Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜಾಗತಿಕ ನ್ಯಾಯಾಲಯದಲ್ಲಿ ಪಾಕಿಸ್ತಾನಕ್ಕೆ ಕಪಾಳ ಮೋಕ್ಷವಾದ ಕಥೆಯನ್ನು ಓದಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಜಾಗತಿಕ ನ್ಯಾಯಾಲಯದಲ್ಲಿ ಪಾಕಿಸ್ತಾನಕ್ಕೆ ಕಪಾಳ ಮೋಕ್ಷವಾದ ಕಥೆಯನ್ನು ಓದಿ

Latest

ಜಾಗತಿಕ ನ್ಯಾಯಾಲಯದಲ್ಲಿ ಪಾಕಿಸ್ತಾನಕ್ಕೆ ಕಪಾಳ ಮೋಕ್ಷವಾದ ಕಥೆಯನ್ನು ಓದಿ

Public TV
Last updated: May 19, 2017 12:21 pm
Public TV
Share
4 Min Read
india win
SHARE

ಹೇಗ್: ಪಾಕಿಸ್ತಾನಕ್ಕೆ ಭಾರೀ ಮುಖಭಂಗವಾಗಿದ್ದು, ನೆದರ್‍ಲ್ಯಾಂಡಿನ ಹೇಗ್ ನಲ್ಲಿರುವ ಅಂತಾರಾಷ್ಟ್ರೀಯ ನ್ಯಾಯಾಲಯ ಭಾರತದ ಮನವಿಯನ್ನು ಪುರಸ್ಕರಿಸಿ ಕುಲಭೂಷಣ್ ಜಾಧವ್‍ಗೆ ನೀಡಲಾಗಿದ್ದ ಗಲ್ಲು ಶಿಕ್ಷಗೆ ತಾತ್ಕಾಲಿಕ ತಡೆಯನ್ನು ನೀಡಿದೆ.

ಭಾರತದ ಕಾಲಮಾನ ಮಧ್ಯಾಹ್ನ 3.30ಕ್ಕೆ ಮುಖ್ಯ ನ್ಯಾಯಾಧೀಶ ರೋನಿ ಅಬ್ರಾಹಂ ತೀರ್ಪು ಓದಲು ಆರಂಭಿಸಿ ಗಲ್ಲು ಶಿಕ್ಷೆಗೆ ತಡೆ ನೀಡಿದರು. ಹೀಗಾಗಿ ಕೋರ್ಟ್ ತನ್ನ ತೀರ್ಪಿನಲ್ಲಿ ಹೇಳಿರುವ ಪ್ರಮುಖ ಅಂಶವನ್ನು ನೀಡಲಾಗಿದೆ

ಆರಂಭದಲ್ಲೇ ಹಿನ್ನಡೆ: ಪಾಕಿಸ್ತಾನ ತನ್ನ ವಾದದಲ್ಲಿ ಮಿಲಿಟರಿ ಕೋರ್ಟ್ ಈ ಶಿಕ್ಷೆಯನ್ನು ನೀಡಿದೆ. ಮಿಲಿಟರಿ ಕೋರ್ಟ್ ವಿಧಿಸಿರುವ ಶಿಕ್ಷೆ ಅಂತಾರಾಷ್ಟ್ರೀಯ ಕೋರ್ಟ್ ವ್ಯಾಪ್ತಿಯಲ್ಲಿ ಬರುವುದಿಲ್ಲ ಎಂದು ಹೇಳಿತ್ತು. ಈ ವಿಚಾರವನ್ನು ತೀರ್ಪು ಓದುವ ಆರಂಭದಲ್ಲೇ ಉಲ್ಲೇಖಿಸಿದ್ದ ನ್ಯಾಯಾಧೀಶರು, ವಿಯೆನ್ನಾ ಒಪ್ಪಂದಕ್ಕೆ ನೀವು ಸಹಿ ಹಾಕಿದ್ದೀರಿ. ಸಹಿ ಹಾಕಿದ ಕಾರಣ ನೀವು ಆ ಒಪ್ಪಂದದಂತೆ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಈ ಪ್ರಕರಣ ಈ ಕೋರ್ಟ್ ವ್ಯಾಪ್ತಿಗೆ ಬರುವುದಿಲ್ಲ ಎಂದು ಹೇಳಲು ಸಾಧ್ಯವಿಲ್ಲ. ವಿಯೆನ್ನಾ ಒಪ್ಪಂದದ 1ನೇ ವಿಧಿ ಪ್ರಕಾರ ಅಂತಾರಾಷ್ಟ್ರೀಯ ನ್ಯಾಯಾಲಯಕ್ಕೆ ಅಧಿಕಾರವಿದೆ. ಜಾಧವ್ ಬಂಧನದ ಬಗ್ಗೆ ಭಾರತಕ್ಕೆ ಮಾಹಿತಿ ನೀಡದಿರುವುದು, ರಾಜತಾಂತ್ರಿಕ ನೆರವಿಗೆ ಅವಕಾಶ ನೀಡದೇ ಇರುವುದು ವಿಯೆನ್ನಾ ಒಪ್ಪಂದ ವ್ಯಾಪ್ತಿಗೆ ಒಳಪಡುತ್ತದೆ. ಅಷ್ಟೇ ಅಲ್ಲೇ ಈ ಪ್ರಕರಣವನ್ನು ಇತ್ಯರ್ಥ ಪಡಿಸಲು ಈ ನ್ಯಾಯಾಲಯಕ್ಕೆ ಅಧಿಕಾರ ಇದೆ ಎಂದು ಹೇಳಿದರು.

