Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: Bigg Boss Kannada: ಡ್ರೋನ್ ರನ್ನರ್ ಅಪ್ ಆಗೋಕೆ ತಂತ್ರಗಾರಿಕೆ ಕಾರಣ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | Bigg Boss Kannada: ಡ್ರೋನ್ ರನ್ನರ್ ಅಪ್ ಆಗೋಕೆ ತಂತ್ರಗಾರಿಕೆ ಕಾರಣ

Cinema

Bigg Boss Kannada: ಡ್ರೋನ್ ರನ್ನರ್ ಅಪ್ ಆಗೋಕೆ ತಂತ್ರಗಾರಿಕೆ ಕಾರಣ

Public TV
Last updated: January 29, 2024 11:45 am
Public TV
Share
5 Min Read
drone prathap 1
SHARE

ಬಿಗ್ ಬಾಸ್ (Bigg Boss Kannada)ಮನೆಯಲ್ಲಿ ಸದಾ ಒಬ್ಬಂಟಿಯಾಗಿ, ಯಾವುದರಲ್ಲಿಯೂ ಅಷ್ಟಾಗಿ ಪಾಲ್ಗೊಳ್ಳದ ಕಾರ್ತಿಕ್‌ ಅವರೊಳಗಿದ್ದ ತಂತ್ರಗಾರ ನಿಚ್ಛಳವಾಗಿ ಕಾಣಿಸಿಕೊಂಡಿದ್ದು ನಾಲ್ಕನೇ ವಾರದಲ್ಲಿ. ಆ ವಾರ ನಾಮಿನೇಷನ್‌ ಪಾಸ್‌ಗಳನ್ನು ಬಲೂನ್‌ನಲ್ಲಿ ತುಂಬಿ ಮನೆಯಿಡೀ ಬಲೂನ್‌ಗಳನ್ನು ಇಡಲಾಗಿತ್ತು. ಸದಸ್ಯರು ಬಲೂನ್‌ಗಳನ್ನು ಒಡೆದು ಅದರೊಳಗಿನ ಪಾಸ್‌ಗಳನ್ನು ಹುಡುಕಿ ತೆಗೆದುಕೊಳ್ಳಬೇಕಿತ್ತು. ಈ ಟಾಸ್ಕ್‌ನಲ್ಲಿ ಅತ್ಯಂತ ತಾಳ್ಮೆಯಿಂದಲೇ ಆಡಿದ ಪ್ರತಾಪ್ (Drone Pratap) ಅವರಿಗೆ ಒಟ್ಟು ಐದು ಪಾಸ್‌ಗಳು ಸಿಕ್ಕಿದ್ದವು. ಒಬ್ಬರ ಕೈಯಿಂದ ಇನ್ನೊಬ್ಬರು ಪಾಸ್‌ ಅನ್ನು ಕಸಿದುಕೊಳ್ಳಬಹುದು ಎಂಬ ಕಾರಣಕ್ಕೆ ಪ್ರತಾಪ್‌ ಒಂದೇ ಒಂದು ಪಾಸ್‌ ಅನ್ನು ಕಿಸೆಯಲ್ಲಿಟ್ಟುಕೊಂಡು ಉಳಿದವನ್ನು ಮೈಕ್‌ ಕವರ್ ಒಳಗೆ ಇಟ್ಟಿದ್ದರು.

