ಪಟ್ನಾ: ತಾಯಿಯನ್ನು ಕಾಮುಕರಿಂದ ರಕ್ಷಿಸಲು ಹೋದ ಬಾಲಕನನ್ನು ದುಷ್ಕರ್ಮಿಗಳು ಹೊಡೆದು ಸಾಯಿಸಿರುವ ಘಟನೆ ಬಿಹಾರದ ಮುಜಾಫರ್ಪುರ ಜಿಲ್ಲೆಯಲ್ಲಿ ಭಾನುವಾರದಂದು ನಡೆದಿದ್ದು, ಸೋಮವಾರ ಬೆಳಕಿಗೆ ಬಂದಿದೆ.
17 ವರ್ಷದ ಬಾಲಕ ಮೃತ ದುರ್ದೈವಿ. ಬಾಲಕ ಹಾಗೂ ಅವನ ತಾಯಿ ಧರಮ್ಪುರ ಗ್ರಾಮದ ನಿವಾಸಿಗಳು. ಭಾನುವಾರ ರಾತ್ರಿ ವೇಳೆ ತಾಯಿ ಹಾಗೂ ಮಗ ತಮ್ಮ ಮನೆ ಬಳಿ ಇದ್ದ ರಾಜೇಂದ್ರ ಸಾ ಎಂಬವರ ಕಿರಾಣಿ ಅಂಗಡಿಗೆ ಹೋಗಿದ್ದರು. ಈ ವೇಳೆ ಅಂಗಡಿ ಮಾಲೀಕನ ಮಗ ಪಪ್ಪು ಹಾಗೂ ಅವನ ಸ್ನೇಹಿತರು ಸೇರಿ ಬಾಲಕನ ತಾಯಿಯನ್ನು ಅತ್ಯಾಚಾರ ಮಾಡಲು ಯತ್ನಿಸಿದ್ದಾರೆ.
ಇದನ್ನು ಕಂಡ ಬಾಲಕ ಕೋಪೋದ್ರಿಕ್ತನಾಗಿ ತಾಯಿಯನ್ನು ಕಾಮುಕರಿಂದ ರಕ್ಷಿಸಲು ಹೋಗಿದ್ದಾನೆ. ಈ ವೇಳೆ ಬಾಲಕನನ್ನು ಪಪ್ಪು ಹಾಗೂ ಅವನ ಸ್ನೇಹಿತರು ಹೊಡೆದು ಕೊಲೆ ಮಾಡಿ ಪರಾರಿಯಾಗಿದ್ದಾರೆ. ವಿಷಯ ತಿಳಿದ ಬಳಿಕ ರಾಜ್ಯ ಹೆದ್ದಾರಿ- 74 ರಲ್ಲಿ ರಸ್ತೆ ತಡೆಗಟ್ಟಿ ತಕ್ಷಣ ಆರೋಪಿಗಳನ್ನು ಬಂಧಿಸಬೇಕು ಎಂದು ಗ್ರಾಮಸ್ಥರು ಪ್ರತಿಭಟನೆ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಘಟನೆ ಕುರಿತು ಬಾಲಕನ ತಂದೆ ಧರಮ್ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು, ಆರೋಪಿಗಳನ್ನು ಪತ್ತೆ ಹಚ್ಚಲು ಪೊಲೀಸರು ಬಲೆ ಬೀಸಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್ಬುಕ್ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews