ರಾಜಕೀಯ ಅಖಾಡಕ್ಕಿಳಿದ ಪ್ರಶಾಂತ್ ಸಂಬರ್ಗಿ

Public TV
1 Min Read
PRASHANTH SAMBARGI 1

ಬಿಗ್ ಬಾಸ್ (Bigg Boss Kannada) ಶೋ ಮೂಲಕ ಮನೆ ಮಾತಾದ ಪ್ರಶಾಂತ್ ಸಂಬರ್ಗಿ (Prashanth Sambargi) ಇದೀಗ ರಾಜಕೀಯ (Politics) ಅಖಾಡಕ್ಕೆ ಕಾಲಿಟ್ಟಿದ್ದಾರೆ. ಕಿರುತೆರೆಯಲ್ಲಿ ರಾಜಕಾರಣಿಯಾಗಿ ಮಿಂಚಲು ರೆಡಿಯಾಗಿದ್ದಾರೆ. ಇದನ್ನೂ ಓದಿ: ಅಭಿಷೇಕ್ ಅಂಬರೀಶ್ ಮದುವೆ ಬಗ್ಗೆ ಮಾತಾಡಿದ ಸುಮಲತಾ

prashanth sambargi

ದೊಡ್ಮನೆಯಲ್ಲಿ ತಮ್ಮ ಖಡಕ್ ಮಾತುಗಳಿಂದ ಗಮನ ಸೆಳೆದ ಸ್ಪರ್ಧಿ ಪ್ರಶಾಂತ್ ಸಂಬರ್ಗಿ ಕಿರುತೆರೆಯತ್ತ ಮುಖ ಮಾಡಿದ್ದಾರೆ. `ಕೆಂಡಸಂಪಿಗೆ’ (Kendasampige Serial) ಧಾರಾವಾಹಿಯಲ್ಲಿ ನಾಯಕ ತೀರ್ಥಂಕರ್ ಪ್ರಸಾದ್ ಮುಂದೆ ಸೆಡ್ಡು ಹೊಡೆಯಲು ಸಂಬರ್ಗಿ ಎಂಟ್ರಿ ಕೊಟ್ಟಿದ್ದಾರೆ.

PRASHANTH SAMBARGI

ಮೊದಲ ಬಾರಿಗೆ ರಾಜಕಾರಣಿ ಪಾತ್ರದ ಮೂಲಕ ಸಂಬರ್ಗಿ ನಟಿಸಿದ್ದಾರೆ. ಭೈರತಿ ಕುಣಿಗಲ್ ಎಂಬ ಪಾತ್ರಕ್ಕೆ ಜೀವ ತುಂಬಿದ್ದಾರೆ. ಈ ಪಾತ್ರದ ಅವಕಾಶ ಮೊದಲು ಹೆಸರಾಂತ ನಟ ಅವಿನಾಶ್‌ಗೆ ಸಿಕ್ಕಿತ್ತು. ಡೇಟ್ ಕ್ಲಾಶ್ ಆದ ಕಾರಣ, ಪ್ರಶಾಂತ್ ಸಂಬರ್ಗಿ ಅವರಿಗೆ ಅವಕಾಶ ಒಲಿದು ಬಂತು.

bigg boss prashanth sambargi 2

ಅತಿಥಿ ಪಾತ್ರದ ಮೂಲಕ ಕಿರುತೆರೆ ಸಿನಿ ಪ್ರೇಕ್ಷಕರಿಗೆ ರಂಜಿಸಲು ಸಂಬರ್ಗಿ ರೆಡಿಯಾಗಿದ್ದಾರೆ. ದೊಡ್ಮನೆಯಲ್ಲಿ ಗಮನ ಸೆಳೆದ ಸಂಬರ್ಗಿ ಈಗ ರಾಜಕಾರಣಿಯಾಗಿ ಟಿವಿ ಪರದೆಯಲ್ಲಿ ಪ್ರೇಕ್ಷಕರ ಮನ ಗೆಲ್ಲುತ್ತಾರಾ ಕಾದುನೋಡಬೇಕಿದೆ.

Share This Article
Leave a Comment

Leave a Reply

Your email address will not be published. Required fields are marked *