Drone Pratap 2

ಪ್ರತಾಪ್‌ ಬಳಿ ಇದ್ದ ಒಂದು ಪಾಸ್‌ ಅನ್ನು ಕಾರ್ತಿಕ್, ಸ್ನೇಹಿತ್ ಮತ್ತು ಮೈಕಲ್ ಸೇರಿಕೊಂಡು ಬಲವಂತವಾಗಿ ಕಿತ್ತುಕೊಂಡರು. ಹಾಗಾಗಿ ಪ್ರತಾಪ್ ಬಳಿ ಪಾಸ್‌ಗಳು ಇಲ್ಲ ಎಂದು ಎಲ್ಲರೂ ಭಾವಿಸಿದ್ದರು. ಆದರೆ ಪಾಸ್ ಗಳಿಸುವ ಅವಧಿ ಮುಗಿದಾಗ ಪ್ರತಾಪ್ ತಮ್ಮ ಬಳಿ ಇದ್ದ ಇನ್ನೂ ನಾಲ್ಕು ಪಾಸ್‌ಗಳನ್ನು ತೆರೆದು ತೋರಿಸಿದರು.ಅದನ್ನು ಕಂಡು ಮನೆಮಂದಿಯೆಲ್ಲರೂ ಬೆಕ್ಕಸ ಬೆರಗಾಗಿದ್ದಂತೂ ನಿಜ. ತಾವು ಒಡೆದ ಬಲೂನ್‌ಗಳ ಒಳಗೇ ಇದ್ದ ನಾಮಿನೇಷನ್‌ ಪಾಸ್‌ಗಳನ್ನೇ ಮನೆಯ ಉಳಿದ ಸದಸ್ಯರು ಗುರ್ತಿಸದೆ ನಿರ್ಲಕ್ಷಿಸಿದ್ದರು. ಅದನ್ನೂ ಪ್ರತಾಪ್ ಎತ್ತಿಕೊಂಡಿದ್ದರು. ಇದಲ್ಲದೆ ಅವತ್ತು ಅವರು ನಾಮಿನೇಷನ್‌ ಪಾಸ್‌ಗಳನ್ನು ಬಳಸಿಕೊಂಡು ಸೇವ್ ಮಾಡಿದ ನಾಲ್ಕು ಜನರೂ ಮಹಿಳಾ ಸ್ಪರ್ಧಿಗಳು ಎಂಬುದನ್ನೂ ಗಮನಿಸಬೇಕು. ಇದೂ ಕೂಡ ಪ್ರತಾಪ್ ತಂತ್ರಗಾರಿಕೆಯ ಭಾಗವೇ ಎಂಬುದು ಮುಂದಿನ ದಿನಗಳಲ್ಲಿ ಅವರೆಲ್ಲರೂ ಬೇರೆ ಬೇರೆ ರೀತಿಯಲ್ಲಿ ಪ್ರತಾಪ್ ಬೆಂಬಲಕ್ಕೆ ನಿಂತಿದ್ದೇ ಸಾಕ್ಷಿ.

Drone Pratap

ಇದಲ್ಲದೆ ಐದನೇ ವಾರವೂ ಅವರು ತಮ್ಮ ತಂತ್ರನಿಪುಣತೆಯನ್ನು ತೋರಿಸಿ ಮನೆಯ ಕ್ಯಾಪ್ಟನ್ ಆಗಿದ್ದರು. ಪಾಯಿಂಟ್ಸ್‌ ಖರೀದಿಸುವ ವಾರದಲ್ಲಿಯೂ ಪ್ರತಾಪ್‌ ಅವರ ಸ್ಟ್ರಾಟಜಿಯಿಂದಲೇ ಸಂಗೀತಾ ತಂಡ ಗೆಲುವು ಕಂಡಿದ್ದಲ್ಲದೇ, ಅವರ ತಂಡದಲ್ಲಿದ್ದ ನಮ್ರತಾ, ಪ್ರತಾಪ್ ಅವರ ಬೆಂಬಲದೊಂದಿಗೆ ಕ್ಯಾಪ್ಟನ್ ಕೂಡ ಆದರು. ಇಂಥ ಹತ್ತು ಹಲವು ನಿದರ್ಶನಗಳನ್ನು ಪ್ರತಾಪ್ ಜರ್ನಿಯಲ್ಲಿ ನೋಡಬಹುದು. ‘ಯಾವಾಗಲೂ ದಿದಿಯರ ಮಡಿಲಿನಲ್ಲಿಯೇ ಇರುತ್ತಾನೆ’, ‘ದಿದಿಯರ ಬೆಂಬಲ ಇಲ್ದಿದ್ರೆ ಅವ್ನತ್ರ ಏನೂ ಮಾಡಕ್ಕಾಗಲ್ಲ’, ‘ದಿದಿ ದಿದಿ ಅಂತ ಯಾವಾಗ್ಲೂ ಅದೇ ಆಯ್ತು’ ಹೀಗೆ ಹತ್ತು ಹಲವು ಟೀಕೆಗಳನ್ನು ಪ್ರತಾಪ್ ಆಗಾಗ ಕೇಳಿಸಿಕೊಂಡಿದ್ದಿದೆ. ಆದರೆ ಅವರು ಅದರ ಬಗ್ಗೆ ತಲೆಕೆಡಿಸಿಕೊಂಡಿಲ್ಲ. ಮನೆಯೊಳಗೆ ದಿದಿಯರ ನೆಚ್ಚಿನ ತಮ್ಮನಾಗಿದ್ದದ್ದು ಅವರ ಜರ್ನಿಯನ್ನು ಎಷ್ಟೋ ಸಹನೀಯಗೊಳಿಸಿದ್ದಂತೂ ನಿಜ.