ಭಾರತ ಪ್ರಜೆ: ಭಾರತ ಮತ್ತು ಪಾಕಿಸ್ತಾನಗಳು ಎರಡೂ ಬಂಧನಕ್ಕೊಳಗಾಗಿರುವ ಕುಲಭೂಷಣ್ ಜಾಧವ್ ಭಾರತ ಪ್ರಜೆ ಎನ್ನುವುದನ್ನು ಹೇಳಿಕೊಂಡಿದ್ದು ಈ ವಿಚಾರವನ್ನು ಕೋರ್ಟ್ ಒಪ್ಪಿಕೊಂಡಿದೆ.

ರಾಜತಾಂತ್ರಿಕ ನೆರವು: ವಿಯೆನ್ನಾ ಒಪ್ಪಂದದ ಪ್ರಕಾರ ಕುಲಭೂಷಣ್‍ಗೆ ರಾಜತಾಂತ್ರಿಕ ನೆರವು ನೀಡಲು ಅವಕಾಶ ಮಾಡಿಕೊಡಬೇಕಿತ್ತು. ಈ ಕುರಿತು 16 ಬಾರಿ ನಾವು ಮನವಿ ಮಾಡಿದ್ದರೂ ಪಾಕ್ ತಿರಸ್ಕರಿಸಿದೆ ಎಂದು ಭಾರತ ವಾದಿಸಿತ್ತು. ಈ ಅಂಶಕ್ಕೆ ಸಂಬಂಧಿಸಿದಂತೆ ಕೋರ್ಟ್, ಒಬ್ಬ ವ್ಯಕ್ತಿ ಒಂದು ದೇಶದಲ್ಲಿ ಬಂಧಿತನಾದರೆ ಆತನ ಅಹವಾಲುಗಳನ್ನು ಕೇಳಿಕೊಳ್ಳಲು ಆ ದೇಶಕ್ಕೆ ಅಧಿಕಾರ ಇದೆ ಎಂದು ಹೇಳುವ ವಿಯೆನ್ನಾ ಒಪ್ಪಂದಕ್ಕೆ ನೀವು ಸಹಿ ಹಾಕಿದ್ದೀರಿ. ಈ ಒಪ್ಪಂದವನ್ನು ಉಲ್ಲಂಘಿಸಿ ಯಾವುದೇ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಿಲ್ಲ. ಹೀಗಾಗಿ ನೀವು ವಿಯೆನ್ನಾ ಒಪ್ಪಂದಂತೆ ರಾಜತಾಂತ್ರಿಕ ಸಹಾಯವನ್ನು ನೀಡಲು ಅನುಮತಿ ನೀಡಬೇಕು ಎಂದು ಕೋರ್ಟ್ ಪಾಕಿಸ್ತಾನಕ್ಕೆ ಸೂಚಿಸಿತು.

