Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಿಹಾರ ಫಲಿತಾಂಶದಿಂದ ಕುಗ್ಗಿದ ಕಾಂಗ್ರೆಸ್ ಉತ್ಸಾಹ – ಕ್ರಾಂತಿ/ಪುನಾರಚನೆ ಜಪಕ್ಕೆ ತಾತ್ಕಾಲಿಕ ಬ್ರೇಕ್?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬಿಹಾರ ಫಲಿತಾಂಶದಿಂದ ಕುಗ್ಗಿದ ಕಾಂಗ್ರೆಸ್ ಉತ್ಸಾಹ – ಕ್ರಾಂತಿ/ಪುನಾರಚನೆ ಜಪಕ್ಕೆ ತಾತ್ಕಾಲಿಕ ಬ್ರೇಕ್?

Bengaluru City

ಬಿಹಾರ ಫಲಿತಾಂಶದಿಂದ ಕುಗ್ಗಿದ ಕಾಂಗ್ರೆಸ್ ಉತ್ಸಾಹ – ಕ್ರಾಂತಿ/ಪುನಾರಚನೆ ಜಪಕ್ಕೆ ತಾತ್ಕಾಲಿಕ ಬ್ರೇಕ್?

Public TV
Last updated: November 15, 2025 2:18 pm
Public TV
Share
3 Min Read
siddaramaiah dk shivakumar rahul gandhi
SHARE

ಬೆಂಗಳೂರು: ಬಿಹಾರ ಫಲಿತಾಂಶ ಇಡೀ‌ ದೇಶದಲ್ಲೇ ಕಾಂಗ್ರೆಸ್ (Congress) ಪಡೆಯನ್ನು ಮಂಕಾಗಿಸಿದೆ. ರಾಜ್ಯದ ಮಟ್ಟಿಗೆ ಎಲ್ಲ‌ ಸಂಭಾವ್ಯ ಲೆಕ್ಕಾಚಾರಗಳನ್ನೂ ಉಲ್ಟಾ ಮಾಡಿದೆ. ಕ್ರಾಂತಿ ಅಥವಾ ಪುನಾರಚನೆ ಬಗ್ಗೆ ಹೈಕಮಾಂಡ್ ರಿಸ್ಕ್ ತೆಗೆದುಕೊಳ್ಳದೇ ಮುಂದೂಡಿಕೆ ತಂತ್ರಕ್ಕೆ ಮೊರೆ ಹೋಗಲಿದೆ ಎನ್ನಲಾಗಿದೆ‌. ಇನ್ನು ಈ ಮೂಲಕ ಸಿದ್ದರಾಮಯ್ಯ (Siddaramaiah) ಕುರ್ಚಿ ಅಬಾಧಿತ ಎಂಬ ಸಂದೇಶ ರವಾನೆಯಾಗಿದೆ.

rahul gandhi and tejashwi yadav

ಬಿಹಾರ ಫಲಿತಾಂಶ (Bihar Election Results) ಬಳಿಕ ರಾಜ್ಯ ಕಾಂಗ್ರೆಸ್ ವಲಯದಲ್ಲಿ ಮುಂದೇನು ಅನ್ನೋ ಪ್ರಶ್ನೆ ಹುಟ್ಟಿಸಿದೆ. ಕಾಂಗ್ರೆಸ್‌ ಹೀನಾಯ ಸೋಲು ಕರ್ನಾಟಕದಲ್ಲಿ ಎದ್ದಿರೋ ಕ್ರಾಂತಿ ಬಿರುಗಾಳಿಗೆ ತಾತ್ಕಾಲಿಕ ಬ್ರೇಕ್ ಹಾಕುವ ಸಾಧ್ಯತೆ ತೋರಿಸಿದೆ. ಯಾಕೆಂದ್ರೆ ಈ ಸೋಲಿನಿಂದ ಕಾಂಗ್ರೆಸ್ ಹೈಕಮಾಂಡ್ ಶಕ್ತಿಗೆ ಭಾರೀ ಹಿನ್ನಡೆಯಾಗಿದೆ. ಹೀಗಾಗಿ ಕೈ ವರಿಷ್ಠರು ಸದ್ಯದ ಪರಿಸ್ಥಿತಿಯಲ್ಲಿ ಕರ್ನಾಟಕ ಕಾಂಗ್ರೆಸ್ ಗೊಂದಲ‌ಗಳ ಬಗ್ಗೆ ಮೌನವಹಿಸೋ ಸಾಧ್ಯತೆಯೇ ಹೆಚ್ಚಾಗಿದೆ. ಇದನ್ನೂ ಓದಿ: ದೇಶದ ಟಾಪ್-3 ಮಾದರಿ ಪೊಲೀಸ್ ಠಾಣೆಯಲ್ಲಿ ರಾಯಚೂರಿನ ಕವಿತಾಳ ಸ್ಟೇಷನ್ – ಕೇಂದ್ರ ಗೃಹ ಇಲಾಖೆಯಿಂದ ಆಯ್ಕೆ

