`ಕಮಲಿ’ (Kamali Serial) ಧಾರಾವಾಹಿಯ ಮೂಲಕ ಮನೆಮಾತಾದ ನಟಿ ಅಮೂಲ್ಯ ಗೌಡ (Amulya Gowda) ಇದೀಗ ಬಿಗ್ ಬಾಸ್ (Bigg Boss) ಮನೆಗೆ ಕಾಲಿಟ್ಟಿದ್ದಾರೆ. ತಮ್ಮ ಹಾಟ್ ಲುಕ್ ಮೂಲಕ ಪಡ್ಡೆ ಹುಡುಗರ ನಿದ್ದೆಗೆಡಿಸಿದ್ದಾರೆ. ಇದೀಗ ಚಿಕ್ಕ ವಯಸ್ಸಿನಲ್ಲಿ ತಾವು ಮನೆಯಲ್ಲಿ ಕಳ್ಳತನ ಮಾಡಿರುವ ಕಥೆಯನ್ನ ನಟಿ ರಿವೀಲ್ ಮಾಡಿದ್ದಾರೆ. ತಮ್ಮ ತರಲೆ ಕೆಲಸದ ಬಗ್ಗೆ ಅಮೂಲ್ಯ ಬಾಯ್ಬಿಟ್ಟಿದ್ದಾರೆ.
ಮೂರನೇ ವಾರದತ್ತ ದೊಡ್ಮನೆಯ ಆಟ ಮುನ್ನುಗ್ಗುತ್ತಿದೆ. ಸಾಕಷ್ಟು ಸ್ಪರ್ಧಿಗಳ ಮಧ್ಯೆ ವಿಶಿಷ್ಟ ವ್ಯಕ್ತಿತ್ವ ಮತ್ತು ಕಾರ್ಯ ವೈಖರಿಯ ಮೂಲಕ ಅನೇಕರ ಗಮನ ಸೆಳೆದಿದ್ದಾರೆ. ಟಾಸ್ಕ್ಗಳಲ್ಲಿ ಸ್ಟ್ರಾಂಗ್ ಆಗಿ ಸ್ಪರ್ಧಿಯಾಗಿ ಗುರುತಿಸಿಕೊಂಡಿದ್ದಾರೆ. ಇನ್ನೂ ಮನೆಯಿಂದ ಹೊರಹೋಗಲು ನಾಮೀನೇಟ್ ಆಗಿದ್ದರು ಕೂಡ ಅತೀ ಹೆಚ್ಚು ವೋಟ್ ಪಡೆದು ಸೇವ್ ಆಗಿದ್ದಾರೆ. ಸದ್ಯ ತಮ್ಮ ಬಾಲ್ಯದ ತರಲೆ ಕೆಲಸದ ಬಗ್ಗೆ ಮನೆಮಂದಿಯ ಜೊತೆ ನಟಿ ಹಂಚಿಕೊಂಡಿದ್ದಾರೆ.
ಬಾಲ್ಯದಲ್ಲಿ ಅಣ್ಣ ನಾನು ಆವಾಗವಾಗ ಮನೆಯಲ್ಲಿ ದುಡ್ಡು ಎತ್ತುತ್ತಿದ್ವಿ. ನಮ್ಮ ಮನೆಯಲ್ಲಿ ಜಾಸ್ತಿ ಹಣ ಕದ್ರೆ ಅದು ನಮ್ಮ ಅಣ್ಣ ಮಾಡಿದ್ದಾನೆ ಅಂತ. 100 ರೂಪಾಯಿ ಕಡಿಮೆ ಕದ್ದರೆ ಅದು ನಾನು ಮಾಡಿದೆ ಅಂತ. ಅವನೇ ಮಾಡಿದ್ದರೂ ಅದು ನನ್ನ ಮೇಲೆ ಬರುತ್ತಿತ್ತು. ಇದೆಲ್ಲಾ ಕಾಲೇಜ್ ಟೈಂನಲ್ಲಿ ಆಗಿರುವುದು. ಅಮ್ಮಂಗೂ ಗೊತ್ತು ನಾವು ದುಡ್ಡು ಎತ್ತುತ್ತಿದ್ವಿ ಅಂತ ಅವರು ಬಿಡು ಮಕ್ಕಳು ಅಲ್ವಾ ಅಂತ ಸುಮ್ಮನಿದ್ದರು.