ರಕ್ಷಣೆಯ ಮಾಹಿತಿ ನೀಡಿ: ಪಾಕಿಸ್ತಾನ ಜಾಧವ್ ಅವರ ಸಾವನ್ನು ಬಯಸುತ್ತಿದೆ ಎನ್ನುವ ವಿಚಾರವನ್ನು ತಿಳಿದ ಭಾರತ ಜಾಧವ್ ರಕ್ಷಣೆಯ ವಿಚಾರವನ್ನು ಪ್ರಸ್ತಾಪ ಮಾಡಿತ್ತು. ಯಾಕೆಂದರೆ ಗಲ್ಲು ಶಿಕ್ಷೆ ಅಲ್ಲದೇ ಹೋದರೂ ಬೇರೆ ಯಾರೋ ಒಬ್ಬ ವ್ಯಕ್ತಿ, ಖೈದಿಯ ಮೂಲಕ ಜಾಧವ್ ಅವರನ್ನು ಪಾಕ್ ಹತ್ಯೆ ಮಾಡಿದರೆ ಏನು ಎನ್ನುವ ವಿಚಾರಕ್ಕೆ ಸಂಬಂಧಿಸಿದಂತೆ ಭಾರತ, ವಿಚಾರಣೆ ಪೂರ್ಣಗೊಳ್ಳುವವರೆಗೂ ಜಾಧವ್ ಅವರ ಪ್ರಾಣಕ್ಕೆ ಅಪಾಯ ಇರುವ ಸಾಧ್ಯತೆಯಿದೆ. ಹೀಗಾಗಿ ಅವರನ್ನು ರಕ್ಷಿಸಬೇಕು ಎಂದು ಮನವಿ ಮಾಡಿತ್ತು. ಈ ಮನವಿಯನ್ನು ಪುರಸ್ಕರಿಸಿದ ಕೋರ್ಟ್ ಜಾಧವ್ ಅವರ ರಕ್ಷಣೆಗೆ ಸಂಬಂಧಿಸಿದಂತೆ ನೀವು ಏನು ಕ್ರಮವನ್ನು ತೆಗೆದುಕೊಂಡಿದ್ದೀರಿ ಎಂದು ಪಾಕಿಗೆ ಪ್ರಶ್ನಿಸಿ ಅದಕ್ಕೆ ಸಂಬಂಧಿಸಿ ವಿವರವನ್ನು ನೀಡಿ ಎಂದು ಸೂಚಿಸಿದೆ.

ವಿವಾದಾತ್ಮಕವಾಗಿದೆ: ಜಾಧವ್ ಅವರು ಇರಾಕ್‍ನಲ್ಲಿ ಉದ್ಯಮ ನಡೆಸುತ್ತಿರುವ ಪಾಕಿಸ್ತಾನ ಕಿಡ್ನಾಪ್ ಮಾಡಿದೆ. ಅವರು ರಾ ಏಜೆಂಟ್ ಅಲ್ಲ ಎಂದು ಭಾರತ ಹೇಳುತ್ತಾ ಬಂದಿದ್ದರೂ ಪಾಕಿಸ್ತಾನ ತನ್ನ ಮೊಂಡು ವಾದವನ್ನು ಕೋರ್ಟ್ ನಲ್ಲೂ ಮುಂದುವರಿಸಿತ್ತು. ಈ ವಿಚಾರವನ್ನು ತೀರ್ಪಿನಲ್ಲಿ ಪ್ರಸ್ತಾಪಿಸಿದ ಕೋರ್ಟ್, ಜಾಧವ್ ಬಂಧನ ಎಲ್ಲಿ ಆಗಿದೆ ಎಂಬ ಬಗ್ಗೆಯೇ ವಿವಾದವಿದೆ ಎಂದು ಅಭಿಪ್ರಾಯಪಟ್ಟಿದೆ.

ಗಲ್ಲು ಶಿಕ್ಷೆ ನೀಡುವಂತಿಲ್ಲ: ವಿಯೆನ್ನಾ ಒಪ್ಪಂದ ಉಲ್ಲಂಘನೆ, ಅಂತಾರಾಷ್ಟ್ರೀಯ ನ್ಯಾಯಾಲಯದ ವ್ಯಾಪ್ತಿಗೆ ಈ ಪ್ರಕರಣ ಬರುವುದಿಲ್ಲ ಎಂದು ನೀವು ವಾದ ಮಂಡಿಸಿರುವುದನ್ನು ನೋಡಿದಾಗ ಜಾಧವ್ ಅವರಿಗೆ ಗಲ್ಲು ಶಿಕ್ಷೆ ವಿಧಿಸಲು ಮುಂದಾಗಿದ್ದೀರಿ ಎನ್ನುವ ಅಭಿಪ್ರಾಯ ವ್ಯಕ್ತವಾಗುತ್ತಿದೆ. ಹೀಗಾಗಿ ಈ ಪ್ರಕರಣದ ವಿಚಾರಣೆ ಮುಗಿದು ಅಂತಿಮ ತೀರ್ಪು ಬರುವವರೆಗೂ ಜಾಧವ್ ಅವರಿಗೆ ಗಲ್ಲು ಶಿಕ್ಷೆ ವಿಧಿಸುವಂತಿಲ್ಲ ಎಂದು ಪಾಕಿಸ್ತಾನಕ್ಕೆ ಕೋರ್ಟ್ ಆದೇಶಿಸಿತು.