ಒಂದು ಕಡೆ ಈ ಫಲಿತಾಂಶ, ಡಿಕೆಶಿ ಟೀಮ್‌ಗಿದ್ದ ಅಧಿಕಾರ ಹಸ್ತಾಂತರ ಆಸೆಗೆ ತಣ್ಣೀರೆರಚಿದೆ. ಇನ್ನೊಂದು ಕಡೆ ಪುನಾರಚನೆ ಮಾಡಬೇಕೆಂಬ ಸಿಎಂ ಬೇಡಿಕೆಗೆ ಹೈಕಮಾಂಡ್ ಈಗಿನ ಸ್ಥಿತಿಯಲ್ಲಿ ಒಪ್ಪಿಗೆ ಕೊಡುತ್ತಾ ಅನ್ನೋ ಪ್ರಶ್ನೆಯೂ ಎದ್ದಿದೆ. ಹೈಕಮಾಂಡ್ ಸೋಲು ಸದ್ಯಕ್ಕೆ ಕರ್ನಾಟಕದಲ್ಲಿ ಬದಲಾವಣೆ ಪರ್ವಕ್ಕೆ ಕೈ ಹಾಕೋದಿಲ್ಲವಾ ಅನ್ನೋ ಚರ್ಚೆಗಳು ಪಕ್ಷದಲ್ಲೇ ಜೋರಾಗಿ ನಡೀತಿವೆ.‌

ಇಷ್ಟರ ಮಧ್ಯೆ ಇಂದು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಗೆ ಪ್ರತ್ಯೇಕವಾಗಿ ತೆರಳಿದ್ದಾರೆ. ಸಿಎಂ ಜತೆ ಆಪ್ತ ಸಚಿವರಾದ ಡಾ.ಹೆಚ್‌‌.ಸಿ ಮಹಾದೇವಪ್ಪ, ಬೈರತಿ ಸುರೇಶ್ ಹೊರಟಿದ್ರೆ, ಡಿಕೆಶಿ ಒಬ್ಬಂಟಿಯಾಗಿಯೇ ಹೋಗಿದ್ದಾರೆ. ಕಪಿಲ್ ಸಿಬಲ್ ಪುಸ್ತಕ ಬಿಡುಗಡೆ ಕಾರ್ಯಕ್ರಮಕ್ಕಷ್ಟೇ ಇಬ್ಬರ ದೆಹಲಿ ಪ್ರವಾಸ ಸೀಮಿತವಾಗುತ್ತಾ ಅಥವಾ ಹೈಕಮಾಂಡ್ ನಾಯಕರ ಭೇಟಿಗೂ ಅವಕಾಶ ಸಿಗುತ್ತಾ ಅಂತ ಕಾದು ನೋಡಬೇಕಿದೆ. ವರಿಷ್ಠರು ಒಂದೊಮ್ಮೆ‌ ಸಿಕ್ಕರೂ ಏನು ಚರ್ಚೆ ನಡೆಯಲಿದೆ ಅನ್ನೋ ಕುತೂಹಲ ಮೂಡಿದೆ. ಇದನ್ನೂ ಓದಿ: ಬೆಳಗಾವಿ ಮೃಗಾಲಯದಲ್ಲಿ 28 ಕೃಷ್ಣ ಮೃಗಗಳ ಸಾವು; ಮಾರಣಾಂತಿಕ ವೈರಸ್‌ಗೆ ಬಲಿಯಾಗಿರೋ ಶಂಕೆ!