drone prathap 1 3

ಎಲಿಮಿನೇಷನ್ ಪಾಸ್‌ ನಲ್ಲಿ ಸೇವ್ ಮಾಡುವಾಗ ಪ್ರತಾಪ್ ಮನೆಯ ಹೆಣ್ಣುಮಕ್ಕಳನ್ನೇ ಸೇವ್ ಮಾಡಿದ್ದು, ಅವರಲ್ಲಿ ಪ್ರತಾಪ್ ಬಗ್ಗೆ ಒಂದು ರೀತಿಯ ಕೃತಜ್ಞತಾಭಾವವನ್ನು ಹುಟ್ಟಿಸಿತ್ತು. ಅಲ್ಲದೆ, ಪ್ರತಾಪ್ ಕುಗ್ಗಿದ್ದಾಗ ಅವನ ಬೆಂಬಲಕ್ಕೆ ನಿಂತವರೂ ಈ ದೀದಿಯರೇ. ನಮ್ರತಾ, ಕಲಿಸಿಕೊಟ್ಟ ಡಾನ್ಸ್‌ ಅನ್ನು ಕಿಚ್ಚನ ಮುಂದೆ ಪ್ರದರ್ಶಿಸಿ ಮೆಚ್ಚುಗೆ ಗಳಿಸಿದ್ದರು. ಬಾತ್‌ರೂಮಿನಲ್ಲಿ ಹೋಗಿ ಅಳುವಾಗ,ಒಬ್ಬಂಟಿಯಾಗಿ ಮಂಕಾಗಿ ಕೂತಾಗ ಅವರ ಜೊತೆಗೆ ನಿಂತಿದ್ದು ಸಂಗೀತಾ, ನಮ್ರತಾ, ಭಾಗ್ಯಶ್ರೀ ಹೀಗೆ ಬಹುತೇಕ ಹೆಣ್ಣುಮಕ್ಕಳೇ. ಸದಸ್ಯರ ಕುಟುಂಬದವರು ಮನೆಯೊಳಗೆ ಬರುವ ವಾರದಲ್ಲಿ ಪ್ರತಾಪ್ ಅವರ ಅಪ್ಪ, ಅಮ್ಮ ಮನೆಯ ಹೆಣ್ಣುಮಕ್ಕಳಿಗೆಲ್ಲ ಸೀರೆ ತಂದುಕೊಟ್ಟಿದ್ದೂ ಪ್ರತಾಪ್ ಜೊತೆಗೆ ದಿದಿಯರ ಆಪ್ತಬಾಂಧವ್ಯ ಹೆಚ್ಚಿಸಲು ಕಾರಣವಾಯ್ತು. ಕೊನೆಯ ವಾರದವರೆಗೂ ಸಂಗೀತಾ, ಪ್ರತಾಪ್ ಅವರ ಬೆನ್ನಿಗೆ ನಿಂತಿದ್ದು, ಮನೆಯಿಂದ ಹೊರಬಂದ ಮೇಲೂ, ‘ಅವನು ಯಾವಾಗಲೂ ನನ್ನ ಚಿಕ್ಕ ತಮ್ಮನಾಗೇ ಇರ್ತಾನೆ’ ಎಂದು ನಮ್ರತಾ ಭಾವುಕರಾಗಿ ಹೇಳಿದ್ದು ಇವೆಲ್ಲವೂ ಪ್ರತಾಪ್ ಅವರ ವ್ಯಕ್ತಿತ್ವವನ್ನು ತೋರಿಸುತ್ತವೆ.

