಸ ಎಸ್‌ಒಪಿ ಜಾರಿ

Public TV
By Public TV
30 minutes ago
G Parameshwar
Bengaluru City

ನಾವು ಕೈಕಟ್ಟಿ ಕೂರಲ್ಲ, ದಕ್ಷಿಣ ಕನ್ನಡ ಜಿಲ್ಲೆ ಶಾಂತಿಯಿಂದಿರಬೇಕು ಅಷ್ಟೇ: ಪರಮೇಶ್ವರ್

Public TV
By Public TV
55 minutes ago
mangaluru Rain Death
Dakshina Kannada

ದ.ಕನ್ನಡ | ಭಾರೀ ಮಳೆಗೆ ಗುಡ್ಡ, ಮನೆ ಕುಸಿತ – ಬಾಲಕಿ ಸೇರಿ ಇಬ್ಬರು ಸಾವು

Public TV
By Public TV
1 hour ago
Abdul Rahim Murder
Crime

ಅಬ್ದುಲ್‌ ರಹಿಮಾನ್‌ ಹತ್ಯೆ ಕೇಸ್‌ | ಮತ್ತಿಬ್ಬರು ಆರೋಪಿಗಳು ಅರೆಸ್ಟ್‌ – ಹತ್ಯೆಗೆ ಕಾರಣವೇ ಇನ್ನೂ ಸಸ್ಪೆನ್ಸ್!‌

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?