ಬಿಹಾರ ಸೋಲು; ಕಾಂಗ್ರೆಸ್ ಹೈಕಮಾಂಡ್ ಮುಂದಿರುವ ಆಯ್ಕೆ ಏನು?
> ಸದ್ಯಕ್ಕೆ ನಾಯಕತ್ವ ಬದಲಾವಣೆ ಚರ್ಚೆಗೆ ತಾತ್ಕಾಲಿಕ ಬ್ರೇಕ್.
> ನಾಯಕತ್ವ ಬದಲಾವಣೆಗೆ ಕೈಹಾಕಿದ್ರೆ ಗೊಂದಲ ಜಾಸ್ತಿ ಆಗಬಹುದು ಅಂತ ಮೌನಕ್ಕೆ ಶರಣು.
> ನಾಯಕತ್ವ ಬದಲಾವಣೆ ಬದಲಿಗೆ ಕೇವಲ ಸಂಪುಟ ಪುನರ್ ರಚನೆಗೆ ಮಾತ್ರ ಅನುಮತಿ.
> ಸದ್ಯದ ಸ್ಥಿತಿಯಲ್ಲಿ ರಾಜ್ಯದಲ್ಲಿ ಕ್ರಾಂತಿ ಶುರುವಾದ್ರೆ ಅದನ್ನ ನಿಯಂತ್ರಣ ಮಾಡೋದು ಹೈಕಮಾಂಡ್‌ಗೆ ಕಷ್ಟ. ಹೀಗಾಗಿ ಗೊಂದಲ ಬೇಡ ಅಂತ ಮೌನವಾಗೋದು. ‌
> ಸ್ವಲ್ಪ ದಿನ ಯಾವುದೇ ಗೊಂದಲ, ಗಲಾಟೆ ಏನು ಬೇಡ ಅಂತ ಸಂಪುಟ ವಿಸ್ತರಣೆ, ನಾಯಕತ್ವ ಬದಲಾವಣೆ ಚರ್ಚೆ ಎಲ್ಲದಕ್ಕೂ ಬ್ರೇಕ್ ಹಾಕೋದು.
> ಸಿಎಂ, ಡಿಸಿಎಂ ಇಬ್ಬರಿಗೂ ಪ್ರತ್ಯೇಕವಾಗಿ ಪರಿಸ್ಥಿತಿ ಮನವರಿಕೆ ಮಾಡಿಸುವುದು.

ಈ ನಡುವೆ ಬಿಹಾರ ಫಲಿತಾಂಶ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್ ಸ್ಥಿತಿಗೆ ಬಿಜೆಪಿ‌ ನಾಯಕರು ಲೇವಡಿ ‌ಮಾಡಿದ್ದಾರೆ. ಬೆಂಗಳೂರಿನಲ್ಲಿ ಮಾತಾಡಿದ ವಿಪಕ್ಷ ನಾಯಕ ಆರ್ ಅಶೋಕ್, ಸಿದ್ದರಾಮಯ್ಯ ಸ್ಟ್ರಾಂಗ್ ಆಗ್ತಿದ್ದಾರೆ. ಇನ್ಮುಂದೆ ರಾಹುಲ್ ಗಾಂಧಿ ಸಿದ್ದರಾಮಯ್ಯ ಮಾತು ಕೇಳಬೇಕು.‌ ಸಿಎಂಗೆ ಶುಕ್ರದೆಸೆ, ರಾಹುಲ್‌ಗೆ ರಾಹುಕಾಲ, ಡಿಕೆಶಿ ಮನೆಗೆ ಹೋಗುವ ಕಾಲ ಬಂದಿದೆ ಎಂದು ಅಶೋಕ್ ಕಾಲೆಳೆದಿದ್ದಾರೆ.‌ ಇನ್ನು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮಾತಾಡಿ, ಕಾಂಗ್ರೆಸ್ ಗೆದ್ದಾಗ ಗೆಲುವು ಅಂತಾರೆ, ಸೋತರೆ ವೋಟ್ ಚೋರಿ ಅಂತಾರೆ. ರಾಹುಲ್ ಗಾಂಧಿ ಆ್ಯಂಡ್ ಟೀಂ ಹಿಟ್ ಆ್ಯಂಡ್ ರನ್ ಟೀಂ. ಬರೀ ಹಿಟ್ ಆ್ಯಂಡ್ ರನ್ ಮಾಡೋದಷ್ಟೇ ಅವರ ಕೆಲಸ ಎಂದು ಕಿಡಿ ಕಾರಿದ್ರು.