drone prathap 3

ರಕ್ಕಸರು ಗಂಧರ್ವರ ಟಾಸ್ಕ್‌ನ ವಾರದಲ್ಲಿ ಕುರ್ಚಿಯಲ್ಲಿ ಕೂಡಿಸಿ ನೀರನ್ನು ಸೋಕಿದಾಗ ಪ್ರತಾಪ್ ಮತ್ತು ಸಂಗೀತಾ ಕಣ್ಣುಗಳಿಗೆ ಗಾಯವಾಗಿತ್ತು. ಅದರಿಂದಾಗಿ ಅವರು ಕೆಲಕಲ ಆಸ್ಪತ್ರೆಯನ್ನೂ ಸೇರುವಂತಾಗಿತ್ತು. ತಿರುಗಿ ಬಂದಮೇಲೂ ಹಲವು ದಿನಗಳ ಕಾಲ ಕಣ್ಣಿಗೆ ಕಪ್ಪು ಕನ್ನಡಕ ಇಟ್ಟುಕೊಂಡೇ ಇರುವಂತಾಗಿತ್ತು. ಈ ಹಂತದಲ್ಲಿ ಸಂಗೀತಾ ಜೊತೆಗೆ ಅವರ ಬಾಂಧವ್ಯ ಇನ್ನಷ್ಟು ಗಟ್ಟಿಗೊಂಡಿತು. ಮನೆಯೊಳಗೆ ತಿರುಗಿ ಬಂದಾಗ ಅವರಿಬ್ಬರೂ ಮೊದಲಿಗಿಂತ ಹೆಚ್ಚು ಸ್ಟ್ರಾಂಗ್ ಆಗಿದ್ದಿದ್ದು ಎದ್ದು ಕಾಣಿಸುವಂತಿತ್ತು. ಸ್ವಾಮೀಜಿ ಅವರು ಭವಿಷ್ಯ ನುಡಿಯುತ್ತ, ನೀನು ಕುಟುಂಬದಿಂದ ದೂರವಿರುವುದು ಒಳಿತು ಎಂದು ಹೇಳಿದ್ದು ಪ್ರತಾಪ್ ಅವರನ್ನು ಕುಗ್ಗಿಸಿತ್ತು. ಅದೇ ನೋವಿನಲ್ಲಿ ಅವರು ಸರಿಯಾಗಿ ಊಟ ಮಾಡದೆ, ಕೊನೆಗೆ ಇನ್‌ಫೆಕ್ಷನ್‌ ಸಮಸ್ಯೆಯಿಂದ ಮತ್ತೆ ಆಸ್ಪತ್ರೆಗೆ ದಾಖಲಾಗುವಂತಾಗಿತ್ತು. ಹೀಗೆ ಈ ಸೀಸನ್‌ನಲ್ಲಿ ಪ್ರತಾಪ್ ಎರಡು ಬಾರಿ ಆಸ್ಪತ್ರೆಗೆ ದಾಖಲಾಗಿ ತಿರುಗಿ ಬಂದರು.

