‘ಬಿಗ್ ಬಾಸ್’ (Bigg Boss Kannada 4) ಖ್ಯಾತಿಯ ಪ್ರಥಮ್ಗೆ (Pratham) ನಿನ್ನೆ (ನ.16) ದರ್ಶನ್ ಫ್ಯಾನ್ಸ್ ಹೋಟೆಲ್ವೊಂದರಲ್ಲಿ ನಿಂದಿಸಿದ್ದರ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ಈ ಬೆನ್ನಲ್ಲೇ ಮಾಗಡಿ ರಸ್ತೆಯ ಡಿಸಿಪಿ ಕಚೇರಿಗೆ ಭೇಟಿ ನೀಡಿ ಡಿಸಿಪಿ ಗಿರೀಶ್ ಅವರಿಗೆ ನೇರವಾಗಿ ದರ್ಶನ್ ಫ್ಯಾನ್ಸ್ (Darshan Fans) ವಿರುದ್ಧ ದೂರು ನೀಡಿದ್ದಾರೆ. ಇದನ್ನೂ ಓದಿ:‘ಮಹಾವತಾರ ನರಸಿಂಹ’ ಚಿತ್ರದ ಮೋಷನ್ ಪೋಸ್ಟರ್ ರಿವೀಲ್ ಮಾಡಿದ ಹೊಂಬಾಳೆ ಫಿಲ್ಮ್ಸ್
ಡಿಸಿಪಿ ಕಚೇರಿಗೆ ಭೇಟಿ ನೀಡಿದ್ದ ವೇಳೆ, ಪ್ರಥಮ್ ಪ್ರತಿಕ್ರಿಯಿಸಿ, ಗೂಂಡಾಗಳ ವಿರುದ್ಧ ದೂರು ದಾಖಲಿಸಿದ್ದೇನೆ. ನಿನ್ನೆ ಹೊಟೇಲ್ವೊಂದರಲ್ಲಿ ದರ್ಶನ್ ಅವರ ಕೆಲ ಅಭಿಮಾನಿಗಳ ಅತಿರೇಕ ವರ್ತನೆ ತೋರಿದರು. ಈ ಹಿನ್ನೆಲೆ, ಡಿಸಿಪಿ ಗಿರೀಶ್ ಅವರು ಕ್ರಮ ತಗೆದುಕೊಳ್ಳುವುದಾಗಿ ತಿಳಿಸಿದರು. ಇನ್ನು ಕೆಲವೇ ಹೊತ್ತಲ್ಲಿ ತಪ್ಪು ಮಾಡಿದವರು ಒಳಗೆ ಹೋಗುತ್ತಾರೆ. ಅವರಿಗೆ ತಕ್ಕ ಶಿಕ್ಷೆ ಆಗುತ್ತದೆ ಎಂದಿದ್ದಾರೆ.
- Advertisement
ಅಷ್ಟಕ್ಕೂ ಆಗಿದ್ದೇನು?
- Advertisement
ನಿನ್ನೆ ಹೋಟೆಲ್ವೊಂದಕ್ಕೆ ಪ್ರಥಮ್ ತೆರಳಿದ ಸಂದರ್ಭದಲ್ಲಿ ಏಕಾಎಕಿ ಬಂದು ಜೈ ಡಿಬಾಸ್ ಅಂತ ಕೂಗಿ ಅಂತ ಫ್ಯಾನ್ಸ್ ಗಲಾಟೆ ಮಾಡಿದರು. ಅಶ್ಲೀಲ ಪದ ಬಳಸಿ ಕೈಮಿಲಾಯಿಸೋಕೆ ಫ್ಯಾನ್ಸ್ ಯತ್ನಿಸಿದರು. ಆ ನಂತರ ಹೋಟೆಲ್ನ 8 ಜನ ಬೌನ್ಸರ್ ಆ ಗೂಂಡಾಗಳನ್ನು ಹೊರಗೆ ತಳ್ಳಿದ್ದರು ಎಂದು ಘಟನೆಯ ಬಗ್ಗೆ ಪ್ರಥಮ್ ವಿವರಿಸಿದ್ದರು.
ಆ ನಂತರ ಹೋಟೆಲ್ ಸಿಬ್ಬಂದಿ ಮತ್ತು ಮ್ಯಾನೇಜರ್ ಮನವಿಯ ಮೇರೆಗೆ ನಾನು ದೂರು ಕೊಡಬಾರದು ಎಂದು ನಿರ್ಧರಿಸಿದೆ. ನಮ್ಮ ಪಾಡಿಗೆ ನಾವಿದ್ದೇವೆ. ನಿಮ್ಮ ಪಾಡಿಗೆ ನೀವಿರಿ. ದರ್ಶನ್ ಸರ್ ಅವರ ಪಾಡಿಗೆ ಇದ್ದಾರೆ. ಈ ಮಿನಿ ಗೂಂಡಾಗಳ ನಿಗರಾಟ ನೋಡೋಕೆ ಆಗುತ್ತಿಲ್ಲ. ಈ ಘಟನೆ ಎಲ್ಲವೂ ಸಿಸಿಟಿವಿಯಲ್ಲಿ ರೆಕಾರ್ಡ್ ಆಗಿದೆ ಎಂದು ಎಕ್ಸ್ನಲ್ಲಿ ನಟ ತಿಳಿಸಿದ್ದರು.