View this post on Instagram
ಒಂದು ದಿನ ಅಣ್ಣ 6 ಸಾವಿರ ರೂಪಾಯಿ ತೆಗೆದುಕೊಂಡಿದ್ದಾನೆ. ನಮ್ಮ ಮನೆಯಲ್ಲಿ ಹೇಗೆ ಅಂದ್ರೆ ಒಂದು ತಿಂಗಳು ಆ ಹಣದ ಬಗ್ಗೆ ಮಾತನಾಡುತ್ತಿರಲಿಲ್ಲ ಆಮೇಲೆ ನಾವು ಅವತ್ತು ಅಲ್ಲಿ ಹುಡುಕುತ್ತಿದ್ದ ಹಣ ನಾನೆ ಎತ್ಕೊಂಡಿದ್ದು ಅಂತಿದ್ವಿ. ಆ 6 ಸಾವಿರ ರೂಪಾಯಿ ಅಣ್ಣನ ಪ್ಯಾಂಟ್ನಲ್ಲಿತ್ತು. ಹೊರಗಡೆ ಹೋಗಿ ಬಂದಿದ್ದ. ಅವತ್ತು ಅವನ ಜೇಬಿಗೆ ಕೈ ಹಾಕಿದ್ದರೆ ಹಣ ಜಾಸ್ತಿ ಇದೆ. ಮನೆಯಲ್ಲಿ ಯಾರೇ ಕದ್ದಿದ್ದರು ಅದು ನಮಗೆ ಗೊತ್ತಿರುತ್ತೆ ಏಕೆಂದರೆ ಒಂದು ಅವನು ಮಾಡಬೇಕು ಇಲ್ಲ ನಾನು ಮಾಡಬೇಕು. ಇದನ್ನೂ ಓದಿ:ಬಿಗ್ಬಾಸ್ ಮನೆಯಿಂದ ನವಾಜ್ ಔಟ್- ಇಷ್ಟವಾಗಲಿಲ್ಲ ಹುಡುಗನ ನಡೆ
ಅಣ್ಣ ಮಾಡಿದ ಪಿಕ್ಪಾಕೆಟ್ನಲ್ಲಿ ಅವನಿಗೆ ಗೊತ್ತಾಗದ ಹಾಗೇ ಪಾಕೆಟ್ನಿಂದ ದುಡ್ಡು ತೆಗೆದುಕೊಂಡೆ. ಗೊತ್ತಾದರೆ ಬೈಯುತ್ತಾನೆ ಎಂದು ಸಣ್ಣದಾಗಿ ಜೇಬಿಗೆ ತೂತು ಮಾಡಿದೆ ಅಂದ್ರೆ ಎಲ್ಲೂ ತೂತಾಗಿ ಬಿದಿತ್ತು ಅಂದುಕೊಳ್ಳಬೇಕು ಅಂತ. ಒಂದು ವಾರ ಅವನು ನನ್ನ ಜೊತೆ ಮಾತನಾಡಲಿಲ್ಲ. ಒಂದು ತಿಂಗಳು ಆದ ಮೇಲೆ ಅಮ್ಮಂಗೆ ಹೇಳಿದ. ಅಮ್ಮ ನಿನ್ನ ಮಗಳು ಎಷ್ಟು ಛತ್ರಿ ಅಂದ್ರೆ ನಾನೇ ನಿಮ್ಮ ಲಾಕರ್ನಿಂದ ಹಣ ತೆಗೆದಿದ್ದೆ, ಅವಳು ನನ್ನ ಪಾಕೆಟ್ನಿಂದ ತೆಗೆದುಕೊಂಡು ಪಾಕೆಟ್ ತೂತು ಮಾಡಿಟ್ಟಿದ್ದಾಳೆ ಎಂದು ಸತ್ಯ ಹೇಳಿದ್ದ ಎಂದು ತಮ್ಮ ಬಾಲ್ಯದಲ್ಲಿ ತನ್ನ ಛತ್ರಿ ಕೆಲಸದ ಬಗ್ಗೆ ಮಾತನಾಡಿದ್ದಾರೆ. ಅಮೂಲ್ಯ(Amulya Gowda) ಮಾಡಿದ್ದ ತರಲೆ ಕೆಲಸ ಕೇಳಿ ಮನೆ ಮಂದಿ ನಕ್ಕಿದ್ದಾರೆ.