drone prathap 2

ನಾನು ನನ್ನ ಕುಟುಂಬದಿಂದ ಮೂರು ವರ್ಷಗಳಿಂದ ದೂರ ಇದ್ದೇನೆ. ಅವರನ್ನು ಮಾತಾಡಿಸಬೇಕು ಎಂದು ಪ್ರತಾಪ್ ಯಾವಾಗಲೂ ಹೇಳುತ್ತಲೇ ಇದ್ದರು. ಆರನೇ ವಾರಾಂತ್ಯದ ಕಿಚ್ಚಿನ ಎಪಿಸೋಡ್‌ನಲ್ಲಿ ಅವರ ಕನಸು ನನಸಾಯಿತು. ಪೋನ್‌ನಲ್ಲಿ ಪ್ರತಾಪ್ ತಂದೆಯ ಧ್ವನಿ ಮೊಳಗುತ್ತಿದ್ದಂತೆಯೇ ಪ್ರತಾಪ್‌, ‘ಅಪ್ಪಾ’ ಎಂದು ಕರೆಯುತ್ತ ಬಿಕ್ಕಿ ಬಿಕ್ಕಿ ಅತ್ತರು. ಹಲವು ವರ್ಷಗಳ ನಂತರ ಅವರು ತಂದೆಯ ಜೊತೆಗೆ ಮಾತಾಡಿದ್ದು ಎಂಥವರ ಹೃದಯವನ್ನೂ ಕರಗಿಸುವಂತತ್ತು. ಮತ್ತೊಂದು ವಾರದಲ್ಲಿ ಎಲ್ಲ ಸದಸ್ಯರ ಕುಟುಂಬದವರೂ ಮನೆಯೊಳಗೆ ಬಂದರು. ಪ್ರತಾಪ್‌ಗೆ ನಮ್ಮ ಕುಟುಂಬದವರು ಬರುತ್ತಾರೋ ಇಲ್ಲವೋ ಎಂಬ ಅನುಮಾನ ಇದ್ದೇ ಇತ್ತು. ಅದಕ್ಕಾಗಿ ಊಟವನ್ನೂ ಮಾಡದೆ ಕಾದಿದ್ದರು. ಕೊನೆಗೂ ಪ್ರತಾಪ್ ತಂದೆ ತಾಯಿ ಮನೆಯೊಳಗೆ ಬಂದಾಗ ಚಿಕ್ಕ ಮಗುವಿನಂತೆ ಖುಷಿಯಿಂದ ಕುಣಿದಾಡಿದರು. ತಂದೆಯ ಕೈಯಾರೆ ಬಾಳೆಹಣ್ಣು ತಿನ್ನಿಸಿಕೊಂಡರು. ಕುಟುಂಬದ ಪರಿಸ್ಥಿತಿ ವಿಚಾರಿಸಿಕೊಂಡು, ಇಲ್ಲಿಂದ ಬಂದ ಕೂಡಲೇ ಮನೆಗೆ ಬರುತ್ತೇನೆ. ತಂಗಿಯ ಮದುವೆ ನಾನೇ ನಿಂತು ಮಾಡಿಸುತ್ತೇನೆ ಎಂದು ಮಾತುಕೊಟ್ಟರು. ಅವರ ಪುನರ್‍‌ಮಿಲನ ನೋಡಿ ಎಲ್ಲರೂ ಭಾವುಕಗೊಂಡಿದ್ದರು.