ಭಾರತದ ವಾದ ಸಮ್ಮತವೇ? ವಿಯೆನ್ನಾ ಒಪ್ಪಂದ ವಿಧಿ 36ರ ಪ್ರಕಾರ ಅನ್ಯ ದೇಶದ ವ್ಯಕ್ತಿಯನ್ನು ಬಂಧಿಸಿದರೆ ಆ ಬಗ್ಗೆ ಯಾವುದೇ ವಿಳಂಬವಿಲ್ಲದೇ ಮಾಹಿತಿ ನೀಡಬೇಕು ಮತ್ತು ರಾಜತಾಂತ್ರಿಕ ನೆರವನ್ನು ಬಂಧಿತನ ಹಕ್ಕು ಎಂದು ಕೋರ್ಟ್ ಹೇಳಿತು.

ತುರ್ತು ವಿಚಾರಣೆ ಅಗತ್ಯ ಯಾಕೆ? ಜಾಧವ್ ಮರಣ ದಂಡನೆ ಶಿಕ್ಷೆಗೆ ಒಳಪಟ್ಟಿದ್ದಾರೆ. ಹೀಗಾಗಿ ಯಾವಾಗ ಬೇಕಾದರೂ ಗಲ್ಲಿಗೇರಿಸಬಹುದು ಎಂಬ ಭಾರತದ ಆತಂಕದಿಂದಾಗಿ ಪ್ರಕರಣದ ತುರ್ತು ವಿಚಾರಣೆಗೆ ಅಗತ್ಯವಿದೆ. ಆಗಸ್ಟ್ 2017ರ ಬಳಿಕವಷ್ಟೇ ಗಲ್ಲಿಗೇರಿಸುವುದಾಗಿ ಪಾಕಿಸ್ತಾನ ಹೇಳಿದೆ. ಆದರೆ ಕೋರ್ಟ್ ಅಂತಿಮ ತೀರ್ಪು ನೀಡುವುದಕ್ಕೂ ಮೊದಲು ಗಲ್ಲಿಗೇರಿಸಲ್ಲ ಎಂಬ ಭರವಸೆಯನ್ನು ಪಾಕಿಸ್ತಾನ ಕೋರ್ಟ್‍ಗೆ ನೀಡಿಲ್ಲ. ಅಂದರೆ ಆಗಸ್ಟ್ ಬಳಿಕ ಪಾಕಿಸ್ತಾನ ಗಲ್ಲಿಗೇರಿಸುವ ಸಾಧ್ಯತೆ ಇದೆ. ಹೀಗಾಗಿ ಪ್ರಕರಣದ ತುರ್ತು ವಿಚಾರಣೆಯ ಅಗತ್ಯವಿದೆ ಎಂದು ಕೋರ್ಟ್ ತೀರ್ಮಾನಿಸಿದೆ.

ಈ ತೀರ್ಪಿಗೆ ಸಂಬಂಧಿಸಿದಂತೆ ಎಚ್.ರಂಗನಾಥ್ ವಿಮರ್ಶೆಯ ವಿಡಿಯೋ,  ತೀರ್ಪಿನ ಸಂಪೂರ್ಣ ಪ್ರತಿ ಮತ್ತು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರ ಟ್ವೀಟ್ ಗಳನ್ನು ನೀಡಲಾಗಿದೆ. 

https://www.youtube.com/watch?v=EJ4z66WdyQo

a

b

c

d

2

3

4

5

The ICJ order has come as a great relief to the familly of Kulbhushan Jadhav and people of India.

— Sushma Swaraj (@SushmaSwaraj) May 18, 2017

We are grateful to Mr.Harish Salve for presenting India's case so effectively before ICJ.

— Sushma Swaraj (@SushmaSwaraj) May 18, 2017

I assure the nation that under the leadership of Prime Minister Modi we will leave no stone unturned to save #KulbhushanJadhav.

— Sushma Swaraj (@SushmaSwaraj) May 18, 2017

I compliment my team of officers in the MEA for their tireless efforts and hard work.

