ಬಿಗ್ ಬಾಸ್ ಮನೆಯಲ್ಲಿ(Bigg Boss House) ಒಂದಲ್ಲಾ ಒಂದು ವಿಚಾರವಾಗಿ ಸದಾ ಸುದ್ದಿಯಲ್ಲಿರುವ ಆರ್ಯವರ್ಧನ್ ಗುರೂಜಿ (Aryavardhan Guruji), ನಂಬರ್ ಅಂದ್ರೆ ನಾನು ಎಂದು ಹೇಳುವ ಮೂಲಕ ಸಖತ್ ಹೈಲೆಟ್ ಆಗಿದ್ದರು. ಜ್ಯೋತಿಷ್ಯವನ್ನೇ ನಂಬಿ ಬದುಕುತ್ತಿರುವ ಗುರೂಜಿ ಇದೀಗ ದೊಡ್ಮನೆಯಲ್ಲಿ ಅಮೂಲ್ಯ ತುಟಿ ನೋಡಿ ಜ್ಯೋತಿಷ್ಯ ಹೇಳಿದ್ದಾರೆ.
ದೊಡ್ಮನೆ ಈಗ ಎರಡನೇ ವಾರಕ್ಕೆ ಕಾಲಿಟ್ಟಿದೆ. ಸಾಕಷ್ಡು ರೋಚಕ ತಿರುವುಗಳನ್ನ ಪಡೆದುಕೊಳ್ಳುತ್ತಿರುವ ಬಿಗ್ ಬಾಸ್ ಮನೆಯಲ್ಲಿ ಕಾಲಿಗೆ ಒಂದು ಕಾಲ ಎಂಬ ಟಾಸ್ಕ್ ಅನ್ನು ಕೊಡಲಾಗಿದೆ. ದಿವ್ಯಾ ಉರುಡುಗ(Divya Uruduga) ಮತ್ತು ಸಾನ್ಯ (Sanya Iyer) ಒಂದು ಜೋಡಿ ಮತ್ತು ದೀಪಿಕಾ ಮತ್ತು ರೂಪೇಶ್ ಮತ್ತೊಂದು ಜೋಡಿಯಾಗಿ ಎರಡು ತಂಡಗಳ ಜಟಾಪಟಿ ನಡೆದಿದೆ. ಈ ವೇಳೆ ಗುರೂಜಿ ಮತ್ತು ನಟಿ ಅಮೂಲ್ಯ ಸಂಭಾಷಣೆ ಎಲ್ಲರ ನಗುವಿಗೆ ಕಾರಣವಾಗಿದೆ.
ಟಾಸ್ಕ್ ವೀಕ್ಷಿಸುವ ಸಮಯದಲ್ಲಿ ಗುರೂಜಿ ಅಮೂಲ್ಯ ತುಟಿ ನೋಡಿ ಭವಿಷ್ಯ ನುಡಿದಿದ್ದಾರೆ. ನಿಮ್ಮ ತುಟಿ ಮೇಲೆ ಚೂಪಾಗಿದೆ. ಹೀಗಿದ್ದರೆ ಒಳ್ಳೆಯದು ಎಲ್ಲರೂ ನಿಮ್ಮನ್ನು ಇಷ್ಟಪಡುತ್ತಾರೆ ಎಂದು ಗುರೂಜಿ ಹೇಳಿದ್ದಾರೆ. ಅವರ ಮಾತಿಗೆ ಅಮೂಲ್ಯ ನಕ್ಕಿದ್ದಾರೆ. ಇದೇ ವೇಳೆ ರಾಕೇಶ್ ಅಡಿಗ ನನ್ನ ತುಟಿ ಭವಿಷ್ಯ ಹೇಳಿ ಎಂದು ಕೇಳಿದ್ದಾರೆ. ಆಗ ಗುರೂಜಿ, ನಿನ್ನ ಹಿಂದೆ ಯಾರು ಬೀಳಲ್ಲ, ನೀನೇ ಎಲ್ಲರ ಹಿಂದೆ ಹೋಗುತ್ತಿಯಾ ಟಾಂಗ್ ಕೊಟ್ಟಿದ್ದಾರೆ. ಗುರೂಜಿ ಮಾತಿಗೆ ಮನೆಮಂದಿಯೆಲ್ಲಾ ಬಿದ್ದು ಬಿದ್ದು ನಕ್ಕಿದ್ದಾರೆ. ಇದನ್ನೂ ಓದಿ:ಒಂದು ವಾರಕ್ಕೆ ‘ಕಾಂತಾರ’ದ ಕಲೆಕ್ಷನ್ 50 ಕೋಟಿ: ಸಿನಿ ಪಂಡಿತರ ಅಚ್ಚರಿಯ ಲೆಕ್ಕಾಚಾರ
ಇದೇ ವೇಳೆ ಅರುಣ್ ಸಾಗರ್ ಕೂಡ ನನ್ನ ತುಟಿ ನೋಡಿ ಭವಿಷ್ಯ ಹೇಳಿ ಎಂದಿದ್ದಾರೆ. ನೀವು ಮೊದಲು ಮೀಸೆ ಬೊಳಿಸಿಕೊಂಡು ಬನ್ನಿ ಎಂದು ಗುರೂಜಿ ಚಮಕ್ ಕೊಟ್ಟಿದ್ದಾರೆ. ಈ ಮೂಲಕ ಗುರೂಜಿ ಬಿಗ್ ಬಾಸ್ ಮನೆಯಲ್ಲಿ ನೇರ ಮಾತಿನ ಮೂಲಕ ಹೈಲೆಟ್ ಆಗಿದ್ದಾರೆ.