DRONE PRATHAP

ಪ್ರತಾಪ್ ಎಂಥ ಸಂದರ್ಭದಲ್ಲಿಯೂ ತಾಳ್ಮೆ ಕಳೆದುಕೊಂಡಿದ್ದು ವಿರಳ. ವಿನಯ್, ಕಾರ್ತಿಕ್, ಸಂಗೀತಾ ಅಥವಾ ಇನ್ಯಾವುದೇ ಮನೆಯ ಸದಸ್ಯರು ಆಕ್ರೋಶದಲ್ಲಿ ಅವರ ಮೇಲೆ ಮುಗಿಬಿದ್ದಾಗಲೂ ಅವರು ಮಾತ್ರ ತಾಳ್ಮೆ ಕಳೆದುಕೊಳ್ಳದೆ ತಣ್ಣಗಿನ ಧ್ವನಿಯಲ್ಲಿ, ಸ್ಪಷ್ಟವಾದ ಮಾತುಗಳಲ್ಲಿ ವಿವರಣೆ ಕೊಡುತ್ತಿದ್ದರು. ಈ ತಾಳ್ಮೆ ಅವರ ಈ ಜರ್ನಿಯಲ್ಲಿ ಬಹುಮುಖ್ಯ ಪಾತ್ರ ವಹಿಸಿದೆ. ಊಹಿಸಲೂ ಸಾಧ್ಯವಿಲ್ಲದಷ್ಟು ಏರಿಳಿತಗಳ ಪ್ರಯಾಣವನ್ನು ದಾಟಿ ಪ್ರತಾಪ್‌ ಫಿನಾಲೆ ವೀಕ್‌ಗೆ ಅಡಿಯಿಟ್ಟಿದ್ದರು. ‘ಟಿಕೆಟ್‌ ಟು ಫಿನಾಲೆ’ ವಾರದಲ್ಲಿ ಎಲ್ಲರಿಗಿಂತ ಹಚ್ಚು ಅಂಕಗಳನ್ನು ಪಡೆದುಕೊಂಡಿದ್ದರು. ತಾನು ಫಿನಾಲೆ ವಾರಕ್ಕೆ ಕಾಲಿಟ್ಟಿದ್ದೇನೆ ಎಂದೇ ಅಂದುಕೊಂಡಿದ್ದ ಅವರಿಗೆ ಬಿಗ್‌ಬಾಸ್ ಶಾಕ್ ಕೊಟ್ಟಿದ್ದರು. ಅತಿ ಹೆಚ್ಚು ಅಂಕ ಪಡೆದ ಮೂರು ಸದಸ್ಯರಲ್ಲಿ ಯಾರು ಫಿನಾಲೆ ವಾರಕ್ಕೆ ಹೋಗಬೇಕು ಎಂಬುದನ್ನು ಮನೆಯ ಸದಸ್ಯರು ಬಹುಮತಗೊಂದಿಗೆ ನಿರ್ಧರಿಸಬೇಕು ಎಂದು ಹೇಳಿದ್ದರು. ಆ ಹಂತದಲ್ಲಿ ಪ್ರತಾಪ್‌ಗೆ ವೋಟ್ ಹಾಕಿದ್ದು ವರ್ತೂರು ಸಂತೋಷ್ ಒಬ್ಬರೇ. ಸಂಗೀತಾ ಅತಿಹೆಚ್ಚು ಮತಗಳನ್ನು ಪಡೆದು ಫಿನಾಲೆ ವೀಕ್‌ಗೆ ಹೋಗಿದ್ದರು. ಆದರೆ ಜನರ ಮತಗಳ ಸಹಾಯದಿಂದ ಪ್ರತಾಪ್ ಕೂಡ ಫಿನಾಲೆ ವೀಕ್‌ಗೆ ಪ್ರವೇಶಿಸಿದರು.