ಒಟ್ಟಿನಲ್ಲಿ ಕಾಂಗ್ರೆಸ್ ಪರಿಸ್ಥಿತಿ ಅಯೋಮಯ ಆಗಿದೆ. ಇಂದು ಸಿಎಂ, ಡಿಸಿಎಂ ದೆಹಲಿಯಲ್ಲಿರೋ ಹಿನ್ನೆಲೆಯಲ್ಲಿ ಮುಂದಿನ ಬೆಳವಣಿಗೆಗಳ ಬಗ್ಗೆ ಮತ್ತಷ್ಟು ಸ್ಪಷ್ಟತೆ ಸಿಗುವ ಸಾಧ್ಯತೆ ಇದೆ.

TAGGED:Bihar Election ResultsDK ShivakumarRahul Gandhisiddaramaiahಡಿಕೆ ಶಿವಕುಮಾರ್ಬಿಹಾರ ಚುನಾವಣಾ ಫಲಿತಾಂಶರಾಹುಲ್ ಗಾಂಧಿಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Rachita Ram
ಪ್ರೇಮಿಗಳ ದಿನದಂದೆ I Love You ಅಂತ ರಚ್ಚು ಪ್ರಪೋಸ್‌ – ಹೇಳಿದ್ದು ಯಾರಿಗೆ?
Bengaluru City Cinema Latest Main Post Sandalwood
ranveer singh 2
ಬಿಷ್ಣೋಯ್ ಗ್ಯಾಂಗ್‌ನಿಂದ ಮತ್ತೆ ರಣವೀರ್ ಸಿಂಗ್‌ಗೆ ಬೆದರಿಕೆ
Cinema Latest Top Stories
Joe Simon
ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ – ಸಾಹಸಸಿಂಹ ಚಿತ್ರದ ನಿರ್ದೇಶಕ ಜೊ ಸೈಮನ್ ನಿಧನ
Cinema Latest Main Post
rishab shetty public tv anniversary
ಪಬ್ಲಿಕ್‌ ಟಿವಿಗೆ ಇನ್ನೂ ಟೀನೇಜ್‌, ರಂಗಣ್ಣ ಸರ್‌ ಈ ಸಮಾಜಕ್ಕೆ ದೊಡ್ಡ ಕೊಡುಗೆ: ರಿಷಬ್‌ ಶೆಟ್ಟಿ
Bengaluru City Cinema Latest Main Post Sandalwood

You Might Also Like

DK Shivakumar Siddaramaiah
Haveri

ನಮ್ಮ ಸರ್ಕಾರದ ಸಾಧನೆ ಹೇಳೋಕೆ ಒಂದು ದಿನ ಸಾಲೋದಿಲ್ಲ: ಸಿದ್ದರಾಮಯ್ಯ

Public TV
By Public TV
31 minutes ago
Rahul Gandhi Narendra Modi
Latest

ಪುಲ್ವಾಮಾ ದಾಳಿಗೆ 7 ವರ್ಷ – ಹುತಾತ್ಮ ಯೋಧರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಿ ಮೋದಿ, ರಾಹುಲ್ ಗಾಂಧಿ

Public TV
By Public TV
33 minutes ago
freshwater crab
Latest

ಪಶ್ಚಿಮ ಘಟ್ಟದಲ್ಲಿ ಹೊಸ ಪ್ರಭೇದ ಸಿಹಿನೀರಿನ ಏಡಿ ಪತ್ತೆ

Public TV
By Public TV
38 minutes ago
Haveri Samavesha
Districts

ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ 1,000 ದಿನಗಳ ಸಂಭ್ರಮ – ಹಾವೇರಿ ಸಮಾವೇಶದಲ್ಲಿ ಸಿಎಂ ಪ್ರತಿಮೆ ಅನಾವರಣ

Public TV
By Public TV
48 minutes ago
railway track
Bellary

ಬಳ್ಳಾರಿ, ಹೊಸಪೇಟೆ ನಡುವೆ ರೈಲ್ವೆ ಮಲ್ಟಿಟ್ರ‍್ಯಾಕ್ ನಿರ್ಮಾಣಕ್ಕೆ ಕೇಂದ್ರ ಸಚಿವ ಸಂಪುಟ ಅನುಮೋದನೆ

Public TV
By Public TV
53 minutes ago
Online Game
Explainer

Explainer | ಪಬ್‌ಜಿ, ಬ್ಲೂ ವೇಲ್‌, ಕೊರಿಯನ್‌ ಲವ್‌ ಗೇಮ್‌ – ಮಕ್ಕಳ ಜೀವ ಕಸಿಯುತ್ತಿದೆ ಆನ್‌ಲೈನ್‌ ಗೇಮಿಂಗ್‌ ಗೀಳು

Public TV
By Public TV
55 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?