— Sushma Swaraj (@SushmaSwaraj) May 18, 2017

TAGGED:courticjindiaKulbhushanJadhavpakistanಅಂತಾರಾಷ್ಟ್ರೀಯ ಕೋರ್ಟ್ಕುಲಭೂಷಣ್ ಜಾಧವ್ಗಲ್ಲುಶಿಕ್ಷೆಪಾಕಿಸ್ತಾನಭಾರತ
Share This Article
Facebook Whatsapp Whatsapp Telegram

Cinema news

Bengaluru International Film Festival
ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವ – ಲಾಸ್ಟ್‌ ಲ್ಯಾಂಡ್‌, ಸಬರ್ ಬೊಂದಾ, ವನ್ಯಾ ಚಿತ್ರಕ್ಕೆ ಪ್ರಶಸ್ತಿ ಗರಿ
Bengaluru City Cinema Karnataka Latest Sandalwood States Top Stories
arvind reddy threat
ಉದ್ಯಮಿ ಅರವಿಂದ್‌ ರೆಡ್ಡಿಗೆ ಕೊಲೆ ಬೆದರಿಕೆ; ಆರೋಪಿ ಬಂಧನ
Bengaluru City Cinema Latest Main Post Sandalwood
again Bigg Boss Rajat controversy photo shoot in villain look while smoking a cigarette Mysuru
ಸಿಗರೇಟ್ ಸೇದುತ್ತಾ ವಿಲನ್ ಲುಕ್‌ನಲ್ಲಿ ಫೋಟೋ ಶೂಟ್ – ಮತ್ತೆ ರಜತ್‌ ವಿವಾದ
Cinema Crime Karnataka Latest Mysuru Top Stories TV Shows
jayant kaikini bengaluru international film festival
ಗೀತರಚನೆಯನ್ನು ಕಲಿಸುವುದಕ್ಕೆ ಸಾಧ್ಯವಿಲ್ಲ, ಅದು ಸುಪ್ತಮನಸ್ಸಿನಿಂದ ಬರಬೇಕು: ಜಯಂತ್‌ ಕಾಯ್ಕಿಣಿ
Cinema Latest Main Post Sandalwood

You Might Also Like

delhi biker dead
Latest

ದೆಹಲಿ ಜಲಮಂಡಳಿ ಯಮಗುಂಡಿಗೆ ಬೈಕ್ ಸವಾರ ಬಲಿ – 20 ಅಡಿಯ ಆಳಕ್ಕೆ ಬಿದ್ದು ದುರ್ಮರಣ

Public TV
By Public TV
3 hours ago
congress leader
Chikkaballapur

ಚಿಕ್ಕಬಳ್ಳಾಪುರದಲ್ಲಿ ನಿಲ್ಲದ ಕಾಂಗ್ರೆಸ್ ಮುಖಂಡರ ದರ್ಪ- ರಾಜೀವ್ ಗೌಡ ಬಳಿಕ ಮತ್ತೋರ್ವನ ಗೂಂಡಾಗಿರಿ

Public TV
By Public TV
3 hours ago
G.Parameshwar 1
Districts

ಬೇಲೂರು ಠಾಣೆಗೆ ದಿಢೀರ್ ಭೇಟಿ, ಪಾಕ್‌, ಅಫ್ಘಾನ್‌ನಿಂದ ಬಂದವ್ರನ್ನ ಹೇಗೆ ಹಿಡಿತೀರಿ – ಪೊಲೀಸರಿಗೆ ಪರಂ ಪ್ರಶ್ನೆ!

Public TV
By Public TV
4 hours ago
g parameshwara 2
Chikkamagaluru

5 ವರ್ಷ ಸಿದ್ದರಾಮಯ್ಯ ಯಾಕೆ ಸಿಎಂ ಆಗಿರಬಾರದು: ಪರಮೇಶ್ವರ್‌

Public TV
By Public TV
4 hours ago
Crime 3
Bengaluru Rural

ಹಿಟ್‌ & ರನ್‌ಗೆ ವ್ಯಕ್ತಿ ಬಲಿ – 11 ಗಂಟೆಗಳ ಕಾಲ ರಸ್ತೆಯಲ್ಲೇ ಬಿದ್ದಿದ್ದ ಶವ!

Public TV
By Public TV
5 hours ago
team india U19 1
Cricket

U19 World Cup Final: ವೈಭವ್‌ ಸ್ಫೋಟಕ ಶತಕ; ಆಂಗ್ಲರ ಸದೆಬಡಿದು ವಿಶ್ವಕಪ್‌ ಗೆದ್ದ ‘ಯಂಗ್‌ ಇಂಡಿಯಾ’

Public TV
By Public TV
6 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?