ಹೀಗೆ ಅತಿ ಹೆಚ್ಚು ಭಾವುಕ, ನೋವಿನ, ಹೆಮ್ಮೆಯ ಗಳಿಗೆಗಳನ್ನು ಹಾದುಬಂದ ಸ್ಪರ್ಧಿ ಪ್ರತಾಪ್. ಬಿಗ್‌ಬಾಸ್‌ ವೇದಿಕೆ ಅವರ ಇಮೇಜ್‌ ಅನ್ನು ಬದಲಿಸಿದ್ದಂತೂ ನಿಜ. ‘ತಾವು ಹಿಂದೆ ಕೆಲವು ಸಂದರ್ಭದಲ್ಲಿ ತಪ್ಪು ಮಾಡಿದ್ದೇನೆ. ತಪ್ಪು ಮಾತಾಡಿದ್ದೇನೆ. ಅದಕ್ಕಾಗಿ ಕ್ಷಮೆ ಕೇಳುತ್ತೇನೆ. ಆದರೆ ಇನ್ನು ಸುಧಾರಿಸಿಕೊಂಡು ನಡೆಯುತ್ತೇನೆ’  ಎಂದು ಅವರು ಹೇಳಿದ್ದೇ ಅವರೊಳಗಿನ ಪರಿವರ್ತನೆಗೆ ಸಾಕ್ಷಿ.

TAGGED:Bigg Boss KannadaDrone PratapRunner Upಡ್ರೋನ್ ಪ್ರತಾಪ್ಬಿಗ್ ಬಾಸ್ ಕನ್ನಡರನ್ನರ್ ಅಪ್
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

ಸಾಂದರ್ಭಿಕ ಚಿತ್ರ
Latest

24 ಗಂಟೆಯಲ್ಲಿ ಇಸ್ರೇಲಿಗೆ ಅಮೆರಿಕದಿಂದ ಬಂತು 6,500 ಟನ್ ಯುದ್ಧಸಾಮಗ್ರಿ – ಮತ್ತೆ ಯುದ್ಧ ಆರಂಭ?

Public TV
By Public TV
14 minutes ago
Young man arrested for pursuing her in the name of love Bengaluru
Bengaluru City

ತರಬೇತಿ ನಿರತ ಗಗನಸಖಿಗೆ ಕಿರುಕುಳ: ಪ್ರೀತಿ ಹೆಸರಲ್ಲಿ ಬೆನ್ನಟ್ಟಿದ್ದ ಕಾಮುಕ ಅರೆಸ್ಟ್‌

Public TV
By Public TV
40 minutes ago
Mother dies trying to save drowning children in Chintamani Murugamalla Dargah Lake
Chikkaballapur

ಕೆರೆಯಲ್ಲಿ ಮುಳುಗುತ್ತಿದ್ದ ಮಕ್ಕಳನ್ನು ರಕ್ಷಿಸಲು ಹೋಗಿ ತಾಯಿ ಸಾವು

Public TV
By Public TV
1 hour ago
West Bengal exit poll sparks alarm in Dhaka Bangladesh MP Akhter Hossen fears refugee crisis if BJP wins
Latest

ಬಂಗಾಳದಲ್ಲಿ ಬಿಜೆಪಿಗೆ ಗೆಲುವಿನ ಮುನ್ಸೂಚನೆ – ದೊಡ್ಡ ಚಿಂತೆಯ ವಿಷಯ ಎಂದ ಬಾಂಗ್ಲಾ ಸಂಸದ

Public TV
By Public TV
2 hours ago
Untitled 1 copy
Districts

ದಂತ ಕಳೆದುಕೊಂಡ ಬಳಿಕ ಮತ್ತೆ ಕ್ಯಾಪ್ಟನ್‌ ಜೊತೆ ಕಾಳಗಕ್ಕೆ ಸಜ್ಜಾದ ಭೀಮಾ

Public TV
By Public TV
3 hours ago
vlcsnap 2026 05 01 08h09m37s328
Districts

ಅಕಾಲಿಕ ಮಳೆಗೆ ಎಕರೆಗಟ್ಟಲೆ ಬಾಳೆ ಬೆಳೆ ನಾಶ – ರೈತರ ಕಣ್ಣೀರು

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?